ರಾಜ್ಯ

ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟಿಸಿದ ಮೋದಿ

ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದರು. ಇಂದು ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಮಠದಲ್ಲಿ ಭೈರವೈಕ್ಯ ಮಂದಿರ ಲೋಕಾರ್ಪಣೆ ಮಾಡಿದರು. ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿಗೆ ಆದಿಚುಂಚನಗಿರಿ ಶ್ರೀಗಳು ತಿಲಕವಿಟ್ಟು ಆಶೀರ್ವದಿಸಿದರು. ದೇಗುಲ ಉದ್ಘಾಟನೆ ಬಳಿಕ ಭೈರವೈಕ್ಯ ಬಾಲಗಂಗಾಧರನಾಥ ಶ್ರೀ ಮೂರ್ತಿಗೆ ಮೋದಿ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ದೇಗುಲ ವೀಕ್ಷಿಸಿದರು. ಈ ವೇಳೆ, ಕೇಂದ್ರ […]

ಶ್ರೀಗುರು ಭೈರವೈಕ್ಯ ಮಂದಿರದ ಉದ್ಘಾಟಿಸಿದ ಮೋದಿ Read More »

ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ : ಮೇ 29ರಿಂದ ಶಾಲಾರಂಭ

ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳು ಬೆಂಗಳೂರು: 2026 – 27ನೇ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದ್ದು, ಮೇ 29ರಿಂದ ಕರ್ನಾಟಕ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭಗೊಳ್ಳಲಿವೆ. ಈ ಬಾರಿ ಒಟ್ಟು 245 ಶಾಲಾ ಕೆಲಸದ ದಿನಗಳನ್ನು ನಿಗದಿಪಡಿಸಲಾಗಿದ್ದು, ಅಕ್ಟೋಬರ್‌ 3 ರಿಂದ 21 ರವರೆಗೆ ದಸರಾ ರಜೆ ಹಾಗೂ 2027ರ ಏ.11ರಿಂದ ಬೇಸಿಗೆ ರಜೆ ಘೋಷಿಸಲಾಗಿದೆ. ಶಾಲೆಗಳ ಮೊದಲ ಅವಧಿ ಮೇ

ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ : ಮೇ 29ರಿಂದ ಶಾಲಾರಂಭ Read More »

ಮೆರವಣಿಗೆ ಮೇಲೆ ಹರಿದ ಕಾರು : ಬಾಲಕಿ ಸಾವು; 9 ಮಂದಿಗೆ ಗಾಯ

ಅಂಬೇಡ್ಕರ್‌ ಜಯಂತಿ ಮೆರವಣಿಗೆ ನಡೆಯುತ್ತಿದ್ದ ವೇಳೆ ಸಂಭವಿಸಿದ ದುರಂತ ಚಿಕ್ಕಮಗಳೂರು : ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕಾರು ಹರಿದು ಬಾಲಕಿ ಮೃತಪಟ್ಟು ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಈ ಘಟನೆಯು ಹಾಸನದ ಗಣಪತಿ ಮೆರವಣಿಗೆಯ ವೇಳೆ ನಡೆದಿದ್ದ ದುರಂತವನ್ನು ನೆನಪಿಸುವಂತಿದೆ.

ಮೆರವಣಿಗೆ ಮೇಲೆ ಹರಿದ ಕಾರು : ಬಾಲಕಿ ಸಾವು; 9 ಮಂದಿಗೆ ಗಾಯ Read More »

ಬಾವಿಯಲ್ಲಿ ಬಾಲಕಿಯರಿಬ್ಬರ ಶವ ಪತ್ತೆ

ಕಲಬುರ್ಗಿ: ಜಿಲ್ಲೆಯ ಯಡ್ರಾಮಿಯ ಇಜೇರಿ ಗ್ರಾಮದಲ್ಲಿ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ. ನಂದಿನಿ(16) ಮತ್ತು ಸಂಜನಾ(17) ಮೃತ ಬಾಲಕಿಯರು. ಈ ಇಬ್ಬರೂ ಚಿಕ್ಕಪ್ಪ – ದೊಡ್ಡಪ್ಪನ ಮಕ್ಕಳಾಗಿದ್ದಾರೆ. ಇಬ್ಬರ ಕೈಗಳನ್ನೂ ಕಟ್ಟಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿರುವುದಾಗಿದೆ. ಈ ಪ್ರಕರಣ ನಿಗೂಢತೆಯಿಂದ ಕೂಡಿದ್ದು ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಇನ್ನೇನಾದರೂ ಅನುಮಾನಾಸ್ಪದ

