ರಾಜ್ಯ

ವಿಧಾನಸೌಧದಲ್ಲಿ ಮಾದ್ಯಮಗಳ ನಿರ್ಬಂಧ: ಬಿ.ವೈ. ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಮೇಲೆ ಕಿಡಿ ಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಇದೊಂದು ಅಯೋಗ್ಯ ಸರ್ಕಾರ ಎಂದು ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವುದನ್ನು ಖಂಡಿಸಿದ ಅವರು ಇದೊಂದು ನಾಲಾಯಕ್ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನದ್ದು ಪ್ರಜಾಪ್ರಭುತ್ವವನ್ನು ಅಣಕಿಸುವ ನಡೆ ಎಂದು ಟೀಕಿಸಿರುವ ಅವರು, ಮಾಧ್ಯಮ ನಿರ್ಬಂಧ ಒಂದು ಪ್ರಜಾಪ್ರಭುತ್ವದ ವಿರೋಧಿ ನಡೆ. ಅಧಿವೇಶನದಲ್ಲಿ ದ್ವೇಷ ಭಾಷಣ ವಿರೋಧಿ ಕಾಯ್ದೆ ಜಾರಿಗೆ ತಂದ ಕಾಂಗ್ರೆಸ್ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಾಕ್ ಪರ […]

ವಿಧಾನಸೌಧದಲ್ಲಿ ಮಾದ್ಯಮಗಳ ನಿರ್ಬಂಧ: ಬಿ.ವೈ. ವಿಜಯೇಂದ್ರ ಆಕ್ರೋಶ Read More »

ಜನ್ಮದಿನದಂದೇ ಅಪಘಾತದಲ್ಲಿ ಯುವಕ ಮೃತ್ಯು

ಬೆಂಗಳೂರು: ತನ್ನ ಜನ್ಮದಿನದಂದೇ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೆಂಗಳೂರು ಉತ್ತರದ ಐವರಕಂಡಪುರದಲ್ಲಿ ನಡೆದಿದೆ. ಪವನ್ (24) ಎಂಬಾತನೇ ಮೃತ ದುರ್ದೈವಿ. ಗೆಳೆಯರ ಜೊತೆಗೆ ಬರ್ತ್‌ಡೇ ಮಾಡಿ ಪವನ್ ಮನೆಗೆ ತೆರಳುತ್ತಿದ್ದು ಈ ವೇಳೆ ಆತನ ಬೈಕ್‌ಗೆ ಎದುರಿನಿಂದ ಬರುತ್ತಿದ್ದ ಗೂಡ್ಸ್ ‌ವಾಹನ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ‌ಪವನ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೋಲದೇವನಹಳ್ಳಿ ಟ್ರಾಫಿಕ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷಾ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜನ್ಮದಿನದಂದೇ ಅಪಘಾತದಲ್ಲಿ ಯುವಕ ಮೃತ್ಯು Read More »

ನಂದಿನಿ ಉತ್ಪನ್ನಗಳು ಸುರಕ್ಷಿತವಾಗಿವೆ: KMF ಸ್ಪಷ್ಟನೆ

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದ್ದು, ಅವುಗಳು ಸುರಕ್ಷಿತವಲ್ಲ ಎನ್ನುವ ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಸಂಸ್ಥೆಯು ತಮ್ಮ ಉತ್ಪನ್ನಗಳು ಸುರಕ್ಷಿತವಾಗಿವೆ ಎನ್ನುವುದಾಗಿ ಮಾಹಿತಿ ನೀಡಿದೆ. ಹಾಗೆಯೇ ಸುಳ್ಳು ಆರೋಪಗಳನ್ನು ಮಾಡಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಹ ಕರ್ನಾಟಕ ಹಾಲು ಒಕ್ಕೂಟ ನೀಡಿದೆ. ನಂದಿನಿ ಉತ್ಪನ್ನಗಳ ವಿಚಾರದಲ್ಲಿ ಸಂಸ್ಥೆಯು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಎಲ್ಲಾ ಸೂಚನೆಗಳನ್ನು, ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿದೆ. ನಂದಿನಿ ಹಾಲು

