ರಾಜ್ಯ

ವೋಟ್ ಚೋರಿ ಕಹಾಂ ಹೈ? ಕಾಂಗ್ರೆಸ್ ಪಾರ್ಟಿ ಮೇ ಹೈ : ಅಶೋಕ್‌ ಲೇವಡಿ

ಶಾಸಕ ಸ್ಥಾನದಿಂದ ಎಸ್.ಎನ್.ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಂಡಿರುವ ಹಿನ್ನೆಲೆಯಲ್ಲಿ ಟೀಕೆ ಬೆಂಗಳೂರು: ಬಾಗೇಪಲ್ಲಿ ಶಾಸಕ ಸ್ಥಾನದಿಂದ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಬೆನ್ನಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅಶೋಕ್, ವೋಟ್ ಚೋರಿ ಕಹಾ ಹೈ? ಕಾಂಗ್ರೆಸ್ ಪಾರ್ಟಿ ಮೇ ಹೈ! ರಾಹುಲ್ ಗಾಂಧಿ ಈಗ ಬಾಗೇಪಲ್ಲಿಗೆ ಬಂದು ವೋಟ್ ಚೋರಿ, ಇಲೆಕ್ಷನ್ ಚೋರಿ ವಿರುದ್ಧ ಪ್ರತಿಭಟನೆ ಮಾಡ್ತಾರಾ? ಎಂದು […]

ವೋಟ್ ಚೋರಿ ಕಹಾಂ ಹೈ? ಕಾಂಗ್ರೆಸ್ ಪಾರ್ಟಿ ಮೇ ಹೈ : ಅಶೋಕ್‌ ಲೇವಡಿ Read More »

ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ

ಉದ್ದೇಶಪೂರ್ವಕವಾಗಿ ಕಲ್ಲು ತೂರುತ್ತಿರುವ ದುಷ್ಕರ್ಮಿಗಳು ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಹಿಂದೂಗಳ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆ ಬೆನ್ನಲ್ಲೇ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ

ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ : ಪರಿಸ್ಥಿತಿ ಉದ್ವಿಗ್ನ Read More »

ಜಿಎಸ್‌ಟಿ ವಂಚಿಸಿದ್ದಕ್ಕೆ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು

ಕಾಂಗ್ರೆಸ್‌ಗೆ ತೀವ್ರ ಹಿನ್ನಡೆಯಾದ ಹೈಕೋರ್ಟ್‌ ತೀರ್ಪು ಬೆಂಗಳೂರು: ಕಾಂಗ್ರೆಸ್‌ನ ಶ್ರೀಮಂತ ಶಾಸಕರಲ್ಲಿ ಒಬ್ಬರಾಗಿರುವ 300 ಕೊಟಿ. ರೂ.ಗೂ ಅಧಿಕ ಸಂಪತ್ತು ಹೊಂದಿರುವ ಬಾಗೇಪಲ್ಲಿಯ ಶಾಸಕ ಸುಬ್ಬಾರೆಡ್ಡಿಯವರ ಆಯ್ಕೆಯನ್ನು ಅಸಿಂಧುಗೊಳಿಸಿ ಹೈಕೋರ್ಟ್‌ ನಿನ್ನೆ ಮಹತ್ವದ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ

ಜಿಎಸ್‌ಟಿ ವಂಚಿಸಿದ್ದಕ್ಕೆ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು Read More »

ಪವಿತ್ರಾ ಗೌಡ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ತನ್ನ ಪುತ್ರಿಗೆ ಪರೀಕ್ಷೆ ಇರುವ ಹಿನ್ನೆಲೆ ತನಗೆ ಮಧ್ಯಂತರ ಜಾಮೀನು ನೀಡುವಂತೆ ಪವಿತ್ರಾ ಕೋರ್ಟ್‌ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ಅವರ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಆ ಮೂಲಕ ಜಾಮೀನಿಗೆ ಸಂಬಂಧಿಸಿದ ಹಾಗೆ ಪವಿತ್ರಾ ಗೌಡಗೆ ಮತ್ತೆ ನಿರಾಸೆಯಾಗಿದೆ. ಮಗಳಿಗೆ ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆ ತಮಗೆ 25 ದಿನಗಳ ಮಧ್ಯಂತರ ಜಾಮೀನು ನೀಡುವಂತೆ ಜಾಮೀನು ಅರ್ಜಿಯಲ್ಲಿ

