ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡುವುದನ್ನು ನಿಷೇಧಿಸಲು ಯತ್ನಾಳ ಪತ್ರ

ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಮುಖ್ಯಮಂತ್ರಿಗೆ ಬರೆದ ಪತ್ರ ಬೆಂಗಳೂರು : ಸರ್ಕಾರದ ಅನುಮತಿ ಪಡೆದುಕೊಳ್ಳದೆ ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಡೆಯುವ ನಮಾಜ್‌ಗೆ ಬ್ರೇಕ್​ ಹಾಕುವಂತೆ ಆಗ್ರಹಿಸಿ ಸರ್ಕಾರಕ್ಕೆ ಶಾಸಕ ಬಸನ ಗೌಡ ಪಾಟೀಲ್‌ ಯತ್ನಾಳ ಬರೆದಿರುವ ಪತ್ರ ಸಂಚಲನ ಸೃಷ್ಟಿಸಿದೆ. ಸರ್ಕಾರಿ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದ್ದು, ಈ ಸಂಬಂಧ ರೆಗ್ಯುಲೇಷನ್ ಆಫ್ ಯೂಸ್ […]

ಸಾರ್ವಜನಿಕ ಸ್ಥಳಗಳಲ್ಲಿ ನಮಾಜು ಮಾಡುವುದನ್ನು ನಿಷೇಧಿಸಲು ಯತ್ನಾಳ ಪತ್ರ Read More »

ನಡುರಸ್ತೆಯಲ್ಲೇ ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಪಾರು

ಟಯರ್‌ ಬ್ಲಾಸ್ಟ್‌ ಆಗಿ ಬಸ್‌ ಬೆಂಕಿಗಾಹುತಿ ಬೆಂಗಳೂರು: ಖಾಸಗಿ ಬಸ್‌ಗೆ ನಡುರಸ್ತೆಯಲ್ಲೇ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿರುವ ಘಟನೆ ಆಂಧ್ರದ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್‌ ಅನಂತಪುರದ ಬಳಿ ತಲುಪಿದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರುಸುರಕ್ಷಿತವಾಗಿ ಪಾರಾಗಿದ್ದಾರೆ. ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೋಗುತ್ತಿರುವಾಗ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಟಯರ್‌ ಬ್ಲಾಸ್ಟ್‌ ಆಗುತ್ತಿದ್ದಂತೆ ಪ್ರಯಾಣಿಕರು ತಮ್ಮ ಲಗೇಜ್‌ಗಳನ್ನು

ನಡುರಸ್ತೆಯಲ್ಲೇ ಬಸ್‌ ಬೆಂಕಿಗಾಹುತಿ : 36 ಪ್ರಯಾಣಿಕರು ಪಾರು Read More »

ಸಿಎಂ ಮನೆಯಲ್ಲೂ ನಡೆಯಿತು ಜಾತಿ ಗಣತಿ

ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಗಳ ಕಾಲ ಸಮಾಧಾನದಿಂದ ಗುರುವಾರ ಉತ್ತರ ನೀಡಿದರು. ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರು ಗಣತಿದಾರರಿಗೆ ಮಾಹಿತಿ ನೀಡಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ಮನೆ ಸಮೀಕ್ಷೆ ಬಳಿಕ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಮೀಕ್ಷೆಗಾಗಿ ನನ್ನ ಮನೆಗೆ

ಸಿಎಂ ಮನೆಯಲ್ಲೂ ನಡೆಯಿತು ಜಾತಿ ಗಣತಿ Read More »

