ರಾಜ್ಯ

ರಾಜ್ಯವನ್ನು ಬೆಚ್ಚಿಬೀಳಿಸಿದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಘಟನೆ

ತುಂಬು ಗರ್ಭಿಣಿ ಮಗಳನ್ನು ಗುದ್ದಲಿಯಿಂದ ಹೊಡೆದು ಕೊಂದ ತಂದೆ ಬೆಂಗಳೂರು : ಅನ್ಯ ಜಾತಿಯ ಯುವಕನನ್ನು ಮದುವೆಯಾದ ಮಗಳನ್ನು ತಂದೆಯೇ ಬರ್ಬರವಾಗಿ ಕೊಲೆ ಮಾಡಿರುವ ಮರ್ಯಾದಾ ಹತ್ಯೆ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದ್ದು, ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇನಾಂವೀರಾಪುರ ಗ್ರಾಮದ ಮಾನ್ಯಾ (19) ಹತ್ಯೆಯಾದ ಯುವತಿ. ಈಕೆ ಅದೇ ಗ್ರಾಮದ ವಿವೇಕಾನಂದ ಎಂಬವನನ್ನು ಪ್ರೀತಿಸಿ ಮದುವೆಯಾಗಿದ್ದಳು. ಯುವಕ ಅನ್ಯಜಾತಿಯವನು ಎಂಬ ಕಾರಣಕ್ಕೆ ಆಕೆಯ ತಂದೆ ಪ್ರಕಾಶಗೌಡ ಮನೆಗೆ ನುಗ್ಗಿ, ಮಗಳು 7 ತಿಂಗಳ ಗರ್ಭಿಣಿ […]

ರಾಜ್ಯವನ್ನು ಬೆಚ್ಚಿಬೀಳಿಸಿದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಘಟನೆ Read More »

ಪೋಕ್ಸೊ ಪ್ರಕರಣ : ಸ್ವಾಮೀಜಿಗೆ 35 ವರ್ಷ ಜೈಲು

ಮಠಕ್ಕೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಾಮೀಜಿ ಬೆಳಗಾವಿ: ಮಠಕ್ಕೆ ಬಂದ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಸ್ವಾಮೀಜಿ ತನ್ನ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದ ಪ್ರಕರಣ ಸಾಬೀತಾಗಿದ್ದು, ಅಪರಾಧಿಪಿಗೆ 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಬೆಳಗಾವಿ ಪೋಕ್ಸೊ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಮಂದಿರ ಮಠದ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಮೇ 13ರಂದು ಮಠಕ್ಕೆ ಬಂದಿದ್ದ ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ

ಪೋಕ್ಸೊ ಪ್ರಕರಣ : ಸ್ವಾಮೀಜಿಗೆ 35 ವರ್ಷ ಜೈಲು Read More »

ಸರ್ಕಾರಿ ನೌಕರರು ಕಚೇರಿಗೆ ಸಭ್ಯ ಉಡುಪು ಧರಿಸಿ ಬರಬೇಕು : ಸುತ್ತೋಲೆ

ಹರಿದ ಜೀನ್ಸ್‌, ಸ್ಲೀವ್‌ಲೆಟ್‌ ಡ್ರೆಸ್‌, ಬಿಗಿ ಬಟ್ಟೆ ಧರಿಸುವಂತಿಲ್ಲ ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಸಭ್ಯ ಬಟ್ಟೆಗಳನ್ನು ಧರಿಸಿಕೊಂಡು ಕಚೇರಿಗೆ ಬರಬೇಕು. ಸರ್ಕಾರದ ಖ್ಯಾತಿಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸಿ ಕಚೇರಿಗೆ ಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಟ್ಟುನಿಟ್ಟಿನ ಸೂತ್ತೋಲೆ ಹೊರಡಿಸಿದೆ. ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು

ಸರ್ಕಾರಿ ನೌಕರರು ಕಚೇರಿಗೆ ಸಭ್ಯ ಉಡುಪು ಧರಿಸಿ ಬರಬೇಕು : ಸುತ್ತೋಲೆ Read More »

