ರಾಜ್ಯ

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌

ದೂರು ಕೊಟ್ಟ ಮರುಕ್ಷಣದಲ್ಲೇ ಬಂಧಿಸಿ ಮನೆ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ನೀಡಿದ ದೂರಿನನ್ವಯ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮುಂಬಡ್ತಿಗಾಗಿ ನಟೇಶ್ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಒಂದೂವರೆ ಕೋಟಿ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು.ಇದರ ಬೆನ್ನಲ್ಲೇ ನಿನ್ನೆ […]

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌ Read More »

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ

ಶಾಂತಿ ಸಭೆ ವಿಫಲ; ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ ಬಾಗಲಕೋಟೆ : ಬಾಗಲಕೋಟೆಯಲ್ಲಿ ಗುರುವಾರ ರಾತ್ರಿ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಜಯಪುರ ಜೈಲಿಗೆ ಅಟ್ಟಿದ್ದಾರೆ.

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ Read More »

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು

ವಿಜಯಪುರ: ವೈದ್ಯರು ಮತ್ತು ಆಸ್ಪತ್ರೆಯ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ಮಗು ಮೃತಪಟ್ಟ ಘಟನೆ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಢಳವಾರ ಗ್ರಾಮದ ಮೈತ್ರಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಸಿಂದಗಿಯ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದೇ ಇದ್ದ ಕಾರಣ ನರ್ಸ್ ಮತ್ತು ಇನ್ನಿಬ್ಬರು ಸಿಬ್ಬಂದಿ ಸೇರಿ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಮಗು ಮೃತಪಟ್ಟಿದ್ದು, ಮೈತ್ರಾಗೆ ತೀವ್ರ ಪ್ರಮಾಣದಲ್ಲಿ ರಕ್ತಸ್ರಾವ ಆಗಿದೆ. ಭಯಗೊಂಡ ಸಿಬ್ಬಂದಿ ತಕ್ಷಣವೇ ಆಕೆಯನ್ನು

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಮತ್ತು ನವಜಾತ ಶಿಶು ಸಾವು Read More »

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ : 8 ಮಂದಿ ಬಂಧನ

ಮಸೀದಿಯಿಂದಲೇ ಕಲ್ಲು, ಚಪ್ಪಲಿ ತೂರಿದ್ದಾರೆ ಎಂದು ದೃಢಪಡಿಸಿದ ಎಸ್‌ಪಿ ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.ತನ್ವೀರ್ (28) , ಮುಜ್ಜು (23), ಸದ್ದಾಂ(22), ಫಯಾಜ್(24), ಸರ್ಫರಾಜ್(33), ರಿಯಾನ್(21), ಅಯಾನ್(19), ವಸೀಮ್(22) ಬಂಧನಕ್ಕೆ ಒಳಗಾದ ಆರೋಪಿಗಳು. ವಿಡಿಯೋ ದೃಶ್ಯಗಳನ್ನು ಆಧಾರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ನಾವು ಆರೋಪಿಗಳನ್ನು ಬಂಧಿಸಿದ್ದೇವೆ. ರಾತ್ರಿ 10.06ಕ್ಕೆ ಕಲ್ಲು ಎಸೆಯಲಾಗಿದೆ. ನಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಕ್ಕೆ 7 ಮಂದಿ ಮೇಲೆ ಕೇಸ್‌

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ : 8 ಮಂದಿ ಬಂಧನ Read More »

ತಲೆಮರೆಸಿಕೊಂಡಿರುವ ಉಗ್ರನ ಸುಳಿವಿಗೆ 5 ಲ.ರೂ. ಬಹುಮಾನ ಘೋಷಿಸಿದ ಎನ್‌ಐಎ

ಮೂರು ವರ್ಷಗಳಿಂದ ತಪ್ಪಿಸಿಕೊಂಡಿರುವ ಲಷ್ಕರ್‌ನ ಉಗ್ರ ಬೆಂಗಳೂರು: ಮೋಸ್ಟ್‌ ವಾಂಟೆಡ್‌ ಉಗ್ರ ಜುನೈದ್‌ ಅಹಮ್ಮದ್‌ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ. ಮೋಸ್ಟ್ ವಾಂಟೆಡ್ ಲಷ್ಕರ್ ಎ ತೊಯ್ಬಾ ಉಗ್ರನಿಗಾಗಿ ಕಳೆದ ಮೂರು ವರ್ಷದಿಂದ ಎನ್‌ಐಎ ಅಧಿಕಾರಿಗಳು ದೇಶ, ಹೊರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಶಂಕಿತ ಉಗ್ರ ಜುನೈದ್ ಬಗ್ಗೆ ಸುಳಿವು ಸಿಕ್ಕಿಲ್ಲ. ಹಾಗಾಗಿ, ಉಗ್ರನ ಸುಳಿವು ಕೊಟ್ಟರೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ನಗರದ ಜನನಿಬಿಡ