ನಂದಿನಿ ಉತ್ಪನ್ನಗಳು ಸುರಕ್ಷಿತವಾಗಿವೆ: KMF ಸ್ಪಷ್ಟನೆ Read More »

ಕೆಲಸ ಮಾಡುತ್ತಿದ್ದ ಮನೆಯಿಂದ 200 ಗ್ರಾಂ ಚಿನ್ನ ಕದ್ದು ಸೈಟ್ ಖರೀದಿಸಿದ ಕಳ್ಳಿ

ಬೆಂಗಳೂರು: ಕೆಲಸಕ್ಕಿದ್ದ ಮನೆಯಿಂದ 200 ಗ್ರಾಂ ಚಿನ್ನಾಭರಣ ಎಗರಿಸಿ, ಅದರಿಂದ ಸಿಕ್ಕ ಹಣವನ್ನು ಬಳಸಿ ತಮಿಳುನಾಡಿನಲ್ಲಿ ಜಮೀನು ಖರೀದಿಸಿದ್ದ ಕತರ್ನಾಕ್ ಕಳ್ಳಿಯನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ದೀಪ ಎಂದು ಗುರುತಿಸಲಾಗಿದೆ. ಈಕೆ ತಮಿಳುನಾಡಿನವಳಾಗಿದ್ದು, ಕೋಣನಕುಂಟೆಯ ಮನೆಯೊಂದರಲ್ಲಿ ಕಳೆದ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದಳು. ಕಳ್ಳಿ ‌ಚಿನ್ನಾಭರಣಗಳನ್ನು ಒಂದೇ ಬಾರಿಗೆ ಕಳ್ಳತನ ಮಾಡುತ್ತಿರಲಿಲ್ಲ. ಬದಲಾಗಿ ಒಂದೊಂದಾಗಿಯೇ ಕದ್ದು ಅದರಿಂದ ಸೈಟ್ ಖರೀದಿಸಿದ್ದಳು. ಆಕೆಯ ಕೃತ್ಯದ ಬಗ್ಗೆ ಸಂದೇಹಗೊಂಡ ‌ಮನೆ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು

ಕೆಲಸ ಮಾಡುತ್ತಿದ್ದ ಮನೆಯಿಂದ 200 ಗ್ರಾಂ ಚಿನ್ನ ಕದ್ದು ಸೈಟ್ ಖರೀದಿಸಿದ ಕಳ್ಳಿ Read More »

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಗುರುವಾರ ಸಂಜೆ ತನಕ ಸರ್ಕಾರಕ್ಕೆ ಡೆಡ್‌ಲೈನ್‌

ಬೃಹತ್‌ ಮುಷ್ಕರಕ್ಕೆ ಸಜ್ಜಾಗುತ್ತಿರುವ ಕೆಎಸ್‌ಆರ್‌ಟಿಸಿ ನೌಕರರು; ಸಂಚಾರ ವ್ಯತ್ಯಯ ಸಾಧ್ಯತೆ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬೃಹತ್‌ ಮುಷ್ಕರಕ್ಕೆ ಮುಂದಾಗಿದ್ದು, ಗುರುವಾರ ಸಂಜೆ ಬಳಿಕ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಸಾರಿಗೆ ನೌಕರರು ನಾಳೆ ‘ಬೆಂಗಳೂರು ಚಲೋ’ ಕೈಗೊಂಡು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ 4 ನಿಗಮದ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಸಂಜೆ 4 ಗಂಟೆವರೆಗೆ ಸರ್ಕಾರಕ್ಕೆ ಡೆಡ್‌ಲೈನ್ ನೀಡಲಾಗಿದೆ. ಬೇಡಿಕೆ

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಗುರುವಾರ ಸಂಜೆ ತನಕ ಸರ್ಕಾರಕ್ಕೆ ಡೆಡ್‌ಲೈನ್‌ Read More »

