ರಾಜ್ಯ

ಧರ್ಮಸ್ಥಳ ಪ್ರಕರಣ : ಗಿರೀಶ್‌ ಮಟ್ಟಣ್ಣನವರ್‌, ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌

ಖಾಸಗಿ ವಾಹಿನಿ ವರದಿಗಾರರ ಮೇಲೆ ಹಲ್ಲೆ ಮಾಡಿದ ಕೇಸ್‌ ದಾಖಲು ಮಂಗಳೂರು: ಖಾಸಗಿ ವಾಹಿನಿಯ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಗಿರೀಶ್‌ ಮಟ್ಟಣನವರ್‌ , ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಯೂಟ್ಯೂಬರ್‌ ಸಮೀರ್‌ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ವರದಿಗಾರ ಹರೀಶ್‌ ಅವರ ದೂರಿನಂತೆ ಬಿಎನ್‌ಎಸ್‌ ಸೆಕ್ಷನ್‌ 115(2), 189(2), 191(2), 351(2), 352, 190 ಅಡಿ ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಗಿರೀಶ್‌ ಮಟ್ಟಣನವರ್‌ (ಎ1), ಮಹೇಶ್‌ ಶೆಟ್ಟಿ ತಿಮರೋಡಿ(ಎ2) ಯೂಟ್ಯೂಬರ್‌ ಸಮೀರ್‌(ಎ3), […]

ಧರ್ಮಸ್ಥಳ ಪ್ರಕರಣ : ಗಿರೀಶ್‌ ಮಟ್ಟಣ್ಣನವರ್‌, ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ Read More »

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ಇ.ಡಿ.ಯಿಂದಲೂ ತನಿಖೆ

ಮೂರು ವರ್ಷದ ಹಿಂದೆ ಆಟೋರಿಕ್ಷಾದಲ್ಲಿ ಬಾಂಬ್‌ ಸ್ಫೋಟಗೊಂಡ ಪ್ರಕರಣ ಮಂಗಳೂರು : ಮಂಗಳೂರಿನ ಕಂಕನವಾಡಿ ಬಳಿ 2022ರಲ್ಲಿ ಆಟೋರಿಕ್ಷಾದಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ತನಿಖೆಗೆ ಈಗ ಜಾರಿ ನಿರ್ದೇಶನಾಲಯ ಎಂಟ್ರಿ ಕೊಟ್ಟಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯಿದೆಯಡಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದೆ. ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಸೈಯದ್ ಯಾಸೀನ್​ನ ಬ್ಯಾಂಕ್​ ಖಾತೆಯನ್ನು ಜಪ್ತಿ ಮಾಡಲಾಗಿದೆ. ಉಗ್ರ ಸಂಘಟನೆಯನ್ನು ಭಾರತದಾದ್ಯಂತ ವಿಸ್ತರಿಸುವುದು, ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ : ಇ.ಡಿ.ಯಿಂದಲೂ ತನಿಖೆ Read More »

ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್‌ ಶೋಧ

ಕ್ಷೇತ್ರಕ್ಕೆ ಅವಮಾನ ಮಾಡುತ್ತಿರುವವರ ವಿರುದ್ಧ ಸಿಡಿದ ಧರ್ಮಸ್ಥಳ ಗ್ರಾಮಸ್ಥರು ಮಂಗಳೂರು: ಬುಧವಾರ ನಡೆದ ಹಲ್ಲೆ, ಘರ್ಷಣೆಯ ಅಹಿತಕರ ಘಟನೆಯ ಬಳಿಕ ಧರ್ಮಸ್ಥಳದ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ಇದರ ನಡುವೆಯೇ ಇಂದು ಅತಿ ಮಹತ್ವದ್ದು ಎನ್ನಲಾಗಿರುವ 13ನೇ ಪಾಯಿಂಟ್‌ನಲ್ಲಿ ಅಗೆತ ಕಾರ್ಯಾಚರಣೆ ನಡೆಯಲಿದೆ. ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈ ನಡುವೆ ಕೊನೆಯ ಪಾಯಿಂಟ್ ಆಗಿರುವ 13ನೇ ಜಾಗದ ಉತ್ಖನನ ವಿಶೇಷ ತನಿಖಾ ತಂಡ ಕಗ್ಗಂಟಾಗಿದೆ. ದೂರುದಾರ ಮುಸುಕುಧಾರಿ ತೋರಿಸಿದ

