ರಾಜ್ಯ

ಮೂಡಬಿದಿರೆಯಲ್ಲಿ ಶುಭಾರಂಭಗೊಂಡ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್

ಮೂಡುಬಿದಿರೆ: ಇಲ್ಲಿನ ಬಸ್‌ಸ್ಟ್ಯಾಂಡ್ ಹತ್ತಿರದ ನವಮಿ ಪ್ಲಾಜಾದಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್‌ನ ನೂತನ ಮಳಿಗೆಯು ಶುಭಾರಂಭಗೊಂಡಿದೆ. ಆಳ್ವಾಸ್ ಎಜುಕೇಷನ್ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ನೂತನ ಮಳಿಗೆ ಉದ್ಘಾಟಿಸಿ ಮಾತನಾಡಿ, ಸಂಸ್ಥೆಯ ಸ್ಥಾಪಕ ಜಿ.ಎಲ್. ಆಚಾರ್ಯರು ವೃತ್ತಿಯ ಜತೆ ಸಮಾಜದ ಪರಿಕಲ್ಪನೆಯನ್ನು ಬೆಳೆಸಿಕೊಂಡವರು. ಯಾವ ರೀತಿ ನಾವು ವೃತ್ತಿ ಮತ್ತು ನಮ್ಮ ಧರ್ಮ, ಬೇರೆ ಬೇರೆ ಚಟುವಟಿಕೆಗಳನ್ನು ಹೇಗೆ ಮಾಡಬೇಕು ಎಂದು ನಮಗೆಲ್ಲ ಕಿವಿಮಾತುಗಳನ್ನು ಹೇಳಿ ಕೊಟ್ಟವರು. ಅದೇ ದಿಕ್ಕಿನಲ್ಲಿ ಅವರ ಪುತ್ರ ಬಲರಾಮ ಆಚಾರ್ಯ ಮುನ್ನಡೆಯುತ್ತಿದ್ದಾರೆ. […]

ಮೂಡಬಿದಿರೆಯಲ್ಲಿ ಶುಭಾರಂಭಗೊಂಡ ಜಿ. ಎಲ್. ಆಚಾರ್ಯ ಜುವೆಲ್ಲರ್ಸ್ Read More »

ಸೀನಿಯರ್ ವಿದ್ಯಾರ್ಥಿಗಳಿಂದ ಜ್ಯೂನಿಯರ್ ವಿದ್ಯಾರ್ಥಿಯ ಅಪಹರಣ

ಬೆಂಗಳೂರು: ಜ್ಯೂನಿಯರ್ ವಿದ್ಯಾರ್ಥಿಯನ್ನು ಸೀನಿಯರ್ಸ್ ಕಿಡ್ನಾಪ್ ಮಾಡಿದ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ‌ನಡೆದಿದೆ. ಕಿಡ್ನಾಪ್ ಆದ ವಿದ್ಯಾರ್ಥಿಯನ್ನು ರಿಷಬ್ ಮೊಹಂತಿ(19) ಎಂದು ಗುರುತಿಸಲಾಗಿದ್ದು, ಈತ ಒಡಿಶಾದವನಾಗಿದ್ದಾನೆ. ನಗರದ ಪ್ರತಿಷ್ಟಿತ ಮ್ಯಾನೇಜ್ಮೆಂಟ್ ಕಾಲೇಜ್ ಒಂದರಲ್ಲಿ ಹಣಕ್ಕಾಗಿ ಈ ಘಟನೆ ನಡೆದಿದ್ದು, ಈ ಸಂಬಂಧ ಐವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ‌ಕೇರಳದ ಶೌರ್ಯ, ಜಯನಗರದ ‌ಸಯ್ಯದ್ ಬಿಲಾಲ್, ಬಿಹಾರದ ನಿಕುಂಜ್, ಮಹಾರಾಷ್ಟ್ರದ ಅದಿತಾ ರಾಕ್ಸಿ ಎಂದು ಗುರುತಿಸಲಾಗಿದೆ. ಬಂದಿತು ಪೈಕಿ ಮೂವರು ಕಿಡ್ನಾಪ್ ಆದ ವಿದ್ಯಾರ್ಥಿಯ ಹಾಸ್ಚೆಲ್‌ಮೇಟ್ಸ್ ಆಗಿದ್ದರು ಎಂದು

