ರಾಜ್ಯ

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ NSS ಶಿಬಿರ

ಮಂಗಳೂರು: ನಗರದ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ವಿಭಾಗವು 2025 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರವನ್ನು ಕಡಬ ತಾಲೂಕಿನ ದ.ಕ.ಜಿ. ಪಂ.ಹಿ ಪ್ರಾ. ಶಾಲೆ ಗೋಳಿಯಡ್ಕ, ರಂಜಿಲಾಡಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದ ಉದ್ಘಾಟನೆ ಸೆ. 23 ರಂದು ಅಪರಾಹ್ನ 2.30ಕ್ಕೆ ನಡೆಯಲಿದ್ದು, ಸಂಸ್ಥೆ ಮುಖ್ಯ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಅವರು ಆಶೀರ್ವಚನ ನೀಡಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆಯನ್ನು […]

ದ.ಕ.ಜಿ.ಪ.ಹಿ.ಪ್ರಾ. ಶಾಲೆ ಗೋಳಿಯಡ್ಕ ರೆಂಜಿಲಾಡಿಯಲ್ಲಿ ಬಿಜಿಎಸ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ NSS ಶಿಬಿರ Read More »

ಜನರ ಬೇಡಿಕೆ ಮನ್ನಿಸಿ ನಾಟಿ ಕೋಳಿಯನ್ನು ನೀಡುತ್ತಿದ್ದೇವೆ: ಶಾಸಕ ಅಶೋಕ್ ರೈ

ಪುತ್ತೂರು: ಇಷ್ಟು ವರ್ಷ ಪಶು ಸಂಗೋಪನಾ ಇಲಾಖೆಯಿಂದ ಗಿರಿರಾಜ ಕೋಳಿ ಮರಿಗಳನ್ನು ನೀಡಲಾಗುತ್ತಿತ್ತು ಆದರೆ ಈ ಬಾರಿ ಜಿಲ್ಲೆಯ ಜನರ ಬೇಡಿಕೆಯಂತೆ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡುತ್ತಿದ್ದೇವೆ, ಮಹಿಳೆಯರ ಸ್ವ ಉದ್ಯೋಗಕ್ಕೂ ಇದು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪಶು ಸಂಗೋಪನಾ ಇಲಾಖೆಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಅರ್ಹ 46 ಮಹಿಳೆಯರಿಗೆ ವಾರದ ಕೋಳಿ ಮರಿಗಳನ್ನು ವಿತರಿ ಮಾತನಾಡಿದರು.ಪ.ಪಂಗಡದ 40 ,ಸಾಮಾನ್ಯ 4 ಹಾಗೂ ಪಜಾತಿ ಕುಟುಂಬದ ಒಟ್ಟು 46 ಮಂದಿಗೆ ಮರಿಗಳನ್ನು

ಜನರ ಬೇಡಿಕೆ ಮನ್ನಿಸಿ ನಾಟಿ ಕೋಳಿಯನ್ನು ನೀಡುತ್ತಿದ್ದೇವೆ: ಶಾಸಕ ಅಶೋಕ್ ರೈ Read More »

ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ಆಗಮಿಸಿ ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌

ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕಾರ ಮೈಸೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಉದ್ಘಾಟಿಸಿದರು. ಈ ಮೂಲಕ ಮಲ್ಲಿಗೆ ಮುಡಿದು ಹಿಂದು ಸಂಪ್ರದಾಯದಂತೆ ದಸರಾ ಉದ್ಘಾಟಿಸುತ್ತೀರಾ ಎಂದು ತನಗೆ ಸವಾಲು ಹಾಕಿದವರಿಗೆ ದಿಟ್ಟ ಉತ್ತರ ನೀಡಿದರು. ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್‌ ಆರಂಭದಲ್ಲಿ

ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ಆಗಮಿಸಿ ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌ Read More »

ಇಂದಿನಿಂದ ಮನೆಮನೆಗೆ ಬರಲಿದ್ದಾರೆ ಜಾತಿ ಗಣತಿ ಸಮೀಕ್ಷೆದಾರರು

60 ಪ್ರಶ್ನಾವಳಿಗಳ ಮೂಲಕ 7 ಕೋಟಿ ಕನ್ನಡಿಗರ ಸಮಗ್ರ ಮಾಹಿತಿ ಸಂಗ್ರಹ ಬೆಂಗಳೂರು: ಭಾರಿ ವಿವಾದಕ್ಕೆ ಗುರಿಯಾಗಿರುವ ಸರ್ಕಾರದ ಜಾತಿ ಗಣತಿ (ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ) ಇಂದಿನಿಂದ ಪ್ರಾರಂಭವಾಗಲಿದೆ. ಹಲವು ಸಮುದಾಯಗಳ ವಿರೋಧ, ಅಸಮಾಧಾನ, ಆಕ್ಷೇಪ, ಆತಂಕ, ಗೊಂದಲದ ನಡುವೆಯೇ ಜಾತಿ ಗಣತಿ ರಾಜ್ಯಾದ್ಯಂತ ನಡೆಯಲಿದೆ. ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಾಡಿನ 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇಂದಿನಿಂದ ಅಕ್ಟೋಬರ್ 7ರವರೆಗೆ ಗಣತಿ ಮಾಡುವ ಶಿಕ್ಷಕರು

ಇಂದಿನಿಂದ ಮನೆಮನೆಗೆ ಬರಲಿದ್ದಾರೆ ಜಾತಿ ಗಣತಿ ಸಮೀಕ್ಷೆದಾರರು Read More »

