ರಾಜ್ಯ

ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ

ದೇವಿಯ ಪರಮ ಭಕ್ತರಾಗಿರುವ ಇಳಯರಾಜ ಉಡುಪಿ: ಕೊಲ್ಲೂರು ಮೂಕಾಂಬಿಕೆ ದೇವಿಗೆ ದಕ್ಷಿಣ ಭಾರತ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ. […]

ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ Read More »

ಮದ್ದೂರಿನಲ್ಲಿಂದು ಗಣೇಶ ವಿಸರ್ಜನೆ ಬೃಹತ್‌ ಮೆರವಣಿಗೆ

ವಿಜಯೇಂದ್ರ ಸಹಿತ ಹಲವು ಬಿಜೆಪಿ ನಾಯಕರು ಭಾಗಿ ಬೆಂಗಳೂರು: ಭಾನುವಾರ ಗಣೇಶ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ ಘಟನೆಯ ಬಳಿಕ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯದ ಮದ್ದೂರಿನಲ್ಲಿ ಇಂದು ಮತ್ತೆ ಗಣೇಶ ವಿಸರ್ಜನೆಯ ಬೃಹತ್‌ ಮೆರವಣಿಗೆ ನಡೆಯಲಿದೆ. ಮದ್ದೂರಿನಲ್ಲಿಂದು ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದ್ದು, 28ಕ್ಕೂ ಹೆಚ್ಚು ಗಣೇಶ ಮೂರ್ತಿಗಳ ಮೆರವಣಿಗೆಯಲ್ಲಿ ಸಾಗಲಿವೆ. 20 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ಸಾಧ್ಯತೆಯಿದೆ. ಬೆಳಗ್ಗೆ 10.30ಕ್ಕೆ ಮದ್ದೂರು ಪಟ್ಟಣದಿಂದ ಮೆರವಣಿಗೆ ಆರಂಭವಾಗಿ ಮೂರು ಕಿ.ಮೀ ಸಾಗಿ

ಮದ್ದೂರಿನಲ್ಲಿಂದು ಗಣೇಶ ವಿಸರ್ಜನೆ ಬೃಹತ್‌ ಮೆರವಣಿಗೆ Read More »

ಐದಕ್ಕೂ ಅಧಿಕ ಬೆಟ್ಟಿಂಗ್‌ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದ ಕಾಂಗ್ರೆಸ್‌ ಶಾಸಕ

ಇ.ಡಿ ದಾಳಿಯಲ್ಲಿ ಶಾಸಕನ ಅಪಾರ ಸಂಪತ್ತಿನ ರಹಸ್ಯ ಬಯಲು ಬೆಂಗಳೂರು: ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಚಳ್ಳಕೆರೆಯ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಐದಕ್ಕೂ ಹೆಚ್ಚು ಆನ್‌ಲೈನ್‌ ಬೆಟ್ಟಿಂಗ್‌ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದುದನ್ನು ಜಾರಿ ನಿರ್ದೇಶನಾಲಯ (ಇ.ಡಿ) ಪತ್ತೆಹಚ್ಚಿದೆ. ಕಿಂಗ್ 567, ರಾಜ 567, ಲಯನ್ 567, ಪ್ಲೇ 567, ಪ್ಲೇವಿನ್ 567 ಎನ್ನುವ ಆನ್‌ಲೈನ್ ಬೆಟ್ಟಿಂಗ್ ವೆಬ್‌ಸೈಟ್ ನಡೆಸುತ್ತಿದ್ದರು ಎಂದು ಇ.ಡಿ. ಬಹಿರಂಗಪಡಿಸಿದೆ. ವೀರೇಂದ್ರ ಪಪ್ಪಿ ಆನ್‌ಲೈನ್‌ ಬೆಟ್ಟಿಂಗ್‌

ಐದಕ್ಕೂ ಅಧಿಕ ಬೆಟ್ಟಿಂಗ್‌ ವೆಬ್‌ಸೈಟ್‌ಗಳನ್ನು ನಡೆಸುತ್ತಿದ್ದ ಕಾಂಗ್ರೆಸ್‌ ಶಾಸಕ Read More »

ದಕ್ಷಿಣ ಕನ್ನಡ, ಕೊಡಗು ಅಭಿವೃದ್ಧಿ ಸಂಘದ ಕಾರ್ಯನಿರ್ವಾಹಕ ಸದಸ್ಯರ ಸಭೆ | ದೈವಜ್ಞರ ಮೂಲಕ ಚಿಂತನೆ ನಡೆಸಿ ಮುಂದಿನ ಅಭಿವೃದ್ಧಿ ಕೆಲಸಗಳು

