ರಾಜ್ಯ

ಧರ್ಮಸ್ಥಳ ಪ್ರಕರಣದ ಎನ್‌ಐಎ ತನಿಖೆ : ಆರ್‌. ಅಶೋಕ್‌ ಆಗ್ರಹ

ಟಿಪ್ಪು ಗ್ಯಾಂಗ್ ಒತ್ತಡಕ್ಕೆ ಮಣಿದು ಎಸ್‌ಐಟಿ ರಚನೆ ಎಂದು ಆರೋಪ ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಿಲ್ಲಿಸದೆ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸುವಂತೆ ವಿಧಾನಸಭೆ ವಿರೋಧ ಪಕ್ಷಧ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಧರ್ಮಸ್ಥಳದ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಟಿಪ್ಪು ಗ್ಯಾಂಗ್ ಒತ್ತಡ ಹಾಕಿ ಯಾವನೋ ದೂರು ಕೊಟ್ಟಿದ್ದನ್ನು ಇಟ್ಟುಕೊಂಡು ದೊಡ್ಡದಾಗಿ ಬಿಂಬಿಸುತ್ತಿದೆ. ಧರ್ಮಸ್ಥಳದಲ್ಲಿ ನೂರಾರು ಅತ್ಯಾಚಾರ, ಕೊಲೆ ಆಗಿದೆ ಎನ್ನುವಂತೆ ಮಾಡಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಷಡ್ಯಂತ್ರ ಮಾಡುತ್ತಿದೆ. ಒಂದೊಮ್ಮೆ ಮಸೀದಿಯಲ್ಲಿ […]

ಧರ್ಮಸ್ಥಳ ಪ್ರಕರಣದ ಎನ್‌ಐಎ ತನಿಖೆ : ಆರ್‌. ಅಶೋಕ್‌ ಆಗ್ರಹ Read More »

ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ

ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಸಮಾರಂಭದ ಅತಿಥಿ ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಸೆಪ್ಟೆಂಬರ್ 1ರಂದು ಮೈಸೂರಿಗೆ ಆಗಮಿಸಲಿದ್ದಾರೆ. ಮಾನಸಗಂಗೋತ್ರಿಯಲ್ಲಿರುವ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (ಎಐಐಎಸ್ಎಚ್) ವಜ್ರಮಹೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮುರ್ಮು ಭಾಗವಹಿಸುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು ಎಐಐಎ‌ಸ್ ನಿರ್ದೇಶಕಿ ಎಂ.ಪುಷ್ಪಾವತಿ ತಿಳಿಸಿದ್ದಾರೆ. ಇದು ರಾಷ್ಟ್ರಪತಿಗಳು ಮೈಸೂರಿಗೆ ನೀಡುತ್ತಿರುವ ಎರಡನೇ ಭೇಟಿಯಾಗಿದೆ. ಅವರು 2022ರ ಸೆಪ್ಟೆಂಬರ್ 26 ರಂದು ನಾಡಹಬ್ಬ ದಸರಾವನ್ನು ಉದ್ಘಾಟಿಸಿದ್ದರು.

ಸೆ.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ Read More »