ಬಾವಿಯಲ್ಲಿ ಬಾಲಕಿಯರಿಬ್ಬರ ಶವ ಪತ್ತೆ Read More »

ಲವ್ ಜಿಹಾದಿ ಮುಸ್ತಫಾನಿಗೆ ‌ಮಟ್ಕಾ ಬುಕ್ಕಿಗಳ ಜೊತೆ ಸಂಪರ್ಕ?

ಕೊಪ್ಪಳ: ಮುಸ್ತಫಾ ಖಾದ್ರಿಯ ಲವ್ ಜಿಹಾದ್ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಮತ್ತೊಂದು ಬೆಚ್ಚಿ ಬೀಳಿಸುವ ಅಂಶ ಬಯಲಾಗಿದೆ. ಆರೋಪಿ ಮುಸ್ತಫಾನಿಗೆ ಗೋವಾ ಮತ್ತು ಮುಂಬೈನ ಮಟ್ಕಾ ಬುಕ್ಕಿಗಳ ‌ಜೊತೆಗೆ ಸಂಪರ್ಕ ಇದ್ದು, ಅವರಿಂದ ಆರ್ಥಿಕ ನೆರವು ದೊರೆಯುತ್ತಿದ್ದ ಸಂದೇಹ ವ್ಯಕ್ತವಾಗಿದ್ದು, ಈ ಸಂಬಂಧ ವಿಶ್ವ ಹಿಂದೂ ಪರಿಷತ್ ಪೊಲೀಸರಿಗೆ ದೂರು ನೀಡಿದೆ. ಕೊಪ್ಪಳದ ಕಂಪ್ಲಿ ಗ್ರಾಮದ ಮುಸ್ತಫಾ ಗೋವಾ ಮತ್ತು ಮುಂಬೈ ನಗರಗಳ ಮಟ್ಕಾ ಬುಕ್ಕಿಗಳ ಜೊತೆಗೆ ನಿಕಟ ಸಂಬಂಧ ಹೊಂದಿದ್ದು, ಅವರು ನೀಡುವ ಹಣದಿಂದಲೇ ಐಷಾರಾಮಿ

ಲವ್ ಜಿಹಾದಿ ಮುಸ್ತಫಾನಿಗೆ ‌ಮಟ್ಕಾ ಬುಕ್ಕಿಗಳ ಜೊತೆ ಸಂಪರ್ಕ? Read More »

ಅಕ್ರಮ ಸ್ಪೋಟಕಗಳ ವಶ: ಆರೋಪಿ ಪೊಲೀಸ್ ವಶಕ್ಕೆ

ವಿಟ್ಲ: ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಸುಡುಮದ್ದು ತಯಾರಿಸಲು ಅಕ್ರಮವಾಗಿ ಸ್ಪೋಟಕಗಳನ್ನು ಸಂಗ್ರಹಿಸಿ ಇಟ್ಟಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಂಬಳಬೆಟ್ಟು ಸಮೀಪದ ಅಮೈ ನಿವಾಸಿ ಜಗದೀಶ ಪೂಜಾರಿ ಎಂದು ಗುರುತಿಸಲಾಗಿದೆ. ಜಗದೀಶ್ ತಮ್ಮ ಮನೆಯಲ್ಲಿ ಸ್ಪೋಟಕಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ತಪಾಸಣೆಯಲ್ಲಿ ಸುಮಾರು 1.9 KG ಗಳಷ್ಟು ಅನುಮಾನಾಸ್ಪದ ‌ಸ್ಪೋಟಕಗಳು ಪತ್ತೆಯಾಗಿವೆ. ಜನವಸತಿ ಪ್ರದೇಶದಲ್ಲಿ ಯಾವುದೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸದೆ

ಅಕ್ರಮ ಸ್ಪೋಟಕಗಳ ವಶ: ಆರೋಪಿ ಪೊಲೀಸ್ ವಶಕ್ಕೆ Read More »

