ರಾಜ್ಯ

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌

ಬ್ಯಾನರ್‌ ಕಟ್ಟುವ ವಿಚಾರದಲ್ಲಿ ರಣರಂಗವಾದ ಬಳ್ಳಾರಿ, ನಿಷೇಧಾಜ್ಞೆ ಜಾರಿ ಬಳ್ಳಾರಿ : ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ಘಟನೆ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. ಜನವರಿ 3ರಂದು ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ […]

ಬ್ಯಾನರ್‌ ಗಲಾಟೆಯಲ್ಲಿ ಸಿಡಿದ ಗುಂಡಿಗೆ ಕಾಂಗ್ರೆಸ್‌ ಕಾರ್ಯಕರ್ತ ಬಲಿ : ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಕೇಸ್‌ Read More »

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕ್ಲಿಂಗ್ ಮೂಲಕ 702 ಕಿ.ಮೀ. ಕ್ರಮಿಸಿ ಸಾಧನೆ ಮೆರೆದ ಎಸ್. ಸುರೇಶ್ ಕುಮಾರ್

ಬೆಂಗಳೂರು: ನಗರದಿಂದ ಕನ್ಯಾಕುಮಾರಿಯ ವರೆಗೆ ಸುಮಾರು 702 ಕಿ.ಮೀ. ಗಳಷ್ಟು ದೂರವನ್ನು ಬರೋಬ್ಬರಿ 5 ದಿನಗಳಲ್ಲಿ ಸೈಕಲ್ ಮೂಲಕ ಸವಾರಿ ನಡೆಸಿ ಮಾಜಿ ಸಚಿವ, ರಾಜಾಜಿನಗರದ ‌ಶಾಸಕ ಎಸ್. ಸುರೇಶ್ ಕುಮಾರ್ (70) ಸಾರ್ವಜನಿಕರು ಹುಬ್ಬೇರಿಸುವಂತೆ ಸಾಧನೆ ಮೆರೆದಿದ್ದಾರೆ. ಸುರೇಶ್ ಕುಮಾರ್ ಅವರು ಕಳೆದ ವರ್ಷ ಅಪರೂಪದ ನರದ ಸಮಸ್ಯೆಗೆ ತುತ್ತಾಗಿ ಚಿಕಿತ್ಸೆ ಪಡೆದವರು. ಅವರಿಗೆ ತಮ್ಮ ಕೈ ಬೆರಳುಗಳನ್ನು ಅಲುಗಾಡಿಸಲೂ ಸಾಧ್ಯವಿಲ್ಲದೆ ಹಾಸಿಗೆ ಹಿಡಿಯುವ ಸ್ಥಿತಿ ಬಂದಿತ್ತು. ಆದರೆ ಸೂಕ್ತ ಚಿಕಿತ್ಸೆ ಮತ್ತು ತಾನು ಮೊದಲಿನಂತಾಗಬೇಕು

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕ್ಲಿಂಗ್ ಮೂಲಕ 702 ಕಿ.ಮೀ. ಕ್ರಮಿಸಿ ಸಾಧನೆ ಮೆರೆದ ಎಸ್. ಸುರೇಶ್ ಕುಮಾರ್ Read More »

ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಯುವತಿಯಿಂದ ತಕ್ಕ ಶಾಸ್ತಿ

ಕಾರವಾರ: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಸಂತ್ರಸ್ತೆ ಸರಿಯಾಗಿ ಪಾಠ ಕಲಿಸಿದ ಘಟನೆ ಅಂಕೋಲಾದಲ್ಲಿ ನಡೆದಿದೆ. ಯುವತಿಯ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಕಾಮುಕ ಯುವಕ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸಿದ್ದು, ಇದರಿಂದ ಎಚ್ಚರಗೊಂಡ ಯುವತಿ ಕೂಡಲೇ ಆತನ ಮಾನಗೇಡಿ ವರ್ತನೆಯನ್ನು ತನ್ನ ಮೊಬೈಲಿನಲ್ಲಿ ರೆಕಾರ್ಡ್ ಮಾಡಿದ್ದಾಳೆ. ಆ ಬಳಿಕ ಆ ಯುವಕನ ವಿರುದ್ಧ ಸಮರ ಸಾರಿದ್ದಾಳೆ. ವಿಡಿಯೋ ರೆಕಾರ್ಡ್ ಸಾಕ್ಷ್ಯದ ಮೂಲಕ ಬಸ್ಸಿನಲ್ಲೇ ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ. ಯುವತಿಯ ಧೈರ್ಯಕ್ಕೆ ನಾಡಿನೆಲ್ಲೆಡೆ ಶ್ಲಾಘನೆ

ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಕಾಮುಕನಿಗೆ ಯುವತಿಯಿಂದ ತಕ್ಕ ಶಾಸ್ತಿ Read More »

ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ : ಪೊಲೀಸರ ಕಣ್ಗಾವಲಿನ ನಡುವೆ ಮೋಜುಮಸ್ತಿ

ಪಟಾಕಿ ಸಿಡಿಸಿ, ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ ಜನ ಮಂಗಳೂರು: ಹೊಸ ವರ್ಷವನ್ನು ಇಡೀ ವಿಶ್ವವೇ ಸಂಭ್ರಮದಿಂದ ಸ್ವಾಗತಿಸಿದೆ. ಮಂಗಳೂರು, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಗಡಿಯಾರದ ಮುಳ್ಳು ರಾತ್ರಿ 12ನ್ನು ಸ್ಪರ್ಶಿಸುತ್ತಿದ್ದಂತೆ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಪಟಾಕಿ ಸಿಡಿಸಿ ಜನರು 2026ಕ್ಕೆ ಸ್ವಾಗತ ಕೋರಿದರು. ಮಂಗಳೂರಿನಲ್ಲಿ ಡಿಜೆ ಸಾಂಗ್‍ಗಳ ಜೊತೆಗೆ ಯಕ್ಷಗಾನದ ಹಾಡುಗಳಿಗೆ ನೃತ್ಯ ಮಾಡಿ ಹೊಸ ವರ್ಷವನ್ನು ಜನ ಸ್ವಾಗತಿಸಿದ್ದಾರೆ. ಮಂಗಳೂರಿನ ಕೆಲವೆಡೆ ಖಾಸಗಿಯಾಗಿ ಪಾರ್ಟಿಗಳು ನಡೆದಿವೆ. ಹೋಟೆಲ್‌, ಬಾರ್‌ಗಳಲ್ಲಿ ಮಾಮೂಲಿಗಿಂತ ಹೆಚ್ಚು

ಹೊಸ ವರ್ಷಕ್ಕೆ ಸಂಭ್ರಮದ ಸ್ವಾಗತ : ಪೊಲೀಸರ ಕಣ್ಗಾವಲಿನ ನಡುವೆ ಮೋಜುಮಸ್ತಿ Read More »

‘ಹಿನ್ನೋಟ – ಇದು ನೆನಪಿನ ಬುತ್ತಿ’ ಕೃತಿ ಅನಾವರಣ

ಸುಳ್ಯ: ಅರಂತೋಡಿನ ನಿವೃತ್ತ ರೇಂಜರ್ ಹೂವಯ್ಯ ಗೌಡ ಉಳುವಾರು ಅವರ ಬದುಕು ಹಾಗೂ ವೃತ್ತಿ ಬದುಕನ್ನು ಪರಿಚಯಿಸುವ ಅಭಿನಂದನಾ ಗ್ರಂಥ “ಹಿನ್ನೋಟ- ಇದು ನೆನಪಿನ ಬುತ್ತಿ” ಯ ಅನಾವರಣ ಕಾರ್ಯಕ್ರಮವು ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಬಾಲಕೃಷ್ಣ ಗೌಡ ಮೂಲೆಮನೆ ವಹಿಸಿದ್ದರು. ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಕೆ ಆರ್ ಗಂಗಾಧರ ಉದ್ಘಾಟಿಸಿದರು. ಎಂ. ಬಿ. ಫೌಂಡೇಶನ್ ಅಧ್ಯಕ್ಷ ಎಂ. ಬಿ. ಸದಾಶಿವ ಕೃತಿಯನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಕೃತಿಯ ಸಂಪಾದಕಿ ಡಾ. ಅನುರಾಧಾ ಕುರುಂಜಿ,

‘ಹಿನ್ನೋಟ – ಇದು ನೆನಪಿನ ಬುತ್ತಿ’ ಕೃತಿ ಅನಾವರಣ Read More »

