ರಾಜ್ಯ

ಶಾಲಾ ಆವರಣಗಳಲ್ಲಿ ಕಾರ್ಯಕ್ರಮ ನಿಷೇಧಿಸಲು ಜಗದೀಶ್‌ ಶೆಟ್ಟರ್‌ ಸುತ್ತೋಲೆ ಹೊರಡಿಸಿದ್ದಕ್ಕೆ ಸಾಕ್ಷಿ ಇಲ್ಲ : ಆರ್‌. ಅಶೋಕ್‌

ಕಾಂಗ್ರೆಸ್‌ ಸರ್ಕಾರದಿಂದ ರೌಡಿಯಿಸಂ, ಬೆದರಿಕೆ ತಂತ್ರ ಎಂದು ಆರೋಪ ಬೆಂಗಳೂರು : ಶಾಲಾ ಆವರಣದಲ್ಲಿ ಹೊರಗಿನ ಸಂಘಟನೆಗಳಿಂದ ಕಾರ್ಯಕ್ರಮ ಮಾಡುವುದನ್ನು ನಿಷೇಧಿಸುವ ಬಗ್ಗೆ ಹಿಂದಿನ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಆದೇಶ ಮಾಡಿರುವುದಕ್ಕೆ ಸಾಕ್ಷಿ ಇಲ್ಲ. ಇದು ಅಂದಿನ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಚರ್ಚೆಯಾಗಿರಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ. ಚಾಮರಾಜಪೇಟೆಯ ಒಂದು ಶಾಲೆಗೆ ಸಂಬಂಧಿಸಿದಂತೆ ಒಂದು ಆದೇಶವಾಗಿತ್ತು. ಇದನ್ನು ಎಲ್ಲದ್ದಕ್ಕೂ ಅನ್ವಯಿಸಿ ಮಾರ್ಪಾಡು ಮಾಡಿ ಈಗಿನ ಸರ್ಕಾರ ಆದೇಶ ಮಾಡಿದೆ. ಜಗದೀಶ್‌ ಶೆಟ್ಟರ್‌ ಅಥವಾ […]

ಶಾಲಾ ಆವರಣಗಳಲ್ಲಿ ಕಾರ್ಯಕ್ರಮ ನಿಷೇಧಿಸಲು ಜಗದೀಶ್‌ ಶೆಟ್ಟರ್‌ ಸುತ್ತೋಲೆ ಹೊರಡಿಸಿದ್ದಕ್ಕೆ ಸಾಕ್ಷಿ ಇಲ್ಲ : ಆರ್‌. ಅಶೋಕ್‌ Read More »

26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ನೇಮಕಾತಿ ಸಂಬಂಧ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ. ಅ. 23 ರಿಂದ ನ. 9 ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ. ಡಿ. 7 ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ಶೀಘ್ರವೇ ಅನುದಾನಿತ ಶಾಲಾ ಶಿಕ್ಷಕರ ನೇಮಕಾತಿಯನ್ನೂ ಸರ್ಕಾರ ಹೊರಡಿಸಲಿದೆ. ಹೊಸದಾಗಿ ರಾಜ್ಯದಲ್ಲಿ 800 ಕೆಪಿಎಸ್ ‌ಶಾಲೆಗಳನ್ನೂ ಆರಂಭ ಮಾಡಲಾಗುತ್ತದೆ. ಆರನೇ

26,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ Read More »

ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದ ವಿಶ್ವ ಆರೋಗ್ಯ ಸಂಸ್ಥೆ

ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ನೆಪದಲ್ಲಿ ನಿಷೇಧಿಸಲು ಕರೆ ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆ (WHO) ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದೆ. ಕ್ಯಾನ್ಸರ್‌ಗೆ ಕಾರಣವಾಗುತ್ತದೆ ಎಂಬ ನೆಪವೊಡ್ಡಿ ಅಡಿಕೆ ನಿಷೇಧ ಮಾಡಲು ಕರೆ ನೀಡಿದೆ. ಶ್ರೀಲಂಕಾದಲ್ಲಿ ನಡೆದ ಆಗ್ನೇಯ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಿಕೆಯ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಅಡಿಕೆ ಮೇಲೆ ಅಪವಾದ ಹೊರಿಸುತ್ತಿರುವದು ಇದೇ ಮೊದಲಲ್ಲ. ಕಳೆದ ಸುಮಾರು ಒಂದೂವರೆ ದಶಕದಿಂದ ಅಡಿಕೆಯಿಂದ