ಧರ್ಮಸ್ಥಳ ಪ್ರಕರಣ : ಬಿಗುವಿನ ಪರಿಸ್ಥಿತಿ ನಡುವೆಯೇ ಇಂದು 13ನೇ ಪಾಯಿಂಟ್‌ ಶೋಧ Read More »

ಸ್ವಾಮೀಜಿಗೆ ಆನ್‌ಲೈನ್‌ನಲ್ಲಿ ಬಂತು ಮುಸ್ಲಿಂ ಟೋಪಿ!

ಮೂಲ ಧರ್ಮ ಮರೆಮಾಚಿದ ಹಿನ್ನೆಲೆಯಲ್ಲಿ ಮಠ ತೊರೆದಿದ್ದ ಸ್ವಾಮೀಜಿಯ ನಡೆ ಬಗ್ಗೆ ಅನುಮಾನ ಚಾಮರಾಜನಗರ : ಮೂಲ ಧರ್ಮ ಮರೆಮಾಚಿ ಗುಂಡ್ಲುಪೇಟೆಯ ಲಿಂಗಾಯತ ಮಠವೊಂದಕ್ಕೆ ಮಠಾಧೀಶರಾಗಿದ್ದ ಮುಸ್ಲಿಂ ಯುವಕನ ಹೆಸರಿಗೆ ಆನ್‌ಲೈನ್‌ ಮೂಲಕ ಮುಸ್ಲಿಂ ಟೋಪಿ ಬಂದಿರುವುದು ಮತ್ತು ಅವರ ಕೆಲವು ಫೋಟೊ ಮತ್ತು ವಿಡಿಯೋಗಳು ಬಹಿರಂಗವಾಗಿ ಹೊಸ ವಿವಾದ ಸೃಷ್ಟಿಯಾಗಿದೆ. ಲಿಂಗದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಯುವಕ ತಮ್ಮ ಮೂಲ ಧರ್ಮದ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಹಾಗೂ ತಮ್ಮ ದಾಖಲಾತಿಗಳಲ್ಲಿ ಮೂಲಧರ್ಮದ ಹೆಸರನ್ನು ಉಳಿಸಿಕೊಂಡಿರುವುದು

ಸ್ವಾಮೀಜಿಗೆ ಆನ್‌ಲೈನ್‌ನಲ್ಲಿ ಬಂತು ಮುಸ್ಲಿಂ ಟೋಪಿ! Read More »

ಧರ್ಮಸ್ಥಳ ಪ್ರಕರಣ ಪಾರದರ್ಶಕ ತನಿಖೆ : ಪರಮೇಶ್ವರ

ಎಸ್‌ಐಟಿ ವಿವೇಚನೆಯಂತೆ ತನಿಖೆ; ಸರ್ಕಾರದ ಹಸ್ತಕ್ಷೇಪವಿಲ್ಲ ಎಂದು ಸ್ಪಷ್ಟನೆ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸಂಪೂರ್ಣ ತನಿಖೆಯನ್ನು ಎಸ್‍ಐಟಿ ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದೇವೆ. ಇದು ಗಂಭೀರವಾದ ಪ್ರಕರಣವಾದ್ದರಿಂದ ಎಚ್ಚರಿಕೆಯಿಂದ ಪಾರದರ್ಶಕವಾಗಿ ತನಿಖೆ ನಡೆಯುತ್ತಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರ ಗುರುತಿಸುವ ಸ್ಥಳಗಳನ್ನು ಎಸ್‍ಐಟಿ ಅಧಿಕಾರಿಗಳು ಅಗೆಯುವ ಬಗ್ಗೆ ತೀರ್ಮಾನ ಮಾಡುತ್ತಾರೆ, ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಎಸ್‍ಐಟಿ ತಂಡ ಪಾರದರ್ಶಕವಾಗಿ ತನಿಖೆ ತನಿಖೆ ನಡೆಸುವ ವಿಶ್ವಾಸವಿದೆ. ಸಂಪೂರ್ಣ ತನಿಖೆ ಬಳಿಕ ವರದಿಯನ್ನು ಸಲ್ಲಿಸಿದಾಗ ಸರ್ಕಾರ

