ರಾಜ್ಯ

ವಿದ್ಯಾರ್ಥಿನಿ ಅಪಹರಣ ಪ್ರಹಸನಕ್ಕೆ ಟ್ವಿಸ್ಟ್: ತಾನೇ ಕೈಗೆ ಗೀರಿಕೊಂಡು ಅಪಹರಣದ ನಾಟಕವಾಡಿದಳಾ ಯುವತಿ?

ಬೆಳ್ತಂಗಡಿ: ಮೂವರು ದುಷ್ಕರ್ಮಿಗಳಿಂದ ಕಾಲೇಜು ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ಎನ್ನುವ ಸುದ್ದಿಗೆ ಟ್ವಿಸ್ಟ್ ಸಿಕ್ಕಿದ್ದು, ವಿದ್ಯಾರ್ಥಿನಿಯೇ ತನ್ನ ಕೈಗೆ ಬ್ಲೇಡಿನಿಂದ ಗೀರಿಕೊಂಡು ಅಪಹರಣದ ಕಥೆ ಕಟ್ಟಿದ್ದಳು ಎನ್ನುವ ಸತ್ಯಾಂಶ ಪೊಲೀಸರ ತನಿಖೆಯ ವೇಳೆ ಬಯಲಾಗಿದೆ. ಮೂವರು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಅಪಹರಣಕ್ಕೆ ಯತ್ನಿಸಿ‌, ತನ್ನ ಕೈಗೆ ಚಾಕು ಚುಚ್ಚಿ ಪರಾರಿಯಾದರು ಎಂದು ಯುವತಿ ಹೇಳಿದ್ದಳು. ಆದರೆ ಆಕೆ ಹೇಳಿದಂತ ಯಾವ ಘಟನೆಯೂ ‌ಸ್ಥಳದಲ್ಲಿ ನಡೆದಂತೆ ಇರಲಿಲ್ಲ. ಪೊಲೀಸರು ಸಹ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಸಿಟಿವಿ ಪರಿಶೀಲನೆ ಸೇರಿದಂತೆ […]

ವಿದ್ಯಾರ್ಥಿನಿ ಅಪಹರಣ ಪ್ರಹಸನಕ್ಕೆ ಟ್ವಿಸ್ಟ್: ತಾನೇ ಕೈಗೆ ಗೀರಿಕೊಂಡು ಅಪಹರಣದ ನಾಟಕವಾಡಿದಳಾ ಯುವತಿ? Read More »

ವಿಧಾನಸೌಧದ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು

ಸಂದರ್ಶಕರೊಬ್ಬರು ಮರೆತು ಹೋದ ಬ್ಯಾಗ್‌ ಕಳ್ಳತನ ಬೆಂಗಳೂರು : ಹೆಚ್ಚಿನ ಭದ್ರತೆ ಇರುವ ಸ್ಥಳವಾದ ವಿಧಾನಸೌಧದಲ್ಲೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ. ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದ ವೇಳೆ, ಕೈಚೀಲದಲ್ಲಿದ್ದ 300

ವಿಧಾನಸೌಧದ ಸಚಿವರ ಕಚೇರಿಯಲ್ಲೇ ಚಿನ್ನಾಭರಣ, ನಗದು ಇದ್ದ ಬ್ಯಾಗ್ ಕಳವು Read More »