ಈ ತಿಂಗಳಲ್ಲಿ ಜಮೆಯಾಗಲಿದೆ ಗೃಹಲಕ್ಷ್ಮಿಯ ಒಂದು ಕಂತು

ಮುಜುಗರದ ಬಳಿಕ ಒಂದು ಕಂತಿನ ಹಣ ಬಿಡುಗಡೆ ಮಾಡಿದ ಸರ್ಕಾರ ಬೆಂಗಳೂರು: ಸರ್ಕಾರ ಗೃಹಲಕ್ಷ್ಮಿ ಸ್ಕೀಂನ ಒಂದು ಕಂತಿನ ಹಣ ಬಿಡುಗಡೆ ಮಾಡಿದೆ. ಹೀಗಾಗಿ ಗೃಹಲಕ್ಷ್ಮಿ ಹೊಸವರ್ಷಕ್ಕೂ ಮುನ್ನ ಬಹುತೇಕ ಈ ಮಾಸಾಂತ್ಯದಲ್ಲಿ ಗೃಹಲಕ್ಷ್ಮಿ ಒಂದು ಕಂತಿ ಹಣ ಖಾತೆಗೆ ಜಮೆಯಾಗಲಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಈಗ 2-3 ತಿಂಗಳಿಗೊಮ್ಮೆ ಮಾತ್ರ ಗೃಹಲಕ್ಷ್ಮಿ ದುಡ್ಡು ಆಕೌಂಟ್ ಹಾಕುತ್ತಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣವನ್ನು ಜಮೆ ಮಾಡದಿರುವ

ಈ ತಿಂಗಳಲ್ಲಿ ಜಮೆಯಾಗಲಿದೆ ಗೃಹಲಕ್ಷ್ಮಿಯ ಒಂದು ಕಂತು Read More »

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಪಂದ್ಯ ಆಡಿಸಲು 17 ಷರತ್ತು

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತದ ಬಳಿಕ ರದ್ದಾಗಿರುವ ಅಂತಾರಾಷ್ಟ್ರೀಯ ಪಂದ್ಯಗಳು ಬೆಂಗಳೂರು : ಬೆಂಗಳೂರಿನ ಐತಿಹಾಸಿಕ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಪುನರಾರಂಭಿಸಲು ಗ್ರೀನ್ ಸಿಗ್ನಲ್ ದೊರೆತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದ ಘಟನೆಯ ನಂತರ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಇದೀಗ ಬೆಂಗಳೂರು ಪೊಲೀಸರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ಕಟ್ಟುನಿಟ್ಟಾದ 17 ಅಂಶಗಳ ಮಾರ್ಗಸೂಚಿಯನ್ನು ಸಿದ್ಧಪಡಿಸಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಲು ಸಜ್ಜಾಗಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್‌ ಪಂದ್ಯ ಆಡಿಸಲು 17 ಷರತ್ತು Read More »

ಕೆಎಸ್‌ಆರ್‌ಟಿಸಿ ಬಸ್ಸಿನಿಂದ 55 ಲ.ರೂ. ಕಳವು

ನಿಲ್ಲಿಸಿದ್ದ ಬಸ್‌ನಿಂದ ರಾಜಾರೋಷವಾಗಿ ಹಣ ಎತ್ತಿಕೊಂಡು ಹೋದ ಕಳ್ಳ ಬೆಂಗಳೂರು: ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ನಿಂತಿತ್ತು. ಊಟ ಮಾಡಿ ಬರುವಷ್ಟರಲ್ಲಿ ಸೀಟ್​​ನಲ್ಲಿ ಇಟ್ಟಿದ್ದ ಹಣದ ಬ್ಯಾಗ್​​ ನಾಪತ್ತೆಯಾಗಿದೆ. ಕಳವಾದ ಹಣ ಹೈದರಾಬಾದ್ ಮೂಲದ ಉದ್ಯಮಿ ಕೆ.ವೆಂಕಟೇಶ್ವರ

ಕೆಎಸ್‌ಆರ್‌ಟಿಸಿ ಬಸ್ಸಿನಿಂದ 55 ಲ.ರೂ. ಕಳವು Read More »

ಮೊಟ್ಟೆಯಲ್ಲಿಲ್ಲ ಕ್ಯಾನ್ಸರ್‌ಕಾರಕ ಅಂಶ : ತಿನ್ನಲು ಸಂಪೂರ್ಣ ಸುರಕ್ಷಿತ

ಮೊಟ್ಟೆ ತಿಂದರೆ ಕ್ಯಾನ್ಸರ್‌ ಬರಬಹುದು ಎಂಬುದೆಲ್ಲ ಸುಳ್ಳು ಸುದ್ದಿ ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವದಂತಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆ ಎಳೆದಿದ್ದಾರೆ. ಯಾವುದೇ ಕ್ಯಾನ್ಸರ್ ಕಾರಕ ಅಂಶವಿಲ್ಲ. ಮೊಟ್ಟೆಯ ಬಗ್ಗೆ ಯಾರೂ ಆತಂಕಪಡಬೇಕಿಲ್ಲ, ತಿನ್ನಲು ಸುರಕ್ಷಿತವಾಗಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸುನೀಲ್ ಕುಮಾರ್, ಮೊಟ್ಟೆಯ ಬಗ್ಗೆ ಕೆಲವೊಂದು ಮಾಹಿತಿಗಳು ಕೇಳಿಬರುತ್ತಿವೆ. ಈ ಬಗ್ಗೆ ಆರೋಗ್ಯ ಸಚಿವರು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.

