ರಾಜ್ಯ

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು

ಸ್ನಾನ ಮಾಡುತ್ತಿದ್ದಾಗ ಸಂಭವಿಸಿದ ದಾರುಣ ಘಟನೆ ಮೈಸೂರು : ಸ್ನಾನಕ್ಕೆ ತೆರಳಿದಾಗ ಗ್ಯಾಸ್ ಗೀಸರ್ ಲೀಕ್ ಆಗಿ ಅಕ್ಕ ಮತ್ತು ತಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ. ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್‌ […]

ಗ್ಯಾಸ್‌ ಗೀಸರ್‌ ಲೀಕ್‌ ಆಗಿ ಅಕ್ಕ-ತಂಗಿ ಸಾವು Read More »

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ

ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳಿಂದ ಪಥ ಸಂಚಲನ ನಡೆಸಲು ಅನುಮತಿ ಕೋರಿಕೆ ಬೆಂಗಳೂರು: ಕಲಬುರಗಿಯ ಚಿತ್ತಾಪುರದಲ್ಲಿ ನ.2ರಂದು ಆರ್‌ಎಸ್‌ಎಸ್‌ ಸಹಿತ ಹಲವು ಸಂಘಟನೆಗಳು ಪಥ ಸಂಚಲನ ನಡೆಸಲು ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಶಾಂತ ಸಭೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ಸೂಚಿಸಿದೆ. ಅಕ್ಟೋಬರ್ 28ರಂದು ಉದ್ದೇಶಿತ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ರೂಟ್ ಮಾರ್ಚ್‌ನ ಆಯೋಜಕರೊಂದಿಗೆ ಶಾಂತಿ ಸಭೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದರಿಂದ ಅನುಮತಿ ಸಿಗುವ ನಿರೀಕ್ಷೆಯಲ್ಲಿದ್ದ ಆರ್‌ಎಸ್‌ಎಸ್‌ಗೆ ತುಸು ನಿರಾಶೆಯಾಗಿದೆ. ಪಥ

ಚಿತ್ತಾಪುರ ಪಥ ಸಂಚಲನ ತಿಕ್ಕಾಟ : ಶಾಂತಿ ಸಭೆ ನಡೆಸಲು ಹೈಕೋರ್ಟ್‌ ಸೂಚನೆ Read More »

ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ಹಳಿ ವಿದ್ಯುದ್ದೀಕರಣ ಹಿನ್ನೆಲೆ ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯವು ನಡೆಯುತ್ತಿರುವ ಕಾರಣ ನೈರುತ್ಯ ರೈಲ್ವೆ ಬೆಂಗಳೂರು – ಮಂಗಳೂರು – ಕಾರವಾರದ ನಡುವೆ ಸಂಚರಿಸುವ 6 ಪ್ರಮುಖ ರೈಲುಗಳ ರದ್ದು ಅವಧಿಯನ್ನು ಮತ್ತಷ್ಟು ದಿನ ವಿಸ್ತರಣೆ ಮಾಡಿದೆ. ನೈರುತ್ಯ ರೈಲ್ವೆ ನವೆಂಬರ್ 2ರಿಂದ ಡಿಸೆಂಬರ್ 15 ರವರೆಗೆ ಪ್ರತಿದಿನ ನಾಲ್ಕು ಗಂಟೆಗಳ ಕಾಲ ಲೈನ್ ಬ್ಲಾಕ್ ತೆಗೆದುಕೊಳ್ಳಲಿದೆ. ಈ ಕಾರಣದಿಂದಾಗಿ ಕೆಲವು

ಮಂಗಳೂರು-ಬೆಂಗಳೂರು ರೈಲುಗಳ ರದ್ದು ಅವಧಿ ಮತ್ತಷ್ಟು ವಿಸ್ತರಣೆ Read More »

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ?

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಟೀಕೆಗಳಿಗೆ ತಿರುಗೇಟು ನೀಡಿರುವ ಅವರು, ಮಗನೆ… ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದರೆ ಎಚ್ಚರ. ನನ್ನ ತಾಯಿಯನ್ನು ದಗಮನದಲ್ಲಿ ಇಟ್ಟುಕೊಂಡು ನಿಂದನಾತ್ಮಕ ಮಾತನಾಡಿದ್ದೀಯ. ನಿನಗೆ ವಾರ್ನಿಂಗ್ ಕೊಟ್ಟು ಹೇಳುತ್ತಿದ್ದೇನೆ. ಮುಳ್ಳು ಹಂದಿ ಮುಖ ಇರುವ ಕರ್ನಾಟಕದ ಏಕೈಕ ಕಾಮಿಡಿ ಪೀಸು ನಿಮ್ಮಪನಿಗೆ ಮಾತ್ರ ಹುಟ್ಟಿರುವುದು. ಇನ್ಯಾರು ವಾರಸದಾರರು ಅದಕ್ಕೆ ಬರುವುದಿಲ್ಲ. ಆದರೆ ನಮ್ಮಪ್ಪ ಏನಾದರೂ ಅವರ

