ರಾಜ್ಯ

ಡಿಕೆಶಿ ಪರ ಘೋಷಣೆ : ಮಿಥುನ್‌ ರೈಗೆ ಶೋಕಾಸ್‌ ನೋಟಿಸ್‌

ಡಿಕೆಶಿ ಮುಖ್ಯಮಂತ್ರಿಯಾಗಲೆಂದು ಘೋಷಣೆ ಕೂಗಿದ್ದಕ್ಕೆ ನೋಟಿಸ್‌ ನೀಡಿದ ಕಾಂಗ್ರೆಸ್‌ ಮಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಕಾಂಗ್ರೆಸ್‌ನ ಕುರ್ಚಿ ಕದನ ಶಾಂತವಾಗಿದೆ ಎಂದು ಭಾವಿಸಲಾಗಿತ್ತು. ಆದರೆ ಮಂಗಳೂರಿನಲ್ಲಿ ಬುಧವಾರ ನಡೆದ ಘಟನೆ ಅದಿನ್ನೂ ಬೂದಿಮುಚ್ಚಿದ ಕೆಂಡ ಎನ್ನುವುದನ್ನು ಬಹಿರಘಪಡಿಸಿದೆ. ಕೊಣಾಜೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಮುಂದೆ ಡಿಕೆ ಡಿಕೆ… ಎಂದು ಘೋಷಣೆ ಕೂಗಿದ ವಿಚಾರ ಈಗ ಹೈಕಮಾಂಡ್‌ನ ಉರಿಗಣ್ಣಿಗೆ ಗುರಿಯಾಗಿದೆ. ಆ ಪ್ರಸಂಗದ ರೂವಾರಿ […]

ಡಿಕೆಶಿ ಪರ ಘೋಷಣೆ : ಮಿಥುನ್‌ ರೈಗೆ ಶೋಕಾಸ್‌ ನೋಟಿಸ್‌ Read More »

ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ದೂರು

50 ಲ.ರೂ. ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪ ಭೋಪಾಲ: ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್ ವರದಕ್ಷಿಣೆ ಕಿರುಕುಳ, ಕೊಲೆ ಯತ್ನ, ಕೌಟುಂಬಿಕ ಹಿಂಸೆ ಮತ್ತು ತಮ್ಮ ಅಪ್ರಾಪ್ತ ಮಗಳ ಅಪಹರಣದ ಗಂಭೀರ ಆರೋಪಗಳನ್ನು ಹೊರಿಸಿದ್ದಾರೆ. ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯ ಪೊಲೀಸ್ ಅಧೀಕ್ಷಕ ಅಮಿತ್ ಕುಮಾರ್ ಅವರ ಗಮನಕ್ಕೆ ವಿಷಯ ತಲುಪಿದ್ದು, ದಿವ್ಯಾ ತುರ್ತು ಕ್ರಮ ಮತ್ತು ತನ್ನ ನಾಲ್ಕು ವರ್ಷದ ಮಗಳನ್ನು ಸುರಕ್ಷಿತವಾಗಿ ಮರಳಿ

ಕರ್ನಾಟಕ ರಾಜ್ಯಪಾಲರ ಮೊಮ್ಮಗನ ವಿರುದ್ಧ ವರದಕ್ಷಿಣೆ ಕಿರುಕುಳ ದೂರು Read More »

ಬಗೆಹರಿಯದ ಇಂಡಿಗೋ ತಾಂತ್ರಿಕ ಅಡಚಣೆ : 300ಕ್ಕೂ ಅಧಿಕ ವಿಮಾನ ಯಾನ ರದ್ದು

ಮೂರನೇ ದಿನವೂ ಪ್ರಯಾಣಿಕರ ಪರದಾಟ ; ಸಂಸ್ಥೆಯ ಉನ್ನತಾಧಿಕಾರಿಗಳಿಗೆ ಸರ್ಕಾರದ ಬುಲಾವ್‌ ಬೆಂಗಳೂರು : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರಿ ಅಡಚಣೆ ಮೂರನೇ ದಿನವಾದ ಗುರುವಾರವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬ ಕಂಡುಬಂದಿತ್ತು. ಈ ಸಮಸ್ಯೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದೆ. ವಿಮಾನದಲ್ಲಿನ ತಾಂತ್ರಿಕ ದೋಷ ಹಾಗೂ ಸಿಬ್ಬಂದಿ ಕೊರತೆ

