ರಾಜ್ಯ

ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು

ನಿಷೇಧ ಹೇಳಿಕೆಗಳಿಗೆ ಮೊದಲ ಬಾರಿ ಅಧಿಕೃತವಾಗಿ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್‌ ನವದೆಹಲಿ: ಆರ್‌ಎಸ್‌ಎಸ್‌ ನಿಷೇಧಿಸಬೇಕು ಎಂದು ಪದೇಪದೆ ಹೇಳುತ್ತಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಇದೇ ಮೊದಲ ಬಾರಿಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಮಾತನಾಡಿರುವ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಯಾರೋ ಬಯಸಿದ ಮಾತ್ರಕ್ಕೆ ಸಂಘಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ, ಇಂತಹ ಬೇಡಿಕೆ ಇಡುವವರು ಹಿಂದಿನ ಅನುಭವದಿಂದ ಪಾಠ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ. ಜಬಲ್‌ಪುರದಲ್ಲಿ ಮೂರು ದಿನಗಳ ಆರ್‌ಎಸ್‌ಎಸ್‌ […]

ಹಿಂದಿನ ಅನುಭವದಿಂದ ಪಾಠ ಕಲಿಯಿರಿ : ಖರ್ಗೆಗೆ ಹೊಸಬಾಳೆ ತಿರುಗೇಟು Read More »

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ

ಮೆರವಣಿಗೆಯಲ್ಲಿ ಸಾಗುತ್ತಿದ್ದವರಿಗೆ ಯದ್ವಾತದ್ವಾ ಇರಿದು ಪಲಾಯನ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಕನ್ನಡ ರಾಜ್ಯೋತ್ಸವ ರೂಪಕಗಳ ಮೆರವಣಿಗೆ ವೇಳೆ ಬೆಳಗಾವಿ ನಗರದಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದು ಪಲಾಯನ ಮಾಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಸೋಇಚ್ಛೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುರುನಾಥ ವಕ್ಕೂಂದ, ಸಚೀನ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್,

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ Read More »

ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್‌

90 ದಿನಗಳಲ್ಲಿ ಕನ್ನಡ ಕಡ್ಡಾಯ ಆದೇಶ ಎಂದ ಸಚಿವ ಬೆಂಗಳೂರು: ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕನ್ನಡ ರಾಜ್ಯೋತ್ಸವ ವೇದಿಕೆಯಲ್ಲಿ ಮಾತನಾಡಿದ ಅವರು, 90 ದಿನಗಳಲ್ಲಿ ರಾಜ್ಯದ ಎಲ್ಲ ಮದರಸಾಗಳಲ್ಲಿ ಕನ್ನಡ ಕಲಿಯಲು ಆದೇಶ ಮಾಡಲಾಗುತ್ತದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ನೇತೃತ್ವದಲ್ಲಿ ಕನ್ನಡ ಕಲಿಸುವುದಕ್ಕೆ ತೀರ್ಮಾನ ಮಾಡಲಾಗಿದೆ ಎಂದರು. ಕರ್ನಾಟಕದಲ್ಲಿದ್ದು, ಕನ್ನಡ ಕಲಿಯದಿದ್ದರೆ ಇಷ್ಟು ವರ್ಷಗಳಿಂದ ಇಲ್ಲಿಯೇ

ಮದರಸಾಗಳಲ್ಲಿ ಕನ್ನಡ ಕಲಿಸುವುದು ಕಡ್ಡಾಯ : ಜಮೀರ್‌ Read More »

ಶ್ರೇಷ್ಠತೆ, ಶ್ರಮಶೀಲ ಸ್ವಭಾವದ ಆಚರಣೆ : ಕನ್ನಡಿಗರಿಗೆ ಮೋದಿ ರಾಜ್ಯೋತ್ಸವ ಶುಭಾಶಯ

ಕನ್ನದಲ್ಲೇ ಟ್ವೀಟ್‌ ಮಾಡಿ ಶುಭ ಕೋರಿದ ಪ್ರಧಾನಿ ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು

ಶ್ರೇಷ್ಠತೆ, ಶ್ರಮಶೀಲ ಸ್ವಭಾವದ ಆಚರಣೆ : ಕನ್ನಡಿಗರಿಗೆ ಮೋದಿ ರಾಜ್ಯೋತ್ಸವ ಶುಭಾಶಯ Read More »