ಸೀನಿಯರ್ ವಿದ್ಯಾರ್ಥಿಗಳಿಂದ ಜ್ಯೂನಿಯರ್ ವಿದ್ಯಾರ್ಥಿಯ ಅಪಹರಣ Read More »

ಗರ್ಭಿಣಿ ಸಾವು: ಬಿಮ್ಸ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಳಗಾವಿ: ಗರ್ಭಿಣಿ ಮಹಿಳೆಯೊಬ್ಬರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತ ಮಹಿಳೆಯನ್ನು ತುರಮುರಿ ಗ್ರಾಮದ ಈರಮ್ಮ ‌ಶಿಗೀಹಳ್ಳಿ(21) ಎಂದು ಗುರುತಿಸಲಾಗಿದೆ. ಈರಮ್ಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದಾಗಿಂದಲೂ ಅಲ್ಲಿ ಅವರಿಗೆ ಸರಿಯಾದ ಚಿಕಿತ್ಸೆ ದೊರೆತಿಲ್ಲ. ಯಾರೂ ಅವರನ್ನು ಸರಿಯಾಗಿ ಪರೀಕ್ಷಿಸಿಲ್ಲ ಎಂದು ಕುಟುಂಬಸ್ಥರು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಇದರಿಂದ ಈರಮ್ಮ ಅವರು ಮೃತಪಟ್ಟಿದ್ದಾರೆ. ಹೊಟ್ಟೆಯಲ್ಲಿದ್ದ ಮಗು ಸಹ ಮೃತಪಟ್ಟಿದೆ. ಸಹಿ ಹಾಕಿ ಶವವನ್ನು ತೆಗೆದುಕೊಂಡು ಹೋಗುವಂತೆ

ಗರ್ಭಿಣಿ ಸಾವು: ಬಿಮ್ಸ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ Read More »

ವಿವಾಹಿತ ಮಹಿಳೆಯಿಂದ ಬ್ಲ್ಯಾಕ್‌ಮೇಲ್‌ : ಜಿಮ್‌ ಟ್ರೈನರ್‌ ಆತ್ಮಹತ್ಯೆ

ನೆಲಮಂಗಲ: ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದರು. ಜಿಮ್‌ನಲ್ಲಿ ದಿಲೀಪ್‌ಗೆ 42 ವರ್ಷದ ವಿವಾಹಿತ ಮಹಿಳೆಯ ಪರಿಚಯವಾಗಿತ್ತು. ಆಕೆಗೆ ಮದುವೆಯಾಗಿದ್ದರೂ ದಿಲೀಪ್ ಜೊತೆ ರಿಲೇಶನ್‌ಶಿಪ್‌ನಲ್ಲಿದ್ದಳು. ನಂತರ ಆಕೆ ಬ್ಲ್ಯಾಕ್‌ಮೇಲ್‌ ಮಾಡಲಾರಂಭಿಸಿದಳು ಎಂದು ದಿಲೀಪ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಯ ಬ್ಲ್ಯಾಕ್‌ಮೇಲ್‌ನಿಂದ

ವಿವಾಹಿತ ಮಹಿಳೆಯಿಂದ ಬ್ಲ್ಯಾಕ್‌ಮೇಲ್‌ : ಜಿಮ್‌ ಟ್ರೈನರ್‌ ಆತ್ಮಹತ್ಯೆ Read More »