ಮೈಸೂರಿಗೆ ಎಸಿಪಿ ಆಗಲು ಕೋಟಿ ರೂ.: ಎಚ್. ವಿಶ್ವನಾಥ್ ಆಕ್ರೋಶ

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ. ಮೈಸೂರು ಸಹ ಇದಕ್ಕೆ ಹೊರತಾಗಿಲ್ಲ. ಮೈಸೂರಿಗೆ ಎಸಿಪಿ ಆಗಹೇಕಾದರೆ ಒಂದು ಕೋಟಿ ರೂ. ಕೊಡಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಇನ್ಸ್‌ಪೆಕ್ಟರ್ ಹುದ್ದೆಗೆ 75 ಲಕ್ಷ ರೂ., ಎಸ್‌ಐ ಹುದ್ದೆಗೆ 50 ಲಕ್ಷ ರೂ. ನೀಡಬೇಕು. ಈಗ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಲ್ಲ ಬದಲಾಗಿ ಶಾಸಕರ ಕೃಪಾ ಪೋಷಿತರು. ಸಿಕ್ಕ ಸಿಕ್ಕಲ್ಲೆಲ್ಲಾ ಅಕ್ರಮ, ಅನ್ಯಾಯ ನಡೆಯುತ್ತಿದೆ. ಈ ಬಗ್ಗೆ ಸಿ ಎಂ ಸಿದ್ದರಾಮಯ್ಯಗೆ

ಮೈಸೂರಿಗೆ ಎಸಿಪಿ ಆಗಲು ಕೋಟಿ ರೂ.: ಎಚ್. ವಿಶ್ವನಾಥ್ ಆಕ್ರೋಶ Read More »

ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ದಾಸ್ತಾನು ಜಪ್ತಿ ಮಾಡಿದ ಪೊಲೀಸರು

ಕಾರ್ಕಳ: ಮಾರಾಟದ ಉದ್ದೇಶದಿಂದ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಪಾರ ಪ್ರಮಾಣದ ಸುಡುಮದ್ದು‌ಗಳನ್ನು ಕಾರ್ಕಳ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಖಚಿತ, ಗುಪ್ತ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ಮೂರು ಕಂಟೇನರ್‌ನಷ್ಟು ಪ್ರಮಾಣದ ಪಟಾಕಿಗಳನ್ನು ವಶಕ್ಕೆ ಪಡೆಯಲಾಗಿದೆ. ಲಕ್ಷಾಂತರ ಮೌಲ್ಯದ ಈ ಪಟಾಕಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು. ಪರವಾನಗಿ ಹೊಂದಿರದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದೀಪಾವಳಿ ಹಬ್ಬದ ಕಾರಣಕ್ಕೆ ಪಟಾಕಿ ಮಾರಾಟಗಾರರ ಮೇಲೆ ಪೊಲೀಸ್ ಕಣ್ಗಾವಲು ಹೆಚ್ಚಿಸಿದ್ದು, ಅಕ್ರಮವಾಗಿ, ಪರವಾನಗಿ ಇಲ್ಲದೆ ಪಟಾಕಿ ದಾಸ್ತಾನು,

ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿ ದಾಸ್ತಾನು ಜಪ್ತಿ ಮಾಡಿದ ಪೊಲೀಸರು Read More »

ಬಿಜೆಪಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿಯ ಹೊಸ ಆಫರ್ ಕುರಿತಂತೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಕೊನೆಯಾಗುವ ಕಾಲದಲ್ಲಿ ಪಕ್ಷಕ್ಕೆ ನಿಷ್ಟೆ ತೋರಿ ಜೈಲು ವಾಸವನ್ನು ಆಯ್ಕೆ ಮಾಡಿಕೊಂಡೆ ಎಂದು ಅವರು ತಿಳಿಸಿದ್ದಾರೆ. ಸುಮಾರು ಹತ್ತು ಮಂದಿ ಶಾಸಕರು ಸಮ್ಮಿಶ್ರ ಸರ್ಕಾರಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು‌‌‌. ಆ ಸಮಯದಲ್ಲಿ ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ಮತ್ತೆ ಕ್ವಾಟ್ರಸ್‌ಗೆ ಕರೆ ತಂದೆ‌. ಆಗ ನನಗೊಬ್ಬ ಇನ್‌ಕಂ ಟ್ಯಾಕ್ಸ್ ಅಧಿಕಾರಿ ಕರೆ ಮಾಡಿದ್ದರು.

