ರಾಜ್ಯ

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ವಿವಾದಕ್ಕೀಡಾಗಿದ್ದ ಹಿಂದೂ ಜಾತಿಗಳ ಜೊತೆಗಿನ ಕ್ರಿಶ್ಚಿಯನ್‌ ಉಪಜಾತಿ ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಉಪಜಾತಿ ವರ್ಗದಲ್ಲಿ ‘ಕ್ರಿಶ್ಚಿಯನ್’ ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಈಗ ಅದನ್ನು ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ. ಕ್ರಿಶ್ಚಿಯನ್‌ ಉಪಜಾತಿ ತೆಗೆದು ಹಾಕಿದ್ದು ನಾನಲ್ಲ, ಬದಲಾಗಿ ಹಿಂದುಳಿದ ವರ್ಗಗಳ ಆಯೋಗ. […]

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ Read More »

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ

ಕರ್ನಾಟಕದಲ್ಲಿ ನಡೆದ ಎಲ್ಲ ವೋಟ್‌ ಚೋರಿ ಪ್ರಕರಣಗಳ ತನಿಖೆ ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್​ಐಟಿ) ರಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾಂಗ್ರೆಸ್ ಆರೋಪ ಮಾಡಿರುವಂತೆ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಎಲ್ಲ ‘ವೋಟ್ ಚೋರಿ’ (ಮತಗಳ್ಳತನ) ತನಿಖೆಗೆ ರಾಜ್ಯ

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ Read More »

ಜಾತಿ ಗಣತಿ ಪಕ್ಕಾ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಸೋಮವಾರದಿಂದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಬೆಂಗಳೂರು: ಹಲವು ಗೊಂದಲ, ವಿರೋಧಗಳು ಮತ್ತು ದಸರಾ ಹಬ್ಬದ ನಡುವೆ ಸೆ.22ರಿಂದ ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭವಾಗಲಿದೆ. ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, 16 ದಿನಗಳ ಕಾಲ ನಡೆಯುವ ಈ ಸಮೀಕ್ಷೆಗೆ ಸಾರ್ವಜನಿಕರ ಸಹಕಾರ ಕೋರಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮೋದನೆ

ಜಾತಿ ಗಣತಿ ಪಕ್ಕಾ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ Read More »

ಇಂದಿನಿಂದ ಶಾಲೆಗಳಿಗೆ ದಸರಾ ರಜೆ

ಅ.8ರಿಂದ ಎರಡನೇ ಅವಧಿಯ ತರಗತಿಗಳು ಆರಂಭ ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭವಾಗಿದ್ದು, ಅ.7ರವರೆಗೆ ರಜೆ ಇರಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಇಲಾಖೆಯು 2025-26ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಜೆಗಳು ಮತ್ತು ಶಾಲಾ ಚಟುವಟಿಕೆಗಳ ಸಂಪೂರ್ಣ ಮಾರ್ಗದರ್ಶಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಮಾರ್ಗದರ್ಶಿಯ ಪ್ರಕಾರ ದಸರಾ ರಜೆ ನೀಡಲಾಗಿದೆ. ಅ.8ರಿಂದ ಶಾಲೆಗಳ ಎರಡನೇ ಅವಧಿಯ ತರಗತಿಗಳು ಆರಂಭವಾಗಲಿದೆ. ಈ

ಇಂದಿನಿಂದ ಶಾಲೆಗಳಿಗೆ ದಸರಾ ರಜೆ Read More »