ಕಾಸರಗೋಡಿನ ಖ್ಯಾತ ಸೋಷಿಯಲ್ ಮೀಡಿಯಾ ಇನ್ಫ್ಲುಯನ್ಸರ್ ಆತ್ಮಹತ್ಯೆಗೆ ಶರಣು

ಕಾಸರಗೋಡು: ಸಾಮಾಜಿಕ ಜಾಲತಾಣದ ಇನ್ಫ್ಲುಯೆನ್ಸರ್, ಕಾಸರಗೋಡಿನ ಅಡೂರು ಮೂಲದ ಚಿನ್ನು ನಾನು ಖ್ಯಾತಿಯ ರೇಷ್ಮಾ(24) ಅವರು ಉಳಿಯತ್ತಡ್ಕದಲ್ಲಿರುವ ತಮ್ಮ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರೇಷ್ಮಾ ಅವರಿಗೆ ಒಂದು ಮಗುವೂ ಇದ್ದು, ಇತ್ತೀಚೆಗಷ್ಟೇ ಪತಿಯಿಂದ ‌ವಿಚ್ಛೇದನ ಪಡೆದಿದ್ದರು. ಕಾಸರಗೋಡು ಮಲೆಯಾಳಂ, ತುಳು ಮೂಲಕವೇ ರೀಲ್ಸ್ ಮಾಡಿ ಜನಪ್ರಿಯರಾಗಿದ್ದ ರೇಷ್ಮಾ ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರಿಗೆ ಸಾಮಾಜಿಕ ಜಾಲತಾಣದಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಮಂದಿ ಹಿಂಬಾಲಕರಿದ್ದರು. ನೇಣು ಬಿಗಿದ ‌ಸ್ಥಿತಿಯಲ್ಲಿದ್ದ

ಕಾಸರಗೋಡಿನ ಖ್ಯಾತ ಸೋಷಿಯಲ್ ಮೀಡಿಯಾ ಇನ್ಫ್ಲುಯನ್ಸರ್ ಆತ್ಮಹತ್ಯೆಗೆ ಶರಣು Read More »

ಮತ್ತೆ ತಾರಕಕ್ಕೇರಿದ ಕಾಂಗ್ರೆಸ್‌ ಕುರ್ಚಿ ಫೈಟ್‌ : ಡಿಕೆಶಿ ದಿಢೀರ್‌ ದಿಲ್ಲಿ ದೌಡು

ಭಾರಿ ಕುತೂಹಲ ಕೆರಳಿಸಿದ ಡಿಕೆಶಿ ಹೈಕಮಾಂಡ್‌ ಭೇಟಿ ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವಿನ ಎರಡನೇ ಸುತ್ತಿನ ಕುರ್ಚಿ ಜಗಳ ತಾರಕಕ್ಕೇರಿದೆ. ಶಿವಕುಮಾರ್‌ ಈ ಸಲ ಏನಾದರೊಂದು ತೀರ್ಮಾನವಾಗಲೇಬೇಕು ಎಂದು ಹಠಕ್ಕೆ ಬಿದ್ದಿದ್ದು, ಅವರ ಇತ್ತೀಚೆಗಿನ ಹೇಳಿಕೆಗಳು ಮತ್ತು ನಡೆಗಳು ಇದನ್ನು ಪುಷ್ಟೀಕರಿಸುತ್ತಿವೆ. ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ವದಂತಿಗಳು ಮುಂದುವರಿದಿರುವಂತೆಯೇ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಕೈಬಿಟ್ಟು ಡಿ.ಕೆ.ಶಿವಕುಮಾರ್ ಇಂದು ದೆಹಲಿಗೆ

ಮತ್ತೆ ತಾರಕಕ್ಕೇರಿದ ಕಾಂಗ್ರೆಸ್‌ ಕುರ್ಚಿ ಫೈಟ್‌ : ಡಿಕೆಶಿ ದಿಢೀರ್‌ ದಿಲ್ಲಿ ದೌಡು Read More »

ಪ್ಲಾಸ್ಟಿಕ್‌ ಗೋಡೌನ್‌ ಬೆಂಕಿಗಾಹುತಿ

ಬೆಂಗಳೂರು: ಪ್ಲಾಸ್ಟಿಕ್ ಗೋಡೌನ್‌ಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬನ್ನೇರುಘಟ್ಟ ರಸ್ತೆಯ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಸೋಮವಾರ ಮಧ್ಯರಾತ್ರಿ ಈ ಅವಘಡ ನಡೆದಿದೆ. ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು, ಇನ್ನೂ ಬೆಂಕಿ ಹತೋಟಿಗೆ ಬಂದಿಲ್ಲ. ಪ್ಲಾಸ್ಟಿಕ್ ಗೋಡೌನ್ ಸಮೀಪವೇ ಗ್ಯಾಸ್ ಸಿಲಿಂಡರ್ ಗೋಡೌನ್ ಇತ್ತು. ಗ್ಯಾಸ್ ಗೋಡೌನ್‌ಗೆ ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಆಗುವ ಸಾಧ್ಯತೆಯಿತ್ತು. ಸದ್ಯ ಭಾರಿ ಅನಾಹುತವೊಂದು ತಪ್ಪಿದೆ.

