ರಾಜ್ಯ

ಧರ್ಮಸ್ಥಳ ಪ್ರಕರಣ: 6 ನೇ ಪಾಯಿಂಟ್‌ನಲ್ಲಿ ಕಳೇಬರದ ಕುರುಹು ಪತ್ತೆ

ಧರ್ಮಸ್ಥಳ: ದೇಶವನ್ನೇ ‌ತನ್ನೆಡೆ ಸೆಳೆದಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳು ಗುರುತಿಸಲಾದ 6 ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದು, ಇಲ್ಲಿ ಕಳೇಬರದ ಕುರುಹು ಸಿಕ್ಕಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ನಿನ್ನೆಯ ಕಾರ್ಯಾಚರಣೆಯಲ್ಲಿ ಪಾನ್ ಕಾರ್ಡ್, ಎಟಿಎಮ್ ಕಾರ್ಡ್, ರವಿಕೆ ‌ಸಿಕ್ಕಿರುವುದಾಗಿ ಅನಾಮಿಕ ದೂರುದಾರನ ಪರ ವಕೀಲ ಮಂಜುನಾಥ ಎನ್. ಪತ್ರ ಹಂಚಿಕೊಂಡಿದ್ದರು. ಆದರೆ ಈ ಬಗ್ಗೆ SIT ಅಧಿಕಾರಿಗಳು ಮಾತ್ರ ಖಚಿತ ಮಾಹಿತಿ ನೀಡಿರಲಿಲ್ಲ. ಆದರೆ ಇಂದು ದೂರುದಾರನ ಪರ […]

ಧರ್ಮಸ್ಥಳ ಪ್ರಕರಣ: 6 ನೇ ಪಾಯಿಂಟ್‌ನಲ್ಲಿ ಕಳೇಬರದ ಕುರುಹು ಪತ್ತೆ Read More »

ಕಾಫಿರ್​ಗಳ ಮೇಲೆ ದಾಳಿ, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ : ಭಯಾನಕವಾಗಿದೆ ಲೇಡಿ ಟೆರರಿಸ್ಟ್‌ ಚಟುವಟಿಕೆ

ಆನ್‌ಲೈನ್‌ ಮೂಲಕ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದ್ದ ಶಮಾ ಪರ್ವೀನ್‌ ಅನ್ಸಾರಿ ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಸೆರೆಯಾಗಿರುವ ಲೇಡಿ ಟೆರರಿಸ್ಟ್‌ ಶಮಾ ಪರ್ವೀನ್ ಅನ್ಸಾರಿ ಅಲ್‌ಖೈದಾ ಸಂಘಟನೆಯ ಸಿದ್ಧಾಂತ ಪ್ರಚಾರಕಳಾಗಿದ್ದಳು. ಕಾಫಿರರನ್ನು ಕೊಲ್ಲುವುದು, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ ಎಬ್ಬಿಸುವುದು, ಕೋಮು ಗಲಭೆ ಸೃಷ್ಟಿಸಿ ಅಶಾಂತಿ ಉಂಟು ಮಾಡುವುದು ಮುಂತಾದ ಕೆಲಸಗಳನ್ನು ಮಾಡಲು ಆಕೆಯನ್ನು ನೇಮಿಸಿಕೊಳ್ಳಲಾಗಿತ್ತು ಎಂಬ ಭಯಾನಕ ವಿಚಾರ ಹೊರಬಿದ್ದಿದೆ. ಅಲ್ ಖೈದಾ ಉಗ್ರ ಸಂಘಟನೆ ಪರ ಬೆಂಗಳೂರಿನಿಂದ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್

ಕಾಫಿರ್​ಗಳ ಮೇಲೆ ದಾಳಿ, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ : ಭಯಾನಕವಾಗಿದೆ ಲೇಡಿ ಟೆರರಿಸ್ಟ್‌ ಚಟುವಟಿಕೆ Read More »