ಮೊಟ್ಟೆಯಲ್ಲಿಲ್ಲ ಕ್ಯಾನ್ಸರ್‌ಕಾರಕ ಅಂಶ : ತಿನ್ನಲು ಸಂಪೂರ್ಣ ಸುರಕ್ಷಿತ Read More »

ಬಿಪಿಎಲ್‌ ಕಾರ್ಡ್‌ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ

ಈಗಿರುವ 1.20 ಲ.ರೂ.ನಿಂದ ಹೆಚ್ಚಿಸುವ ಕುರಿತು ಸಚಿವರಿಂದ ಮಾಹಿತಿ ಬೆಳಗಾವಿ: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಆಹಾರ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ.ಗಿಂತ

ಬಿಪಿಎಲ್‌ ಕಾರ್ಡ್‌ ಆದಾಯ ಮಿತಿ ಹೆಚ್ಚಳಕ್ಕೆ ಚಿಂತನೆ Read More »

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌

ಉದ್ಯಮಿಯನ್ನು ಬಲೆಗೆ ಕೆಡವಿ ಲಕ್ಷಗಟ್ಟಲೆ ಸುಲಿಗೆ ಮಾಡಿದ್ದ ಮಹಿಳೆ ಬೆಂಗಳೂರು: ರಾಮಮೂರ್ತಿನಗರ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಲವ್ ಮಾಡುವಂತೆ ದುಂಬಾಲು ಬಿದ್ದು ಲವ್ ಲೇಟರ್ ಬರೆದು ಇನ್ನಿಲ್ಲದಂತೆ ಕಾಡಿದ್ದ ಬೆಂಗಳೂರಿನ ರಾಮಮೂರ್ತಿನಗರ ನಿವಾಸಿಯಾ ಕಾಂಗ್ರೆಸ್‌ ಕಾರ್ಯಕರ್ತೆ ಸಂಜನಾ ಅಲಿಯಾಸ್ ವನಜಾ ಹನಿಟ್ರ್ಯಾಪ್‌ ಪ್ರವೀಣೆ ಎನ್ನುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಇನ್‌ಸ್ಪೆಕ್ಟರ್‌ ಲವ್‌ ಪ್ರಪೋಸಲ್‌ ಒಪ್ಪದಿದ್ದಾಗ ಸಂಜನಾ ಆತ್ಮಹತ್ಯೆ ಬೆದರಿಕೆ ಹಾಕಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಆತ್ಮಹತ್ಯೆ ಬೆದರಿಕೆ ಆರೋಪದ ಅಡಿ ಕೇಸ್ ದಾಖಲಿಸಿ ಜೈಲಿಗೆ

ಇನ್‌ಸ್ಪೆಕ್ಟರ್‌ಗೆ ಲವ್‌ ಲೆಟರ್‌ ಬರೆದಿದ್ದ ಸಂಜನಾ ಮೇಲಿದೆ ಹನಿಟ್ರ್ಯಾಪ್‌ ಕೇಸ್‌ Read More »

ಸಾರಿಗೆ ಸಂಸ್ಥೆಯನ್ನು ನಿಶ್ಶಕ್ತಗೊಳಿಸಿತೇ ಶಕ್ತಿ ಯೋಜನೆ?

ಸರ್ಕಾರದಿಂದ 4 ಸಾವಿರ ಕೋಟಿ ಬಾಕಿಯಾಗಿ ಸಮಸ್ಯೆಯಲ್ಲಿ ಸಂಸ್ಥೆ ಬೆಂಗಳೂರು : ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ 2025ರ ನವೆಂಬರ್ 25ರವರೆಗೆ ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರ 4 ಸಾವಿರ ಕೋಟಿ ರೂ.ಗೂ ಹೆಚ್ಚು ಮೊತ್ತ ಬಾಕಿ ಉಳಿಸಿಕೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಸರ್ಕಾರ ಒಟ್ಟಾರೆ

ಸಾರಿಗೆ ಸಂಸ್ಥೆಯನ್ನು ನಿಶ್ಶಕ್ತಗೊಳಿಸಿತೇ ಶಕ್ತಿ ಯೋಜನೆ? Read More »

error: Content is protected !!
Scroll to Top