ರಾಜ್ಯ

ಬಾಲ್ಯ ವಿವಾಹ ತಡೆದು, ಅಪ್ರಾಪ್ತೆಯನ್ನು ರಕ್ಷಿಸಿದ ಅಕ್ಕ ಪಡೆ

ಬೆಳಗಾವಿ: ನಗರದ ಮಂಟಮುರಿ ಕಾಲೊನಿಯಲ್ಲಿ ‌ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ತಡೆದು, ಅಪ್ರಾಪ್ತ ಬಾಲಕಿಯನ್ನು ಅಕ್ಕ ಪಡೆ ರಕ್ಷಣೆ ಮಾಡಿದೆ. ಅಕ್ಕ ಪಡೆ ಪಟ್ರೋಲಿಂಗ್ ನಡೆಯುತ್ತಿದ್ದ ವೇಳೆ ಇನ್ನೂ 18 ತುಂಬದ ‌ಯುವತಿಯ ಬಾಲ್ಯ ವಿವಾಹಕ್ಕೆ ಸಿದ್ಧತೆ ನಡೆಯುತ್ತಿರುವ ವಿಚಾರ ತಿಳಿದು ಬಂದಿದೆ. ಮಹಾರಾಷ್ಟ್ರದ ಪುಣೆಯ ಯುವಕನೊಬ್ಬನ ಜೊತೆಗೆ ಅಪ್ರಾಪ್ತೆಯ ಮದುವೆ ನಡೆಸಲು ಮನೆಯೊಂದರ ಮುಂದೆ ಮಂಟಪ ಹಾಕಲಾಗಿತ್ತು. ಅಕ್ಕ ಪಡೆಯ ಸಿಬ್ಬಂದಿ ಅನುಮಾನದಿಂದ ಅಲ್ಲಿ ಹೋಗಿ ವಿಚಾರಿಸಿದಾಗ ಅಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ವಿಷಯ ಬೆಳಕಿಗೆ ಬಂದಿದೆ. […]

ಬಾಲ್ಯ ವಿವಾಹ ತಡೆದು, ಅಪ್ರಾಪ್ತೆಯನ್ನು ರಕ್ಷಿಸಿದ ಅಕ್ಕ ಪಡೆ Read More »

ಬ್ರೈನ್ ಸ್ಟ್ರೋಕ್‌ಗೆ 25 ರ ಯುವತಿ ಸಾವು

ಬೆಂಗಳೂರು: ತಾಯಿ ಜೊತೆಗೆ ಮಾತನಾಡುತ್ತಿದ್ದ ಸಮಯದಲ್ಲೇ ಬ್ರೈನ್ ಸ್ಟ್ರೋಕ್‌ಗೆ ತುತ್ತಾಗಿ, ಚಿಕಿತ್ಸೆ ಫಲಕಾರಿಯಾಗದೆ ಯುವತಿಯೊಬ್ಬಳು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಶ್ವೇತಾ (25) ಮೃತ ದುರ್ದೈವಿ. ಎ. 25 ರಂದು ಕೆಲಸ ಮುಗಿಸಿ ಮನೆಗೆ ಬಂದ ಶ್ವೇತಾ ತಮ್ಮ ತಾಯಿಯ ಜೊತೆಗೆ ಮಾತನಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರು ಬ್ರೈನ್ ಸ್ಟ್ರೋಕ್ ಗೆ ತುತ್ತಾಗಿ ಕುಸಿದು ಬಿದ್ದಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ದಾರಿಯಲ್ಲೇ ಶ್ವೇತಾ ಕೋಮಾ‌ಗೆ ಜಾರಿದ್ದು, ಆಗಲೇ ಆಕೆಯ ಅಂಗಾಂಗ

ಬ್ರೈನ್ ಸ್ಟ್ರೋಕ್‌ಗೆ 25 ರ ಯುವತಿ ಸಾವು Read More »

ಸಂಬಳ ಕೊಡಲಿಲ್ಲ ಎಂದು ಚಿನ್ನಸ್ವಾಮಿ ಕ್ರೀಡಾಂಗಣದ ಸಿಸಿಟಿವಿ ಕೇಬಲ್‌ ಕಟ್‌ ಮಾಡಿದ ನೌಕರರು!