ಧರ್ಮಸ್ಥಳ ಪ್ರಕರಣ ಪಾರದರ್ಶಕ ತನಿಖೆ : ಪರಮೇಶ್ವರ Read More »

ಹೈಕೋರ್ಟ್‌ ಖಡಕ್‌ ವಾರ್ನಿಂಗ್‌ : ಒಂದೇ ದಿನದಲ್ಲಿ ಮುಗಿದ ಸಾರಿಗೆ ನೌಕರರ ಮುಷ್ಕರ

ಎಸ್ಮಾ ಕಾಯಿದೆಯಡಿ ಮುಷ್ಕರ ನಿರತ ನೌಕರರನ್ನು ಬಂಧಿಸಬಹುದು ಎಂದು ಎಚ್ಚರಿಕೆ ನೀಡಿದ ಹೈಕೋರ್ಟ್‌ ಬೆಂಗಳೂರು : ಕರ್ನಾಟಕ ಹೈಕೋರ್ಟ್ ಖಡಕ್​ ಎಚ್ಚರಿಕೆ ನೀಡಿದ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ಒಂದೇ ದಿನದಲ್ಲಿ ಮುಕ್ತಾಯವಾಗಿದ್ದು, ನಿನ್ನೆಯೇ ಬಸ್‌ಗಳು ರಸ್ತೆಗಿಳಿದಿವೆ. ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿದ್ದು, ರಾಜ್ಯಾದ್ಯಂತ ನಾಲ್ಕೂ ನಿಗಮಗಳ ಬಸ್​ ಸಂಚಾರ ಆರಂಭವಾಗಿವೆ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಎಂದಿನಂತೆ ಓಡಾಟ ನಡೆಸಿವೆ. 38 ತಿಂಗಳ ಹಿಂಬಾಕಿ ಪಾವತಿ ಸಹಿತ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಸಾರಿಗೆ

ಹೈಕೋರ್ಟ್‌ ಖಡಕ್‌ ವಾರ್ನಿಂಗ್‌ : ಒಂದೇ ದಿನದಲ್ಲಿ ಮುಗಿದ ಸಾರಿಗೆ ನೌಕರರ ಮುಷ್ಕರ Read More »

ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ಕೊಡಲು ಸಾಧ್ಯವಿಲ್ಲ : ಸಿದ್ದರಾಮಯ್ಯ

ಶ್ರೀನಿವಾಸ ಸಮಿತಿಯ ಶಿಫಾರಸ್ಸು ಒಪ್ಪಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಬೆಂಗಳೂರು: 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ಕೇವಲ 14 ತಿಂಗಳ ಹಿಂಬಾಕಿ ಕೊಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ 2020ರ ಜನವರಿಯಿಂದ 2023ರ ಫೆಬ್ರವರಿವರೆಗಿನ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಹಾಗೂ 2024ರ ಜನವರಿಯಿಂದ ಅನ್ವಯ ವಾಗುವಂತೆ ಹೊಸದಾಗಿ ವೇತನವನ್ನು ಹೆಚ್ಚಳ ಮಾಡುವಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರು

ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ಕೊಡಲು ಸಾಧ್ಯವಿಲ್ಲ : ಸಿದ್ದರಾಮಯ್ಯ Read More »

ಸಾರಿಗೆ ನೌಕರರ ಮುಷ್ಕರ ಪ್ರಾರಂಭ : ಬೆಳ್ಳಂಬೆಳಗ್ಗೆ ಪ್ರಯಾಣಿಕರ ಪರದಾಟ

ರಸ್ತೆಗಿಳಿಯದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬಂದ್‌ ಆರಂಭಿಸಿದ್ದಾರೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಸಾರಿಗೆ ನೌಕರರು ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಆದರೂ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ತೊಂದರೆ ತಪ್ಪಿಸಲು ಮುಂದಾಗಿದೆ. ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದೆ. ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಸಮಸ್ಯೆಗಳು ಶುರುವಾಗಿವೆ. ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್‌ಗಳನ್ನೇ ಅವಲಂಬಿಸಿರುವ ಜನರು ಕೆಲಸಗಳಿಗೆ, ಶಾಲೆ-ಕಾಲೇಜುಗಳಿಗೆ ಹೋಗಲು ಪರದಾಡುತ್ತಿದ್ದಾರೆ. ಹೀಗಿದ್ದರೂ, ಯಾವುದೇ ಚಿಂತೆ ಬೇಡ ಎಂದು ಸಾರ್ವಜನಿಕರಿಗೆ