ಪವಿತ್ರಾ ಗೌಡ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್ Read More »

ರಸ್ತೆ ಅವ್ಯವಸ್ತೆಗೆ ಬಲಿಯಾಯ್ತು 2 ವರ್ಷದ ಕಂದನ ಜೀವ

ಬೆಂಗಳೂರು: ರಸ್ತೆ ಅವ್ಯವಸ್ಥೆಯಿಂದಾಗಿ ಎರಡು ವರ್ಷದ ಕಂದಮ್ಮ ಮೃತಪಟ್ಟ ಘಟನೆ ಮಹದೇವಪುರದಲ್ಲಿ ‌ನಡೆದಿದೆ. ರಸ್ತೆ ದುರಸ್ತಿ ವಿಳಂಬದಿಂದಾಗಿ ಸಂಭವಿಸಿದ ಅಪಘಾತದಲ್ಲಿ ಈ ದುರ್ಘಟನೆ ನಡೆದಿದೆ. ಮಗು ಇದ್ದ ಬೈಕ್‌ಗೆ ಹಿಂದಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮಗು ಕೆಳಕ್ಕೆ ಬಿದ್ದು ಮೃತಪಟ್ಟಿದೆ. ಮೃತ ಮಗುವನ್ನು ತ್ರಿಶೂಲ್ ಎಂದು ಗುರುತಿಸಲಾಗಿದೆ. ಮಗು ಕೆಳಕ್ಕೆ ಬಿದ್ದಾಗ ಅದರ ತಲೆಯ ಮೇಲೆ ಕಾರು ಹರಿದು ಹೋಗಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಈ ಅಪಘಾತಕ್ಕೆ ಅರೆಪೂರ್ಣವಾದ ರಸ್ತೆಗಳ ಅವ್ಯವಸ್ಥೆ ಎಂದು

ರಸ್ತೆ ಅವ್ಯವಸ್ತೆಗೆ ಬಲಿಯಾಯ್ತು 2 ವರ್ಷದ ಕಂದನ ಜೀವ Read More »

ನಾಳೆ ಶಾಸಕರ ಫಾರಿನ್‌ ಟೂರ್‌ ಫಿಕ್ಸ್‌?

ಕುರ್ಚಿ ಕಿತ್ತಾಟದ ಮಧ್ಯೆ ಕೈಗೊಂಡ ವಿದೇಶ ಪ್ರವಾಸದಿಂದ ಸಂಚಲನ ಬೆಂಗಳೂರು: ಒಂದೆಡೆ ಮುಖ್ಯಮಂತ್ರಿ ಕುರ್ಚಿಗಾಗಿ ತೀವ್ರ ಕಚ್ಚಾಟ ನಡೆಯುತ್ತಿರುವಂತೆಯೇ ಕೆಲವು ಕಾಂಗ್ರೆಸ್‌ ಶಾಸಕರ ಫಾರಿನ್‌ ಟೂರ್‌ ಫಿಕ್ಸ್‌ ಆಗಿದೆ. ಕಿತ್ತಾಟ ತಾರಕಕ್ಕೇರಿರುವಾಗಲೇ ಶಾಸಕರು ಔಿದೇಶ ಪ್ರವಾಸಕ್ಕೆ ಮುಂದಾಗಿರುವುದು ಸಂಚಲನ ಸೃಷ್ಟಿಸಿದೆ. ಹೈಕಮಾಂಡ್‌ ಹೇಳಿಕೆಗೂ ಡೋಂಟ್‌ ಕೇರ್‌ ಎಂದಿರುವ ಕಾಂಗ್ರೆಸ್‌ ಶಾಸಕರು ಸರ್ಕಾರದ ಖರ್ಚಿನಲ್ಲೇ ವಿದೇಶ ಪ್ರವಾಸಕ್ಕೆ ಮುಂದಾಗಿದ್ದಾರೆ. ಸುಮಾರು 27 ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ವಿದೇಶ ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾ ಹಾಗೂ

ನಾಳೆ ಶಾಸಕರ ಫಾರಿನ್‌ ಟೂರ್‌ ಫಿಕ್ಸ್‌? Read More »