ಕೋಗಿಲು ಒತ್ತುವರಿ ಕಾರ್ಯಾಚರಣೆ : ಕೇರಳದ ಬಳಿಕ ಮೂಗುತೂರಿಸಿದ ಪಾಕಿಸ್ತಾನ

ಬಿಜೆಪಿ ಕೆಂಡಾಮಂಡಲ; ಕಾಂಗ್ರೆಸ್‌ಗೆ ಗಂಟಲಿನ ಬಿಸಿತುಪ್ಪವಾದ ವಿವಾದ ಬೆಂಗಳೂರು: ನಗರದ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಕೇರಳದ ಬಳಿಕ ಪಾಕಿಸ್ತಾನವೂ ಮೂಗುತೂರಿಸಿರುವುದು ವಿವಾದವನ್ನು ಇನ್ನಷ್ಟು ತೀವ್ರಗೊಳಿಸಿದೆ. ಈ ವಿಚಾರದಲ್ಲಿ ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಮೇಲೆ ಬಿಜೆಪಿ ಮುಗಿಬಿದ್ದಿದ್ದು, ಕಾಂಗ್ರೆಸ್ ಸರ್ಕಾರ ಒಡೆದು ಆಳುವ ತುಷ್ಟೀಕರಣ ರಾಜಕಾರಣ ಮಾಡುತ್ತಿರುವುದರಿಂದ ಆಡಳಿತ ಹಳ್ಳಹಿಡಿದಿದೆ ಎಂದು ಆರೋಪಿಸಿದೆ. ಅಕ್ರಮವಾಗಿ ನಿರ್ಮಿಸಲಾಗಿದ್ದ ಮುಸ್ಲಿಮರ ಸುಮಾರು 200 ಮನೆಗಳನ್ನು ನೆಲಸಮ ಮಾಡಿದ್ದಕ್ಕೆ ಹೇಳಿಕೆ

ಕೋಗಿಲು ಒತ್ತುವರಿ ಕಾರ್ಯಾಚರಣೆ : ಕೇರಳದ ಬಳಿಕ ಮೂಗುತೂರಿಸಿದ ಪಾಕಿಸ್ತಾನ Read More »

ಹೊಸ ವರ್ಷದಲ್ಲಿ ವಿದ್ಯುತ್‌ ದರ ಏರಿಕೆ ಶಾಕ್‌

ಯೂನಿಟ್‌ಗೆ 10 ಪೈಸೆಯಂತೆ ಹೆಚ್ಚಿಸಲು ಚಿಂತನೆ ಬೆಂಗಳೂರು : ಹೊಸ ವರ್ಷದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಗ್ರಾಹಕರಿಗೆ ಶಾಕ್ ನೀಡಲು ಮುಂದಾಗಿದೆ. ಮುಂದಿನ ಹಣಕಾಸು ವರ್ಷದಲ್ಲಿ ವಿದ್ಯುತ್‌ ದರವನ್ನು ಮತ್ತೆ ಏರಿಸಲು ಆಯೋಗ ತೀರ್ಮಾನಿಸಿದೆ. ವಿದ್ಯುತ್ ಗ್ರಾಹಕರು ವಿದ್ಯುತ್‌ಗೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ ಎಂದಿರುವ ಆಯೋಗ, ಇದನ್ನು ವಿದ್ಯುತ್ ದರ ಪರಿಷ್ಕರಣೆ ಎಂದು ಕರೆಯದೆ, ಟಾಪ್-ಅಪ್ ಅಥವಾ ಟ್ರೂ-ಅಪ್ ಎಂದು ಸ್ಪಷ್ಟಪಡಿಸಿದೆ. ಮಾರ್ಚ್ 2025ರಲ್ಲಿ ಕೆಇಆರ್‌ಸಿ ವಿದ್ಯುತ್ ದರ ಪರಿಷ್ಕರಣೆ ಘೋಷಿಸಿದಾಗ, ಮೂರು ವರ್ಷಗಳ ಕಾಲ

ಹೊಸ ವರ್ಷದಲ್ಲಿ ವಿದ್ಯುತ್‌ ದರ ಏರಿಕೆ ಶಾಕ್‌ Read More »

