ರಾಜ್ಯ

ರಾಜೀವ್‌ ಗೌಡನಿಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟ ಉದ್ಯಮಿ ಯಾರು?

ಪೊಲೀಸರ ಕಣ್ತಪ್ಪಿಸಿ ಮೂರು ದಿನಗಳಿಂದ ಮಂಗಳೂರಿನಲ್ಲಿ ಅಡಗಿಕೊಂಡಿದ್ದ ಕಾಂಗ್ರೆಸ್‌ ನಾಯಕ ಮಂಗಳೂರು : ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಸಂಬಂಧಿಸಿ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್‌ ನಾಯಕ ರಾಜೀವ್ ಗೌಡನನ್ನೂ ಕೊನೆಗೂ ಪೊಲೀಸರು ಸೋಮವಾರ ಬಂಧಿಸಿದ್ದಾರೆ. 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್​​ ಗೌಡ ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ ಶ್ರೀಮಂತ ಉದ್ಯಮಿಯೊಬ್ಬರು ಆಶ್ರಯ ನೀಡಿದ್ದರು ಎನ್ನುವ ಸ್ಫೋಟಕ ಮಾಹಿತಿ ಈಗ […]

ರಾಜೀವ್‌ ಗೌಡನಿಗೆ ಮಂಗಳೂರಿನಲ್ಲಿ ಆಶ್ರಯ ಕೊಟ್ಟ ಉದ್ಯಮಿ ಯಾರು? Read More »

ಪ್ರವಾಸಿ ಗಾಡಿ ಗುದ್ದಿ ಮಹಿಳೆ ಸಾವು

ಚಿಕ್ಕಮಗಳೂರು: ಪ್ರವಾಸಿ ವಾಹನವೊಂದು ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಆಲ್ದೂರಿನಲ್ಲಿ ನಡೆದಿದೆ. ನವಮಿ (30) ಮೃತ ದುರ್ದೈವಿ. ಅಪಘಾತ ನಡೆದ ಬಳಿಕ ಗಾಡಿಯನ್ನು ‌ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ನವಮಿ ಅವರು ಆಲ್ದೂರು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕೆಲಸ ಮಾಡುತ್ತಿದ್ದರು. ಡಿಕ್ಕಿ ಹೊಡೆದ ಗಾಡಿ ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದು ಬಂದಿದೆ. ಆಲ್ದೂರು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

ಪ್ರವಾಸಿ ಗಾಡಿ ಗುದ್ದಿ ಮಹಿಳೆ ಸಾವು Read More »

ಗಣರಾಜ್ಯೋತ್ಸವ : ಕೇಂದ್ರ ಸರ್ಕಾರದ ಟೀಕೆಯಿಲ್ಲದ ಭಾಷಣವನ್ನು ಓದಿದ ರಾಜ್ಯಪಾಲರು

ಅಧಿವೇಶನ ವಿವಾದದ ಹಿನ್ನೆಲೆಯಲ್ಲಿ ಎಚ್ಚರಿಕೆಯ ನಡೆ ಅನುಸರಿಸಿದ ರಾಜ್ಯ ಸರ್ಕಾರ ಬೆಂಗಳೂರು : ರಾಜ್ಯಪಾಲರ ಗಣರಾಜ್ಯೋತ್ಸವ ಭಾಷಣ ಯಾವುದೇ ವಿವಾದವಿಲ್ಲದೆ ಪೂರ್ಣಗೊಂಡಿದೆ.ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನೇ ಓದಿದರೂ ಅದರಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ವಾಕ್ಯಗಳು ಇರಲಿಲ್ಲ. ರಾಜ್ಯಪಾಲರ ಆಕ್ಷೇಪದ ಬೆನ್ನಲ್ಲೇ ರಾಜ್ಯ ಸರ್ಕಾರ ಗಣರಾಜ್ಯೋತ್ಸವ ಭಾಷಣದ ವಿಷಯದಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ರಾಜ್ಯಪಾಲರಿಗೆ ಸಿದ್ಧಪಡಿಸಿದ್ದ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವುದೇ ಅಂಶಗಳನ್ನು ಈ ಬಾರಿ ಸೇರಿಸಲಾಗಿಲ್ಲ. ಪರಿಣಾಮವಾಗಿ, ಯಾವುದೇ ವಿವಾದವಿಲ್ಲದೆ