ಬಿಜೆಪಿ ಬಗ್ಗೆ ಹೊಸ ಬಾಂಬ್ ಸಿಡಿಸಿದ ಡಿ.ಕೆ. ಶಿವಕುಮಾರ್ Read More »

ಮುಖ್ಯಮಂತ್ರಿಗೆ ಇನ್ನೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಸರ್ಕಾರಿ ನೌಕರರು ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಲು ಆಗ್ರಹ ಬೆಂಗಳೂರು : ಸರ್ಕಾರಿ ಶಾಲೆಯ ಆವರಣ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಿಜೆಪಿ ಮತ್ತು ಸಂಘ ಪರಿವಾರದ ಆಕ್ರೋಶಕ್ಕೆ ಗುರಿಯಾಗಿರುವ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಮುಖ್ಯಮಂತ್ರಿಗಳಿಗೆ ಮತ್ತೊಂದು ಪತ್ರ ಬರೆದು ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಸರ್ಕಾರಿ

ಮುಖ್ಯಮಂತ್ರಿಗೆ ಇನ್ನೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ Read More »

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಒಡ್ಡಿದ ವ್ಯಕ್ತಿಯ ಗುರುತು ಪತ್ತೆ

ಬೆದರಿಕೆ ಹಿನ್ನೆಲೆ ಸಚಿವರಿಗೆ ಭದ್ರತೆ ಹೆಚ್ಚಳ ಬೆಂಗಳೂರು: ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಬೇಕೆಂದು ಪತ್ರ ಬರೆದ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನೇಶ್ ನರೋಣ ಎಂದು ತಿಳಿದುಬಂದಿದೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ ವ್ಯಕ್ತಿಯೋರ್ವ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ್ದ. ಈ ಕುರಿತು ಪ್ರಿಯಾಂಕ್ ಖರ್ಗೆ ದೂರು ನೀಡಲು

ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ ಒಡ್ಡಿದ ವ್ಯಕ್ತಿಯ ಗುರುತು ಪತ್ತೆ Read More »

ದೀಪಾವಳಿಗೂ ಇಲ್ಲ ಗೃಹಲಕ್ಷ್ಮೀ ಹಣ

ನಾಲ್ಕು ತಿಂಗಳಿಂದ ಖಾತೆಗೆ ಹಣ ಬಂದಿಲ್ಲ ಎಂದು ಮಹಿಳೆಯರ ದೂರು ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಕಳೆದ 3-4 ತಿಂಗಳಿಂದ ಮಹಿಳೆಯರ ಅಕೌಂಟ್‌ಗೆ ಜಮೆಯಾಗಿಲ್ಲ. ದೀಪಾವಳಿ ಸಮಯದಲ್ಲಾದರೂ ಗೃಹಲಕ್ಷ್ಮೀ ಹಣ ಸಿಗಬಹುದು ಎಂದು ಕಾದಿದ್ದವರಿಗೆ ನಿರಾಸೆಯಾಗಿದೆ. ಸರ್ಕಾರದಿಂದ ಇನ್ನೂ ಹಣ ಬಿಡುಗಡೆ ಮಾಡುವ ಬಗ್ಗೆ ಯಾವುದೇ ಹೇಳಿಕೆ ಹೊರಬಿದ್ದಿಲ್ಲ. ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯೇ ಹೆಚ್ಚು ಜನರನ್ನು ತಲುಪಿತ್ತು. ಮಹಿಳೆಯರ ಮನಗೆದ್ದಿದ್ದ ಈ ಯೋಜನೆ ಈಗ ಕುಂಟಲಾರಂಭಿಸಿದೆ. ಕಳೆದ 4

ದೀಪಾವಳಿಗೂ ಇಲ್ಲ ಗೃಹಲಕ್ಷ್ಮೀ ಹಣ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು

ಫಲಿತಾಂಶ ಹೆಚ್ಚಿಸಲು ಕನಿಷ್ಠ ಅಂಕ ಮಿತಿ ಇಳಿಕೆ ಬೆಂಗಳೂರು: ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಶೇ. 33 ಅಂಕ ಪಡೆದರೆ ಸಾಕು. ಸರ್ಕಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತೇರ್ಗಡೆಗೆ ಇದ್ದ ಕನಿಷ್ಠ ಅಂಕಮಿತಿಯನ್ನು ಇನ್ನಷ್ಟು ಕಡಿಮೆಗೊಳಿಸಿದ್ದು, ಈ ಮೂಲಕ ಫಲಿತಾಂಶ ಹೆಚ್ಚಿಸುವ ಪ್ರಯತ್ನ ಮಾಡಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು Read More »

error: Content is protected !!
Scroll to Top