ಧರ್ಮಸ್ಥಳ ಪ್ರಕರಣದ ಹಿಂದೆ ಸೆಂಥಿಲ್‌ ಕೈವಾಡ : ಯಶ್‌ಪಾಲ್‌ ಸುವರ್ಣ ಆರೋಪ

ಕಾಂಗ್ರೆಸ್‌ ಸಂಸದನನ್ನು ತನಿಖೆಗೆ ಒಳಪಡಿಸಲು ಆಗ್ರಹ ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣದ ಅನಾಮಿಕನ ಹಿಂದೆ ಕಾಂಗ್ರೆಸ್‌ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ ಎಂದು ಉಡುಪಿಯ ಬಿಜೆಪಿ ಶಾಸಕ ಯಶ್‌ಪಾಲ್‌ ಸುವರ್ಣ ಸ್ಫೋಟಕ ಆರೋಪ ಮಾಡಿದ್ದಾರೆ. ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಈ ಷಡ್ಯಂತ್ರ ಮಾಡಿದವರ ಮೂಲಕ್ಕೆ ಹೋಗಬೇಕು. ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರನ್ನು ತನಿಖೆಗೆ ಒಳಪಡಿಸಿದರೆ ಸತ್ಯ ಸಂಗತಿ ಬಯಲಾಗಲಿದೆ. ಅಂದು ಬ್ರಿಟಿಷರು ಬಂದು ಹಿಂದೂಗಳನ್ನು ಒಡೆದು ಆಳಿದ್ದರು.

ಧರ್ಮಸ್ಥಳ ಪ್ರಕರಣದ ಹಿಂದೆ ಸೆಂಥಿಲ್‌ ಕೈವಾಡ : ಯಶ್‌ಪಾಲ್‌ ಸುವರ್ಣ ಆರೋಪ Read More »

ಭಾರಿ ಮಳೆ ಸಾಧ್ಯತೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ

ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ ಹವಾಮಾನ ಇಲಾಖೆ ಸೋಮವಾರ ಕರಾವಳಿ ಜಿಲ್ಲೆಗಳಿಗೆ ಇಂದು ಭಾರಿ ಮಳೆಯ ಮುನ್ಸೂಚನೆ ನೀಡಿ ರೆಡ್‌ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ

ಭಾರಿ ಮಳೆ ಸಾಧ್ಯತೆ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ Read More »

ಬಿಜೆಪಿಯವರು ರ‍್ಯಾಲಿ ಮಾಡುತ್ತಿರುವುದು ಧರ್ಮಸ್ಥಳ ಪರ ನ್ಯಾಯದ ಪರ ಅಲ್ಲ : ಡಿ.ಕೆ.ಶಿವಕುಮಾರ್‌

ಆರೋಪಗಳು ಸತ್ಯನಾ, ಸುಳ್ಳಾ ಎಂದು ತಿಳಿಯಲು ಎಸ್‌ಐಟಿ ರಚಿಸಿದ್ದೇವೆ ಎಂದು ಸಮರ್ಥನೆ ಬೆಂಗಳೂರು: ಧರ್ಮಸ್ಥಳದ ಅಪಪ್ರಚಾರ ವಿರುದ್ಧ ಬಿಜೆಪಿ ನಡೆಸುತ್ತಿರುವ ರ‍್ಯಾಲಿಯನ್ನು ಟೀಕಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಿಜೆಪಿಗರು ರ‍್ಯಾಲಿ ಮಾಡ್ತಿರೋದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಹೇಳಿದ್ದಾರೆ. ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಗಳಿಗೆ ಮುಕ್ತಿ ಸಿಗಲಿ, ಅದು ಸತ್ಯನಾ ಅಥವಾ ಸುಳ್ಳಾ ಅನ್ನೋದು ಜನಕ್ಕೆ ಗೊತ್ತಾಗಲಿ ಅಂತಾ ಎಸ್‌ಐಟಿ ರಚನೆ ಮಾಡಿದ್ದೇವೆ. ಅದರಲ್ಲಿ ಈಗ ಏನೂ ಸಿಕ್ಕಿಲ್ಲ ಅಂತ ಗೊತ್ತಾದ ಮೇಲೆ

ಬಿಜೆಪಿಯವರು ರ‍್ಯಾಲಿ ಮಾಡುತ್ತಿರುವುದು ಧರ್ಮಸ್ಥಳ ಪರ ನ್ಯಾಯದ ಪರ ಅಲ್ಲ : ಡಿ.ಕೆ.ಶಿವಕುಮಾರ್‌ Read More »