ಬಗೆಹರಿಯದ ಇಂಡಿಗೋ ತಾಂತ್ರಿಕ ಅಡಚಣೆ : 300ಕ್ಕೂ ಅಧಿಕ ವಿಮಾನ ಯಾನ ರದ್ದು Read More »

ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌

11 ಲಕ್ಷ ರೂಪಾಯಿ ಎಗರಿಸಿ ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ಪೊಲೀಸ್‌ ಸಿಬ್ಬಂದಿ ಬೆಂಗಳೂರು: ಪೊಲೀಸರೇ ಅಪರಾಧ ಕೃತ್ಯಗಳನ್ನು ಎಸಗಿ ಇಲಾಖೆಗೆ ಮಸಿ ಬಳಿಯುತ್ತಿರುವ ಕೃತ್ಯಗಳು ಹೆಚ್ಚುತ್ತಿವೆ. ಈಗ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ ಆರೋಪ ಬಂದಿದೆ. ನಾಚೆಕೆಗೇಡಿನ ವಿಚಾರವೆಂದರೆ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಈ ಕಳ್ಳತನ ನಡೆದಿದೆ. ಸೈಬರ್ ಪ್ರಕರಣದ ಆರೋಪಿಯನ್ನು ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿದ್ದ 11 ಲಕ್ಷ ರೂ.ತುಂಬಿದ್ದ ಬ್ಯಾಗನ್ನು ಹೆಡ್‌ಕಾನ್‌ಸ್ಟೆಬಲ್‌ ಜಬೀವುಲ್ಲಾ ಕದ್ದಿರುವ ಆರೋಪ ಕೇಳಿಬಂದಿದೆ. ಹಣ ಕಳ್ಳತನ ಮಾಡಿ

ಆರೋಪಿಯ ಹಣವನ್ನೇ ಕದ್ದುಕೊಂಡು ಹೋದ ಹೆಡ್‌ಕಾನ್‌ಸ್ಟೆಬಲ್‌ Read More »

ದೆಹಲಿ ಕಾರು ಬಾಂಬ್‌ ಸ್ಫೋಟ : ಬೆಂಗಳೂರು ಜೈಲಿನಲ್ಲಿ ಎನ್‌ಐಎ ತನಿಖೆ

ಜೈಲಿನಲ್ಲಿರುವ ಉಗ್ರನಿಗೆ ಡಾಕ್ಟರ್‌ ಟೆರರ್‌ಗಳ ಜೊತೆ ಸಂಪರ್ಕದ ಅನುಮಾನ ಬೆಂಗಳೂರು : ದೆಹಲಿ ಕಾರು ಬಾಂಬ್‌ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಫೋಟಕ್ಕೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ಮೊಬೈಲ್ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎಂಬ ಅನುಮಾನ ಮೂಡಿದೆ. ಈಗಾಗಲೇ ಎನ್ಐಎ ದೇಶದ ಹಲವು ಕಡೆ ದಾಳಿಯನ್ನು ನಡೆಸಿ, ಹಲವು ದಾಖಲೆಗಳು ವಶಪಡಿಸಿಕೊಂಡ ತನಿಖೆ ನಡೆಸುತ್ತಿದೆ. ಇತ್ತೀಚೆಗೆ

ದೆಹಲಿ ಕಾರು ಬಾಂಬ್‌ ಸ್ಫೋಟ : ಬೆಂಗಳೂರು ಜೈಲಿನಲ್ಲಿ ಎನ್‌ಐಎ ತನಿಖೆ Read More »