ಕನ್ನಡದ ಕಿರುತೆರೆ ನಟಿ ಆತ್ಮಹತ್ಯೆ

ಡೆತ್‌ನೋಟ್‌ ಬರೆದಿಟ್ಟು ಸಾವಿಗೆ ಶರಣಾದ ನಟಿ ಬೆಂಗಳೂರು : ಕನ್ನಡ ಮತ್ತು ತಮಿಳಿನ ಹಲವು ಧಾರಾವಾಹಿಗಳಲ್ಲಿ ನಟಿಸಿ ಸೈನಿಸಿಕೊಂಡಿದ್ದ ಕಿರುತೆರೆ ನಟಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈಲಸಂದ್ರದಲ್ಲಿ ನಡೆದಿದೆ. ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’, ‘ಅಣ್ಣ-ತಂಗಿ’ ಮುಂತಾದ ಸೀರಿಯಲ್​​ಗಳಲ್ಲಿ ಅವರು ನಟಿಸಿದ್ದರು. ಮೂಲತಃ ಕೊಟ್ಟೂರಿನವರಾದ ನಂದಿನಿ ಸಿ.ಎಂ ಬೆಂಗಳೂರಿನಲ್ಲಿ ವಾಸವಿದ್ದರು. ಕನ್ನಡದ ʻಜೀವ ಹೂವಾಗಿದೆʼ, ʻಸಂಘರ್ಷʼ, ʻಮಧುಮಗಳುʼ, ʻನೀನಾದೆ ನಾʼ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ

ಕನ್ನಡದ ಕಿರುತೆರೆ ನಟಿ ಆತ್ಮಹತ್ಯೆ Read More »

ಎಚ್ಚರ…ಹೊಸ ವರ್ಷದ ಸಂದೇಶದಲ್ಲೂ ಇರಬಹುದು ಮೋಸದ ಜಾಲ!

ಅಪರಿಚಿತ ನಂಬರ್‌ಗಳಿಂದ ಬಂದ ಲಿಂಕ್‌ಗಳನ್ನು ಓಪನ್‌ ಮಾಡಬೇಡಿ ಬೆಂಗಳೂರು : ಹಬ್ಬಗಳು, ಹೊಸ ವರ್ಷದಂತಹ ವಿಶೇಷ ಸಂದರ್ಭಗಳನ್ನು ಗುರಿಯಾಗಿಸಿಕೊಂಡು ಸೈಬರ್ ವಂಚಕರು ನಕಲಿ ಜಾಲವನ್ನು ಹರಡುತ್ತಿದ್ದಾರೆ. ಆಫರ್‌ಗಳು, ಗಿಫ್ಟ್‌ಗಳು, ಕ್ಯಾಶ್‌ಬ್ಯಾಕ್ ಎನ್ನುವ ಆಕರ್ಷಕ ಸಂದೇಶಗಳನ್ನು ವಾಟ್ಸ್‌ಅಪ್, ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಕಳುಹಿಸಲಾಗುತ್ತಿದೆ. ಇಂತಹ ಸಂದೇಶಗಳಲ್ಲಿರುವ ಲಿಂಕ್‌ಗಳನ್ನು ತಿಳಿಯದೆ ಕ್ಲಿಕ್ ಮಾಡಿದರೂ ಬ್ಯಾಂಕ್ ಖಾತೆ ಲೂಟಿ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜನರು ಮೋಸದ ಜಾಲಕ್ಕೆ ಬಲಿಯಾಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಅಪರಿಚಿತ

ಎಚ್ಚರ…ಹೊಸ ವರ್ಷದ ಸಂದೇಶದಲ್ಲೂ ಇರಬಹುದು ಮೋಸದ ಜಾಲ! Read More »

ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ

ಹೆಕ್ಟೇರ್‌ಗಟ್ಟಲೆ ಭೂಮಿ ಒತ್ತುವರಿ ಮಾಡಿದ ಆರೋಪ ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ. ಆಂಧ್ರದ ಪರ್ಮಿಟ್‌ ಬಳಸಿ ಭೂಮಿ ಒತ್ತುವರಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಸುದಾಂಶು ದುಲಿಯಾ ನೇತೃತ್ವದಲ್ಲಿ ಸಮಿತಿ ಮಾಡಲಾಗಿತ್ತು. ಬಳ್ಳಾರಿಗೆ ತಿಂಗಳ ಹಿಂದೆ ಸರ್ವೇಗೆ ಬಂದಿದ್ದ ನಿವೃತ್ತ ನ್ಯಾ.ಸುಧಾಂಶು ದುಲಿಯಾ ನೇತೃತ್ವದ ಸಮಿತಿ ಗಡಿ ಒತ್ತುವರಿ ಬಗ್ಗೆ ವರದಿ ಸಲ್ಲಿಕೆ ಮಾಡಿದೆ. ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮದಲ್ಲಿ ಡ್ರೋನ್‌ ಮೂಲಕ ನಡೆದಿದ್ದ

ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ Read More »

error: Content is protected !!
Scroll to Top