ರಾಜ್ಯ

ಧಾರ್ಮಿಕ ಕೇಂದ್ರಗಳು ಎಲ್ಲರನ್ನು ಏಕ ಸೂತ್ರದಲ್ಲಿ ಬಂಧಿಸುತ್ತದೆ: ಎಡನೀರು ಶ್ರೀ

ಉಪ್ಪಿನಂಗಡಿ: ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಯಜ್ಞ ಯಾಗಾದಿಗಳು ಆ ಕ್ಷೇತ್ರಕ್ಕೆ ಮಾತ್ರ ಸಂಬಂಧಪಡದೆ ಲೋಕ ಕಲ್ಯಾಣದ ದೃಷ್ಟಿಯಿಂದ ನಡೆಯುತ್ತದೆ. ಎಲ್ಲಾ ಭೇದ ಭಾವವನ್ನು ಮರೆತು ನಾವು ಮಾಡುವ ಪ್ರಾರ್ಥನೆಯಿಂದ ಸಮಾಜಕ್ಕೆ ಭಗವದನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮಿಗಳು ಆಶೀರ್ವಚನದಲ್ಲಿ ತಿಳಿಸಿದರು. ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜರಗಿದ ಶ್ರೀ ಮಹಾವಿಷ್ಣುಯಾಗ ಸಂದರ್ಭದಲ್ಲಿ ದೇವಸ್ಥಾನದ ಹೊರಾಂಗಣಕ್ಕೆ ಶಾಶ್ವತ ಮೇಲ್ಚಾವಣಿ ಅಳವಡಿಸುವ ಕಾರ್ಯಕ್ಕೆ ಅವರು ಚಾಲನೆಯನ್ನು ನೀಡಿದರು. ಬಾರ್ಯ ಶ್ರೀ ಪಾಂಡುರಂಗ ಭಜನಾ ಮಂದಿರದ […]

ಧಾರ್ಮಿಕ ಕೇಂದ್ರಗಳು ಎಲ್ಲರನ್ನು ಏಕ ಸೂತ್ರದಲ್ಲಿ ಬಂಧಿಸುತ್ತದೆ: ಎಡನೀರು ಶ್ರೀ Read More »

ವೈನ್‌ಶಾಪ್‌ನಲ್ಲಿ ಗಲಾಟೆ: ತಡೆಯಲು ಹೋದ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ವೈನ್‌ಶಾಪ್‌ನಲ್ಲಿ ಗಲಾಟೆ ಮಾಡುತ್ತಿದ್ದವರನ್ನು ತಡೆಯಲು ಹೋದ ಯುವಕನ ಮೇಲೆ ದುಷ್ಟರು ‌ಚೂರಿ ಇರಿದು ಗಾಯಗೊಳಿಸಿದ ಘಟನೆ ಹೊನ್ನಾಳಿ ರಸ್ತೆಯಲ್ಲಿ ನಡೆದಿದೆ. ರಾಗಿಗುಡ್ಡದ ‌ಸುನಿಲ್(27) ಎಂಬಾತನೇ ಚೂರಿ ಇರಿತಕ್ಕೆ ಒಳಗಾದ ಯುವಕ. ಸುನಿಲ್ ಮತ್ತು ಸ್ನೇಹಿತರು ವೈನ್ ಶಾಪ್‌ಗೆ ತೆರಳಿದ್ದರು. ಈ ವೇಳೆ ಅಲ್ಲಿ ಓರ್ವ ಅಪರಿಚಿತ ವ್ಯಕ್ತಿ ಸುನಿಲ್‌ನ ಸ್ನೇಹಿತರ ಜೊತೆಗೆ ಯಾವುದೋ ವಿಚಾರಕ್ಕೆ ಗಲಾಟೆ ಆರಂಭಿಸಿದ್ದ. ಪರಿಸ್ಥಿತಿ ತಿಳಿಗೊಳಿಸುವ ಉದ್ದೇಶದಿಂದ ಸುನಿಲ್ ಗಲಾಟೆ ಬಿಡಿಸಲು ಹೋಗಿದ್ದಾನೆ. ಆ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಸುನಿಲ್ ಮೇಲೆ