ಗಣರಾಜ್ಯೋತ್ಸವ : ಕೇಂದ್ರ ಸರ್ಕಾರದ ಟೀಕೆಯಿಲ್ಲದ ಭಾಷಣವನ್ನು ಓದಿದ ರಾಜ್ಯಪಾಲರು Read More »

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಉಡುಪಿಗೆ ಪ್ರವಾಸ ಬಂದು ವಾಪಸು ಹೋಗುತ್ತಿದ್ದ ಕಾರು ಲಾರಿಗೆ ಡಿಕ್ಕಿ ಬೆಂಗಳೂರು: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತಪಟ್ಟವರು ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿ ಇಂದು

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು Read More »

ಸಿದ್ದರಾಮಯ್ಯ ಕಟೌಟ್‌ ಬಿದ್ದು ಮೂವರಿಗೆ ಗಂಭೀರ ಗಾಯ

ಕಾಂಗ್ರೆಸ್‌ ಕಾರ್ಯಕ್ರಮಕ್ಕೆ ಅಳವಡಿಸಿದ್ದ ಬೃಹತ್‌ ಕಟೌಟ್‌ ಹುಬ್ಬಳ್ಳಿ: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ಗಳು ಮುರಿಬಿದ್ದು ಮೂವರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಮಂಟೂರ ರಸ್ತೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಮಂಟೂರ ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ ಅವರ

ಸಿದ್ದರಾಮಯ್ಯ ಕಟೌಟ್‌ ಬಿದ್ದು ಮೂವರಿಗೆ ಗಂಭೀರ ಗಾಯ Read More »

10 ರೂ.ಗೆ ಲಭ್ಯ ನಂದಿನಿ ಹಾಲು, ಮೊಸರು

ಹೊಸ ಪ್ಯಾಕೆಟ್‌ ಮಾರುಕಟ್ಟೆಗೆ ಬಿಡುಗಡೆ ಬೆಂಗಳೂರು: ಇನ್ನು ಮುಂದೆ ನಂದಿನಿ ಹಾಲು ಮತ್ತು ಮೊಸರು 10 ರೂ.ಗಳ ಪ್ಯಾಕೆಟ್‌ನಲ್ಲೂ ಸಿಗಲಿದೆ. ನಂದಿನಿ ಮಳಿಗೆಗಳಲ್ಲಿ 10 ರೂ. ಮೌಲ್ಯದ ಹಾಲು, ಮೊಸರಿನ ಪ್ಯಾಕೆಟ್‌ಗಳೊಂದಿಗೆ ಮೀಡಿಯಂ ಫ್ಯಾಟ್‌ ಇರುವ ಪನೀರ್‌, ಹೈ ಆರೋಮ ತುಪ್ಪ, ಪ್ರೊಬಯಾಟಿಕ್‌ ಮಾವಿನ ಲಸ್ಸಿ, ಡೇರಿ ವೈಟ್ನರ್‌ ಸೇರಿದಂತೆ ಒಟ್ಟು ಹತ್ತು ಹೊಸ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಶುಕ್ರವಾರ ಬಿಡುಗಡೆ ಮಾಡಿದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕ ಮಹಾಮಂಡಳ (ಕೆಎಂಎಫ್‌) ನಂದಿನಿ ಬ್ರ್ಯಾಂಡ್‌ನ ಹಾಲು

10 ರೂ.ಗೆ ಲಭ್ಯ ನಂದಿನಿ ಹಾಲು, ಮೊಸರು Read More »