ತಲೆಮರೆಸಿಕೊಂಡಿರುವ ಉಗ್ರನ ಸುಳಿವಿಗೆ 5 ಲ.ರೂ. ಬಹುಮಾನ ಘೋಷಿಸಿದ ಎನ್‌ಐಎ Read More »

ಶಿವಾಜಿ ಜಯಂತಿ ಮೇಲೆ ಕಲ್ಲು, ಚಪ್ಪಲಿ ತೂರಿದ ದುಷ್ಕರ್ಮಿಗಳು : ಪರಿಸ್ಥಿತಿ ಉದ್ವಿಗ್ನ

ಮಸೀದಿಯಿಂದ ಕಲ್ಲು ತೂರಾಟ ನಡೆಸಿದ್ದಾರೆಂದು ಆರೋಪ ಬೆಂಗಳೂರು: ಶಿವಾಜಿ ಭಾವಚಿತ್ರ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ ಕೆಲವರು ಗಾಯಗೊಂಡಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಮರುಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು, ಮುಂಜಾಗೃತಾ ಕ್ರಮವಾಗಿ ಪಂಕಾ ಮಸೀದಿ ಮತ್ತು ಕೊತ್ತಲೇಶ್ವರ ದೇಗುಲ ಬಳಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಯಾವುದೇ ಅನಾಹುತ ನಡೆಯದಂತೆ ನೋಡಿಕೊಳ್ಳಲು ಪೊಲೀಸ್​​

ಶಿವಾಜಿ ಜಯಂತಿ ಮೇಲೆ ಕಲ್ಲು, ಚಪ್ಪಲಿ ತೂರಿದ ದುಷ್ಕರ್ಮಿಗಳು : ಪರಿಸ್ಥಿತಿ ಉದ್ವಿಗ್ನ Read More »

ಕೆಲಸಕ್ಕೆ ತೆರಳಿದ್ದ ಯುವಕ ಶವವಾಗಿ ಪತ್ತೆ

ಹಾಸನ: ಕೆಲಸಕ್ಕೆಂದು ಫ್ಯಾಕ್ಟರಿಗೆ ಹೋಗಿದ್ದ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಹನುಮಂತಪುರ ಸಮೀಪ ನಡೆದಿದೆ. ಮೃತ ಯುವಕನನ್ನು ಪುನೀತ್(27) ಎಂದು ಗುರುತಿಸಲಾಗಿದೆ. ಕಳೆದ ಆರು ತಿಂಗಳಿನಿಂದ ಹನುಮಂತಪುರ ಬಳಿಯ ಕಾರ್ಖಾನೆಯಲ್ಲಿ ಎಲೆಕ್ಟ್ರಿಷಿಯನ್ ಕೆಲಸಕ್ಕೆ ಸೇರಿದ್ದ. ಆತ ಎಂದಿನಂತೆ ಬುಧವಾರ ಸಹ ಸಮವಸ್ತ್ರ ಧರಿಸಿ ಕೆಲಸಕ್ಕೆಂದು ಹೋಗಿದ್ದಾಗಿ ತಿಳಿದು ಬಂದಿದೆ. ಪುನೀತ್ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ತಂದಿರುವ ಪೊಲೀಸರು, ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸಾವಿಗೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಕೆಲಸಕ್ಕೆ ತೆರಳಿದ್ದ ಯುವಕ ಶವವಾಗಿ ಪತ್ತೆ Read More »

ಹೆಸರು ಬದಲಾಯಿಸಲು ಹೇಳಿದ ವ್ಯಕ್ತಿಗೆ ಖಡಕ್ ತಿರುಗೇಟು ಕೊಟ್ಟ ಗಾಯಕಿ ಸುಹಾನ ಸೈಯದ್

ಬೆಂಗಳೂರು: ತಮ್ಮ ಹೆಸರನ್ನು ಸವದತ್ತಿ ಎಲ್ಲಮ್ಮ ಎಂದು ಯಾಕೆ ಬದಲಾಯಿಸಿಕೊಳ್ಳಬಾರದು ಎಂದು ಇನ್ಸ್ಟಾ‌ಗ್ರಾಮ್ ಮೂಲಕ ಪ್ರಶ್ನೆ ಕೇಳಿದ ವ್ಯಕ್ತಿಗೆ ಸೂಕ್ತ ತಿರುಗೇಟು ನೀಡಿದ್ದಾರೆ ಗಾಯಕಿ ಸುಹಾನ ಸೈಯದ್. ಸುಹಾನ ಅವರು ಇತ್ತೀಚೆಗಷ್ಟೇ ತಮ್ಮ ಹಿಂದೂ ಗೆಳೆಯನ ಜೊತೆಗೆ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗಿದ್ದರು. ಆ ಬಳಿಕ ತಮ್ಮ ಪತಿಯ ಜೊತೆ ದೇವಾಲಯಗಳಿಗೆ ತೆರಳಿದ ಹಲವಾರು ಫೋಟೋ‌ಗಳನ್ನು ‌ಸಹ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದರಿಂದಾಗಿ ಸುಹಾನಾಗೆ ವ್ಯಕ್ತಿಯೊಬ್ಬ ಇನ್ಸ್ಟಾ ಸೆಷನ್‌ನಲ್ಲಿ ಹೆಸರು ಬದಲಾವಣೆಯ ಬಗ್ಗೆ ಪ್ರಶ್ನೆ ಕೇಳಿದ್ದಾನೆ. ಇದಕ್ಕೆ