ಕೆಎಸ್‌ಆರ್‌ಟಿಸಿ ಲಗೇಜ್‌ ಶುಲ್ಕ ಹೆಚ್ಚಳ

ಇಂದಿನಿಂದಲೇ ಶೇ.15ರಷ್ಟು ಹೆಚ್ಚಿಸಿ ಆದೇಶ ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಸಾಗಿಸುವ ಲಗೇಜ್‌ ಶುಲ್ಕವನ್ನು ಹೆಚ್ಚಿಸಿದೆ. ನೂತನ ದರ ಇಂದಿನಿಂದಲೇ ಜಾರಿಗೆ ಬರುತ್ತಿದೆ. ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಸಂಸ್ಥೆ, ಪ್ರತಿಯೊಂದು ದರ ಪರಿಷ್ಕರಣೆಯ ನಂತರ ಲಗೇಜ್ ಶುಲ್ಕವನ್ನೂ ಮರುಪರಿಶೀಲನೆ ಮಾಡಲಾಗುತ್ತದೆ. ಇದು ಸಾಮಾನ್ಯ ಪ್ರಕ್ರಿಯೆ ಎಂದು ತಿಳಿಸಿದೆ. 2025ರ ಜನವರಿಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಆದರೆ ಲಗೇಜ್ ಶುಲ್ಕವನ್ನು ಆಗ ಪರಿಷ್ಕರಿಸಲಾಗಿರಲಿಲ್ಲ. ಈ ಹಿನ್ನೆಲೆ ಇದೀಗ

ಕೆಎಸ್‌ಆರ್‌ಟಿಸಿ ಲಗೇಜ್‌ ಶುಲ್ಕ ಹೆಚ್ಚಳ Read More »

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಕ್ಯಾಲಿಫೋರ್ನಿಯಾ : ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಭಾರತೀಯ ವಿದ್ಯಾರ್ಥಿಯ ಶವ ಪತ್ತೆಯಾಗಿರುವುದು ಅವರ ಕುಟುಂಬವನ್ನು ಮಾತ್ರವಲ್ಲದೆ ಇಡೀ ಭಾರತೀಯ ವಿದ್ಯಾರ್ಥಿ ಸಮುದಾಯವನ್ನು ಆಘಾತಗೊಳಿಸಿದೆ. ಕರ್ನಾಟಕದ 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಅಣು ಇಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಫೆಬ್ರವರಿ 9ರಂದು ಕ್ಯಾಂಪಸ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ ಅವರನ್ನು

ಅಮೆರಿಕದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ Read More »

ಮದುವೆಗೆ ಬಂದ ವಿವಾಹಿತ ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌

ಗಂಡನ ಸ್ನೇಹಿತನ ಮನೆಯಲ್ಲಿ ಎರಡು ದಿನದಿಂದ ಇದ್ದಾಕೆಯನ್ನು ಪತ್ತೆಹಚ್ಚಿದ ಪೊಲೀಸರು ಬೆಂಗಳೂರು: ಮದುವೆಗೆ ಬಂದಿದ್ದ ಮಹಿಳೆ ಕಾಣೆಯಾಗಿ ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾಳೆ. ಪತಿಯ ಸ್ನೇಹಿತನ ಮನೆಯಲ್ಲಿಯೇ ಮಹಿಳೆ ಸಿಕ್ಕಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು ಎನ್ನಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಕುಣಿಗಲ್​​ನ ಗೊಟ್ಟಿಕೆರೆಯಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ

ಮದುವೆಗೆ ಬಂದ ವಿವಾಹಿತ ಮಹಿಳೆ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌ Read More »

ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು

ಡಿವೈಡರ್‌ ಹಾರಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಕಾರು ಬೆಂಗಳೂರು: ನೆಲಮಂಗಲದ ನವಯುಗ ಟೋಲ್ ಸಮೀಪದ ಫ್ಲೈಓವರ್ ಬಳಿ ಡಿವೈಡರ್‌ಗೆ ಹಾರಿ ಕೆಎಸ್‌ಆರ್‌ಟಿಸಿ ಬಸ್‌ಗೆ ಟಾಟಾ ಇಂಡಿಕಾ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿದ್ದಾರೆ. ನಡುರಾತ್ರಿ 12 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದ್ದು, ಬಸ್ ಡ್ರೈವರ್, ಕಂಡೆಕ್ಟರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರನ್ನು ದೊಡ್ಡಬಳ್ಳಾಪುರದ ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಎಂದು ಗುರುತಿಸಲಾಗಿದೆ. ತುಮಕೂರು

ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಯುವಕರು ಸಾವು Read More »

error: Content is protected !!
Scroll to Top