ರಾಜ್ಯ

ಬಿಹಾರ ಚುನಾವಣೆಗಾಗಿ ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಕೋಟಿಗಟ್ಟಲೆ ವಸೂಲಿ : ಬಿಜೆಪಿ ಆರೋಪ

ಮಂತ್ರಿಗಿರಿಗಾಗಿ ಹೈಕಮಾಂಡ್‌ಗೆ 300 ಕೋ. ರೂ. ಕೊಡಲು ಒಪ್ಪಿದ್ದ ಕಳಂಕಿತ ಶಾಸಕ ವೀರೇಂದ್ರ ಪಪ್ಪಿ ಬೆಂಗಳೂರು: ಬಿಹಾರ ಚುನಾವಣೆಗೆ ಹಣ ಸಂಗ್ರಹಿಸಲು ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಒತ್ತಡ ಹೇರುತ್ತಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ಆರೋಪಿಸಿವೆ. ಬೆಟ್ಟಿಂಗ್‌ ಹಗರಣದಲ್ಲಿ ಸಿಕ್ಕಿ ಬಿದ್ದಿರುವ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಬಿಹಾರ ಚುನಾವಣೆಗಾಗಿ ಕಾಂಗ್ರೆಸ್‌ ಹೈಕಮಾಂಡ್‌ಗೆ 300 ಕೋಟಿ ರೂ. ಕೊಟ್ಟು ಮಂತ್ರಿ ಸ್ಥಾನಗಿಟ್ಟಿಸಲು ಪ್ರಯತ್ನಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಆರೋಪಿಸಿದ್ದಾರೆ. ರಾಜ್ಯದಲ್ಲಿರುವ ಕಾಂಗ್ರೆಸ್‌ […]

ಬಿಹಾರ ಚುನಾವಣೆಗಾಗಿ ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಕೋಟಿಗಟ್ಟಲೆ ವಸೂಲಿ : ಬಿಜೆಪಿ ಆರೋಪ Read More »

ತಂಗಿಯ ಮರ್ಯಾದೆ ಹತ್ಯೆ ಮಾಡಿದ ಸಹೋದರರಿಗೆ ಗಲ್ಲು ಶಿಕ್ಷೆ

ದಲಿತ ಯುವಕನನನ್ನು ಮದುವೆಯಾದದ್ದಕ್ಕೆ ತುಂಬು ಗರ್ಭಿಣಿ ತಂಗಿಯನ್ನು ಜೀವಂತ ದಹಿಸಿದ್ದ ಸಹೋದರರು ಬೆಂಗಳೂರು : ದಲಿತ ಯುವಕನ್ನು ಪ್ರೀತಿಸಿ ಮದುವೆಯಾಗಿದ್ದ ಸಹೋದರಿಯನ್ನು ಜೀವಂತ ಸುಟ್ಟುಕೊಂದಿದ್ದ ವಿಜಯಪುರದ ಮರ್ಯಾದ ಹತ್ಯೆ ಪ್ರಕರಣದ ಇಬ್ಬರು ಸಹೋದರರಿಗೆ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದ ಇಬ್ರಾಹಿಂ ಸಾಬ್ (31) ಹಾಗೂ ಈತನ ಸಹೋದರ

ತಂಗಿಯ ಮರ್ಯಾದೆ ಹತ್ಯೆ ಮಾಡಿದ ಸಹೋದರರಿಗೆ ಗಲ್ಲು ಶಿಕ್ಷೆ Read More »

ರಾಜ್ಯದ ಸಮಸ್ಯೆಗಳ ನಡುವೆಯೂ ಸಿಎಂ ಔತಣಕೂಟ: ಸಿ.ಟಿ. ರವಿ ವ್ಯಂಗ್ಯ

ಬೆಂಗಳೂರು: ರಾಜ್ಯದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ, ಭ್ರಷ್ಟಾಚಾರ ಮೊದಲಾದ ಸಮಸ್ಯೆಗಳು ತಾಂಡವವಾಡುತ್ತಿವೆ. ಇವುಗಳ ನಡುವೆ ನೀವು ಔತಣಕೂಟದ ಸಂಭ್ರಮ ಮಾಡುತ್ತಿದ್ದೀರಾ ಎಂದು ಸಿಎಂ ‌ಸಿದ್ದರಾಮಯ್ಯ ಅವರ ಡಿನ್ನರ್ ಮೀಟಿಂಗ್ ಕುರಿತು ಎಂ ಎಲ್ ಸಿ ಸಿ.ಟಿ. ರವಿ ಪ್ರಶ್ನೆ ಮಾಡಿದ್ದಾರೆ. ಭ್ರಷ್ಟಾಚಾರ 80% ದಾಟಿದೆ ಎಂದು ಗುತ್ತಿಗೆದಾರರೇ ಪತ್ರ ಬರೆಯುತ್ತಾರೆ. ರೈತರ ಆತ್ಮಹತ್ಯೆ ವಿಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂ.2. ಅತಿವೃಷ್ಟಿಯಿಂದ ಹತ್ತಕ್ಕೂ ಅಧಿಕ ಜಿಲ್ಲೆಗಳು ಹಾನಿಗೊಳಗಾಗಿವೆ. ಹೀಗಿದ್ದರೂ ಸಿ ಎಂ ಔತಣ ಕೂಟ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದ ಸಮಸ್ಯೆಗಳ ನಡುವೆಯೂ ಸಿಎಂ ಔತಣಕೂಟ: ಸಿ.ಟಿ. ರವಿ ವ್ಯಂಗ್ಯ Read More »