ವೈನ್‌ಶಾಪ್‌ನಲ್ಲಿ ಗಲಾಟೆ: ತಡೆಯಲು ಹೋದ ಯುವಕನಿಗೆ ಚಾಕು ಇರಿತ Read More »

ಕುರಿ ತೊಳೆಯಲು ಹೋದ ಸಹೋದರರು ಕೆರೆಗೆ ಬಿದ್ದು ಮೃತ್ಯು

ಹಾಸನ: ಇಬ್ಬರು ಸಹೋದರರು ಕುರಿಯನ್ನು ತೊಳೆಯುವುದಕ್ಕಾಗಿ ಕೆರೆಗೆ ಇಳಿದಿದ್ದು, ಮುಳುಗಿ ಸಾವನ್ನಪ್ಪಿದ ಘಟನೆ ಅರಸೀಕೆರೆಯ ಜಾವಗಲ್‌ನಲ್ಲಿ ನಡೆದಿದೆ. ಮೃತ ಬಾಲಕರನ್ನು ಯಾಸಿನ್(13) ಮತ್ತು ಇಮ್ರಾನ್(15) ಎಂದು ಗುರುತಿಸಲಾಗಿದೆ. ಎಂಟು ಮತ್ತು ಹತ್ತನೇ ತರಗತಿಯಲ್ಲಿ ಈ ಇಬ್ಬರು ಬಾಲಕರು ಕಲಿಯುತ್ತಿದ್ದರು. ಬೇಸಿಗೆ ರಜೆಯಾದ್ದರಿಂದ ಇವರಿಬ್ಬರೂ ತಮ್ಮ ಕುರಿಗಳನ್ನು ತೊಳೆಯಲು ಜಾವಗಲ್ ದೊಡ್ಡಕೆರೆಗೆ ತೆರಳಿದ್ದರು. ಆಕಸ್ಮಿಕವಾಗಿ ಕಾಲು ಜಾರಿ ಕೆರೆಯ ಆಳವಾದ ಭಾಗಕ್ಕೆ ಬಿದ್ದು ಮೃತ ಪಟ್ಟಿದ್ದಾರೆ. ಒಬ್ಬರನ್ನೊಬ್ಬರು ರಕ್ಷಿಸುವ ಪ್ರಯತ್ನ ಮಾಡಿದ ಅವರು ಕೊನೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿದೆ.

ಕುರಿ ತೊಳೆಯಲು ಹೋದ ಸಹೋದರರು ಕೆರೆಗೆ ಬಿದ್ದು ಮೃತ್ಯು Read More »

ಸ್ಲೀಪರ್ ಬಸ್ – ಕಾರಿನ ನಡುವೆ ಭೀಕರ ಅಪಘಾತ: ಹತ್ತಿಕೊಂಡ ಬೆಂಕಿಗೆ ನಾಲ್ಕಕ್ಕೂ ಹೆಚ್ಚು ಮಂದಿ ಸಾವು

ಯಾದಗಿರಿ: ಸ್ಲೀಪರ್ ಬಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹತ್ತಿದ ಬೆಂಕಿ ಎರಡೂ ವಾಹನಗಳನ್ನು ಕ್ಷಣ ಮಾತ್ರದಲ್ಲಿ ಸುಟ್ಟು ಕರಕಲಾಗಿಸಿದ ಘಟನೆ ನಡೆದಿದೆ. ಸುರಪುರದ ಶಾಂತಪುರ ಕ್ರಾಸ್‌‌ನ ಬೀದರ್ – ಬೆಂಗಳೂರು ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಬಸ್ಸು ಕಲಬುರ್ಗಿ ಕಡೆಗೆ ಹೋಗುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ನಾಲ್ಕಕ್ಕೂ ಹೆಚ್ಚು ಜನರು ಸುಟ್ಟು ಕರಕಲಾಗಿದ್ದಾರೆ. ಕಾರಿನಲ್ಲಿದ್ದ ಎಲ್ಲರೂ ಈ ದುರಂತದಲ್ಲಿ ಸಜೀವ ದಹನವಾಗಿದ್ದು, ಆರು ಮಂದಿ ಸಾವನ್ನಪ್ಪಿದ್ದಾಗಿ ಹೇಳಲಾಗುತ್ತಿದೆ. ನಾಲ್ಕು ತಲೆ‌ ಬುರುಡೆಗಳು