ಪ್ರೀತಿಗಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಬೆಂಗಳೂರು: ಯುವತಿ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಯಲಹಂಕದ ನ್ಯೂಟೌನ್‌ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಅಭಿಷೇಕ್ (23) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ‌ಮುನ್ನ ಯುವಕ ಡೆತ್‌ನೋಟ್ ಬರೆದಿದ್ದಾನೆ. ಅದರಲ್ಲಿ ನನ್ನ ಹೆತ್ತವರು ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು. ಆದರೆ ನಾನು ಅವರಿಗೆ ಒಳ್ಳೆಯ ಮಗನಾಗಲಿಲ್ಲ. ಕ್ಷಮಿಸಿ ಮುಂದಿನ ಜನ್ಮದಲ್ಲಿ ನಾನು ನಿಮ್ಮೆಲ್ಲರ ಜೊತೆಗೆ ಸಂತೋಷವಾಗಿರುತ್ತೇನೆ ಎಂದು ಬರೆದಿದ್ದಾನೆ. ಹಾಗೆಯೇ ಎಲ್ಲರಿಗೂ ಹೇಳುತ್ತಿದ್ದೇನೆ ದಯವಿಟ್ಟು ಯಾರನ್ನೂ ಪ್ರೀತಿಸಬೇಡಿ. ಈಗಿನ ಕಾಲದಲ್ಲಿ ಎಲ್ಲರೂ ವಂಚಕರೇ.

ಪ್ರೀತಿಗಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಯಲ್ಲೇ ಬರ್ಬರ ಹತ್ಯೆ

ಮನಗೆ ನುಗ್ಗಿ ಯದ್ವಾತದ್ವಾ ಕಡಿದು ಕೊಚ್ಚಿ ಹಾಕಿದ ಹಂತಕರು ಧಾರವಾಡ: ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಘಟನೆಯಿಂದಾಗಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ದಿಗ್ಭ್ರಮೆಗೊಂಡಿದ್ದಾರೆ. ​ಧಾರವಾಡದ ಹಾಶ್ಮಿ ನಗರದಲ್ಲಿ ಫೈರೋಜ್‌ ಪಠಾಣ್‌ ವಾಸವಿದ್ದರು. ನಿನ್ನೆ ಅವರ ಮನೆಗೆ ನುಗ್ಗಿದ ನಾಲ್ವರು ಅಪರಿಚಿತ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಫೈರೋಜ್‌ ಸ್ಥಳದಲ್ಲೇ

ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್‌ ಪಠಾಣ್‌ ಮನೆಯಲ್ಲೇ ಬರ್ಬರ ಹತ್ಯೆ Read More »

ಬುಕ್‌ ಮಾಡಿದ ದಿನವೇ ಸಿಲಿಂಡರ್‌ ಪೂರೈಕೆ : ಸರ್ಕಾರ ಸೂಚನೆ

ಏಜೆನ್ಸಿಗಳ ಮುಂದೆ ಜನ ಕ್ಯೂ ನಿಲ್ಲದಂತೆ ನೋಡಿಕೊಳ್ಳಲು ಆದೇಶ ಬೆಂಗಳೂರು: ಗೃಹ ಬಳಕೆ ಗ್ಯಾಸ್‌ ಸಿಲಿಂಡರ್ 26 ದಿನಗಳ ಬಳಿಕ ಬುಕ್ ಮಾಡಿದರೆ ದಿನವೇ ವಿತರಿಸುವಂತೆ ಗ್ಯಾಸ್ ಏಜೆನ್ಸಿಗಳಿಗೆ ಸರ್ಕಾರ ಸೂಚಿಸಿದೆ. ಯಾವುದೇ ಕಾರಣಕ್ಕೂ ಗ್ಯಾಸ್ ಏಜೆನ್ಸಿಗಳ ಮುಂದೆ ಜನ ಕ್ಯೂ ನಿಲ್ಲದಂತೆ ನೋಡಿಕೊಳ್ಳಬೇಕೆಂದು ಏಜೆನ್ಸಿಗಳಿಗೆ ತಿಳಿಸಿದೆ. ಕಮರ್ಷಿಯಲ್ ಸಿಲಿಂಡರ್ ವಿಚಾರದಲ್ಲಿ ಸುಧಾರಣೆ ಆಗಿದ್ದು, ಆಟೋ ಗ್ಯಾಸ್ ಸಮಸ್ಯೆ ಇದೆ. ಕೇಂದ್ರಕ್ಕೆ ಪತ್ರ ಬರೆದರೂ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದೆ. ಸಚಿವರಾದ ಕೃಷ್ಣ ಬೈರೇಗೌಡ ಮತ್ತು ದಿನೇಶ್