ಧರ್ಮಸ್ಥಳಕ್ಕೆ ಬಂದ ಬಿಜೆಪಿ ಶಾಸಕರ ತಂಡ

ಮತಾಂತರ, ಮತಾಂಧತೆ ಮಾಫಿಯಾದ ಕೈವಾಡ ಇದೆ ಎಂದ ಸಿ.ಟಿ.ರವಿ ಮಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಶಾಸಕರ ತಂಡ ಇಂದು ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದೆ. ಎಂಎಲ್‍ಸಿ ಸಿ.ಟಿ ರವಿ ಹಾಗೂ ಶಾಸಕರು ಭೇಟಿ ನೀಡಿ, ದೇವರ ದರ್ಶನ ಪಡೆದಿದ್ದಾರೆ. ಬಿಜೆಪಿ ಸಂಸದ ಕ್ಯಾ.ಬ್ರಿಜೇಶ್‌ ಚೌಟ, ಶಾಸಕ ವೇದವ್ಯಾಸ ಕಾಮತ್‌, ಎಂಎಲ್‌ಸಿ ಸಿ.ಟಿ.ರವಿ ಸಹಿತ ಬಿಜೆಪಿಯ ಹಲವು ಶಾಸಕರು, ಎಂಎಲ್‌ಸಿಗಳು ಮತ್ತು

ಧರ್ಮಸ್ಥಳಕ್ಕೆ ಬಂದ ಬಿಜೆಪಿ ಶಾಸಕರ ತಂಡ Read More »

ಧರ್ಮಸ್ಥಳಕ್ಕೆ ಇಂದು ಬಿಜೆಪಿ ಶಾಸಕರ ತಂಡ ಭೇಟಿ

ಬಿಜೆಪಿ-ಕಾಂಗ್ರೆಸ್‌ ಕಿತ್ತಾಟ ; ರಾಜಕೀಯ ವಿವಾದವಾಗಿ ಬದಲಾದ ಪ್ರಕರಣ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪದ ತನಿಖೆಗೆ ಅವರಸದಲ್ಲಿ ಎಸ್‌ಐಟಿ ರಚನೆ ಮಾಡಿದ ವಿಚಾರ ಈಗ ರಾಜಕೀಯ ವಿವಾದವಾಗಿ ಬದಲಾಗಿದೆ. ಸರ್ಕಾರದ ವಿರುದ್ಧ ಬಿಜೆಪಿ ಮುಗಿಬಿದ್ದಿದ್ದು, ನಿನ್ನೆ ಬಿಜೆಪಿ ಎಂಎಲ್‌ಸಿ ವಿಶ್ವನಾಥ್‌ ನೇತೃತ್ವದಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ ತನಕ ಬೃಹತ್‌ ವಾಹನ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಇದರ ಬೆನ್ನಿಗೆ ಭಾನುವಾರ (ಆ.17) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಪೊಲೀಸರ ವಿಚಾರಣೆ,

ಧರ್ಮಸ್ಥಳಕ್ಕೆ ಇಂದು ಬಿಜೆಪಿ ಶಾಸಕರ ತಂಡ ಭೇಟಿ Read More »

ಭಾರಿ ಮಳೆಗೆ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು, ರಸ್ತೆ ಸಂಚಾರ ವ್ಯತ್ಯಯ

ಶಿರಾಡಿ ಘಾಟ್‌ನಲ್ಲಿ ಟ್ರಾಫಿಕ್‌ ಜಾಮ್‌ ಆಗಿ ವಾಹನ ಸವಾರರಿಗೆ ಸಮಸ್ಯೆ ಮಂಗಳೂರು: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕಳೆದ ಕೆಲದಿನಗಳಿಂದ ಮಳೆ ಮತ್ತೆ ಅಬ್ಬರಿಸತೊಡಗಿದ್ದು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ ಉಂಟಾಗಿ ಮಂಗಳೂರು-ಬೆಂಗಳೂರು ನಡುವಿನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ರಸ್ತೆ ಮತ್ತು ರೈಲು ಮಾರ್ಗ ಎರಡರಲ್ಲೂ ಭೂಕುಸಿತ ಸಂಭವಿಸಿದೆ. ಎಡಕುಮೇರಿ ಬಳಿ ಭೂಕುಸಿತವಾಗಿ ಬೆಂಗಳೂರು-ಮಂಗಳೂರು ರೈಲುಗಳು ಸ್ಥಗಿತಗೊಂಡಿವೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತ ಉಂಟಾಗಿದೆ. ಮರಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ವಾಹನಗಳ