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಣಾಜೆಯ ಸರ್ವಮತ ಸಮ್ಮೇಳನ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮಂಗಳೂರು: ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮತ್ತು ಮಕ್ಕಳ ಕಲ್ಯಾಣ ಸಚಿವೆ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಟೀಕೆಗೆ ಗುರಿಯಾದ ಸಿಎಂ-ಡಿಸಿಎಂ ದುಬಾರಿ ಬೆಲೆಯ ಕೈಗಡಿಯಾರ

ಹ್ಯೂಬ್ಲೋಟ್ ಹಗರಣವನ್ನು ನೆನಪಿಸಿ ಕಾಲೆಳೆದ ಬಿಜೆಪಿ ಬೆಂಗಳೂರು : ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಟಿಕೋಳಿ ಸಾರು ಜೊತೆಗೆ ಬಿಸಿಬಿಸಿ ಇಡ್ಲಿಯ ಬ್ರೇಕ್‌ಫಾಸ್ಟ್‌ ಸವಿದ ಬಳಿಕ ವಿವಾದವೊಂದು ಮೆಲ್ಲನೆ ತಲೆ ಎತ್ತಿದೆ. ಈ ವಿವಾದಕ್ಕೆ ಕಾರಣ ಬ್ರೇಕ್‌ಫಾಸ್ಟ್‌ ಅಲ್ಲ ಬದಲಾಗಿ ಸಿಎಂ ಮತ್ತು ಡಿಸಿಎಂ ಕಟ್ಟಿಕೊಂಡಿದ್ದ ದುಬಾರಿ ಬೆಲೆಯ ಕೈಗಡಿಯಾರ ಎನ್ನುವುದೊಂದು ವಿಶೇಷ. ಕೈಗಡಿಯಾರ ಎಂದ ಕೂಡಲೇ ಸಿದ್ದರಾಮಯ್ಯನವರ ಕಳೆದ ಅವಧಿಯಲ್ಲಿ ಭಾರಿ ವಿವಾದಕ್ಕೊಳಗಾಗಿದ್ದ 75 ಲಕ್ಷ ರೂ. ಬೆಲೆಯ ಹ್ಯೂಬ್ಲೋಟ್ ಕೈಗಡಿಯಾರದ ವಿವಾದ

ಟೀಕೆಗೆ ಗುರಿಯಾದ ಸಿಎಂ-ಡಿಸಿಎಂ ದುಬಾರಿ ಬೆಲೆಯ ಕೈಗಡಿಯಾರ Read More »

ಡಿ.7ರಂದು ಉಡುಪಿ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಆಗಮನ

ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿರುವ ಆಂಧ್ರದ ಉಪಮುಖ್ಯಮಂತ್ರಿ ಉಡುಪಿ: ಡಿಸೆಂಬರ್‌ 7ರಂದು ಶ್ರೀಕೃಷ್ಣಮಠದ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ಜನಪ್ರಿಯ ನಟ ಪವನ್‌ ಕಲ್ಯಾಣ್‌ ಭಾಗವಹಿಸಲಿದ್ದಾರೆ. ಪರ್ಯಾಯ ಶ್ರೀ ಪುತ್ತಿಗೆ ಮಠದ ಆಯೋಜನೆಯ ಗೀತೋತ್ಸವ ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಪವನ್‌ ಕಲ್ಯಾಣ್‌ ಆಗಮಿಸಲಿದ್ದಾರೆ. ನ.8ರಂದು ಪೇಜಾವರ ಶ್ರೀಗಳಿಂದ ಗೀತೋತ್ಸವ ಉದ್ಘಾಟನೆಗೊಂಡಿತ್ತು. ಲಕ್ಷಕಂಠ ಗೀತಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೀತೋತ್ಸವ ಸಮಾರೋಪದಲ್ಲಿ ಆಂಧ್ರದ ಡಿಸಿಎಂ ಭಾಗಿಯಾಗಲಿದ್ದಾರೆ.