ಬುಕ್‌ ಮಾಡಿದ ದಿನವೇ ಸಿಲಿಂಡರ್‌ ಪೂರೈಕೆ : ಸರ್ಕಾರ ಸೂಚನೆ Read More »

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ

ಶಿಕ್ಷಕ, ಗರ್ಭಪಾತ ಮಾಡಿದ ವೈದ್ಯೆ ವಿರುದ್ಧ ಪೋಕ್ಸೋ ಕೇಸ್‌ ಚಿತ್ರದುರ್ಗ: ಹದಿನಾರು ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಶಿಕ್ಷಕನೊಬ್ಬ ಶಾಲೆಯ ತರಗತಿ ಕೊಠಡಿಯಲ್ಲೇ ಅತ್ಯಾಚಾರ ಎಸಗಿ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಬಾಲಕಿ ಗರ್ಭಿಣಿಯಾದ ಬಳಿಕ ಗರ್ಭಪಾತ ಮಾಡಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಆರೋಪಿ ಶಿಕ್ಷಕ ಹಾಗೂ ಗರ್ಭಪಾತ ಮಾಡಿಸಿದ ವೈದ್ಯೆ ವಿರುದ್ಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಣಿತ ಶಿಕ್ಷಕ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕ Read More »

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ ರದ್ದು ವಿರುದ್ಧ ಸಲ್ಲಿಸಿದ್ದ ಪಿಐಎಲ್‌ ವಜಾ

ಸರ್ಕಾರಿ ಆದೇಶ ಲಗತ್ತಿಸದಿರುವುದಕ್ಕೆ ಅರ್ಜಿದಾರರಿಗೆ 1 ಲಕ್ಷ ರೂ. ದಂಡ ಬೆಂಗಳೂರು : ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಪಿಐಎಲ್‌ ಸಲ್ಲಿಸಿದವರಿಗೆ ಹಿನ್ನಡೆಯಾಗಿದೆ. ಬೆಂಗಳೂರಿನ ಎಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪರೀಕ್ಷೆಯ ಕೊನೆಯ ಹಂತದಲ್ಲಿ ಸರ್ಕಾರದ ತೆಗೆದುಕೊಂಡಿರುವ ಈ ನಿರ್ಧಾರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಆರೋಪಿಸಲಾಗಿತ್ತು. ಆದರೆ ಅರ್ಜಿದಾರರಿಗೆ ಹೈಕೋರ್ಟ್​​ ಈಗ ಬಿಗ್​​

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಅಂಕ ರದ್ದು ವಿರುದ್ಧ ಸಲ್ಲಿಸಿದ್ದ ಪಿಐಎಲ್‌ ವಜಾ Read More »

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಕಾರಣ : ಎಸ್‌ಐಟಿ ತನಿಖೆ ವರದಿ

ಆದಾಯ ಕರ ಇಲಾಖೆ ರೈಡ್‌ ನಡೆದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದ ಉದ್ಯಮಿ ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿ.ಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಮಾನಸಿಕ ಖಿನ್ನತೆಯಿಂದ ಸಿ.ಜೆ ರಾಯ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ತೀರ್ಮಾನಕ್ಕೆ ವಿಶೇಷ ತನಿಖಾ ತಂಡ ಬಂದಿದೆ. ಆದಾಯ ತೆರಿಗೆ ಅಧಿಕಾರಿಗಳ ಒತ್ತಡಕ್ಕೆ ರಾಯ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿತ್ತು. ಎಸ್‌ಐಟಿ ತನಿಖೆಯ ವೇಳೆ ಹಲವು ವಿಚಾರಗಳು ಬೆಳಕಿಗೆ

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಕಾರಣ : ಎಸ್‌ಐಟಿ ತನಿಖೆ ವರದಿ Read More »

error: Content is protected !!
Scroll to Top