ದಸರಾ ಉದ್ಘಾಟನೆಗೆ ಕ್ಷಣಗಣನೆ : ಬಾನು ಮುಷ್ತಾಕ್‌ಗೆ ಭಾರಿ ಭದ್ರತೆ

ಖಾಸಗಿ ಹೋಟೆಲಿನಲ್ಲಿರುವ ಬಾನು ಮುಸ್ತಾಕ್‌ಗೆ 3 ಕೆಎಸ್‌ಆರ್‌ಪಿ ತುಕಡಿಯ ಸೆಕ್ಯುರಿಟಿ ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ವಿರೋಧದ ನಡುವೆ ಉದ್ಘಾಟನೆಗಾಗಿ ಆಗಮಿಸಿರುವ ಸಾಹಿತಿ ಬಾನು ಮುಷ್ತಾಕ್‌ ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅವರಿಗೆ ಸರ್ಕಾರ ಬಿಗಿ ಭದ್ರತೆಯ ವ್ಯವಸ್ಥೆ ಮಾಡಿದೆ. ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ 9.30ಕ್ಕೆ ಹೋಟೆಲಿನಿಂದ ಬಾನು ಮುಷ್ತಾಕ್‌ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ. ಬಾನು ಮುಷ್ತಾಕ್‌ ಆಯ್ಕೆ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರ

ದಸರಾ ಉದ್ಘಾಟನೆಗೆ ಕ್ಷಣಗಣನೆ : ಬಾನು ಮುಷ್ತಾಕ್‌ಗೆ ಭಾರಿ ಭದ್ರತೆ Read More »

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌

ರಾಶಿ ರಾಶಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ತಿಮರೋಡಿಗೆ ವಿವರಿಸಿದ ಚಿನ್ನಯ್ಯ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಡುವಿನ ಭೇಟಿಯ ಹಳೆಯ ಒಂದು ವಿಡಿಯೋ ಶುಕ್ರವಾರ ವೈರಲ್‌ ಆದ ಬಳಿಕ ಈಗ 2 ಮತ್ತು 3ನೇ ವಿಡಿಯೋ ಶನಿವಾರ ಹೊರಗೆ ಬಂದು ವೈರಲ್‌ ಆಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌ Read More »

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ವಿವಾದಕ್ಕೀಡಾಗಿದ್ದ ಹಿಂದೂ ಜಾತಿಗಳ ಜೊತೆಗಿನ ಕ್ರಿಶ್ಚಿಯನ್‌ ಉಪಜಾತಿ ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಉಪಜಾತಿ ವರ್ಗದಲ್ಲಿ ‘ಕ್ರಿಶ್ಚಿಯನ್’ ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಈಗ ಅದನ್ನು ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ. ಕ್ರಿಶ್ಚಿಯನ್‌ ಉಪಜಾತಿ ತೆಗೆದು ಹಾಕಿದ್ದು ನಾನಲ್ಲ, ಬದಲಾಗಿ ಹಿಂದುಳಿದ ವರ್ಗಗಳ ಆಯೋಗ.

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ Read More »

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ

ಕರ್ನಾಟಕದಲ್ಲಿ ನಡೆದ ಎಲ್ಲ ವೋಟ್‌ ಚೋರಿ ಪ್ರಕರಣಗಳ ತನಿಖೆ ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್​ಐಟಿ) ರಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾಂಗ್ರೆಸ್ ಆರೋಪ ಮಾಡಿರುವಂತೆ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಎಲ್ಲ ‘ವೋಟ್ ಚೋರಿ’ (ಮತಗಳ್ಳತನ) ತನಿಖೆಗೆ ರಾಜ್ಯ

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ Read More »

ಜಾತಿ ಗಣತಿ ಪಕ್ಕಾ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಸೋಮವಾರದಿಂದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಬೆಂಗಳೂರು: ಹಲವು ಗೊಂದಲ, ವಿರೋಧಗಳು ಮತ್ತು ದಸರಾ ಹಬ್ಬದ ನಡುವೆ ಸೆ.22ರಿಂದ ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭವಾಗಲಿದೆ. ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, 16 ದಿನಗಳ ಕಾಲ ನಡೆಯುವ ಈ ಸಮೀಕ್ಷೆಗೆ ಸಾರ್ವಜನಿಕರ ಸಹಕಾರ ಕೋರಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮೋದನೆ

ಜಾತಿ ಗಣತಿ ಪಕ್ಕಾ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ Read More »

ಇಂದಿನಿಂದ ಶಾಲೆಗಳಿಗೆ ದಸರಾ ರಜೆ

ಅ.8ರಿಂದ ಎರಡನೇ ಅವಧಿಯ ತರಗತಿಗಳು ಆರಂಭ ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ದಸರಾ ರಜೆ ಆರಂಭವಾಗಿದ್ದು, ಅ.7ರವರೆಗೆ ರಜೆ ಇರಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ. ಇಲಾಖೆಯು 2025-26ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ರಜೆಗಳು ಮತ್ತು ಶಾಲಾ ಚಟುವಟಿಕೆಗಳ ಸಂಪೂರ್ಣ ಮಾರ್ಗದರ್ಶಿಯನ್ನು ಈಗಾಗಲೇ ಪ್ರಕಟಿಸಿದೆ. ಈ ಮಾರ್ಗದರ್ಶಿಯ ಪ್ರಕಾರ ದಸರಾ ರಜೆ ನೀಡಲಾಗಿದೆ. ಅ.8ರಿಂದ ಶಾಲೆಗಳ ಎರಡನೇ ಅವಧಿಯ ತರಗತಿಗಳು ಆರಂಭವಾಗಲಿದೆ. ಈ

ಇಂದಿನಿಂದ ಶಾಲೆಗಳಿಗೆ ದಸರಾ ರಜೆ Read More »

error: Content is protected !!
Scroll to Top