ಗಿರೀಶ್‌ ಮಟ್ಟಣ್ಣವರ್‌ ಬಾಂಬ್‌ ಪ್ರಕರಣಕ್ಕೆ ಮರುಜೀವ : ತನಿಖೆಗೆ ಒತ್ತಾಯಿಸಿ ಅರ್ಜಿ

ಮಂಗಳೂರು ಕುಕ್ಕರ್‌ ಬಾಂಬ್‌ ಮತ್ತು ಮಟ್ಟಣ್ಣವರ್‌ ಬಾಂಬ್‌ ನಡುವೆ ಲಿಂಕ್‌ ಇರುವ ಅನುಮಾನ ಬೆಂಗಳೂರು: ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಈ ಹಿಂದೆ ವಿಧಾನಸೌಧದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣದ ಮರು ತನಿಖೆಯಾಗಬೇಕೆಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ. ಪೊಲೀಸ್‌ ಇಲಾಖೆಯಲ್ಲಿದ್ದ ಗಿರೀಶ್‌ ಮಟ್ಟಣ್ಣವರ್‌ ವಿಧಾನಸಭೆಯಲ್ಲಿ ಬಾಂಬಿಟ್ಟ ಕೃತ್ಯದಿಂದಲೇ ಕುಖ್ಯಾತಿಗೊಳಗಾಗಿದ್ದರು. ಈ ಪ್ರಕರಣ ನ್ಯಾಯಾಲಯದಲ್ಲಿ ಖುಲಾಸೆಯಾಗಿದ್ದರೂ ಪೊಲೀಸ್‌ ಇಲಾಖೆಯಿಂದ ಅವರು ವಜಾಗೊಂಡಿದ್ದರು. ಈಗ ಮತ್ತೆ ಈ

ಗಿರೀಶ್‌ ಮಟ್ಟಣ್ಣವರ್‌ ಬಾಂಬ್‌ ಪ್ರಕರಣಕ್ಕೆ ಮರುಜೀವ : ತನಿಖೆಗೆ ಒತ್ತಾಯಿಸಿ ಅರ್ಜಿ Read More »

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಯ ಲಾಕರ್‌ನಲ್ಲಿತ್ತು 40 ಕೆಜಿ ಚಿನ್ನ

ಆನ್‌ಲೈನ್‌ ಬೆಟ್ಟಿಂಗ್‌ನಲ್ಲಿ ಸಂಪಾದಿಸಿದ ಅಪಾರ ಅಕ್ರಮ ಸಂಪತ್ತು ಬಯಲು ಬೆಂಗಳೂರು: ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತೊಮ್ಮೆ ದಾಳಿ ಮಾಡಿದಾಗ ಲಾಕರ್‌ನಲಿದ್ದ 51 ಕೋಟಿ ರೂ. ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ. ಇ.ಡಿ. ಅಧಿಕಾರಿಗಳು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಫೆಡರಲ್ ಬ್ಯಾಂಕ್‌ ಸೇರಿದಂತೆ ಪಟ್ಟಣದ ಹಲವೆಡೆ ಶೋಧ ನಡೆಸಿದ್ದಾರೆ. ವೀರೇಂದ್ರ ಪಪ್ಪಿ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆ

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಯ ಲಾಕರ್‌ನಲ್ಲಿತ್ತು 40 ಕೆಜಿ ಚಿನ್ನ Read More »

ಈಡೇರದ ಬೇಡಿಕೆ : ಮತ್ತೆ ಮುಷ್ಕರದತ್ತ ಸಾರಿಗೆ ನೌಕರರು

ಅಕ್ಟೋಬರ್‌ 15ರಿಂದ ಉಪವಾಸ ಸತ್ಯಾಗ್ರಹದ ನಿರ್ಧಾರ ಬೆಂಗಳೂರು : ಸರ್ಕಾರ ಯಾವ ಬೇಡಿಕೆಯನ್ನೂ ಈಡೇರಿಸದಿರುವ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾಗಿದ್ದು, ಮೊದಲ ಹಂತದಲ್ಲಿ ಅಕ್ಟೋಬರ್ 15 ರಿಂದ 19ರ ವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಚಿಂತನೆ ನಡೆಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಈ ಐದು ದಿನಗಳ ಕಾಲ ಸರ್ಕಾರಿ ಬಸ್‌ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ. ಕಳೆದ ಆಗಸ್ಟ್‌