ಸ್ಲೀಪರ್ ಬಸ್ – ಕಾರಿನ ನಡುವೆ ಭೀಕರ ಅಪಘಾತ: ಹತ್ತಿಕೊಂಡ ಬೆಂಕಿಗೆ ನಾಲ್ಕಕ್ಕೂ ಹೆಚ್ಚು ಮಂದಿ ಸಾವು Read More »

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಹಕ್ಕಿಜ್ವರ ಹಾವಳಿ

ಬೆಂಗಳೂರಿನ ಪೌಲ್ಟ್ರಿ ಫಾರಂನಲ್ಲಿ ವೈರಸ್‌ ಪತ್ತೆ ಬೆಂಗಳೂರು: ರಾಜ್ಯದಲ್ಲಿ ಹಕ್ಕಿಜ್ವರ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಬೆಂಗಳೂರಿನ ಹೆಸರಘಟ್ಟದಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ H5N1 ವೈರಸ್ ಪತ್ತೆಯಾಗಿದೆ. ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ನಡೆಸಿದ ತಪಾಸಣೆಯ ವೇಳೆ ಕೋಳಿಗಳಲ್ಲಿ ಈ ಸೋಂಕು ಇರುವುದನ್ನು ಅಧಿಕಾರಿಗಳು ದೃಢಪಡಿಸಿದ್ದಾರೆ. ತಕ್ಷಣವೇ ಫಾರಂ ಅನ್ನು ಮುಚ್ಚಲಾಗಿದ್ದು, ಈ ಪ್ರದೇಶದಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿ ಸರಬರಾಜು ಆಗುತ್ತಿದ್ದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕಠಿಣಗೊಳಿಸಲಾಗಿದೆ. ಏವಿಯನ್ ಇನ್ಫ್ಲುಯೆನ್ಸ ಎಂದೂ ಕರೆಯಲ್ಪಡುವ ಬರ್ಡ್

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಹಕ್ಕಿಜ್ವರ ಹಾವಳಿ Read More »

ಕಾಂಗ್ರೆಸ್‌ಗೆ ಈಗ ಮುಸ್ಲಿಂ ಸಮುದಾಯದ ಬೆಂಬಲ ಕಳೆದುಕೊಳ್ಳುವ ಭೀತಿ

ಸಂಪುಟ ಸಭೆಯಲ್ಲಿ ಮುಸ್ಲಿಂ ನಾಯಕರ ವಿರುದ್ಧ ಕೈಗೊಂಡ ಕ್ರಮಕ್ಕೆ ಆಕ್ರೋಶ ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಇನ್ನಷ್ಟೇ ಬರಬೇಕಿದೆ. ಆದರೆ ಕಾಂಗ್ರೆಸ್ ನಾಯಕರ ನಡುವಿನ ಶೀತಲ ಸಮರ ಮಾತ್ರ ಬೀದಿಗೆ ಬಂದಿದ್ದು, ಪಕ್ಷದ ಒಗ್ಗಟ್ಟು ಮೂರಾಬಟ್ಟೆಯಾಗಿದೆ. ಮುಸ್ಲಿಂ ನಾಯಕರ ವಿರುದ್ಧ ತೆಗೆದುಕೊಂಡ ಕಠಿಣ ಕ್ರಮಗಳು ಈಗ ಸರ್ಕಾರದ ಒಳಗೂ ಸಂಚಲನ ಮೂಡಿಸಿವೆ. ಎಂಎಲ್​ಸಿ ಅಬ್ದುಲ್ ಜಬ್ಬಾರ್ ಅಮಾನತು ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ನಸೀರ್ ಅಹ್ಮದ್ ತಲೆದಂಡದ ವಿಚಾರ ಗುರುವಾರ ನಡೆದ ಸಚಿವ ಸಂಪುಟ