ಕಾಂಗ್ರೆಸ್‌ ಭವನಗಳಿಗೆ ಸರ್ಕಾರಿ ಜಮೀನು ಅಕ್ರಮವಾಗಿ ಮಂಜೂರು : ಬಿಜೆಪಿ ಆರೋಪ

ಸಂಪುಟ ಸಭೆಯಲ್ಲೇ ಜಮೀನು ಲೂಟಿಯ ನೀಲಿನಕ್ಷೆ ತಯಾರಿ ಎಂದು ಟೀಕೆ ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಾಂಗ್ರೆಸ್‌ ಪಕ್ಷದ ಕಚೇರಿಗಳನ್ನು ಸ್ಥಾಪಿಸಲು 31 ಸರ್ಕಾರಿ ಜಾಗಗಳನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಈ ಕುರಿತು ಮಾತನಾಡಿರುವ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸರ್ಕಾರ ಪಡೆದುಕೊಂಡ ಜಾಗಗಳನ್ನು ಸಂಬಂಧಿಸಿದ ಇಲಾಖೆಗೆ ಹಿಂತಿರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಜನರಿಗಿಲ್ಲದ ಜಾಗ, ಅತ್ಯಂತ ಕಡಿಮೆ ದರದಲ್ಲಿ ಕಾಂಗ್ರೆಸ್ ಭವನಕ್ಕೆ ಹೇಗೆ ಲಭ್ಯ? ಇದು ಜನಕಲ್ಯಾಣ ಸರ್ಕಾರವೋ

ಕಾಂಗ್ರೆಸ್‌ ಭವನಗಳಿಗೆ ಸರ್ಕಾರಿ ಜಮೀನು ಅಕ್ರಮವಾಗಿ ಮಂಜೂರು : ಬಿಜೆಪಿ ಆರೋಪ Read More »

ಕರಾವಳಿಯಲ್ಲಿ ಗುರುವಾರದಿಂದ ರಮ್ಜಾನ್‌ ಉಪವಾಸ ಆರಂಭ

ಮಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಗುರುವಾರದಿಂದ ಪವಿತ್ರ ರಮ್ಜಾನ್‌ ಉಪವಾಸ ಆರಂಭವಾಗಲಿದೆ. ಪವಿತ್ರ ರಮ್ಜಾನ್‌ನ ಪ್ರಥಮ ಚಂದ್ರದರ್ಶನ ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ಉಪವಾಸ ವ್ರತ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾನಿ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ. ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು

ಕರಾವಳಿಯಲ್ಲಿ ಗುರುವಾರದಿಂದ ರಮ್ಜಾನ್‌ ಉಪವಾಸ ಆರಂಭ Read More »

ಟ್ಯಾಕ್ಸಿಯಲ್ಲೇ ಮಗುವನ್ನು ಮರೆತು ಬಿಟ್ಟುಹೋದ ದಂಪತಿ!

ಪೊಲೀಸರ ತಕ್ಷಣದ ಸ್ಪಂದನೆಯಿಂದ ತಾಯಿ ಮಡಿಲು ಸೇರಿದ ಮಗು ಬೆಂಗಳೂರು: ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ತಮ್ಮ ಮಗುವನ್ನೇ ಟ್ಯಾಕ್ಸಿಯಲ್ಲಿ ಮರೆತು ಬಿಟ್ಟುಹೋದ ಘಟನೆ ಬೆಂಗಳೂರಿನ ಹೆಣ್ಣೂರು ಸಮೀಪ ಪೊನ್ನಪ್ಪ ಲೇಔಟ್‌ನಲ್ಲಿ ನಡೆದಿದ್ದು, ಹೊಯ್ಸಳ ಪೊಲೀಸರ ತಕ್ಷಣದ ಸ್ಪಂದನೆಯಿಂದ ಮಗು ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದೆ. ಪೊನ್ನಪ್ಪ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿರುವ ದಂಪತಿ ನಾಲ್ಕು ವರ್ಷದ ಮಗುವಿನೊಂದಿಗೆ ಫೆ.14ರಂದು ಹೊರ ಹೋಗಿದ್ದರು. ನಂತರ ಬಾಡಿಗೆ ಕ್ಯಾಬ್‌ನಲ್ಲಿ ಅಪಾರ್ಟ್‌ಮೆಂಟ್‌ಗೆ ವಾಪಸ್‌ ಬಂದಿದ್ದ ದಂಪತಿ, ನಿದ್ದೆ ಮಾಡುತ್ತಿದ್ದ ಮಗುವನ್ನು ಕ್ಯಾಬ್‌ನಲ್ಲೇ ಮರೆತು

