ರಾಜ್ಯ

ಜೈಲಿನಲ್ಲಿ ದರ್ಶನ್‌ ತೂಗುದೀಪ್‌ಗೆ ಮೂಲಸೌಕರ್ಯ ನಿರಾಕರಣೆ?: ವರದಿ ನೀಡಲು ಕರ್ನಾಟಕ ಸರ್ಕಾರಕ್ಕೆ ನೊಟೀಸ್

ಬೆಂಗಳೂರು: ತನಗೆ ಜೈಲಿನಲ್ಲಿ ಕನಿಷ್ಟ ಮೂಲ‌ಸೌಕರ್ಯಗಳನ್ನು ‌ಸಹ ಜೈಲಧಿಕಾರಿಗಳು ನೀಡುತ್ತಿಲ್ಲ ಎಂದು ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಯಿತು. ಈ ಸಂಬಂಧ ವರದಿ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನ್ಯಾ. ಮೂ. ಜೆ. ಬಿ. ಪರ್ದೀವಾಲ‌ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠ ನೊಟೀಸ್ ಜಾರಿ ಮಾಡಿದೆ. ಆರೋಪಿ ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೊಹಟಗಿ ‌ವಾದ ಮಂಡಿಸಿದ್ದು, ದರ್ಶನ್‌ಗೆ ಐಷಾರಾಮಿ ಸೌಲಭ್ಯಗಳನ್ನು ಜೈಲಿನಲ್ಲಿ […]

ಜೈಲಿನಲ್ಲಿ ದರ್ಶನ್‌ ತೂಗುದೀಪ್‌ಗೆ ಮೂಲಸೌಕರ್ಯ ನಿರಾಕರಣೆ?: ವರದಿ ನೀಡಲು ಕರ್ನಾಟಕ ಸರ್ಕಾರಕ್ಕೆ ನೊಟೀಸ್ Read More »

ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ

ಕೇಸರಿ ಪಕ್ಷಕ್ಕೆ ಬೋನಸ್‌ ಆಗಿ ದಕ್ಕಿದ ಒಂದು ಸ್ಥಾನ ಚಿಕ್ಕಮಗಳೂರು: ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಈ ಕುರಿತು ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಇಂದು ಫಲಿತಾಂಶ ಪ್ರಕಟಿಸಿದ್ದಾರೆ. ಇಂದೇ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶವೂ ಪ್ರಕಟವಾಗಲಿದೆ. ಇದಕ್ಕೂ ಮೊದಲೇ ಬಿಜೆಪಿಯ ಗೆಲುವನ್ನು ಸಾರಲಾಗಿದೆ. ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶ ಈ ಮೂಲಕ ಕ್ಲೈಮಾಕ್ಸ್‌ ತಲುಪಿದಂತಾಗಿದೆ. ರಾಜ್ಯದ

ಶೃಂಗೇರಿ : ಬಿಜೆಪಿ ಗೆಲುವು ಅಧಿಕೃತ ಘೋಷಣೆ Read More »

ಪುತ್ತೂರು, ಕಡಬ ತಾಲೂಕಿನಲ್ಲಿ ತಾಪಮಾನ ಇನ್ನಷ್ಟು ಏರಿಕೆ

ಈ ತಿಂಗಳ ಮಧ್ಯಭಾಗದವರೆಗೆ ಕರಾವಳಿಯಲ್ಲಿ ಬಿಸಿಲ ತಾಪ ಅಧಿಕ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಬರುವ ದಿನಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ. ನಿರ್ದಿಷ್ಟವಾಗಿ ಜಿಲ್ಲೆಯ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ತನ್ನ ಮಾಸಿಕ ವರದಿಯಲ್ಲಿ ಮೇ ತಿಂಗಳಲ್ಲಿ ದೇಶದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಈ ಹಿಂದೆಯೇ

ಪುತ್ತೂರು, ಕಡಬ ತಾಲೂಕಿನಲ್ಲಿ ತಾಪಮಾನ ಇನ್ನಷ್ಟು ಏರಿಕೆ Read More »

ಶೃಂಗೇರಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಬಿಜೆಪಿಯಿಂದ ಲೀಗಲ್‌ ನೋಟಿಸ್‌

ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ಶೃಂಗೇರಿ ರಿಸಲ್ಟ್‌ ಚಿಕ್ಕಮಗಳೂರು : ತೀವ್ರ ಕುತೂಹಲ ಕೆರಳಿಸಿರುವ ಶೃಂಗೇರಿ ವಿಧಾನಸಭೆ ಕ್ಷೇತ್ರದ ಮರು ಎಣಿಕೆಯ ಫಲಿತಾಂಶ ಈಗ ಮತ್ತೊಮ್ಮೆ ಕೋರ್ಟ್‌ ಅಂಗಳ ತಲುಪಿದೆ. ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ರಾಜೇಗೌಡರು ಪಡೆದಿದ್ದ 569

ಶೃಂಗೇರಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಬಿಜೆಪಿಯಿಂದ ಲೀಗಲ್‌ ನೋಟಿಸ್‌ Read More »

ಶೃಂಗೇರಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ಸಾಧ್ಯತೆ

ರಾಜ್ಯದ ರಾಜಕಾರಣದಲ್ಲಿ ಅಭೂತಪೂರ್ವ ವಿದ್ಯಮಾನ ಮೂರು ವರ್ಷ ಶಾಸಕರಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಭಾರಿ ದೊಡ್ಡ ಬದಲಾವಣೆಗೆ ನಾಂದಿ ಹಾಡಿದೆ. ಮತ ಎಣಿಕೆಯ ಅಂತಿಮ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ 52 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಬಾಕಿ ಇದೆ. ಇದುವರೆಗೂ ಚುನಾವಣಾ ಅಧಿಕಾರಿಗಳು ಫಲಿತಾಂಶ ಘೋಷಣೆ ಮಾಡಿಲ್ಲ. ಮತ ಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ರವಾನೆ ಮಾಡಲಾಗಿದೆ. ಬಹಳ

ಶೃಂಗೇರಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ಸಾಧ್ಯತೆ Read More »

ಗೊಂದಲ, ಹೈಡ್ರಾಮಾಕ್ಕೆ ಸಾಕ್ಷಿಯಾದ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ

ಮಧ್ಯರಾತ್ರಿ ಕಳೆದರೂ ಪ್ರಕಟವಾಗದ ಫಲಿತಾಂಶ ಚಿಕ್ಕಮಗಳೂರು : ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಶನಿವಾರ ತೀವ್ರ ಗೊಂದಲ ಮತ್ತು ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ. ಮಧ್ಯರಾತ್ರಿ ಕಳೆದರೂ ಈ ಕುರಿತ ಗೊಂದಲ ಮುಗಿದಿಲ್ಲ. ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಂತಿಮವಾಗಿ 55 ಮತಗಳಿಂದ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಗೊಂದಲ, ಹೈಡ್ರಾಮಾಕ್ಕೆ ಸಾಕ್ಷಿಯಾದ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ Read More »

ಹೆಂಡತಿ ಪರಾರಿಯಾದ ನೋವಿನಲ್ಲಿ ಮಕ್ಕಳಿಬ್ಬರನ್ನು ಕೊಂದು ಅರ್ಚಕ ಆತ್ಮಹತ್ಯೆ

ಸಾಕಿ ಬೆಳೆಸಿದ ಯುವಕನ ಜೊತೆಗೆ ಓಡಿಹೋದ ಹೆಂಡತಿ ತುಮಕೂರು: ತಾನೇ ಸಾಕಿ ಬೆಳೆಸಿದ ಸಂಬಂಧಿಕ ಯುವಕನೊಂದಿಗೆ ತನ್ನ ಪತ್ನಿ ಪಲಾಯನ ಮಾಡಿದ ನೋವಿನಲ್ಲಿ ಅರ್ಚಕರೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ (40) ಎಂದು ಗುರುತಿಸಲಾಗಿದೆ. ಅವರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (5) ಕತ್ತುಹಿಸುಕಿ