ಐಪಿಎಲ್‌ ಪಂದ್ಯದ ದಿನವೇ ಸಿಸಿಟಿವಿ ಬಂದ್‌ ಆಗಿ ಆತಂಕದ ಪರಿಸ್ಥಿತಿ ಬೆಂಗಳೂರು : ಕಳೆದ ಶುಕ್ರವಾರ ಆರ್​ಸಿಬಿ ಹಾಗೂ ಗುಜರಾತ್ ಟೈಟನ್ಸ್ ನಡುವಿನ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 240ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳ ಕೇಬಲ್ ಕಟ್ ಆಗಿ ಆತಂಕ ಮೂಡಿಸಿತ್ತು. ಇದು ವಿಧ್ವಂಸಕ ಕೃತ್ಯವಿರಬಹುದು ಎಂಬ ಅನುಮಾನದಲ್ಲಿ ತನಿಖೆ ಕೈಗೊಂಡಿದ್ದ ಕಬ್ಬನ್ ಪಾರ್ಕ್ ಪೊಲೀಸರಿಗೆ ಈಗ ತೀರಾ ವೈಯಕ್ತಿಕ ಕಾರಣ ತಿಳಿದುಬಂದಿದೆ. ಕ್ರೀಡಾಂಗಣದ ಭದ್ರತೆಗಾಗಿ ಅಳವಡಿಸಲಾಗಿದ್ದ ಸಿಸಿಟಿವಿ ನಿರ್ವಹಣೆಯ ಹೊಣೆಯನ್ನು ‘IVS ಡಿಜಿಟಲ್ ಸೊಲ್ಯೂಷನ್’ ಎಂಬ

ಸಂಬಳ ಕೊಡಲಿಲ್ಲ ಎಂದು ಚಿನ್ನಸ್ವಾಮಿ ಕ್ರೀಡಾಂಗಣದ ಸಿಸಿಟಿವಿ ಕೇಬಲ್‌ ಕಟ್‌ ಮಾಡಿದ ನೌಕರರು! Read More »

ಚುನಾವಣೆ ನಡೆದ 3 ವರ್ಷದ ಬಳಿಕ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ

ಹೈಕೋರ್ಟ್‌ ಆದೇಶದಂತೆ ಮೇ 2ರಂದು ನಡೆಯಲಿದೆ ಮತಗಳ ಮರುಎಣಿಕೆ ಬೆಂಗಳೂರು: ಶೃಂಗೇರಿ ವಿಧಾನಸಭೆ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಚುನಾವಣೆ ನಡೆದ ಮೂರು ವರ್ಷಗಳ ಬಳಿಕ ನಡೆಯಲಿರುವುದು ರಾಜ್ಯಾದ್ಯಂತ ಕುತೂಹಲ ಮೂಡಿಸಿದೆ. ಹೈಕೋರ್ಟ್ ನಿರ್ದೇಶನ ಹಿನ್ನೆಲೆಯಲ್ಲಿ ಶೃಂಗೇರಿ ವಿಧಾನಸಭಾ ಚುನಾವಣೆಯ ಅಂಚೆ ಮತಗಳ ಮರು ಎಣಿಕೆ ಕಾರ್ಯ ಮೇ 2ರಂದು ಐಡಿಎಸ್‌ಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕಾಲೇಜು ಆವರಣದಲ್ಲಿ ಮರುಎಣಿಕೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಮಗ್ರ ವ್ಯವಸ್ಥೆ ಮಾಡಿಕೊಂಡಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ

ಚುನಾವಣೆ ನಡೆದ 3 ವರ್ಷದ ಬಳಿಕ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ Read More »

ಶಾಲೆಗಳಲ್ಲಿ ಕನ್ನಡ ದಿನ ಪತ್ರಿಕೆ ಓದು ಕಡ್ಡಾಯ

ಪ್ರತಿದಿನ ಕನಿಷ್ಠ 10 ನಿಮಿಷ ಪತ್ರಿಕೆ ಓದಿಸಲು ಶಿಕ್ಷಣ ಇಲಾಖೆ ಆದೇಶ ಬೆಂಗಳೂರು : ರಾಜ್ಯಾದ್ಯಂತ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ 10 ನಿಮಿಷಗಳ ಕಾಲ ಕನ್ನಡ ದಿನ ಪತ್ರಿಕೆಗಳನ್ನು ಓದುವುದನ್ನು ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಪ್ರತಿದಿನ ಬೆಳಗಿನ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಪತ್ರಿಕೆ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ಇಲಾಖೆ ಸೂಚಿಸಿದೆ. ಇತ್ತೀಚಿನ