ಅಡಿಕೆ ಮೇಲೆ ಮತ್ತೆ ವಕ್ರದೃಷ್ಟಿ ಬೀರಿದ ವಿಶ್ವ ಆರೋಗ್ಯ ಸಂಸ್ಥೆ Read More »

ಇನ್ನು ಜಾತಿ ಗಣತಿ ಹೊಣೆ ಜಿಲ್ಲಾಡಳಿತ ಸಿಬ್ಬಂದಿಗೆ : ಶಿಕ್ಷಕರಿಗಿಲ್ಲ ಸಮೀಕ್ಷೆ ಹೊರೆ

ಅ.31ರ ವರೆಗೆ ಜಿಲ್ಲೆಯ ವಿವಿಧ ಇಲಾಖೆ ಸಿಬ್ಬಂದಿ ಬಳಸಿ ಗಣತಿ ನಡೆಸಲು ತೀರ್ಮಾನ ಬೆಂಗಳೂರು: ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ತಿಳಿಸಿದ್ದಾರೆ. ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಸಿಕೊಳ್ಳಲ್ಲ.

ಇನ್ನು ಜಾತಿ ಗಣತಿ ಹೊಣೆ ಜಿಲ್ಲಾಡಳಿತ ಸಿಬ್ಬಂದಿಗೆ : ಶಿಕ್ಷಕರಿಗಿಲ್ಲ ಸಮೀಕ್ಷೆ ಹೊರೆ Read More »

ಹೈಕೋರ್ಟ್‌ ಮೆಟ್ಟಿಲೇರಿದ ಚಿತ್ತಾಪುರದ ಆರ್‌ಎಸ್‌ಎಸ್‌ ಪಥಸಂಚಲನ ಜಟಾಪಟಿ

ಅ.24ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್​​​ಎಸ್​​​ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ವಿಚಾರ ಹೈಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ಮಾಡಿದ ಕಲಬುರಗಿ ಹೈಕೋರ್ಟ್ ಪೀಠ, ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿದೆ. ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ. ಚಿತ್ತಾಪುರದಲ್ಲಿ ಇಂದು (ಭಾನುವಾರ) ಆರ್​ಎಸ್​ಎಸ್​​ ಪಥ ಸಂಚಲನ ನಡೆಯಬೇಕಿತ್ತು. ಆದರೆ ಅನುಮತಿ ನಿರಾಕರಿಸಿ ತಹಸೀಲ್ದಾರ್​ ನಾಗಯ್ಯ ಹಿರೇಮಠ

ಹೈಕೋರ್ಟ್‌ ಮೆಟ್ಟಿಲೇರಿದ ಚಿತ್ತಾಪುರದ ಆರ್‌ಎಸ್‌ಎಸ್‌ ಪಥಸಂಚಲನ ಜಟಾಪಟಿ Read More »

ದೀಪಾವಳಿ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಪಟಾಕಿ ಸಿಡಿಸಲು ಹಲವು ನಿರ್ಬಂಧ ; ಮಾಲಿನ್ಯ ತಡೆಯಲು ಸೂಚನೆ ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಹೀಗಾಗಿ ಮಾಲಿನ್ಯ ರಹಿತವಾಗಿ ಆಚರಿಸಲು ಮನವಿ ಮಾಡಲಾಗಿದೆ. ಹಸಿರು ಪಟಾಕಿ ಮಾತ್ರ ಬಳಸಿ. ಪಟಾಕಿ ಬಾಕ್ಸ್‌ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್

ದೀಪಾವಳಿ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ Read More »

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಸರ್ಕಾರ

ಸಚಿವ ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ ಇಂದು ನಡೆಯಬೇಕಿದ್ದ ಪಥಸಂಚಲನ ಬೆಂಗಳೂರು : ಸಚಿವ ಪ್ರಿಯಾಂಕ್‌ ಖರ್ಗೆ ಪ್ರತಿನಿಧಿಸುತ್ತಿರುವ ಚಿತ್ತಾಪುರದಲ್ಲಿ ಇಂದು ನಡೆಯಬೇಕಿದ್ದ ಆರ್‌ಎಸ್‌ಎಸ್‌ ಪಥ ಸಂಚನಲನಕ್ಕೆ ಸರ್ಕಾರ ಅನುಮತಿ ನೀಡಲು ನಿರಾಕರಿಸಿದೆ. ಪಥಸಂಚಲನಕ್ಕೆ ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಎಂಬ ಕಾರಣ ನೀಡಿ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ತಹಸೀಲ್ದಾರ್‌ ನಾಗಯ್ಯ ಅನುಮತಿ ನೀಡಲು ನಿರಾಕರಿಸಿದ್ದಾರೆ. ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವಬೆದರಿಕೆ ಹಾಕಿದ್ದನ್ನು ಖಂಡಿಸಿ ತವರು ಕ್ಷೇತ್ರದಲ್ಲಿ ಬಂದ್‌ ನಡೆಸಿ ಪ್ರತಿಭಟನೆ ನಡೆಸಲಾಗಿದೆ.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ಸರ್ಕಾರ Read More »