ಧರ್ಮಸ್ಥಳ ಪ್ರಕರಣ : ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಜಟಾಪಟಿ

ಎಸ್‌ಐಟಿ, ಸರ್ಕಾರ ನಿಗೂಢ ಮೌನ; ಬಿಜೆಪಿಯಿಂದ ತೀವ್ರ ಆಕ್ಷೇಪ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ಬಗ್ಗೆ ಎಸ್‌ಐಟಿ ತನಿಖೆ ತೀವ್ರಗೊಳ್ಳುತ್ತಿರುವಂತೆಯೇ ಇತ್ತ ಸೋಷಿಯಲ್‌ ಮೀಡಿಯಾದಲ್ಲಿ ಪರ ಮತ್ತು ವಿರೋಧ ಚರ್ಚೆಯೂ ತೀವ್ರಗೊಂಡಿದೆ. ತನಿಖೆ ನಡೆಸುತ್ತಿರುವ ಎಸ್‌ಐಟಿ ಆಗಲಿ ಅಥವಾ ಸರ್ಕಾರವಾಗಲಿ ಪ್ರಕರಣದ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಇಷ್ಟರ ತನಕ ನೀಡಿಲ್ಲ. ಆದರೆ ಸೋಷಿಯಲ್‌ ಮೀಡಿಯಾ ಮತ್ತು ಕೆಲವು ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನಾನಾ ರೀತಿಯ ಸುದ್ದಿಗಳನ್ನು, ಚರ್ಚೆಗಳನ್ನು ಮತ್ತು ವೀಡಿಯೊಗಳನ್ನು

ಧರ್ಮಸ್ಥಳ ಪ್ರಕರಣ : ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಜಟಾಪಟಿ Read More »

ಆ.5ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸಹಿತ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ ಬೆಂಗಳೂರು : ಸುಮಾರು 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 5ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧಾರ ಮಾಡಿದ್ದು, ಈಗಾಗಲೇ ಮುಖ್ಯಮಂತ್ರಿ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ

ಆ.5ರಿಂದ ಕೆಎಸ್‌ಆರ್‌ಟಿಸಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ Read More »

ಕೆಟ್ಟು ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು

ಮಂಗಳೂರಿನಿಂದ ಚಿತ್ರದುರ್ಗದತ್ತ ಹೋಗುತ್ತಿದ್ದ ಬಸ್‌ ಶಿವಮೊಗ್ಗ: ಮಂಗಳೂರಿನಿಂದ ಚಿತ್ರದುರ್ಗದತ್ತ ಹೋಗುತ್ತಿದ್ದ ಖಾಸಗಿ ಬಸ್‌ ಶಿವಮೊಗ್ಗ ಸಮೀಪ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ವೇಳೆ ಸಂಭವಿಸಿದೆ. ಶಿವಮೊಗ್ಗ ತಾಲೂಕಿನ ಗಾಜನೂರು ಅಗ್ರಹಾರ ಬಳಿ ತೀರ್ಥಹಳ್ಳಿ-ಶಿವಮೊಗ್ಗ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಮಂಗಳೂರಿನಿಂದ ರಾತ್ರಿ ಹೊರಟಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ತಲುಪಬೇಕಿತ್ತು. ಬುಧವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಸ್ಸಿನ ನಿರ್ವಾಹಕ, ಹೊಸನಗರದ

ಕೆಟ್ಟು ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ : ಇಬ್ಬರು ಸಾವು Read More »

ಅಂಗನವಾಡಿ ಕಾರ್ಯಕರ್ತೆಯರಿಗಿಲ್ಲ ಚುನಾವಣೆ ಕರ್ತವ್ಯ

ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆ ಈಡೇರಿಸಿದ ಸರ್ಕಾರ ಬೆಂಗಳೂರು: ಅಂಗನವಾಡಿ ಕಾರ್ಯಕರ್ತರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಪ್ರಮುಖ ಬೇಡಿಕೆಯೊಂದು ಈಡೇರಿದಂತಾಗಿದೆ. ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರೊಂದಿಗೆ ಚರ್ಚೆ ನಡೆಸಿ

ಅಂಗನವಾಡಿ ಕಾರ್ಯಕರ್ತೆಯರಿಗಿಲ್ಲ ಚುನಾವಣೆ ಕರ್ತವ್ಯ Read More »

ಕೋಲಾರದ ಮಹಿಳೆಯಲ್ಲಿ ಜಗತ್ತಿನಲ್ಲಿ ಯಾರಲ್ಲೂ ಇಲ್ಲದ ವಿಶೇಷ ರಕ್ತದ ಗುಂಪು ಪತ್ತೆ

ಕ್ರಿಬ್‌ ರಕ್ತದ ಗುಂಪು ಹೊಂದಿರುವ ಜಗತ್ತಿನ ಮೊದಲ ವ್ಯಕ್ತಿ ಬೆಂಗಳೂರು : ಕೋಲಾರ ಜಿಲ್ಲೆಯ ಮಹಿಳೆಯೊಬ್ಬರು ಜಗತ್ತಿನಲ್ಲಿ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗಿದ್ದಾರೆ. ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ O Rh+ ಆಗಿತ್ತು. ಆದರೆ ವಿಶೇಷವೆಂದರೆ, ಲಭ್ಯವಿರುವ ಯಾವುದೇ O+