ಡಿ.7ರಂದು ಉಡುಪಿ ಕೃಷ್ಣ ಮಠಕ್ಕೆ ಪವನ್‌ ಕಲ್ಯಾಣ್‌ ಆಗಮನ Read More »

ತಳ್ಳುಗಾಡಿಯಲ್ಲಿ ತಳ್ಳಿಕೊಂಡು ಎಟಿಎಂ ಯಂತ್ರ ಕದ್ದೊಯ್ದ ಕಳ್ಳರು

ಬೆಂಗಳೂರು: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರವನ್ನು ಕಳ್ಳತನ ಮಾಡಿರುವ ಘಟನೆ ಬೆಳಗಾವಿಯ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ.ಡಿ.2ರ ನಸುಕಿನ ಜಾವ 3 ಗಂಟೆಯ ವೇಳೆಗೆ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿರುವ ಇಂಡಿಯಾ ಒನ್ ಎಟಿಎಂಗೆ ಖದೀಮರು ಕನ್ನ ಹಾಕಿದ್ದಾರೆ. ಮೂರು ಜನ ಕಳ್ಳರು ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಗ್ಯಾಸ್ ಕಟ್ಟರ್‌ ಯಂತ್ರವನ್ನು ಹೊತ್ತುಕೊಂಡು ಬಂದಿದ್ದಾರೆ. ಸರ್ವಿಸ್ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವ ಕಾರಣ ಕಳ್ಳರ ವಾಹನದಲ್ಲಿ ಬಾರದೆ ಅಲ್ಲೇ ಪಕ್ಕದಲ್ಲೇ ಇದ್ದ ತಳ್ಳು ಗಾಡಿ ತಂದು ಎಟಿಎಂ ಮುಂದೆ

ತಳ್ಳುಗಾಡಿಯಲ್ಲಿ ತಳ್ಳಿಕೊಂಡು ಎಟಿಎಂ ಯಂತ್ರ ಕದ್ದೊಯ್ದ ಕಳ್ಳರು Read More »

ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯಗೆ ನಾಟಿಕೋಳಿ ಸಾರು, ಬಿಸಿಬಿಸಿ ಇಡ್ಲಿ ಬ್ರೇಕ್‌ಫಾಸ್ಟ್‌

ಸಿಎಂಗೆ ನಾನ್‌ವೆಜ್‌ ತಿನ್ನಿಸಿ ತಾನು ವೆಜ್‌ ಮಾತ್ರ ತಿಂದ ಡಿಕೆಶಿ ಬೆಂಗಳೂರು: ಕರ್ನಾಟಕ ಕಾಂಗ್ರೆಸ್​ನಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಡುವಣ ‘ಬ್ರೇಕ್​ಫಾಸ್ಟ್ ಮೀಟಿಂಗ್’ ಮುಂದುವರಿದಿದೆ. ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದರು. ಜತೆಗೆ ಮಾತುಕತೆಯೂ ನಡೆಯಿತು. ಆದರೆ ಡಿ.ಕೆ ಶಿವಕುಮಾರ್ ಮಾತ್ರ ಉಪಾಹಾರ ಕೂಟದಲ್ಲಿ ನಾನ್‌ವೆಜ್ ಸೇವಿಸಲಿಲ್ಲ. ಕಾವೇರಿ ನಿವಾಸದಿಂದ

ಡಿಕೆಶಿ ಮನೆಯಲ್ಲಿ ಸಿದ್ದರಾಮಯ್ಯಗೆ ನಾಟಿಕೋಳಿ ಸಾರು, ಬಿಸಿಬಿಸಿ ಇಡ್ಲಿ ಬ್ರೇಕ್‌ಫಾಸ್ಟ್‌ Read More »

error: Content is protected !!
Scroll to Top