RSS ನಮ್ಮ ಟಾರ್ಗೆಟ್ ಅಲ್ಲ: ಸಿಎಂ ‌ಸಿದ್ದರಾಮಯ್ಯ

ಮೈಸೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಾವು ಟಾರ್ಗೆಟ್ ಮಾಡುತ್ತಿಲ್ಲ. ಯಾವುದೇ ಖಾಸಗಿ ಸಂಘ – ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಸಿಎಂ ‌ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ಹಿಂದೆ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿಯೇ ಈ ಬಗ್ಗೆ ಸುತ್ತೋಲೆ ಹೊರಡಿಸಲಾಗಿತ್ತು. ಅದನ್ನು ನಮ್ಮ ಸರ್ಕಾರ ಈಗ ಅನುಷ್ಠಾನಕ್ಕೆ ತಂದಿದೆ. ಅವರು ಕ್ರಮ ಕೈಗೊಂಡ ಸಂದರ್ಭದಲ್ಲಿ ಯಾಕೆ ಆರೆಸ್ಸೆಸ್ ವಿರೋಧ

RSS ನಮ್ಮ ಟಾರ್ಗೆಟ್ ಅಲ್ಲ: ಸಿಎಂ ‌ಸಿದ್ದರಾಮಯ್ಯ Read More »

ಪ್ರತಾಪ್ ಸಿಂಹ ವಿರುದ್ಧದ ಚು. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಅಧಿಕಾರಿಗಳು ಚುನಾವಣಾ ಅಕ್ರಮ ಪ್ರಕರಣಗಳಲ್ಲಿ ಉದ್ದೇಶಪೂರ್ವಕವಾಗಿ ದೋಷಪೂರಿತ ಆರೋಪ ಪಟ್ಟಿ ಸಲ್ಲಿಕೆ ಮಾಡುತ್ತಾರೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಈ ಪ್ರಕರಣ ದಾಖಲಾಗಿತ್ತು. ಇದನ್ನು ರದ್ದು ಮಾಡುವಂತೆ ಸಿಂಹ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು‌. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಪ್ರಕರಣದ ಆರೋಪಗಳು ಐಪಿಸಿ ಸೆಕ್ಷನ್ 171ಎಚ್

ಪ್ರತಾಪ್ ಸಿಂಹ ವಿರುದ್ಧದ ಚು. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ರದ್ದು ಮಾಡಿದ ಹೈಕೋರ್ಟ್ Read More »

ಆರ್‌ಎಸ್‌ಎಸ್‌ ನಿಷೇಧ ಸಂವಿಧಾನ ವಿರೋಧಿ ನಡೆ : ನ್ಯಾ.ಸಂತೋಷ್‌ ಹೆಗ್ಡೆ

ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ಕೊಟ್ಟಿದೆ ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ ಸೇರಿದಂತೆ ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ಸಂಘಟನೆ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆ ಎಂದು ಮಾಜಿ‌ ಲೋಕಾಯುಕ್ತ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಹೇಳಿದ್ದಾರೆ. ಸಂಘಟನೆ ಮಾಡುವ ಅಧಿಕಾರ, ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಾಗಿರುವಾಗ ಆರ್.ಎಸ್.ಎಸ್. ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ಕ್ರಮವಾಗುತ್ತದೆ ಎಂದರು. ಒಂದು ವೇಳೆ ಸರ್ಕಾರ ಆರ್.ಎಸ್.ಎಸ್ ಸಂಘಟನೆ ನಿಷೇಧ

ಆರ್‌ಎಸ್‌ಎಸ್‌ ನಿಷೇಧ ಸಂವಿಧಾನ ವಿರೋಧಿ ನಡೆ : ನ್ಯಾ.ಸಂತೋಷ್‌ ಹೆಗ್ಡೆ Read More »

error: Content is protected !!
Scroll to Top