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ? Read More »

ಸುರತ್ಕಲ್ ಬಾರ್‌ನಲ್ಲಿ ಗಲಾಟೆ: ಓರ್ವನಿಗೆ ಇರಿತ

ಸುರತ್ಕಲ್: ನಗರದ ಬಾರೊಂದರ ಸಮೀಪ ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ ವ್ಯಕ್ತಿಯೊಬ್ಬರಿಗೆ ಇರಿದ ಘಟನೆ ನಡೆದಿದೆ. ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ಮುಖೀದ್ ಎಂದು ಗುರುತಿಸಲಾಗಿದೆ. ಮುಖೀದ್ ಮತ್ತು ಇನ್ನಿಬ್ಬರು ಬಾರ್‌ನಲ್ಲಿದ್ದ ವೇಳೆ, ಅಪರಿಚಿತ ನಾಲ್ವರ ಜೊತೆ ವಾಗ್ವಾದ ಹತ್ತಿಕೊಂಡಿದೆ. ಈ ಗಲಾಟೆ ಬಾರ್ ಹೊರಗೆಯೂ ಮುಂದುವರಿದಿದ್ದು, ಒಬ್ಬ ಆರೋಪಿ ಮುಖೀದ್‌ನಿಗೆ ಇರಿದಿದ್ದಾನೆ. ಮುಖೀದ್ ಜೊತೆಗಿದ್ದ ‌ನಿಜಾಮ್ ಎಂಬವನಿಗೂ ಈ ವೇಳೆ ಗಾಯವಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರತ್ಕಲ್ ಬಾರ್‌ನಲ್ಲಿ ಗಲಾಟೆ: ಓರ್ವನಿಗೆ ಇರಿತ Read More »

ಮಹಿಳೆ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಕುಸಿತಕ್ಕೆ ಸಾರ್ವಜನಿಕರ ಆಕ್ರೋಶ ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಮಂಗಳವಾರ ರಾತ್ರಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈ ಘೋರ ಕೃತ್ಯ ನಗರದಲ್ಲಿ ಭಾರಿ ಕಳವಳಕ್ಕೆ ಕಾರಣವಾಗಿದೆ. ಅಪರಾಧಿಗಳಿಗೆ ಪೊಲೀಸರ ಭಯ ಇಲ್ಲದಂತಾಗಿದೆ ಎಂದು ಜನರು ಾತಂಕ ವ್ಯಕ್ತಪಡಿಸಿದ್ದಾರೆ. ಬಂಧಿತರನ್ನು ಕಾರ್ತಿಕ್, ಗ್ಲೆನ್ ಮತ್ತು ಸಿಯೋಗ್ ಎಂದು ಗುರುತಿಸಲಾಗಿದೆ. ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಗಂಗೊಂಡನಹಳ್ಳಿಯಲ್ಲಿ

ಮಹಿಳೆ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ Read More »

ಶಾಲೆ ಪುನರಾರಂಭ : ಸಿಲೆಬಸ್‌ ಪೂರ್ತಿಗೊಳಿಸಲು ಹಲವು ಸೂಚನೆ

ಜನವರಿ ಒಳಗೆ ಸಿಲೆಬಸ್‌ ಪೂರ್ತಿಯಾಗಲೇಬೇಕು ಬೆಂಗಳೂರು: ದಸರಾ ರಜೆ, ಜಾತಿ ಗಣತಿ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿವೆ. ಹೆಚ್ಚುಕ ಡಿಮೆ ಒಂದು ತಿಂಗಳ ರಜೆಯ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿವೆ. ಶಾಲೆ ಮರು ಪ್ರಾರಂಭವಾಗುತ್ತಿದ್ದಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಕೆಲವು ಮಹತ್ವದ ಸೂಚನೆಗಳನ್ನು ನೀಡಿದೆ. ಡಿಸೆಂಬರ್-ಜನವರಿ ಒಳಗೆ ಸಂಪೂರ್ಣ ಸಿಲಬಸ್ ಮುಕ್ತಾಯ ಆಗಬೇಕು, ಒಂದು ತಿಂಗಳು ಆಗಿರುವ ಸಿಲೆಬಸ್ ನಷ್ಟ ತುಂಬಲು ವಿಶೇಷ ತರಗತಿಗಳನ್ನು ನಡೆಸಬೇಕು, ಬೆಳಗ್ಗೆ ಶಾಲೆ ಸಮಯಕ್ಕಿಂತ ಮುಂಚೆ ಅಥವಾ ಸಂಜೆ