ಹೆಸರು ಬದಲಾಯಿಸಲು ಹೇಳಿದ ವ್ಯಕ್ತಿಗೆ ಖಡಕ್ ತಿರುಗೇಟು ಕೊಟ್ಟ ಗಾಯಕಿ ಸುಹಾನ ಸೈಯದ್ Read More »

ಪತ್ನಿಯನ್ನು ಕತ್ತು ಬಿಗಿದು ಕೊಂದ ಇಸ್ರೋ ನಿವೃತ್ತ ಉದ್ಯೋಗಿ

ತಾನು ಸತ್ತರೆ ಪತ್ನಿ ಅನಾಥಳಾಗುತ್ತಾಳೆ ಎಂದು ಕೃತ್ಯ ಬೆಂಗಳೂರು: ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ಪತ್ನಿಯನ್ನೇ ಕೊಲೆ ಮಾಡಿದ ಆಘಾತಕಾರಿ ಘಟನೆ ಬೆಂಗಳೂರು ಹೊರವಲಯದ ಅವಲಹಳ್ಳಿ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಟವಲ್‌ನಿಂದ ಕತ್ತು ಬಿಗಿದು ನಾಗೇಶ್ವರ್‌ ರಾವ್‌ ಎಂಬಾತ (75) ಪತ್ನಿ ಸಂಧ್ಯಾ (65) ಅವರನ್ನು ಕೊಲೆ ಮಾಡಿದ್ದಾನೆ. ಮೂರು ವರ್ಷಗಳಿಂದ ಅಪಾರ್ಟ್‌ಮೆಂಟ್‌ನಲ್ಲಿ ದಂಪತಿ ವಾಸವಿದ್ದರು. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಗೇಶ್ವರ್‌ ರಾವ್‌ ಆತ್ಮಹತ್ಯೆ ಮಾಡಿಕೊಳ್ಳಲು ತೀರ್ಮಾನ ಮಾಡಿದ್ದ. ತಾನು ಆತ್ಮಹತ್ಯೆ ಮಾಡಿದರೆ ಪತ್ನಿ ಒಂಟಿಯಾಗುತ್ತಾಳೆ. ಆಕೆಯನ್ನು

ಪತ್ನಿಯನ್ನು ಕತ್ತು ಬಿಗಿದು ಕೊಂದ ಇಸ್ರೋ ನಿವೃತ್ತ ಉದ್ಯೋಗಿ Read More »

ಇಂದು ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ

ಸರ್ಕಾರದ ಜೊತೆಗಿನ ಮಾತುಕತೆ ವಿಫಲ; ಮುಷ್ಕರ ಸಾಧ್ಯತೆ ಬೆಂಗಳೂರು: ವಿವಿಧ ಬೇಡಿಕೆಗೆ ಆಗ್ರಹಿಸಿ ಸಿಡಿದೆದ್ದಿರುವ ಸಾರಿಗೆ ನೌಕರರ ಮನವೊಲಿಸುವ ಪ್ರಯತ್ನ ವಿಫಲಗೊಂಡಿದೆ. ಸರ್ಕಾರ ಕೊಟ್ಟಿರುವ ಆಫರ್‌ಗೆ ಬಗ್ಗದ ನೌಕರರು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಸಂಪೂರ್ಣ ಬೇಡಿಕೆ ಈಡೇರಲೇಬೇಕು ಏಂಬ ಬೇಡಿಕೆಯೊಂದಿಗೆ ಇಂದು ಬೆಂಗಳೂರು ಚಲೋಗೆ ಮುಂದಾಗಿದ್ದಾರೆ. ಸಾರಿಗೆ ನೌಕರರು ಹೋರಾಟ ಜೋರಾಗುವ ಸಾಧ್ಯತೆ ಕಂಡುಕೊಂಡ ನಿನ್ನೆ ಸರ್ಕಾರ, ನೌಕರರನ್ನು ಸಮಾಧಾನ ಪಡಿಸುವ ಯತ್ನಕ್ಕೆ ಮುಂದಾದರೂ ಪ್ರಯೋಜನ ಆಗಿಲ್ಲ. ನೌಕರರ ಬೇಡಿಕೆ ಪ್ರಕಾರ ಸರ್ಕಾರ 38 ತಿಂಗಳ ಹಿಂಬಾಕಿ

ಇಂದು ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ Read More »

error: Content is protected !!
Scroll to Top