ರಾಜ್ಯ

ದೇವಾಲಯಗಳ ಸೇವಾ ಶುಲ್ಕ ದಿಢೀರ್‌ ಹೆಚ್ಚಿಸಿದ ಸರ್ಕಾರ

ಸುಬ್ರಹ್ಮಣ್ಯ, ಪುತ್ತೂರು ದೇವಸ್ಥಾನಗಳಲ್ಲಿ ಇನ್ನು ಮುಂದೆ ಸೇವೆಗಳು ದುಬಾರಿ ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೆ ಏರಿಕೆಯಾಗಿದೆ ಎಂಬ ವಿಚಾರ ನಿನ್ನೆಯಿಂದೀಚೆಗೆ ವೈರಲ್‌ ಆಗಿದೆ. ಇನ್ನು ಮುಂದೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ. ಸುಬ್ರಹ್ಮಣ್ಯ ಸೇರಿದಂತೆ ಎಲ್ಲ ಪ್ರಮುಖ ದೇವಸ್ಥಾನಗಳಲ್ಲಿ ನಿತ್ಯ ಭಕ್ತರು ಸಲ್ಲಿಸುವ ಸೇವೆಗಳ ಶುಲ್ಕ ಏರಿಸಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತರು ನಿತ್ಯ ಅರ್ಪಿಸುವ ಹೂವಿನ ಪೂಜೆಯ ದರವನ್ನು ಏಕಾಏಕಿ 100 ರೂ. ಏರಿಸಲಾಗಿದೆ. ಇದಕ್ಕೆ ಭಾರಿ […]

ದೇವಾಲಯಗಳ ಸೇವಾ ಶುಲ್ಕ ದಿಢೀರ್‌ ಹೆಚ್ಚಿಸಿದ ಸರ್ಕಾರ Read More »

ಕಾಂಗ್ರೆಸ್‌ ತಪ್ಪಿನಿಂದ ಗೆಲ್ಲಬೇಡಿ, ನಿಮ್ಮ ಸಾಮರ್ಥ್ಯದಿಂದ ಗೆಲ್ಲಿ : ಬಿಜೆಪಿಗೆ ಬಿ.ಎಲ್‌.ಸಂತೋಷ್‌ ಪಾಠ

ಚಿಂತನಾ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ ಸಂತೋಷ್‌ ಬೆಂಗಳೂರು: ಬಿಜೆಪಿ ಚಿಂತನಾ ಸಭೆಯ ಸಮಾರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರಾಜ್ಯ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ. ಹಾಗೆಯೇ ನಾಯಕತ್ವ ಗುಣ ಬಗ್ಗೆಯೂ ಹೇಳಿದ್ದಾರೆ. ಪಕ್ಷದಲ್ಲಿ ಆಂತರಿಕ ಸ್ಫರ್ಧೆ ಇರಬೇಕು. ಅದು ಅಶಿಸ್ತಿನ ಹಂತಕ್ಕೆ ಹೋಗಬಾರದು. ಹಿಂದೆ ಎಲ್ಲ ಹಂತದಲ್ಲೂ ತಪ್ಪಾಗಿದೆ ಹೌದು. ಅದನ್ನು ಸರಿಪಡಿಸಿಕೊಂಡು ಹೋಗಬೇಕು. ಆರೋಪ ಬೇಡ. ಪಕ್ಷದಲ್ಲಿ ನಾಯಕರು ಮಾತನಾಡುವಾಗ ಪರಸ್ಪರ ನೇರವಾಗಿಯೇ ಮಾತಾಡಿ.

ಕಾಂಗ್ರೆಸ್‌ ತಪ್ಪಿನಿಂದ ಗೆಲ್ಲಬೇಡಿ, ನಿಮ್ಮ ಸಾಮರ್ಥ್ಯದಿಂದ ಗೆಲ್ಲಿ : ಬಿಜೆಪಿಗೆ ಬಿ.ಎಲ್‌.ಸಂತೋಷ್‌ ಪಾಠ Read More »

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾ

ನವದೆಹಲಿ: ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ವಜಾ ಮಾಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿ ಸಹ ವಜಾ ಮಾಡಲಾಗಿದೆ. ಸರ್ಕಾರ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದನ್ನು ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇನ್ನಿತರರು ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದ್ದ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾ Read More »