ಹೆಂಡತಿ ಪರಾರಿಯಾದ ನೋವಿನಲ್ಲಿ ಮಕ್ಕಳಿಬ್ಬರನ್ನು ಕೊಂದು ಅರ್ಚಕ ಆತ್ಮಹತ್ಯೆ Read More »

ಗೋಡೆಗೆ ಕನ್ನ ಕೊರೆದು ಕೋಟಿಗಟ್ಟಲೆ ರೂ. ಮೌಲ್ಯದ ಬೆಳ್ಳಿ ಆಭರಣ ಕಳ್ಳತನ

ಬೆಂಗಳೂರು: ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಚಿನ್ನದಂಗಡಿಯೊಂದಕ್ಕೆ ಗೋಡೆ ಕೊರೆದು ಕನ್ನ ಹಾಕಿರುವ ಕಳ್ಳರು ಕೋಟಿಗಟ್ಟಲೆ ಬೆಲೆಬಾಳುವ ಬೆಳ್ಳಿ ಆಭರಣಗಳನ್ನು ಕಳವುಗೈದಿದ್ದಾರೆ. ಎಂಬಿ ಜ್ಯುವೆಲ್ಲರ್ಸ್ ಅಂಗಡಿಯಿಂದ ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಂತ ಯೋಜಿತವಾಗಿ ಕಳ್ಳತನ ಮಾಡಲಾಗಿದೆ. ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ

ಗೋಡೆಗೆ ಕನ್ನ ಕೊರೆದು ಕೋಟಿಗಟ್ಟಲೆ ರೂ. ಮೌಲ್ಯದ ಬೆಳ್ಳಿ ಆಭರಣ ಕಳ್ಳತನ Read More »

ಉಪ್ಪಿನಂಗಡಿ-ಗುರುವಾಯನಕೆರೆ ಹೆದ್ದಾರಿ ಅಭಿವೃದ್ಧಿಗೆ ಅನುಮೋದನೆ

13 ಕೋ. ರೂ. ಅಂದಾಜುಪಟ್ಟಿಗೆ ಸಚಿ ಸಂಪುಟ ಅನುಮೋದನೆ ಮಂಗಳೂರು: ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸಲು 13 ಕೋಟಿ ರೂ. ಅಂದಾಜುಪಟ್ಟಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ನೀಡಲಾಗಿದೆ. ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿಯು ಗುಡ್ಡ, ಇಳಿಜಾರು ಮತ್ತು ತಿರುವ ಹೊಂದಿರುವ ರಸ್ತೆಯಾಗಿದೆ. ಬೆಂಗಳೂರು ಹಾಗೂ ಜಿಲ್ಲಾ ಕೇಂದ್ರಕ್ಕೆ ಹಾಗೂ ಧರ್ಮಸ್ಥಳ, ವೇಣೂರು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ

ಉಪ್ಪಿನಂಗಡಿ-ಗುರುವಾಯನಕೆರೆ ಹೆದ್ದಾರಿ ಅಭಿವೃದ್ಧಿಗೆ ಅನುಮೋದನೆ Read More »

ಬಿಜೆಪಿ ಮುಖಂಡನ ಕೊಲೆ ಕೇಸ್‌ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಕಳೆದ ವರ್ಷ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಂಭವಿಸಿದ ಭೀಕರ ಹತ್ಯೆ ಕೊಪ್ಪಳ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಆಪರಾಧಿಗಳಾದ ರವಿ, ವಿಜಯ್, ಧನರಾಜ್, ಭರತ್, ಸಲೀಮ್ ಮಹಮ್ಮದ್ ರಫೀಕ್, ಗಂಗಾಧರ ಗೌಳಿಗೆ ಗಲ್ಲು ಶಿಕ್ಷೆ ಹಾಗೂ ತಲಾ 3 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ತೀರ್ಪು ನೀಡಿದ್ದಾರೆ. 2025ರ ಅ.7ರಂದು ಹಳೆಯ

ಬಿಜೆಪಿ ಮುಖಂಡನ ಕೊಲೆ ಕೇಸ್‌ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ Read More »

error: Content is protected !!
Scroll to Top