ಭಾರಿ ಮಳೆಗೆ ಭೂಕುಸಿತ : ಮಂಗಳೂರು-ಬೆಂಗಳೂರು ರೈಲು, ರಸ್ತೆ ಸಂಚಾರ ವ್ಯತ್ಯಯ Read More »

ಭೀಕರ ಬೆಂಕಿ ಅವಘಡ : ಐದು ಮಂದಿ ಸಜೀವ ದಹನ

ತಂದೆ-ತಾಯಿ ಇಬ್ಬರು ಪುಟ್ಟ ಮಕ್ಕಳ ದುರಂತ ಅಂತ್ಯ ಬೆಂಗಳೂರು: ಇಲ್ಲಿನ ಕೆ.ಆರ್ ಮಾರ್ಕೆಟ್ ಬಳಿಯ ನಗರ್ತ ಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನವಾಗಿದ್ದಾರೆ. ದುರಂತದಲ್ಲಿ ಸಜೀವ ಸುಟ್ಟುಕರಕಲಾದವರನ್ನು ಮದನ್ (38), ಅವರ ಪತ್ನಿ ಸಂಗೀತಾ (33) ಪುತ್ರರಾದ ಮಿತೇಶ್ (8), ವಿಹಾನ್ (5) ಎಂದು ಗುರುತಿಸಲಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌

ಭೀಕರ ಬೆಂಕಿ ಅವಘಡ : ಐದು ಮಂದಿ ಸಜೀವ ದಹನ Read More »

ಧರ್ಮಸ್ಥಳಕ್ಕೆ ಹೊರಟಿದೆ ಬೃಹತ್‌ ವಾಹನ ರ‍್ಯಾಲಿ

ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸಿದವರ ವಿರುದ್ಧ ಸಿಡಿದೆದ್ದಿರುವ ಭಕ್ತರು ಧರ್ಮಸ್ಥಳ : ಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಬೃಹತ್‌ ವಾಹನ ರ‍್ಯಾಲಿ ನೆಲಮಂಗಲದಿಂದ ಇಂದು ಹೊರಟಿದೆ. ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷವಾಕ್ಯ ಕೂಗುತ್ತಾ ಕಾರ್ಯಕರ್ತರು ಮತ್ತು ಧರ್ಮಸ್ಥಳದ ಭಕ್ತರು ರ‍್ಯಾಲಿಯಲ್ಲಿ ಹೊರಟಿದ್ದಾರೆ. ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಈ ರ‍್ಯಾಲಿ ನಡೆಯುತ್ತಿದೆ. ರ‍್ಯಾಲಿಯಲ್ಲಿ 400ಕ್ಕೂ ಹೆಚ್ಚು ವಾಹನಗಳಲ್ಲಿ ಬಿಜೆಪಿ ಕಾರ್ಯಕರ್ತರು ಹೊರಟಿದ್ದಾರೆ. ನೆಲಮಂಗಲ-ಕುಣಿಗಲ್ ರಸ್ತೆಯ ಕುಣಿಗಲ್ ಟೋಲ್‍ಗೇಟ್‍ನಿಂದ ಯಾತ್ರೆ ಆರಂಭಗೊಂಡಿದ್ದು, ಹಾಸನ

ಧರ್ಮಸ್ಥಳಕ್ಕೆ ಹೊರಟಿದೆ ಬೃಹತ್‌ ವಾಹನ ರ‍್ಯಾಲಿ Read More »

error: Content is protected !!
Scroll to Top