ರಾಜ್ಯ

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಳ್ಳ ಪೊಲೀಸರ ಬಲೆಗೆ

ಬೆಂಗಳೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋ ಕಳ್ಳನೊಬ್ಬ ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿಯನ್ನು ಕೇರಳ ಮೂಲದ ಅಮಲ್ (23) ಎಂದು ಗುರುತಿಸಲಾಗಿದೆ. ಮನೆಗಳನ್ನು ದೂರದಿಂದಲೇ ಗುರುತು ಮಾಡಿ ಅಲ್ಲಿ ಒಣ ಹಾಕಿರುತ್ತಿದ್ದ ‌ಮಹಿಳೆಯರ ಒಳ ಉಡುಪುಗಳನ್ನು ಯಾರೂ ಇಲ್ಲದ ಸಮಯ ನೋಡಿ ಕಳ್ಳತನ ಮಾಡುತ್ತಿದ್ದ. ಅವುಗಳನ್ನು ಧರಿಸಿ ಫೋಟೋ ತೆಗೆದು ವಿಕೃತ ಆನಂದ ಅನುಭವಿಸುತ್ತಿದ್ದ ಎಂದು ತಿಳಿದು ಬಂದಿದೆ. ಅಮಲ್ ವಾಸವಿದ್ದ ‌ಮನೆಯಲ್ಲೂ ಮಹಿಳೆಯರ ಒಳ ಉಡುಪು ಸಂಗ್ರಹಿಸಿ ಇಟ್ಟುಕೊಂಡಿದ್ದ ಎಂದು ತನಿಖೆಯ ವೇಳೆ […]

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಳ್ಳ ಪೊಲೀಸರ ಬಲೆಗೆ Read More »

ಅಕ್ರಮ ಗೋಮಾಂಸ‌‌ ಸಾಗಾಟ: ಆರೋಪಿ ಜಾಹಿದ್ ಅಹ್ಮದ್ ಬಂಧನ

ಮಡಿಕೇರಿ: ವಿರಾಜಪೇಟೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನ ಬಂಧನವಾಗಿದೆ. ಬಂಧಿತ ಆರೋಪಿಯನ್ನು ಜಾಹಿದ್ ಅಹ್ಮದ್ ಎಂದು ಗುರುತಿಸಲಾಗಿದೆ. ಅಲ್ಟೋ – 800 ಕಾರಿನಲ್ಲಿ ಗೋಮಾಂಸವನ್ನು ಅಕ್ರಮವಾಗಿ ತುಂಬಿಕೊಂಡು ಗೋಣಿಕೊಪ್ಪಲಿನಿಂದ ವಿರಾಜಪೇಟೆ ಕಡೆಗೆ ಬರುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಲೆಗೆ ಕೆಡಹಿದ್ದಾರೆ. ಕಾರಿನಲ್ಲಿ 150 KG ಗೋಮಾಂಸ ಪತ್ತೆಯಾಗಿದೆ. ಹುಣಸೂರಿನ ರತ್ನಗಿರಿಯಿಂದ ಗೋಮಾಂಸ ತಂದು ವಿರಾಜಪೇಟೆ ಪರಿಸರದಲ್ಲಿ ಮಾರಾಟ ನಡೆಸುವ ಕೆಲಸವನ್ನು ಈ ಖದೀಮ ಮಾಡುತ್ತಿದ್ದ ಎಂದು

ಅಕ್ರಮ ಗೋಮಾಂಸ‌‌ ಸಾಗಾಟ: ಆರೋಪಿ ಜಾಹಿದ್ ಅಹ್ಮದ್ ಬಂಧನ Read More »

ಡಿಜಿಪಿ ‌ರಾಮಚಂದ್ರ ರಾವ್‌ಗೆ ವಿಡಿಯೋ ಬಳಿಕ ಅಡಿಯೋ ಶಾಕ್

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ಚೆಲ್ಲಾಟದ ದೃಶ್ಯಗಳ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಒಂದು ಆಡಿಯೋ ಕ್ಲಿಪ್ ಸಹ ವೈರಲ್ ಆಗಿದೆ. ಈ ಎಲ್ಲಾ ಘಟನೆಗಳು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ಮುಜುಗರಕ್ಕೀಡು ಮಾಡಿದೆ. ಈ ವಿಡಿಯೋ ಮತ್ತು ಅಡಿಯೋಗಳೆರಡರ ಬಗ್ಗೆಯೂ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂಬ ಒತ್ತಾಯಗಳು ‌ಸಾರ್ವಜನಿಕ ವಲಯದಿಂದ ಕೇಳಿ ಬರಲಾರಂಭಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.