ದೇವಾಲಯಗಳ ಸೇವಾ ಶುಲ್ಕ ದಿಢೀರ್‌ ಹೆಚ್ಚಿಸಿದ ಸರ್ಕಾರ

ಸುಬ್ರಹ್ಮಣ್ಯ, ಪುತ್ತೂರು ದೇವಸ್ಥಾನಗಳಲ್ಲಿ ಇನ್ನು ಮುಂದೆ ಸೇವೆಗಳು ದುಬಾರಿ ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೆ ಏರಿಕೆಯಾಗಿದೆ ಎಂಬ ವಿಚಾರ ನಿನ್ನೆಯಿಂದೀಚೆಗೆ ವೈರಲ್‌ ಆಗಿದೆ. ಇನ್ನು ಮುಂದೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ. ಸುಬ್ರಹ್ಮಣ್ಯ ಸೇರಿದಂತೆ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ನಿತ್ಯ ಭಕ್ತರು ಸಲ್ಲಿಸುವ ಸೇವೆಗಳ ಶುಲ್ಕ ಏರಿಸಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರು ನಿತ್ಯ ಅರ್ಪಿಸುವ ಹೂವಿನ ಪೂಜೆಯ ದರವನ್ನು ಏಕಾಏಕಿ 100 ರೂ. ಏರಿಸಲಾಗಿದೆ. ಇದಕ್ಕೆ ಭಾರಿ

ದೇವಾಲಯಗಳ ಸೇವಾ ಶುಲ್ಕ ದಿಢೀರ್‌ ಹೆಚ್ಚಿಸಿದ ಸರ್ಕಾರ Read More »

ಕಾಂಗ್ರೆಸ್‌ ತಪ್ಪಿನಿಂದ ಗೆಲ್ಲಬೇಡಿ, ನಿಮ್ಮ ಸಾಮರ್ಥ್ಯದಿಂದ ಗೆಲ್ಲಿ : ಬಿಜೆಪಿಗೆ ಬಿ.ಎಲ್‌.ಸಂತೋಷ್‌ ಪಾಠ

ಚಿಂತನಾ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ ಸಂತೋಷ್‌ ಬೆಂಗಳೂರು: ಬಿಜೆಪಿ ಚಿಂತನಾ ಸಭೆಯ ಸಮಾರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರಾಜ್ಯ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ. ಹಾಗೆಯೇ ನಾಯಕತ್ವ ಗುಣ ಬಗ್ಗೆಯೂ ಹೇಳಿದ್ದಾರೆ. ಪಕ್ಷದಲ್ಲಿ ಆಂತರಿಕ ಸ್ಫರ್ಧೆ ಇರಬೇಕು. ಅದು ಅಶಿಸ್ತಿನ ಹಂತಕ್ಕೆ ಹೋಗಬಾರದು. ಹಿಂದೆ ಎಲ್ಲ ಹಂತದಲ್ಲೂ ತಪ್ಪಾಗಿದೆ ಹೌದು. ಅದನ್ನು ಸರಿಪಡಿಸಿಕೊಂಡು ಹೋಗಬೇಕು. ಆರೋಪ ಬೇಡ. ಪಕ್ಷದಲ್ಲಿ ನಾಯಕರು ಮಾತನಾಡುವಾಗ ಪರಸ್ಪರ ನೇರವಾಗಿಯೇ ಮಾತಾಡಿ.

ಕಾಂಗ್ರೆಸ್‌ ತಪ್ಪಿನಿಂದ ಗೆಲ್ಲಬೇಡಿ, ನಿಮ್ಮ ಸಾಮರ್ಥ್ಯದಿಂದ ಗೆಲ್ಲಿ : ಬಿಜೆಪಿಗೆ ಬಿ.ಎಲ್‌.ಸಂತೋಷ್‌ ಪಾಠ Read More »

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾ

ನವದೆಹಲಿ: ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ವಜಾ ಮಾಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿ ಸಹ ವಜಾ ಮಾಡಲಾಗಿದೆ. ಸರ್ಕಾರ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದನ್ನು ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇನ್ನಿತರರು ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದ್ದ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾ Read More »