ರೆಡ್ಡಿ, ರಾಮುಲು ಹೆಸರಿನಲ್ಲಿದ್ದ ಮನೆಯಲ್ಲಿ ಬೆಂಕಿ ಅವಘಡ

ಭರತ್‌ ರೆಡ್ಡಿ ಬೆಂಬಲಿಗರು ಬೆಂಕಿ ಹಚ್ಚಿರುವ ಆರೋಪ ಬಳ್ಳಾರಿ : ಬಳ್ಳಾರಿಯಲ್ಲಿ ಇತ್ತೀಚೆಗೆ ಸಂಭವಿಸಿದ ಬ್ಯಾನರ್‌ ಗಲಾಟೆ ಮತ್ತು ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ ಪ್ರಕರಣದ ಕಾವು ತಣ್ಣಗಾಗುವ ಮೊದಲೇ ಇನ್ನೊಂದು ಘಟನೆ ಸಂಭವಿಸಿದೆ. ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ಜಂಟಿ ಹೆಸರಿನಲ್ಲಿದ್ದ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, ಇದು ಕಾಂಗ್ರೆಸ್‌ ಕಾರ್ಯಕರ್ತರ ಕೃತ್ಯ ಎಂದು ರೆಡ್ಡಿ ಸಹೋದರರು ಆರೋಪಿಸಿದ್ದಾರೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಶ್ರೀರಾಮುಲುಗೆ ಸೇರಿದ ಸೇರಿದ

ರೆಡ್ಡಿ, ರಾಮುಲು ಹೆಸರಿನಲ್ಲಿದ್ದ ಮನೆಯಲ್ಲಿ ಬೆಂಕಿ ಅವಘಡ Read More »

ನವ ವಿವಾಹಿತೆ ಆತ್ಮಹತ್ಯೆಗೆ ಶರಣು

ಕಲಬುರ್ಗಿ: ಪ್ರೀತಿ ಮಾಡಿ ಮದುವೆ ಮಾಡಿಕೊಂಡಿದ್ದ ಮಹಿಳೆಯೊಬ್ಬಳು ವಿವಾಹವಾದ ಕೇವಲ ಎರಡೇ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸಿದ್ದೇಶ್ವರ ಕಾಲನಿಯಲ್ಲಿ ‌ನಡೆದಿದೆ. ನೇಣಿಗೆ ಶರಣಾದ ಮಹಿಳೆಯನ್ನು ಅನುಸೂಯ ಆಕಡೆ (26) ಎಂದು ಗುರುತಿಸಲಾಗಿದೆ. ಅನುಸೂಯಾ ತನ್ನ ಅತ್ತೆ ಮಗ ಅವಿನಾಶ್ ಎನ್ನುವವರನ್ನು ಕುಟುಂಬ ವರ್ಗದ ಸಮ್ಮುಖದಲ್ಲೇ ಎರಡು ತಿಂಗಳ ಹಿಂದೆ ಮದುವೆಯಾಗಿದ್ದಳು. ಆದರೆ ಮದುವೆಯ ನಂತರ ಗಂಡನ ಜೊತೆಗೆ ಹಳ್ಳಿಯಲ್ಲಿ ಜೀವನ ನಡೆಸುವ ವಿಚಾರದಲ್ಲಿ ಆಕೆ ಬೇಸತ್ತಿದ್ದಳು. ಆಕೆಯ ಮೂವರು ಸಹೋದರಿಯರು ಬೆಂಗಳೂರು, ಮುಂಬೈ ಮೊದಲಾದ ಮಹಾನಗರಗಳಲ್ಲಿ

ನವ ವಿವಾಹಿತೆ ಆತ್ಮಹತ್ಯೆಗೆ ಶರಣು Read More »