ಕೋಲಾರದ ಮಹಿಳೆಯಲ್ಲಿ ಜಗತ್ತಿನಲ್ಲಿ ಯಾರಲ್ಲೂ ಇಲ್ಲದ ವಿಶೇಷ ರಕ್ತದ ಗುಂಪು ಪತ್ತೆ Read More »

ಆ.4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ

ಚುನಾವಣೆ ಅಕ್ರಮದ ವಿರುದ್ಧ ಪ್ರತಿಭಟನೆ ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಸ್ಟ್ 4ರಂದು ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕೈ ನಾಯಕರು ಸಾಥ್ ನೀಡಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ

ಆ.4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ Read More »

ಮೈಸೂರಿನಲ್ಲಿ ವಶಪಡಿಸಿಕೊಂಡದ್ದು ಬರೋಬ್ಬರಿ 390 ಕೋಟಿ. ರೂ. ಡ್ರಗ್ಸ್‌

ಗ್ಯಾರೇಜ್‌ನ ಒಳಗಿತ್ತು ಮಾದಕ ವಸ್ತು ತಯಾರಿಸುವ ಕಾರ್ಖಾನೆ ಮುಂಬೈ: ಮುಂಬೈ ಪೊಲೀಸರು ಭಾನುವಾರ ಮೈಸೂರಿನ ಹೊರವಲಯದಲ್ಲಿ ವಶಪಡಿಸಿಕೊಂಡಿರುವ ಮಾದಕವಸ್ತು ಮೌಲ್ಯ ಬರೋಬ್ಬರಿ 390 ಕೋ. ರೂ.. ಭಾರಿ ಪ್ರಮಾಣದ ಡ್ರಗ್ಸ್‌ ವಶ ಪ್ರಕರಣದ ಸಂಪೂರ್ಣ ಚಿತ್ರಣವನ್ನು ದಾಳಿ ನಡೆಸಿದ್ದ ಮುಂಬೈ ಪೊಲೀಸರು ಸೋಮವಾರ ನೀಡಿದ್ದು ಒಟ್ಟು 390 ಕೋಟಿ ರೂ. ಮೌಲ್ಯದ 192 ಕೆ.ಜೆ. ಮೆಫೆಡ್ರೋನ್‌ ಡ್ರಗ್ಸ್‌ ವಶಪಡಿಸಿಕೊಂಡು 8 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಉಪ ಪೊಲೀಸ್ ಆಯುಕ್ತರ ದತ್ತಾ ನಲವಾಡೆ,

ಮೈಸೂರಿನಲ್ಲಿ ವಶಪಡಿಸಿಕೊಂಡದ್ದು ಬರೋಬ್ಬರಿ 390 ಕೋಟಿ. ರೂ. ಡ್ರಗ್ಸ್‌ Read More »

ಸರಿಯಾದ ಸಮಯದಲ್ಲಿ ಸಿಎಂ ಪಟ್ಟಕ್ಕೆ ಕಲ್ಲು ಹೊಡೆದ ಖರ್ಗೆ : ಅಶೋಕ್‌ ವ್ಯಂಗ್ಯ

ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಮಲ್ಲಿಕಾರ್ಜುನ ಖರ್ಗೆ ಪ್ರಯತ್ನಪಡುತ್ತಿದ್ದು, ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ. 1999ರಲ್ಲಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಖರ್ಗೆ ಬೇಸರ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಶೋಕ್‌, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ. ಸಿಎಂ ಕುರ್ಚಿಯಲ್ಲಿ ಖರ್ಗೆ ಕುಳಿತುಕೊಳ್ಳಲು ಪ್ರಯತ್ನಪಡುತ್ತಿದ್ದಾರೆ. ಎಸ್‌.ಎಂ. ಕೃಷ್ಣ ಅವರು ಸತ್ತ ಮೇಲೆ ಅವರ ಹೆಸರು ಹೇಳುತ್ತಾರೆ. ಎಸ್‌.ಎಂ. ಕೃಷ್ಣ ಸತ್ತ

ಸರಿಯಾದ ಸಮಯದಲ್ಲಿ ಸಿಎಂ ಪಟ್ಟಕ್ಕೆ ಕಲ್ಲು ಹೊಡೆದ ಖರ್ಗೆ : ಅಶೋಕ್‌ ವ್ಯಂಗ್ಯ Read More »

error: Content is protected !!
Scroll to Top