ಸೆ.22ರಿಂದ ನಂದಿನಿ ತುಪ್ಪ, ಬೆಣ್ಣೆ, ಚೀಸ್‌ ಬೆಲೆ ಇಳಿಕೆ

ಜನರಿಗೆ ಸಿಗಲಿದೆ ಜಿಎಸ್‌ಟಿ ಇಳಿಕೆ ಲಾಭ ಬೆಂಗಳೂರು: ಜಿಎಸ್‌ಟಿ ಪರಿಷ್ಕರಣೆಯಾಗಿರುವ ಹಿನ್ನೆಲೆಯಲ್ಲಿ ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವ ನಿಟ್ಟಿನಲ್ಲಿ ಸೋಮವಾರದಿಂದ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು ಶೇ.12ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು ಶೇ.5ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ. ಪನ್ನಿರ್ ಮತ್ತು ಯುಎಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು ಶೇ.5ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ

ಸೆ.22ರಿಂದ ನಂದಿನಿ ತುಪ್ಪ, ಬೆಣ್ಣೆ, ಚೀಸ್‌ ಬೆಲೆ ಇಳಿಕೆ Read More »

ಮಂಗಳೂರು – ಮಸ್ಕತ್ AIR ವಿಮಾನ ರದ್ದು ಬೇಡ: ಕ್ಯಾ. ಬ್ರಿಜೇಶ್ ಚೌಟ ಮನವಿ

ಮಂಗಳೂರು: ಮಸ್ಕತ್ ಮತ್ತು ಮಂಗಳೂರು ನಡುವಿನ AIR ವಿಮಾನ ಹಾರಾಟವನ್ನು ರದ್ದು ಮಾಡುವ ಪ್ರಸ್ತಾಪ ಸರಿಯಾಗಿಲ್ಲ. ಈ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು AIR ಸಂಸ್ಥೆಗೆ ಸೂಚನೆ ನೀಡುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಗರಿಕ ವಿಮಾನಯಾನ ಸಚಿವರಿಗೆ ಮನವಿ ಸಲ್ಲಿಸಿ ಪತ್ರ ಬರೆದಿದ್ದಾರೆ. ಒಮಾನ್‌ನಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಕರಾವಳಿ ಭಾಗದ ಜನರು ಉದ್ಯೋಗದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಎರಡೂ ರಾಷ್ಟ್ರಗಳ ನಡುವಿನ ವಿಮಾನ ಹಾರಾಟ ರದ್ದು ಮಾಡಿದರೆ ತೊಂದರೆಯಾಗುತ್ತದೆ. ಹಾಗಾಗಿ ಏಕಾಏಕಿ

ಮಂಗಳೂರು – ಮಸ್ಕತ್ AIR ವಿಮಾನ ರದ್ದು ಬೇಡ: ಕ್ಯಾ. ಬ್ರಿಜೇಶ್ ಚೌಟ ಮನವಿ Read More »

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಗೆ ನೊಟೀಸ್ ಹಚ್ಚಿದ ಪೊಲೀಸರು

ಬೆಳ್ತಂಗಡಿ: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಇರಿಸಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಪೊಲೀಸರು ನೊಟೀಸ್ ಹಚ್ಚಿ ಬಂದಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆರೋಪಿ ಚಿನ್ನಯ್ಯ‌ನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಿಮರೋಡಿಯ ಮನೆಗೆ SIT ಅಧಿಕಾರಿಗಳು ದಾಳಿ ನಡೆಸಿದ್ದರು. ಈ‌ವೇಳೆ ಅವರ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿತ್ತು. ಈ‌ ಪ್ರಕರಣವನ್ನು SIT ಪೊಲೀಸರು ಬೆಳ್ತಂಗಡಿ ಪೊಲೀಸರಿಗೆ ವರ್ಗಾವಣೆ ಮಾಡಿದ್ದರು. ಅದರಂತೆ ತಿಮರೋಡಿ ಮನೆಗೆ ಮಹಜರು ನಡೆಸುವ ಸಲುವಾಗಿ ಸೆ. 18 ರಂದು ಪೊಲೀಸರು

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಗೆ ನೊಟೀಸ್ ಹಚ್ಚಿದ ಪೊಲೀಸರು Read More »

error: Content is protected !!
Scroll to Top