ಪ್ಲಾಸ್ಟಿಕ್‌ ಗೋಡೌನ್‌ ಬೆಂಕಿಗಾಹುತಿ Read More »

ಮುಡಾ ಹಗರಣ ಮುಚ್ಚಿ ಹಾಕಲು ಲೋಕಾಯುಕ್ತರಿಗೆ ಲಂಚ : ಸ್ನೇಹಮಯಿ ಕೃಷ್ಣ ಆರೋಪ

ಮತ್ತೆ ಜೀವ ಪಡೆದುಕೊಂಡ ಮುಡಾ ಹಗರಣ ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸಂಭವಿಸಿದ ಬಹುಕೋಟಿ ಸೈಟ್‌ ಹಗರಣವನ್ನು ಮುಚ್ಚಿ ಹಾಕಲು ಲೋಕಾಯುಕ್ತ ಅಧಿಕಾರಿಗಳಿಗೆ ಕೋಟಿಗಟ್ಟಲೆ ರೂಪಾಯಿ ಲಂಚ ನೀಡಲಾಗಿದೆ ಎಂಬ ಸ್ಫೋಟಕ ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದಾರೆ. ಮುಡಾದ ಹಿಂದಿನ ಆಯುಕ್ತರಿಂದ ಕೋಟಿಗಟ್ಟಲೆ ರೂಪಾಯಿ ಲಂಚ ಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತರಿಗೆ ಕೋಟಿಗಟ್ಟಲೆ ಹಣ ಲಂಚ

ಮುಡಾ ಹಗರಣ ಮುಚ್ಚಿ ಹಾಕಲು ಲೋಕಾಯುಕ್ತರಿಗೆ ಲಂಚ : ಸ್ನೇಹಮಯಿ ಕೃಷ್ಣ ಆರೋಪ Read More »

ವಿವಾಹಿತನ ಜೊತೆ ಮಗಳ ಪ್ರೇಮ: ಮರ್ಯಾದೆಗಂಜಿ ‌ಸಾವಿಗೆ ಶರಣಾದ ತಾಯಿ ಮತ್ತು ಮಗಳು

ಮಂಡ್ಯ: ವಿವಾಹವಾದ ಪುರುಷನ ಜೊತೆಗೆ ಮಗಳ ಪ್ರೇಮ ಸಂಬಂಧದ ಕಾರಣಕ್ಕೆ ಮರ್ಯಾದೆಗೆ ಹೆದರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಕುಂತಲಾದೇವಿ (46) ಮತ್ತು ಅವರ ಪುತ್ರಿ ಪ್ರಿಯಾಂಕ(19) ಮೃತಪಟ್ಟವರು. ಪ್ರಿಯಾಂಕ ತನ್ನದೇ ಗ್ರಾಮದ 34 ವರ್ಷದ ಮುತ್ತು ರಾಜ್ ಎಂಬವನ ಜೊತೆ ಪ್ರೇಮ ಸಂಬಂಧ ಇಟ್ಟುಕೊಂಡಿದ್ದಳು. ಆದರೆ ಆತನಿಗೆ ಮದುವೆಯಾಗಿ ಇಬ್ಬರು ಮಕ್ಕಳು ಸಹ ಇದ್ದರು. ಆದರೂ ಪ್ರಿಯಾಂಕಳನ್ನು ಪ್ರೀತಿಸುವ‌ ನಾಟಕವಾಡುತ್ತಿದ್ದ. ನಿತ್ಯವೂ ಇವರ ಮನೆಗೆ

ವಿವಾಹಿತನ ಜೊತೆ ಮಗಳ ಪ್ರೇಮ: ಮರ್ಯಾದೆಗಂಜಿ ‌ಸಾವಿಗೆ ಶರಣಾದ ತಾಯಿ ಮತ್ತು ಮಗಳು Read More »

ಉದ್ಯಮಿ ಎವಿಆರ್‌ಗೆ ಬೆದರಿಕೆ, ಹಣಕ್ಕಾಗಿ ಬೇಡಿಕೆ: ಕೃಷಿ ತಾಪಂಡ ‌ಮನೆಯಿಂದಲೇ ಆರೋಪಿ ವೈಶಾಖ್ ಬಂಧನ