ಈಡೇರದ ಬೇಡಿಕೆ : ಮತ್ತೆ ಮುಷ್ಕರದತ್ತ ಸಾರಿಗೆ ನೌಕರರು Read More »

ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನ ಭೀತಿಯಲ್ಲಿ ತಿಮರೋಡಿ

ಮನೆಯಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡ ಪ್ರಕಣ ಧರ್ಮಸ್ಥಳ : ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ತನ್ನ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಕೋರಿದ್ದರು. ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಬಸವರಾಜ್

ನಿರೀಕ್ಷಣಾ ಜಾಮೀನು ಅರ್ಜಿ ವಜಾ : ಬಂಧನ ಭೀತಿಯಲ್ಲಿ ತಿಮರೋಡಿ Read More »

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈ ವರ್ಷದಿಂದಲೇ ರದ್ದು

ಉನ್ನತ ಆಯ್ಕೆ ಸಮಿತಿ ಆರಿಸಿದವರಿಗಷ್ಟೇ ಪ್ರಶಸ್ತಿ ಬೆಂಗಳೂರು: ಈ ವರ್ಷದಿಂದಲೇ ಜಾರಿಗೆ ಬರುವಂತೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ನಿಯಮ ಬದಲಾಗಲಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕುವ ಪ್ರಕ್ರಿಯೆಯನ್ನೇ ರಾಜ್ಯ ಸರ್ಕಾರ ಕೈಬಿಟ್ಟಿದೆ. ವರ್ಷದಿಂದ ವರ್ಷಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಹೊಸ ನಿಯಮ ಜಾರಿಗೊಳಿಸಲಾಗುತ್ತಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸುವ ಪ್ರಕ್ರಿಯೆ ಕೈಬಿಟ್ಟಿದೆ. ಈ ಬಗ್ಗೆ ಕನ್ನಡ

ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈ ವರ್ಷದಿಂದಲೇ ರದ್ದು Read More »

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ‌ಸಿದ್ದರಾಮಯ್ಯ ಮನವಿ

ಬೆಂಗಳೂರು: ನಮ್ಮ ಮೆಟ್ರೋಗೆ ವಾಲ್ಮೀಕಿ ಮಹರ್ಷಿಗಳ ಹೆಸರನ್ನು ಇರಿಸುವಂತೆ ಸಿ ಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ನಮ್ಮ ಮೆಟ್ರೋವನ್ನು ನಡೆಸುತ್ತಿವೆ. ಈ ಕಾರಣದಿಂದ ರಾಜ್ಯ ಸರ್ಕಾರದಿಂದ ಬೆಂಗಳೂರಿನ ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಸಾಧ್ಯವಿಲ್ಲ. ಹೀಗಾಗಿ ನಾನು ಕೇಂದ್ರ ಸರ್ಕಾರದ ಬಳಿ ಶಿಫಾರಸ್ಸು ಮಾಡಿದ್ದೇನೆ. ಕೇಂದ್ರ ಒಪ್ಪಿಕೊಳ್ಳಬೇಕು. ಮುಂದೇನಾಗುತ್ತದೆ ಎಂಬುದನ್ನು ನಿರೀಕ್ಷಿಸೋಣ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕ ವಿ. ಎಸ್. ಉಗ್ರಪ್ಪ ಅವರು ಪಠ್ಯದಲ್ಲಿ ವಾಲ್ಮೀಕಿ ಮತ್ತು

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡುವಂತೆ ಕೇಂದ್ರಕ್ಕೆ ಸಿಎಂ ‌ಸಿದ್ದರಾಮಯ್ಯ ಮನವಿ Read More »

RSS ಮುಖಂಡ ಪ್ರೊ. ಕೃ. ನರಹರಿ ನಿಧನ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕ, ಮಾಜಿ ಪರಿಷತ್ ಸದಸ್ಯ ಪ್ರೊ. ಕೃ. ನರಹರಿ(93) ಅವರು ನಿಧನರಾಗಿದ್ದಾರೆ‌. ಬೆಂಗಳೂರಿನಲ್ಲಿರುವ ತಮ್ಮ ಸ್ವ ಗೃಹದಲ್ಲಿ ವಯೋಸಹಜ ಸಮಸ್ಯೆಗಳಿಂದ ಅವರು ಇಹಲೋಕ ತ್ಯಜಿಸಿದ್ದಾರೆ. ಅವರು ಈ ಹಿಂದೆ RSS ನ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶಿಕ್ಷಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದವರು. ಅವರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೋರಾಟ ನಡೆಸಿ ಜೈಲು ವಾಸ ಅನುಭವಿಸಿದ್ದರು‌. ಶ್ರೀಯುತರ ನಿಧನಕ್ಕೆ

RSS ಮುಖಂಡ ಪ್ರೊ. ಕೃ. ನರಹರಿ ನಿಧನ Read More »

error: Content is protected !!
Scroll to Top