ರೇವ್‌ ಪಾರ್ಟಿಗೆ ಪೊಲೀಸ್‌ ದಾಳಿ : 35 ಯುವತಿಯರ ಸಹಿತ 115 ಮಂದಿ ವಶ

ಖಾಸಗಿ ರೆಸಾರ್ಟ್‌ನಲ್ಲಿ ತಡರಾತ್ರಿ ತನಕ ನಡೆದ ಪಾರ್ಟಿ ಬೆಂಗಳೂರು : ರಾಮನಗರ ನಗರದ ಹೊರವಲಯದ ಅಯಾನಾ ಎಂಬ ಖಾಸಗಿ ರೆಸಾರ್ಟ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಬೆಂಗಳೂರಿನ ದಕ್ಷಿಣ ಎಸ್‌ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 115 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ದೇವಿಗೆರೆ ಕ್ರಾಸ್ ಸಮೀಪದಲ್ಲಿರುವ ಅಯಾನಾ ಖಾಸಗಿ ರೆಸಾರ್ಟ್‌ನಲ್ಲಿ ರಾತ್ರಿ ವೇಳೆ ರೇವ್ ಪಾರ್ಟಿ ನಡೆಯುತ್ತಿದೆ ಎನ್ನುವ ಮಾಹಿತಿ ಮೇರೆಗೆ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ, 35 ಯುವತಿಯರು ಸೇರಿದಂತೆ ಒಟ್ಟು 115 ಮಂದಿಯನ್ನು

ರೇವ್‌ ಪಾರ್ಟಿಗೆ ಪೊಲೀಸ್‌ ದಾಳಿ : 35 ಯುವತಿಯರ ಸಹಿತ 115 ಮಂದಿ ವಶ Read More »

ಖಾದರ್‌ ಭ್ರಷ್ಟಾಚಾರದ ಕುರಿತು ನ್ಯಾಯಾಧೀಶರಿಂದ ತನಿಖೆ : ಕಾಗೇರಿ ಒತ್ತಾಯ

ತನಿಖೆ ನಡೆಸಿ ಕಳಂಕ ಮುಕ್ತರಾಗಲಿ ಎಂದು ಸಲಹೆ ಬೆಂಗಳೂರು: ಸ್ಪೀಕರ್ ಯು.ಟಿ ಖಾದರ್‌ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ಆಗಲಿ ಎಂದು ಮಾಜಿ ಸ್ಪೀಕರ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ಯು.ಟಿ ಖಾದರ್ ಆಡಳಿತ ಸುಧಾರಣೆ ಭಾಗವಾಗಿ ಭ್ರಷ್ಟಾಚಾರದ ಪ್ರಕರಣ ಆಗಿದೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗುತ್ತಿದೆ. ಹೀಗಾಗಿ ನ್ಯಾಯಾಂಗ ತನಿಖೆಗೆ ವಹಿಸುವಂತೆ ನಾನು ಒತ್ತಾಯ ಮಾಡಿದ್ದೇನೆ. ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಲಿ ಎಂದಿದ್ದಾರೆ. ಸ್ಪೀಕರ್ ಸ್ಥಾನ

ಖಾದರ್‌ ಭ್ರಷ್ಟಾಚಾರದ ಕುರಿತು ನ್ಯಾಯಾಧೀಶರಿಂದ ತನಿಖೆ : ಕಾಗೇರಿ ಒತ್ತಾಯ Read More »

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಾಟಲಿ ಬಳಕೆ ಬೇಡ : ಸಿದ್ದರಾಮಯ್ಯ ಸೂಚನೆ

ಸರ್ಕಾರ ಸಭೆ, ಸಮಾರಂಭಗಳಲ್ಲಿ ನಂದಿನಿ ತಿನಿಸುಗಳ ಬಳಕೆಗೆ ಆದೇಶ ಬೆಂಗಳೂರು : ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ-ಸಮಾರಂಭಗಳಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವಂತಿಲ್ಲ. ಅದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜೊತೆಗೆ ಸರ್ಕಾರಿ ಕಚೇರಿಗಳಲ್ಲಿ ನಂದಿನಿ ತಿನಿಸುಗಳನ್ನೇ ಬಳಸುವಂತೆ ಆದೇಶಿಸಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್‌ ಬಾಟಲಿ ಬಳಕೆ ಬೇಡ : ಸಿದ್ದರಾಮಯ್ಯ ಸೂಚನೆ Read More »