ಸಾರಿಗೆ ನೌಕರರ ಮುಷ್ಕರ ಪ್ರಾರಂಭ : ಬೆಳ್ಳಂಬೆಳಗ್ಗೆ ಪ್ರಯಾಣಿಕರ ಪರದಾಟ Read More »

ಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ

ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆ. 5 ರಂದು ಅನಿರ್ಧಿಷ್ಟಾವಧಿ ಮುಷ್ಕರ‌ ನಡೆಸಲು ಕರೆಕೊಟ್ಟಿದ್ದಾರೆ. ಇದರ ನಡುವೆಯೇ ಸಾರಿಗೆ ಇಲಾಖೆ ನೌಕರರಿಗೆ ಎಚ್ಚರಿಕೆ ಕೊಟ್ಟಿದ್ದು, ಆ. 4 ರಿಂದಲೇ ಅನ್ವಯವಾಗುವಂತೆ ಸಾರಿಗೆ ನೌಕರರ ರಜೆಯನ್ನು ಅನಿರ್ಧಿಷ್ಚಾವಧಿ ವರೆಗೆ ರದ್ದು ಮಾಡಿ ಸುತ್ತೋಲೆ ಹೊರಡಿಸಿದೆ. ಆಯಾ ನಿಗಮದ ಅಧಿಕಾರಿಗಳಿಗೆ ಈ ಸಂಬಂಧ ಸೂಚನೆ ನೀಡಿದೆ. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರವೇ ರಜೆ ನೀಡುವಂತೆ ಆದೇಶಿಸಲಾಗಿದೆ. ಅಗತ್ಯವಿದ್ದಲ್ಲಿ ವಾರದ ರಜೆಯನ್ನು ‌ಸಹ ರದ್ದು

ಸಾರಿಗೆ ನೌಕರರ ರಜೆ ರದ್ದು ಮಾಡಿ ಸಾರಿಗೆ ಇಲಾಖೆ ಆದೇಶ Read More »

ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ ಯುವಕನ ಹತ್ಯೆ

ನಡುರಸ್ತೆಯಲ್ಲಿ ಮಚ್ಚಿನಿಂದ ಕೊಚ್ಚಿ ಹಾಕಿ ಶರಣಾದ ಆರೋಪಿ ಬೆಂಗಳೂರು: ಕೊಪ್ಪಳದ ಬಹದ್ದೂರ ಬಂಡಿ ಎಂಬಲ್ಲಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಇದಕ್ಕೆ ಆತ ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸಿದ್ದು ಕಾರಣ ಎನ್ನಲಾಗಿದೆ. ಗವಿಸಿದ್ದಪ್ಪ ನಿಂಗಜ್ಜ ನಾಯಕ್ (30) ಕೊಲೆಯಾದ ಯುವಕ. ಸಾದಿಕ್ ಕೋಲ್ಕಾರ್​ ಎಂಬ ಯುವಕ ಗವಿಸಿದ್ದಪ್ಪ ನಾಯಕ್​​ನನ್ನು ಕೊಲೆ ಮಾಡಿದ್ದಾನೆ. ಅವನ ಜೊತೆಗೆ ಇನ್ನೂ ಮೂವರಿದ್ದರು ಎನ್ನಲಾಗಿದೆ. ಗವಿಸಿದ್ದಪ್ಪ ನಾಯಕ್ ತಂದೆ ನಿಂಗಜ್ಜ ಟಣಕನಲ್ ಅವರು ಆರೋಪಿ ಸಾದಿಕ್ ಸೇರಿ

ಅನ್ಯಧರ್ಮದ ಯುವತಿಯನ್ನು ಪ್ರೀತಿಸಿದ ಯುವಕನ ಹತ್ಯೆ Read More »

error: Content is protected !!
Scroll to Top