ಶಾಲೆಗಳಲ್ಲಿ ಕನ್ನಡ ದಿನ ಪತ್ರಿಕೆ ಓದು ಕಡ್ಡಾಯ Read More »

ಮದುವೆ ಮಂಟಪದಿಂದ 1 ಕೋ.ರೂ. ಆಭರಣ ಕಳವು

ಬೆಂಗಳೂರು : ಮದುವೆ ಮನೆಯಲ್ಲಿ ಕೈಚಳಕ ತೋರಿರುವ ಕಳ್ಳರು ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ವೈದ್ಯೆ ಡಾ.ಸಿರುವೆಲ್ಲ ಶ್ರೀದೇವಿ ಎಂಬವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲಿ ಕದ್ದಿರುವ ಪ್ರಕರಣ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಘಟನೆ ಸಂಬಂಧ ಡಾ.ಸಿರುವೆಲ್ಲ ಶ್ರೀದೇವಿ ಗುರುವಾರ ಮಧ್ಯಾಹ್ನ ದೂರು

ಮದುವೆ ಮಂಟಪದಿಂದ 1 ಕೋ.ರೂ. ಆಭರಣ ಕಳವು Read More »

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಾಸ್ತಾನು ಪೊಲೀಸ್ ವಶಕ್ಕೆ

ಕೊಪ್ಪಳ: ಜಮೀನೊಂದರ ಗೋದಾಮಿನಲ್ಲಿ ಅನ್ನ ಭಾಗ್ಯ ಯೋಜನೆಯ ಸುಮಾರು 150 – 200 ಟನ್ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಘಟನೆ ಕೂಕನಹಳ್ಳಿಯಲ್ಲಿ ನಡೆದಿದ್ದು, ಇದನ್ನು ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಳೆಪ್ಪ ಎಂಬವರ ಜಮೀನಿನ ಗೋದಾಮಿನಲ್ಲಿ ಅಕ್ರಮವಾಗಿ ಅನ್ನ ಭಾಗ್ಯ ಯೋಜನೆಯ ಅಕ್ಕಿ ದಾಸ್ತಾನಿಡಲಾಗಿದೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿರುವುದಾಗಿದೆ. ಸುಮಾರು ಸಾವಿರಕ್ಕೂ ಅಧಿಕ ಪಡಿತರ ತುಂಬಿದ ಗೋಣಿಗಳು ಪೊಲೀಸರ ವಶಕ್ಕೆ ಸಿಕ್ಕಿದೆ‌. ಆಹಾರ ಇಲಾಖೆಯ ಅಧಿಕಾರಗಳು ಸಹ ಸ್ಥಳದಲ್ಲಿ ಸಿಕ್ಕಿರುವ ಅಕ್ಕಿಯನ್ನು

ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ದಾಸ್ತಾನು ಪೊಲೀಸ್ ವಶಕ್ಕೆ Read More »

ಜನಿವಾರ ತೆಗೆಸಿದ ಪ್ರಕರಣ : ಕಾಲೇಜಿಗೆ 25 ಲ.ರೂ. ದಂಡ ಹಾಕಲು ಒತ್ತಾಯ

ಸಿಇಟಿ ಪರೀಕ್ಷೆ ವೇಳೆ ವಿದಾರ್ಥಿಗಳ ಜನಿವಾರ ತೆಗೆಸಿದ ಕಾಲೇಜು ಸಿಬ್ಬಂದಿ ಬೆಂಗಳೂರು: ಬೆಂಗಳೂರಿನ ಕಾಲೇಜೊಂದರಲ್ಲಿ ಸಿಇಟಿ ಪರೀಕ್ಷೆ ವೇಳೆ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತಪಿಸಿದ್ದು, ಮುಖ್ಯಮಂತ್ರಿಗೆ ಈ ಕುರಿತು ಪತ್ರ ಬರೆದು ಜನಿವಾರ ತೆಗೆಸಿದ ಕಾಲೇಜಿನ ಪರವಾನಗಿ ರದ್ದುಪಡಿಸುವಂತೆ ಆಗ್ರಹಿಸಿದೆ. ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕೆಂದು ಒತ್ತಾಯಿಸಿದೆ. ಸಿಇಟಿ ಪರೀಕ್ಷಾರ್ಥಿಗಳ ಜನಿವಾರ