ಜಾತಿ ಗಣತಿ ಮುಕ್ತಾಯ : ನ.10ರವರೆಗೆ ಆನ್‌ಲೈನ್ ಸಮೀಕ್ಷೆ ಅವಕಾಶ

5.54 ಕೋಟಿ ಜನರ ಗಣತಿ ಕಾರ್ಯ ಪೂರ್ಣ ಬೆಂಗಳೂರು : ಸೆಪ್ಟೆಂಬರ್ 22ರಿಂದ ರಾಜ್ಯದಲ್ಲಿ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ತೆರೆ ಬಿದ್ದಿದೆ. ನ.10ರವರೆಗೂ ಆನ್‌ಲೈನ್ ಸಮೀಕ್ಷೆಯಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದ್ದು, ರಾಜ್ಯಾದ್ಯಂತ ಈವರೆಗೆ ಶೇ.97.51 (ಜಿಬಿಎ ಹೊರತುಪಡಿಸಿ)ರಷ್ಟು ಸಮೀಕ್ಷೆ ನಡೆದಿದೆ ಎಂದು ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ. ಜಿಬಿಎ ಹೊರತುಪಡಿಸಿ 1.48 ಕೋಟಿ ಕುಟುಂಬಗಳ ಪೈಕಿ 1.46 ಕೋಟಿ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆದಿದೆ. 5.68 ಕೋಟಿ

ಜಾತಿ ಗಣತಿ ಮುಕ್ತಾಯ : ನ.10ರವರೆಗೆ ಆನ್‌ಲೈನ್ ಸಮೀಕ್ಷೆ ಅವಕಾಶ Read More »

ಧರ್ಮಸ್ಥಳ ವಿಚಾರದಲ್ಲಿ ವ್ಯಕ್ತಿ, ಕುಟುಂಬ, ಸಂಸ್ಥೆಗೆ ಭಾರಿ ಹಾನಿ : ಡಿಕೆಶಿ

ಬಿಜೆಪಿ ಆಂತರಿಕ ಕಲಹವೇ ಕಾರಣ ಎಂದ ಉಪಮುಖ್ಯಮಂತ್ರಿ ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್‌, ಧರ್ಮಸ್ಥಳ ಪ್ರಕರಣ ವಿಚಾರದಲ್ಲಿ ವ್ಯಕ್ತಿ, ಕುಟುಂಬ ಮತ್ತು ಸಂಸ್ಥೆಗೆ ಎಷ್ಟು ಹಾನಿ ಮಾಡಬೇಕೋ ಅದನ್ನು ಈಗಾಗಲೇ ಮಾಡಲಾಗಿದೆ.

ಧರ್ಮಸ್ಥಳ ವಿಚಾರದಲ್ಲಿ ವ್ಯಕ್ತಿ, ಕುಟುಂಬ, ಸಂಸ್ಥೆಗೆ ಭಾರಿ ಹಾನಿ : ಡಿಕೆಶಿ Read More »

ಸುಹಾಸ್‌ ಶೆಟ್ಟಿ ಹತ್ಯೆ ಮಾಡಿರುವುದು ಪಿಎಫ್‌ಐ : ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ನಿಷೇಧಿಸಲ್ಪಟ್ಟಿದ್ದರೂ ಕರಾವಳಿಯಲ್ಲಿ ಈಗಲೂ ಪಿಎಫ್‌ಐ ಗುಪ್ತವಾಗಿ ಸಕ್ರಿಯ ಎಂದು ಮಾಹಿತಿ ಮಂಗಳೂರು: ಮಂಗಳೂರಿನ ಬಜ್ಬೆ ಬಳಿ ಕಳೆದ ಮೇ 1ರಂದು ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಅಂಶಗಳನ್ನು ಎನ್ಐಎ ಉಲ್ಲೇಖಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸದಸ್ಯರ ಕೈವಾಡ

ಸುಹಾಸ್‌ ಶೆಟ್ಟಿ ಹತ್ಯೆ ಮಾಡಿರುವುದು ಪಿಎಫ್‌ಐ : ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ Read More »

error: Content is protected !!
Scroll to Top