ವಿಶ್ವ ವೇದಿಕೆಯಲ್ಲಿ ಭಾರತದ ಆರ್ಥಿಕತೆಯನ್ನು ಹಾಡಿ ಹೊಗಳಿದ ಡಿ.ಕೆ.ಶಿ.: ಕಾಂಗ್ರೆಸ್‌ಗೆ ಮುಖಭಂಗ

ದಾವೋಸ್: ಜಾಗತಿಕ ವೇದಿಕೆಯಲ್ಲಿ ಭಾರತದ ಆರ್ಥಿಕತೆಯನ್ನು ಕರ್ನಾಟಕದ ಡಿಸಿಎಂ ಡಿ. ಕೆ. ಶಿವಕುಮಾರ್ ಹೊಗಳಿದ್ದು, ಜಗತ್ತು ಭಾರತವನ್ನು ಹೆಚ್ಚಿನ ವಿಶ್ವಾಸದಿಂದ ನೋಡುತ್ತಿದೆ ಎಂದು ಹೇಳಿದ್ದಾರೆ. ದಾವೋಸ್‌ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂ‌ನಲ್ಲಿ ‌ಮಾತನಾಡಿದ ಅವರು, ಭಾರತದ ಸಾಧನೆಯ ಮೇಲೆ, ಮುಂದೆ ಸಾಗುತ್ತಿರುವ ಭಾರತದ ನಿರಂತರ ವೇಗದ ಮೇಲೆ ಪ್ರಪಂಚದ ವಿಶ್ವಾಸ ಅಧಿಕವಾಗುತ್ತಿದೆ ಎಂದಿದ್ದಾರೆ. ಇನ್ನು ಡಿ ಕೆ ಶಿವಕುಮಾರ್ ಅವರು ವಿಶ್ವ‌ವೇದಿಕೆಯಲ್ಲಿ ನಿಂತು ಭಾರತದ ಆರ್ಥಿಕತೆಯನ್ನು ಹೊಗಳಿದ್ದು ಬಿಜೆಪಿಗೆ ಅಸ್ತ್ರವಾಗಿದ್ದರೆ, ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ

ವಿಶ್ವ ವೇದಿಕೆಯಲ್ಲಿ ಭಾರತದ ಆರ್ಥಿಕತೆಯನ್ನು ಹಾಡಿ ಹೊಗಳಿದ ಡಿ.ಕೆ.ಶಿ.: ಕಾಂಗ್ರೆಸ್‌ಗೆ ಮುಖಭಂಗ Read More »

ಋತುಚಕ್ರ ರಜೆಗೆ ಪುರುಷ ನೌಕರರಿಂದ ವಿರೋಧ

ಉಳಿದ ನೌಕರರ ಮೇಲೆ ಹೆಚ್ಚು ಕೆಲಸದೊತ್ತಡ ಬೀಳುತ್ತಿದೆ ಎಂದು ಆಕ್ಷೇಪ ಬೆಂಗಳೂರು: ಸರ್ಕಾರಿ ಮಹಿಳಾ ನೌಕರರಿಗೆ ಸರ್ಕಾರ ವಿಶೇಷ ಕೊಡುಗೆಯಾಗಿ ನೀಡಿರುವ ಋತುಚಕ್ರ ರಜೆಗೆ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವಾಲಯದ ರಾಜ್ಯ ಶಿಷ್ಟಾಚಾರ ವಿಭಾಗದ ನೌಕರರು ಈ ಕುರಿತು ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು, ತಿಂಗಳಿಗೆ ಒಂದು ದಿನದಂತೆ ವರ್ಷಕ್ಕೆ 12 ಋತುಚಕ್ರ ರಜೆ ನೀಡುವ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ಶಿಷ್ಟಾಚಾರ ವಿಭಾಗದ ಅಧೀನ ಕಾರ್ಯದರ್ಶಿ ಬಾಣದ ರಂಗಯ್ಯ

ಋತುಚಕ್ರ ರಜೆಗೆ ಪುರುಷ ನೌಕರರಿಂದ ವಿರೋಧ Read More »

error: Content is protected !!
Scroll to Top