ಕೊಡಗು: ದಕ್ಷಿಣಕನ್ನಡ ಕೊಡಗು ಅಭಿವೃದ್ಧಿ ಸಂಘ ರಿ ಸುಳ್ಳ್ಯ ಇದರ ಸಂಘದ ಕಾರ್ಯನಿರ್ವಾಹಕ ಸದಸ್ಯರ ಸಭೆ ಮಡಿಕೇರಿಯ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಪೈಕೇರ ಮನೋಹರ ಮಾದಪ್ಪನವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಸುಳ್ಳ್ಯದ ನಿವೇಶನ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಗಿದ್ದು ದೈವಜ್ಞರ ಮೂಲಕ ಚಿಂತನೆ ನಡೆಸಿ ಮುಂದಿನ ಅಭಿವೃದ್ಧಿಯ ಕೆಲಸ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುವುದು ಎಂದು ನಿರ್ಣಯಿಸಲಾಯಿತು. ನಿವೇಶನವನ್ನು ಸ್ವಚ್ಛಗೊಳಿಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಸಂಘದ ಕಾರ್ಯದರ್ಶಿ ದುಗ್ಗಳ ಕಪಿಲ ಕುಮಾರ್ ಬಿ. ಡಿ,ನಿರ್ದೇಶಕರಾದ

ದಕ್ಷಿಣ ಕನ್ನಡ, ಕೊಡಗು ಅಭಿವೃದ್ಧಿ ಸಂಘದ ಕಾರ್ಯನಿರ್ವಾಹಕ ಸದಸ್ಯರ ಸಭೆ | ದೈವಜ್ಞರ ಮೂಲಕ ಚಿಂತನೆ ನಡೆಸಿ ಮುಂದಿನ ಅಭಿವೃದ್ಧಿ ಕೆಲಸಗಳು Read More »

ಮದ್ದೂರು ಗಲಭೆ ಎನ್‌ಐಎ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ

ರಾಜ್ಯದಲ್ಲಿ ಹಿಂದೂಗಳು ಜೀವ ಭಯದಲ್ಲಿ ಬದುಕುವ ಪರಿಸ್ಥಿತಿ ಬಂದಿದೆ ಎಂದು ದೂರು ಬೆಂಗಳೂರು: ಮಂಡ್ಯದ ಮದ್ದೂರು ಗಣೇಶ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರಿದ ಘಟನೆಯ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕೆಂಬ ಆಗ್ರಹ ವ್ಯಕ್ತವಾಗಿದೆ. ಈ ಗಲಭೆ ಹಾಗೂ ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಇದೇ ಮಾದರಿಯ ಗಲಭೆಗಳ ಹಿಂದೆ ಮತಾಂಧ ಶಕ್ತಿಗಳ ವ್ಯವಸ್ಥಿತ ಪಿತೂರಿ ಇರುವ ಅನುಮಾನವಿದೆ. ಹೀಗಾಗಿ ಎನ್‌ಐಎ ಮೂಲಕ ತನಿಖೆ ನಡೆಸಬೇಕೆಂದು ಹಿಂದೂ ಮುಖಂಡ ತೇಜಸ್‌ ಗೌಡ

ಮದ್ದೂರು ಗಲಭೆ ಎನ್‌ಐಎ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಪತ್ರ Read More »

ಹಿಂದೂ ಸಂಘಟನೆಗಳ ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರಿಂದ ತಡೆ

ಪೊಲೀಸರ ಜೊತೆ ವಾಗ್ವಾದ, ಹಲವು ಕಾರ್ಯಕರ್ತರು ವಶಕ್ಕೆ ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಇಂದು ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಪಾದಯಾತ್ರೆಯನ್ನು ಪೊಲೀಸರು ತಡೆದು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಇಂದು ಚಾಮುಂಡಿ ಚಲೋ ಪಾದಯಾತ್ರೆಗೆ ಕರೆ ನೀಡಲಾಗಿತ್ತು. ಇನ್ನೊಂದು ಕಡೆ ಬಾನು ಮುಷ್ತಾಕ್ ಆಯ್ಕೆ ಸಮರ್ಥಿಸಿ

ಹಿಂದೂ ಸಂಘಟನೆಗಳ ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರಿಂದ ತಡೆ Read More »