ಡಿಜಿಪಿ ‌ರಾಮಚಂದ್ರ ರಾವ್‌ಗೆ ವಿಡಿಯೋ ಬಳಿಕ ಅಡಿಯೋ ಶಾಕ್ Read More »

ಪಿಯುಸಿ ವಿದ್ಯಾರ್ಥಿಗಳ ಸ್ಟಡಿ ಹಾಲಿಡೇ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ

ಪರೀಕ್ಷೆ ಮುಗಿಯುವ ತನಕ ಕಾಲೇಜಿಗೆ ಬಂದು ಕಲಿಯಲು ಸೂಚನೆ ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಯನ್ನು ಶಿಕ್ಷಣ ಇಲಾಖೆ ರದ್ದುಪಡಿಸಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಈವರೆಗೆ ಪೂರ್ವಸಿದ್ಧತಾ ಪರೀಕ್ಷೆ ಮುಗಿದ ಬಳಿಕ ಸುಮಾರು ಒಂದು ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇ ನೀಡಲಾಗುತ್ತಿತ್ತು. ಆದರೆ

ಪಿಯುಸಿ ವಿದ್ಯಾರ್ಥಿಗಳ ಸ್ಟಡಿ ಹಾಲಿಡೇ ರದ್ದು : ಶಿಕ್ಷಣ ಇಲಾಖೆ ಮಹತ್ವದ ಆದೇಶ Read More »

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಕರ್ನಾಟಕದ ಹಲವೆಡೆ ಇ.ಡಿ. ದಾಳಿ

ಲೇಪನ ಮಾಡುವ ನೆಪದಲ್ಲಿ ದೇವರ ಕೋಟಿಗಟ್ಟಲೆ ಮೌಲ್ಯದ ಚಿನ್ನ ಕಳ್ಳತನ ತಿರುವನಂತಪುರ: ಶಬರಿಮಲೆ ದೇವಳದ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೋಧನೆ ನಡೆಸಿದ್ದಾರೆ. ಈ ಪ್ರಕರಣ ಸಂಬಂಧ ಕೇರಳದ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇದೀಗ ಇ.ಡಿ ಎಂಟ್ರಿಕೊಟ್ಟಿದೆ. ಬೆಂಗಳೂರು, ಬಳ್ಳಾರಿ ಹಾಗೂ ತಿರುವನಂತಪುರಂದ ಹಲವೆಡೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ. ಚಿನ್ನ ಕಳ್ಳತನದ ಆರೋಪದಲ್ಲಿ ಜೈಲುಪಾಲಾಗಿರುವ ಗೋವರ್ಧನ್ ಒಡೆತನದ ರೊದ್ದಂ ಜ್ಯುವೆಲರಿ ಶಾಪ್ ಹಾಗೂ

ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ : ಕರ್ನಾಟಕದ ಹಲವೆಡೆ ಇ.ಡಿ. ದಾಳಿ Read More »

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು

ತನಿಖೆ ಬಾಕಿಯಿರುವ ಕಾರಣವೊಡ್ಡಿ ರಾತ್ರಿ ಅಮಾನತು ಆದೇಶ ಹೊರಡಿಸಿದ ಸರ್ಕಾರ ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ ತೆರಳಿದ್ದ ರಾಜಚಂದ್ರ ರಾವ್‌ ಅವರನ್ನು ರಾತ್ರಿ ಹೊತ್ತಿಗೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಅಮಾನತುಗೊಳಿಸುರುವುದಾಗಿ ಆದೇಶದಲ್ಲಿ ತಿಳಿಸಿದೆ.

ರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು Read More »

ಕಚೇರಿಯಲ್ಲಿ ರಾಸಲೀಲೆ : ಡಿಜಿಪಿ ರಾಮಚಂದ್ರ ರಾವ್‌ಗೆ ಕಡ್ಡಾಯ ರಜೆ ಶಿಕ್ಷೆ!

ವಿಡಿಯೋ ಬಹಿರಂಗವಾದ ಬಳಿಕ ತೀವ್ರ ಮುಜುಗರ ಅನುಭವಿಸುತ್ತಿರುವ ಗೃಹ ಇಲಾಖೆ ಬೆಂಗಳೂರು: ಕಚೇರಿಯ ಒಳಗೆ ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರ ಜೊತೆ ಅನುಚಿತವಾಗಿ ವರ್ತಿಸಿದ ವಿಡಿಯೋ ಬಹಿರಂಗವಾದ ಬೆನ್ನಿಗೆ ಡಿಜಿಪಿ ರಾಮಚಂದ್ರ ರಾವ್‌ ಅವರನ್ನು ಸರ್ಕಾರ ಕಡ್ಡಾಯ ರಜೆ ಮೇಲೆ ಕಳುಹಿಸಿದೆ. ನಟಿ ರನ್ಯಾರಾವ್ ಒಳಗೊಂಡ ವಿದೇಶದಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲೂ ಡಿಜಿಪಿ ರಾಮಚಂದ್ರ ರಾವ್‌ ಹೆಸರು ಬಲವಾಗಿ ಕೇಳಿಬಂದಿತ್ತು. ಆಗಲೂ ಸರ್ಕಾರ ಅವರನ್ನು ಕೆಲದಿನಗಳ ಮಟ್ಟಿಗೆ ರಜೆ ಮೇಲೆ ಕಳುಹಿಸಿ ಕೈತೊಳೆದುಕೊಂಡಿತ್ತು. ನಾಗರಿಕ ಹಕ್ಕು ಜಾರಿ

ಕಚೇರಿಯಲ್ಲಿ ರಾಸಲೀಲೆ : ಡಿಜಿಪಿ ರಾಮಚಂದ್ರ ರಾವ್‌ಗೆ ಕಡ್ಡಾಯ ರಜೆ ಶಿಕ್ಷೆ! Read More »

ಧಾರ್ಮಿಕ ಭಾವನೆಗೆ ಧಕ್ಕೆ: ಹಿಂದೂ ನಾಯಕಿಯ ವಿರುದ್ಧ ದೂರು ದಾಖಲು

ಬೆಳಗಾವಿ: ಹಿಂದೂ ಸಮ್ಮೇಳನದ ಶೋಭಾಯಾತ್ರೆಯ ವೇಳೆ ಹಿಂದೂ ನಾಯಕಿ ಹರ್ಷಿತಾ ಠಾಕೂರ್ ಎಂಬವರು ದರ್ಗಾ‌ವೊಂದರ ಕಡೆಗೆ ಬಾಣ ಬಿಟ್ಚಂತೆ ಕೈ ಸನ್ನೆ ಮಾಡಿದ್ದು ಅವರ ವಿರುದ್ಧ ದೂರು ದಾಖಲಾಗಿದೆ. ಧಾರ್ಮಿಕ ಭಾವನೆಗೆ ‌ಧಕ್ಕೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಮಚ್ಚೆ ಗ್ರಾಮದಲ್ಲಿ ನಡೆದ ಶೋಭಾಯಾತ್ರೆಯ ಸಂದರ್ಭದಲ್ಲಿ ತೆರೆದ ವಾಹನದಲ್ಲಿ ನಿಂತಿದ್ದ ಹರ್ಷಿತಾ ದರ್ಗಾದತ್ತ ಬಾಣ ಬಿಡುವಂತೆ ಕೈ ಚಾಚಿದ್ದರು. ಆಗ ನೆರೆದಿದ್ದವರು ಜೈ ಶ್ರೀ ರಾಮ್ ಘೋಷಣೆ ಕೂಗಿದ್ದಾರೆ. ಹಾಗೆಯೇ ಸಮಾವೇಶದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬುದಾಗಿಯೂ ದೂರಿನಲ್ಲಿ