ಟ್ಯಾಕ್ಸಿಯಲ್ಲೇ ಮಗುವನ್ನು ಮರೆತು ಬಿಟ್ಟುಹೋದ ದಂಪತಿ! Read More »

ಕುರ್ಚಿ ಕಿತ್ತಾಟದ ಮಧ್ಯೆ ವಿದೇಶಕ್ಕೆ ಹಾರಿದ ಶಾಸಕರು

ಕಾಂಗ್ರೆಸ್‌ ಶಾಸಕರ ವಿದೇಶ ಪ್ರವಾಸಕ್ಕೆ ನಾನಾ ಅರ್ಥ ಬೆಂಗಳೂರು : ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ತೀವ್ರಗೊಂಡಿರುವಾಗಲೇ ಕೆಲವು ಶಾಸಕರು ಮತ್ತು ಎಂಎಲ್‌ಸಿಗಳು ವಿದೇಶಕ್ಕಡಡ ಹಾರಿದ್ದಾರೆ. ಇವರೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದವರು ಎನ್ನುವುದು ಗಮನಾರ್ಹ. ಮೊದಲು ಸರ್ಕಾರಿ ಪ್ರಾಯೋಜಿತ ಎಂದು ಹೇಳಲಾಗಿದ್ದ ಈ ಟೂರ್, ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಖಾಸಗಿ ಟ್ರಿಪ್ ಎಂದು ಬದಲಾಗಿದೆ. ಮಂಗಳವಾರ ಮಧ್ಯರಾತ್ರಿ 12.20ರ ವಿಮಾನದಲ್ಲಿ 11 ಶಾಸಕರು, ಎಂಎಲ್​ಸಿಗಳು ವಿದೇಶಕ್ಕೆ ಹಾರಿದ್ದಾರೆ. ಶಾಸಕರಾದ ದೇವೇಂದ್ರಪ್ಪ, ಎಚ್.ಡಿ ತಮ್ಮಯ್ಯ, ಹಂಪನಗೌಡ ಬಾದರ್ಲಿ,

ಕುರ್ಚಿ ಕಿತ್ತಾಟದ ಮಧ್ಯೆ ವಿದೇಶಕ್ಕೆ ಹಾರಿದ ಶಾಸಕರು Read More »

ಸುಳ್ಳು ಜಾಹೀರಾತು ಕೇಸ್‌ : ರಾಹುಲ್‌ ಗಾಂಧಿಗೆ ರಿಲೀಫ್‌

ತಾಂತ್ರಿಕ ಕಾರಣಗಳ ನೆಲೆಯಲ್ಲಿ ರಾಹುಲ್‌ ಗಾಂಧಿ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌ ಬೆಂಗಳೂರು: ಸುಳ್ಳು ಜಾಹೀರಾತು ಪ್ರಕರಣದಲ್ಲಿ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಕರ್ನಾಟಕ ಹೈಕೋರ್ಟ್‌ ರಿಲೀಫ್‌ ನೀಡಿದೆ. ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿ ರಾಹುಲ್‌ ಗಾಂಧಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿ

ಸುಳ್ಳು ಜಾಹೀರಾತು ಕೇಸ್‌ : ರಾಹುಲ್‌ ಗಾಂಧಿಗೆ ರಿಲೀಫ್‌ Read More »

error: Content is protected !!
Scroll to Top