ಆರಿಫ್ ಹತ್ಯೆ: ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು: ನಗರವನ್ನೇ ಹೆಚ್ಚು ಬೀಳಿಸಿದ್ದ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅರ್ಷದ್, ಪು ಚರ್ಚೆ ನಿಸಾಕ್, ಜುನೈದ್‌ನನ್ನು ಬಂಧಿಸಲಾಗಿದೆ. ಹತ್ಯೆಗೆ ಸಂಚು ಮಾಡಿದ ಮತ್ತು ದಾಳಿಗೆ ಸಹಾಯ ಮಾಡಿದ ಆರೋಪದಲ್ಲಿ ಈ ಬಂಧನ ನಡೆದಿದೆ. ತನಿಖಾ ವೇಳೆ ಈ ಕೊಲೆಗೆ ರೂಪಿಸಲಾಗಿದ್ದ ಮಾರಕ ಯೋಜನೆಗಳ ಬಗೆಗೂ ಬಯಲಾಗಿದೆ. ಆರೋಪಿ ಅರ್ಷದ್ ಕೊಲೆಯ ಪ್ರಮುಖ ಸೂತ್ರಧಾರಿ ಆಗಿದ್ದು, ಈತ ಹಂತಕರಿಗೆ ಮಾರಕಾಸ್ತ್ರಗಳನ್ನು ಒದಗಿಸಿದ್ದ. ಜೊತೆಗೆ ಪೊಲೀಸರ ಕಾರ್ಯಾಚರಣೆಯ ಬಗೆಗೂ

ಆರಿಫ್ ಹತ್ಯೆ: ಮತ್ತೆ ಮೂವರು ಆರೋಪಿಗಳ ಬಂಧನ Read More »

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಎಪಿಎಂಸಿ ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆಗಳಿಗೆ ಲೈಸೆನ್ಸ್‌ ನೀಡಿದ ಅರೋಪ ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬರು ಪ್ರಭಾವಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಎಪಿಎಂಸಿ ಮಳಿಗೆ ಹಸ್ತಾಂತರ ವಿಚಾರದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಅವರ ವಿರುದ್ಧ ಎಪಿಎಂಸಿ ವರ್ತಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಸಚಿವರ ವಿರುದ್ಧ ಒಂದಿಲ್ಲೊಂದು ಭ್ರಷ್ಟಾಚಾರ ಆರೋಪ ಆಗಾಗ ಕೇಳಿಬರುತ್ತಲೇ ಇದೆ.

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು Read More »

ನಾಳೆ ಮಂಡ್ಯ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ (ಏಪ್ರಿಲ್ 15) ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿ ಪರಮಪೂಜ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಇಡೀ ಆದಿಚುಂಚನಗಿರಿ ಕ್ಷೇತ್ರ ಅಲಂಕಾರಗೊಂಡು ಕಂಗೊಳಿಸುತ್ತಿದೆ. ದ್ರಾವಿಡ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಈ ಭೈರವೈಕ್ಯ ಮಂದಿರ

ನಾಳೆ ಮಂಡ್ಯ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ Read More »

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ

ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿನ ಮುಸ್ಲಿಂ ನಾಯಕರ ಬಂಡಾಯ ಬೆಂಗಳೂರು: ದಾವಣಗೆರೆ ಉಪಚುನಾವಣೆ ಹಿನ್ನೆಲೆಯಲ್ಲಿ ಶುರುವಾಗಿರುವ ಕಾಂಗ್ರೆಸ್ಸಿನ ಮುಸ್ಲಿಂ ನಾಯಕರ ಬಂಡಾಯ ಸದ್ಯಕ್ಕೆ ಶಮನವಾಗುವಂತೆ ಕಾಣಿಸುತ್ತಿಲ್ಲ. ಇದೀಗ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹ್ಮದ್‌ ರಾಜೀನಾಮೆ ನೀಡಿದ್ದಾರೆ.ನಜೀರ್‌ ಅಹ್ಮದ್‌ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ರವಾನಿಸಿದ್ದಾರೆ. ಸೋಮವಾರ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್‌ಗೆ

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಜೀರ್ ಅಹ್ಮದ್‌ ರಾಜೀನಾಮೆ Read More »

error: Content is protected !!
Scroll to Top