ಬೆಂಗಳೂರು: ಉದ್ಯಮಿ ಅರವಿಂದ ವೆಂಕಟೇಶ್ ರೆಡ್ಡಿಗೆ ಬೆದರಿಕೆ ಒಡ್ಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣದಲ್ಲಿ ನಟಿ ಕೃಷಿ ತಾಪಂಡ‌ ಗೆಳೆಯ ವೈಶಾಖ್‌ನನ್ನು ಎಚ್ ಎ ಎಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕೃಷಿ ತಾಪಂಡ ಮನೆಯಲ್ಲೇ ಬಂಧಿಸಿರುವುದು ಈ ಪ್ರಕರಣದ ಕಾವು ಹೆಚ್ಚಿಸಿದೆ. ಕಳೆದ ಜನವರಿ ತಿಂಗಳಲ್ಲಿ ಎವಿಆರ್‌ಗೆ ಕೊರಿಯರ್ ಒಂದು ಬಂದಿದ್ದು, ಅದರಲ್ಲಿ ನಿನ್ನ ಮತ್ತು ನಟಿಯ ಜಗಳವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಬೇಕು. ಇಲ್ಲವಾದಲ್ಲಿ ನನ್ನ ಗ್ಯಾರೇಜ್‌ಗೆ ಆರರಿಂದ ಏಳು ಕೋಟಿ ರೂ. ಗಳನ್ನು ನೀಡಬೇಕು.

ಉದ್ಯಮಿ ಎವಿಆರ್‌ಗೆ ಬೆದರಿಕೆ, ಹಣಕ್ಕಾಗಿ ಬೇಡಿಕೆ: ಕೃಷಿ ತಾಪಂಡ ‌ಮನೆಯಿಂದಲೇ ಆರೋಪಿ ವೈಶಾಖ್ ಬಂಧನ Read More »

ಸಾಲದ ಮೇಲಿನ ಬಡ್ಡಿ ದರ ಮನ್ನಾ : ಅಲ್ಪಸಂಖ್ಯಾತರಿಗೆ ಇನ್ನೊಂದು ಬಂಪರ್‌ ಕೊಡುಗೆ

ವಿಪಕ್ಷಗಳ ಭಾರಿ ವಿರೋಧದ ಹೊರತಾಗಿಯೂ ಅನುಷ್ಠಾನಕ್ಕೆ ಮುಂದಾದ ಸರ್ಕಾರ ಬೆಂಗಳೂರು : 2013–14ರಿಂದ 2018–19ರ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ನೀಡಲಾದ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡುವ ಒನ್‌ಟೈಮ್ ಸೆಟ್ಲ್‌ಮೆಂಟ್ ಯೋಜನೆಗೆ ಇತ್ತೀಚೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವ ವಿಚಾರ ವಿವಾದವಾಗಿ ಮಾರ್ಪಟ್ಟಿದೆ. ಈ ಬಗ್ಗೆ ವಿಪಕ್ಷಗಳು ಕಿಡಿ ಕಾರಿದ್ದು, ಅಲ್ಪಸಂಖ್ಯಾತರಿಗೆ ಮಾತ್ರ ಸಾಲದ ಬಡ್ಡಿ ಮನ್ನಾ ಮಾಡಿ ರೈತರು ಮತ್ತು ಹಿಂದುಳಿದ ವರ್ಗಗಳು ಸೇರಿ ಇತರ ಸಮುದಾಯಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿವೆ.

ಸಾಲದ ಮೇಲಿನ ಬಡ್ಡಿ ದರ ಮನ್ನಾ : ಅಲ್ಪಸಂಖ್ಯಾತರಿಗೆ ಇನ್ನೊಂದು ಬಂಪರ್‌ ಕೊಡುಗೆ Read More »

ಖಾಲಿ ಟ್ರಂಕ್‌ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ

ಮೆಟ್ರೋ ರೈಲು ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಖಾಲಿ ಟ್ರಂಕ್‌ ಹಿಡಿದುಕೊಂಡು ಬಂದ ತೇಜಸ್ವಿ ಸೂರ್ಯ ಟ್ರಂಕ್‌ ತೆರೆದು ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಹೇಳಿದರು.

ಖಾಲಿ ಟ್ರಂಕ್‌ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ Read More »

error: Content is protected !!
Scroll to Top