ಶಾಲೆ ಪುನರಾರಂಭ : ಸಿಲೆಬಸ್‌ ಪೂರ್ತಿಗೊಳಿಸಲು ಹಲವು ಸೂಚನೆ Read More »

ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಪತ್ತೆ : ಮಹಿಳೆ ಸಹಿತ ಮೂವರು ಸೆರೆ

ಐಷಾರಾಮಿ ಬಂಗಲೆಯಲ್ಲಿ ನಡೆಯುತ್ತಿತ್ತು ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮೈಸೂರು : ಭ್ರೂಣ ಪತ್ತೆ ಹಾಗೂ ಹತ್ಯೆ ಜಾಲವೊಂದನ್ನು ಮೈಸೂರಿನಲ್ಲಿ ಪೊಲೀಸರು ಆರೋಗ್ಯ ಇಲಾಖೆ ಸಹಕಾರದಿಂದ ಬಯಲಿಗೆಳೆದಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂ ಒಂದರ ಕೈವಾಡ ಶಂಕೆ ಕೂಡ ವ್ಯಕ್ತವಾಗಿದ್ದು, ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು ತಾಲೂಕು ಮೆಲ್ಲಹಳ್ಳಿ ಗ್ರಾಮದ ಬಳಿಯ ಹುನಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಐಷಾರಾಮಿ ಬಂಗಲೆಯಲ್ಲಿ ಭ್ರೂಣ ಲಿಂಗ

ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಪತ್ತೆ : ಮಹಿಳೆ ಸಹಿತ ಮೂವರು ಸೆರೆ Read More »

ನೇತ್ರಾವತಿ ಸೇರಿ 12 ನದಿಗಳ ನೀರು ಕುಡಿಯಲು ಅಸುರಕ್ಷಿತ

ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿಯಲ್ಲಿದೆ ನದಿಗಳ ಮಾಲಿನ್ಯದ ಕಳವಳಕಾರಿ ಮಾಹಿತಿ ಬೆಂಗಳೂರು: ರಾಜ್ಯದಲ್ಲಿರುವ ನದಿಗಳ ನೀರಿನ ಗುಣಮಟ್ಟದ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯೊಂದನ್ನು ಸಿದ್ಧಪಡಿಸಿದ್ದು, ಈ ವರದಿಯಲ್ಲಿ ಕರಾವಳಿಯ ಜೀವನದಿ ನೇತ್ರಾವತಿಯೂ ಸೇರಿ ರಾಜ್ಯದ 12 ನದಿಗಳ ನೀರು ನೇರವಾಗಿ ಕುಡಿಯಲು ಸುರಕ್ಷಿತವಲ್ಲ ಎಂಬ ಮಾಹಿತಿ ನೀಡಿದೆ. ಸೆಪ್ಟೆಂಬರ್‌ನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ 12 ಪ್ರಮುಖ ನದಿಗಳ ನೀರನ್ನು 32 ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದು, 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ

ನೇತ್ರಾವತಿ ಸೇರಿ 12 ನದಿಗಳ ನೀರು ಕುಡಿಯಲು ಅಸುರಕ್ಷಿತ Read More »

ಉದ್ಯಮಿ ಕಿರಣ್ ಮಜುಂದಾರ್ ಶಾ – ಡಿ ಕೆ ಶಿವಕುಮಾರ್ ಭೇಟಿ

ಬೆಂಗಳೂರು: ಬೆಂಗಳೂರಿನ ಅವ್ಯವಸ್ಥೆಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ದ ಟ್ವೀಟ್ ವಾರ್ ನಡೆಸಿದ್ದ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಕಸದ ಸಮಸ್ಯೆ, ರಸ್ತೆ ಹೊಂಡ ಗುಂಡಿಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಸಂಬಂಧಿಸಿದ ಹಾಗೆ ಕಿರಣ್ ಮಜುಂದಾರ್ ಶಾ ಅವರು ಟ್ವೀಟ್ ಮೂಲಕ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಶಾ ಅವರ ಟ್ವೀಟ್‌ಗಳ ಹಿಂದೆ ಇನ್ಯಾವುದೋ ಅಜೆಂಡಾ ಇದೆ ಎಂಬುದಾಗಿ

ಉದ್ಯಮಿ ಕಿರಣ್ ಮಜುಂದಾರ್ ಶಾ – ಡಿ ಕೆ ಶಿವಕುಮಾರ್ ಭೇಟಿ Read More »

error: Content is protected !!
Scroll to Top