ಕಾಂಗ್ರೆಸ್‌ಗೆ ಈಗ ಮುಸ್ಲಿಂ ಸಮುದಾಯದ ಬೆಂಬಲ ಕಳೆದುಕೊಳ್ಳುವ ಭೀತಿ Read More »

ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ: ಚಾಲಕ ಸಾವು

ಬೆಳ್ತಂಗಡಿ: ನಾಯಿಯೊಂದು ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಆಸ್ರತ್ರೆಗೆ ಸಾಗಿಸುವ ದಾರಿಯಲ್ಲೇ ‌ಮೃತಪಟ್ಟ ಘಟನೆ ಆಳದಂಗಡಿಯಲ್ಲಿ ‌ನಡೆದಿದೆ. ನಾವರ ಗ್ರಾಮದ ಹಾರಡ್ಡೆ ನಿವಾಸಿ ದೇವಪ್ಪ ಯಾನೆ ಸುಧಾಕರ (37) ಎಂಬವರೇ ಮೃತ ದುರ್ದೈವಿ. ಗುರುವಾಯನಕೆರೆಯಿಂದ ಆಳದಂಗಡಿ ಕಡೆಗೆ ರಿಕ್ಷಾ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿಯಾಗಿ ಚಾಲಕ ಸುಧಾಕರ್ ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗುವ ಸಮಯದಲ್ಲಿ ಅರ್ಧ ದಾರಿಯಲ್ಲೇ ಅವರು

ನಾಯಿ ಅಡ್ಡ ಬಂದು ರಿಕ್ಷಾ ಪಲ್ಟಿ: ಚಾಲಕ ಸಾವು Read More »

ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ತಾಪಮಾನ ಏರಿಕೆ

ಬೆಂಗಳೂರು: ಬಿಸಿಲಿನ ಧಗೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ 16 ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಎ. 16 – 20 ರ ವರೆಗೆ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಹೆಚ್ಚಾಗಲಿದ್ದು, ಆದ್ದರಿಂದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ,

ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ತಾಪಮಾನ ಏರಿಕೆ Read More »

ಕೊಲೆ ಪ್ರಕರಣದಲ್ಲಿ ಅಪರಾಧಿ : ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ಭವಿಷ್ಯ ಇಂದು ನಿರ್ಧಾರ

2 ವರ್ಷಕ್ಕಿಂತ ಮೇಲ್ಪಟ್ಟು ಶಿಕ್ಷೆಯಾದರೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳಲಿರುವ ವಿನಯ್‌ ಕುಲಕರ್ಣಿ ಬೆಂಗಳೂರು : ಸುಮಾರು 10 ವರ್ಷಗಳ ಹಿಂದೆ ನಡೆದ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ನೀಡಿರುವುದಿರಂದ ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಯನ್ನು ಅಪರಾಧಿಗಳು ಎಂದು ತೀರ್ಮಾನಿಸಿ ಆದೇಶ ಹೊರಡಿಸಿದೆ.

ಕೊಲೆ ಪ್ರಕರಣದಲ್ಲಿ ಅಪರಾಧಿ : ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ಭವಿಷ್ಯ ಇಂದು ನಿರ್ಧಾರ Read More »

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡುವುದು ಕಡ್ಡಾಯ : ಹೈಕೋರ್ಟ್‌ ತೀರ್ಪು

ಅಸಂಘಟಿತ ವಲಯಕ್ಕೂ ವಿಸ್ತರಿಸಲು ಸಮಗ್ರ ನೀತಿ ರೂಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ಬೆಂಗಳೂರು : ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಋತುಸ್ರಾವ ರಜೆ ನೀತಿಯನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಕೋರ್ಟ್ ಎಂದು ನಿರ್ದೇಶಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಮಹಿಳೆಯರ ಮುಟ್ಟಿನ ರಜೆಗೆ ಅನುಮೋದನೆಯನ್ನು ನೀಡಿತ್ತು. ಆದರೆ ಕೆಲವೊಂದು ಕಂಪನಿಗಳು ಹಾಗೂ

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡುವುದು ಕಡ್ಡಾಯ : ಹೈಕೋರ್ಟ್‌ ತೀರ್ಪು Read More »

error: Content is protected !!
Scroll to Top