ಜನಿವಾರ ತೆಗೆಸಿದ ಪ್ರಕರಣ : ಕಾಲೇಜಿಗೆ 25 ಲ.ರೂ. ದಂಡ ಹಾಕಲು ಒತ್ತಾಯ Read More »

ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ಸೈಡ್ ಹಾಕುವಂತೆ ಹೇಳಿದ್ದಕ್ಕೆ ‌ಸಹೋದರರ ಮೇಲೆ ಹಲ್ಲೆ: ದೂರು ದಾಖಲು

ಕಲಬುರ್ಗಿ: ರಸ್ತೆ ನಡುವೆ ನಿಂತಿದ್ದ ಅಟೋ‌ವನ್ನು ಪಕ್ಕಕ್ಕೆ ನಿಲ್ಲಿಸುವಂತೆ ಮನವಿ ಮಾಡಿದ ವಿಷಯದಲ್ಲಿ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ‌ನಡೆದ ಘಟನೆ ಭೀಮಳ್ಳಿಯಲ್ಲಿ ನಡೆದಿದೆ. ಚಿತ್ತಾಪುರದ ನಾಲವಾರ ‌ನಿವಾಸಿಗಳಾದ ತೋಟೇಂದ್ರ ಮತ್ತು ಸುನಿಲ್ ಎಂಬಿಬ್ಬರು ಸಹೋದರರು ತಮ್ಮ ಸಹೋದರಿಯ ಮನೆಯ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಸಹೋದರಿಯನ್ನು ‌ಮನೆಗೆ ಬಿಡುವ ಸಲುವಾಗಿ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರಸ್ತೆಯ ಮಧ್ಯೆ ಆಟೋ ಒಂದು ನಿಲ್ಲಿಸಲಾಗಿದ್ದು, ಅದನ್ನು ಪಕ್ಕಕ್ಕೆ ಹಾಕುವಂತೆ ಸಹೋದರರು ಮನವಿ ಮಾಡಿದ್ದಾರೆ. ಆದರೆ

ರಸ್ತೆ ಮಧ್ಯೆ ನಿಲ್ಲಿಸಿದ್ದ ಆಟೋ ಸೈಡ್ ಹಾಕುವಂತೆ ಹೇಳಿದ್ದಕ್ಕೆ ‌ಸಹೋದರರ ಮೇಲೆ ಹಲ್ಲೆ: ದೂರು ದಾಖಲು Read More »

ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್‌ ಪತ್ರ : ಹಿಂದೂ ಮುಖಂಡರ ಆಕ್ರೋಶ

ಆಳಂದದಲ್ಲಿ ಹಿಂದೂ ಮುಖಂಡರು, ಡಿಸಿ, ಎಸ್ಪಿ ಮೇಲೆ ಕಲ್ಲು ತೂರಿದ ಪ್ರಕರಣ ಬೆಂಗಳೂರು: ಕಲಬುರಗಿಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಸ್ಲಿಂ ಯುವಕರನ್ನು ಬಿಡುಗಡೆ ಮಾಡುವಂತೆ ಸ್ಪೀಕರ್‌ ಯು.ಟಿ. ಖಾದರ್ ಗೃಹ ಸಚಿವ ಜಿ.ಪರಮೇಶ್ವರ್​ಗೆ ಬರೆದಿರುವ ಪತ್ರ ತೀವ್ರ ವಿವಾದಕ್ಕೆ ಕಾರಣವಾಗಿದೆ. ಸ್ಪೀಕರ್ ಅವರ ಈ ನಡೆಯನ್ನು ಹಿಂದೂ ಸಂಘಟನೆಗಳು, ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿವೆ. ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು

ಕಲ್ಲು ತೂರಾಟ ಮಾಡಿದವರನ್ನು ಬಿಡುಗಡೆ ಮಾಡಲು ಖಾದರ್‌ ಪತ್ರ : ಹಿಂದೂ ಮುಖಂಡರ ಆಕ್ರೋಶ Read More »

error: Content is protected !!
Scroll to Top