ಧರ್ಮಸ್ಥಳ ಪ್ರಕರಣ : ಅಮಿತ್‌ ಶಾ ಭೇಟಿಯಾದ ಬಿಜೆಪಿ ನಿಯೋಗ

ಅನ್ಯರಾಜ್ಯದವರೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಯಿಂದ ತನಿಖೆಗೆ ಪ್ರಸ್ತಾವ ನವದೆಹಲಿ: ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರದ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ರಾಜ್ಯ ಬಿಜೆಪಿ ನಾಯಕರ ನಿಯೋಗ ಭೇಟಿ ಮಾಡಿ ಮಾಹಿತಿ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಿಯೋಗ ದೆಹಲಿಗೆ ತೆರಳಿ ಅಮಿತ್‌ ಶಾ ಅವರನ್ನು ಭೇಟಿಯಾಗಿದೆ. ಈ ವೇಳೆ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದೆ. ಆರಂಭದಿಂದ ಎಸ್‌ಐಟಿ ತನಿಖೆಗೆ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಯಾವುದೇ ಅಸ್ಥಿಪಂಜರ ಸಿಗದಿರುವ

ಧರ್ಮಸ್ಥಳ ಪ್ರಕರಣ : ಅಮಿತ್‌ ಶಾ ಭೇಟಿಯಾದ ಬಿಜೆಪಿ ನಿಯೋಗ Read More »

ಸೌಜನ್ಯ ಹತ್ಯೆ ಕೇಸ್: ಸ್ಪೋಟಕ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹೊಸ ಟ್ವಿಸ್ಟ್ ಒಂದನ್ನು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ್ದಾರೆ. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿರುವುದು ಆಕೆಯ ಮಾವ ವಿಠ್ಠಲ ಗೌಡ. ಆತನನ್ನು ಮಂಪರು ಪರೀಕ್ಷೆ ಮಾಡಬೇಕು ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ಪೂರಕ ಸಾಕ್ಷ್ಯ‌ಗಳನ್ನು ಸಂಗ್ರಹ ಮಾಡಲಾಗಿದ್ದು, ಇದನ್ನು ದಕ್ಷಿಣ ಕನ್ನಡದ SP ಅವರಿಗೆ ನೀಡಿ ದೂರು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಸೌಜನ್ಯ ಹತ್ಯೆ ಕೇಸ್: ಸ್ಪೋಟಕ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ Read More »

ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್‌ ಪ್ರತಿಭಟನೆ

ಲಾಠಿ ಚಾರ್ಜ್‌ ಮಾಡಿ ಪ್ರತಿಭಟನೆಕಾರರನ್ನು ಚದುರಿಸಿದ ಪೊಲೀಸರು ಬೆಂಗಳೂರು: ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟನಡೆದ ಬಳಿಕ ಮಂಡ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.ಕಲ್ಲು ತೂರಾಟ ಘಟನೆಗೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಮಸೀದಿ ಮುಂದೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನೂಕಾಟ ತಳ್ಳಾಟ ಉಂಟಾಗಿದ್ದು, ಈ ವೇಳೆ ಮತ್ತೆ ಕಲ್ಲು ತೂರಲಾಗಿದೆ. ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ. ಮದ್ದೂರು ಪಟ್ಟಣದ ರಾಮ್‌ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯಲ್ಲಿ

ಕಲ್ಲು ತೂರಾಟದ ಬಳಿಕ ಮಂಡ್ಯ ಉದ್ವಿಗ್ನ : ಹಿಂದೂಗಳಿಂದ ಬೃಹತ್‌ ಪ್ರತಿಭಟನೆ Read More »

ಸಿದ್ದರಾಮಯ್ಯ ಹಾಡಿ ಹೊಗಳಿದ ಶಾಂತಿದೂತರಿಂದಲೇ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ : ಸಿ.ಟಿ.ರವಿ ಆಕ್ರೋಶ

ಇನ್ನೆಷ್ಟು ದಿನ ಮತಗಳಿಕೆಗಾಗಿ ಸುಳ್ಳಿನ ಭರಾಟೆ ಎಂದು ಪ್ರಶ್ನಿಸಿದ ರವಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎರಡು ದಿನದ ಹಿಂದೆಯಷ್ಟೇ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪರಿಷತ್‌ ಸದಸ್ಯ ಸಿಟಿ ರವಿ ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯನವರನ್ನು ತರಾಟೆಗೆ ತೆಗೆದುಕೊಂಡಿರುವ ಸಿ.ಟಿ.ರವಿ, ಮಾನ್ಯ ಮುಖ್ಯಮಂತ್ರಿಗಳೇ ನೀವು ಎರಡು ದಿನದ ಹಿಂದೆ ಹಾಡಿ ಹೊಗಳಿದ “ಶಾಂತಿದೂತರು” ಮಂಡ್ಯದ ಮದ್ದೂರಿನಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಸಾಗರದಲ್ಲಿ

ಸಿದ್ದರಾಮಯ್ಯ ಹಾಡಿ ಹೊಗಳಿದ ಶಾಂತಿದೂತರಿಂದಲೇ ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ : ಸಿ.ಟಿ.ರವಿ ಆಕ್ರೋಶ Read More »

error: Content is protected !!
Scroll to Top