ಧಾರ್ಮಿಕ ಭಾವನೆಗೆ ಧಕ್ಕೆ: ಹಿಂದೂ ನಾಯಕಿಯ ವಿರುದ್ಧ ದೂರು ದಾಖಲು Read More »

ಸಾರ್ವಜನಿಕರ ಟೀಕೆಗೆ ಗುರಿಯಾದ ಡಿಜಿಪಿ ರಾಮಚಂದ್ರ ರಾವ್: ಕಾರಣ ಏನು ಗೊತ್ತಾ?

ಬೆಂಗಳೂರು: ದುಬೈ‌ನಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿ ಶಿಕ್ಷೆಗೆ ಒಳಗಾದ ನಟಿ ರಾನ್ಯಾ ರಾವ್ ಮಲ ತಂದೆ ಡಿಜಿಪಿ ರಾಮಚಂದ್ರ ರಾವ್ ಅವರು ಕಚೇರಿಯಲ್ಲೇ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋಗಳು ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾನ್ಯಾ ಚಿನ್ನ ಕಳ್ಳ ಸಾಗಾಟ ಮಾಡಿರುವ ಪ್ರಕರಣದಲ್ಲಿ ಪಾರದರ್ಶಕತೆ ಕಾಪಾಡಲು ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆಯಲ್ಲಿ ಸರ್ಕಾರ ಕಳುಹಿಸಿದೆ. ಇದೇ ಸಮಯದಲ್ಲಿ ಅವರು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋಗಳು ವೈರಲ್ ಆಗಿರುವುದಾಗಿದೆ. ಡಿಜಿಪಿ ಕಚೇರಿಯೊಳಗೆಯೇ ಈ

ಸಾರ್ವಜನಿಕರ ಟೀಕೆಗೆ ಗುರಿಯಾದ ಡಿಜಿಪಿ ರಾಮಚಂದ್ರ ರಾವ್: ಕಾರಣ ಏನು ಗೊತ್ತಾ? Read More »

ಲಕ್ಕುಂಡಿ ಉತ್ಖನನದಲ್ಲಿ ಪತ್ತೆಯಾಯಿತು ಶಿವಲಿಂಗ, ಕೊಡಲಿ, ನಾಗರಹಾವು…

ಐತಿಹಾಸಿಕ ಗ್ರಾಮವನ್ನು ಅಗೆದಷ್ಟು ಸಿಗುತ್ತಿದೆ ಅಚ್ಚರಿಯ ವಸ್ತುಗಳು ಬೆಂಗಳೂರು : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ ಮುಂದುವರಿದಂತೆ ಒಂದೊಂದೇ ರಹಸ್ಯ ಬಹಿರಂಗವಾಗುತ್ತಿದೆ. ಗ್ರಾಮದ ಮನೆಯೊಂದರ ಅಡಿಪಾಯ ತೆಗೆಯುವಾಗ ನಿಧಿ ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಉತ್ಖನನ ಕಾರ್ಯ ಭರದಿಂದ ಸಾಗುತ್ತಿದ್ದು, ದೇವಸ್ಥಾನಗಳ ಅವಶೇಷಗಳು ಸೇರಿದಂತೆ ಶಿಲ್ಪಕಲೆಗಳ ರಾಶಿ ರಾಶಿ ಕುರುಹುಗಳು ಪತ್ತೆಯಾಗುತ್ತಿವೆ. ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ನಡೆಯುತ್ತಿರುವ ವೇಳೆ ಪಕ್ಕದಲ್ಲಿದ್ದ ಖಾಸಗಿ ಸಂಸ್ಥೆಯ ಶಾಲೆಯನ್ನು ಜೆಸಿಬಿ ಮೂಲಕ

ಲಕ್ಕುಂಡಿ ಉತ್ಖನನದಲ್ಲಿ ಪತ್ತೆಯಾಯಿತು ಶಿವಲಿಂಗ, ಕೊಡಲಿ, ನಾಗರಹಾವು… Read More »

error: Content is protected !!
Scroll to Top