ಸೆ.22ರಿಂದ ನಂದಿನಿ ತುಪ್ಪ, ಬೆಣ್ಣೆ, ಚೀಸ್‌ ಬೆಲೆ ಇಳಿಕೆ

ಜನರಿಗೆ ಸಿಗಲಿದೆ ಜಿಎಸ್‌ಟಿ ಇಳಿಕೆ ಲಾಭ ಬೆಂಗಳೂರು: ಜಿಎಸ್‌ಟಿ ಪರಿಷ್ಕರಣೆಯಾಗಿರುವ ಹಿನ್ನೆಲೆಯಲ್ಲಿ ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸುವ ನಿಟ್ಟಿನಲ್ಲಿ ಸೋಮವಾರದಿಂದ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು ಶೇ.12ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು ಶೇ.5ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ. ಪನ್ನಿರ್ ಮತ್ತು ಯುಎಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು ಶೇ.5ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ

ಸೆ.22ರಿಂದ ನಂದಿನಿ ತುಪ್ಪ, ಬೆಣ್ಣೆ, ಚೀಸ್‌ ಬೆಲೆ ಇಳಿಕೆ Read More »

ಮಂಗಳೂರು – ಮಸ್ಕತ್ AIR ವಿಮಾನ ರದ್ದು ಬೇಡ: ಕ್ಯಾ. ಬ್ರಿಜೇಶ್ ಚೌಟ ಮನವಿ

ಮಂಗಳೂರು: ಮಸ್ಕತ್ ಮತ್ತು ಮಂಗಳೂರು ನಡುವಿನ AIR ವಿಮಾನ ಹಾರಾಟವನ್ನು ರದ್ದು ಮಾಡುವ ಪ್ರಸ್ತಾಪ ಸರಿಯಾಗಿಲ್ಲ. ಈ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು AIR ಸಂಸ್ಥೆಗೆ ಸೂಚನೆ ನೀಡುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನಾಗರಿಕ ವಿಮಾನಯಾನ ಸಚಿವರಿಗೆ ಮನವಿ ಸಲ್ಲಿಸಿ ಪತ್ರ ಬರೆದಿದ್ದಾರೆ. ಒಮಾನ್‌ನಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಕರಾವಳಿ ಭಾಗದ ಜನರು ಉದ್ಯೋಗದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಎರಡೂ ರಾಷ್ಟ್ರಗಳ ನಡುವಿನ ವಿಮಾನ ಹಾರಾಟ ರದ್ದು ಮಾಡಿದರೆ ತೊಂದರೆಯಾಗುತ್ತದೆ. ಹಾಗಾಗಿ ಏಕಾಏಕಿ

ಮಂಗಳೂರು – ಮಸ್ಕತ್ AIR ವಿಮಾನ ರದ್ದು ಬೇಡ: ಕ್ಯಾ. ಬ್ರಿಜೇಶ್ ಚೌಟ ಮನವಿ Read More »

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಗೆ ನೊಟೀಸ್ ಹಚ್ಚಿದ ಪೊಲೀಸರು

ಬೆಳ್ತಂಗಡಿ: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಇರಿಸಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಪೊಲೀಸರು ನೊಟೀಸ್ ಹಚ್ಚಿ ಬಂದಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆರೋಪಿ ಚಿನ್ನಯ್ಯ‌ನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಿಮರೋಡಿಯ ಮನೆಗೆ SIT ಅಧಿಕಾರಿಗಳು ದಾಳಿ ನಡೆಸಿದ್ದರು. ಈ‌ವೇಳೆ ಅವರ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿತ್ತು. ಈ‌ ಪ್ರಕರಣವನ್ನು SIT ಪೊಲೀಸರು ಬೆಳ್ತಂಗಡಿ ಪೊಲೀಸರಿಗೆ ವರ್ಗಾವಣೆ ಮಾಡಿದ್ದರು. ಅದರಂತೆ ತಿಮರೋಡಿ ಮನೆಗೆ ಮಹಜರು ನಡೆಸುವ ಸಲುವಾಗಿ ಸೆ. 18 ರಂದು ಪೊಲೀಸರು

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಗೆ ನೊಟೀಸ್ ಹಚ್ಚಿದ ಪೊಲೀಸರು Read More »

ಆಳಂದ ಕ್ಷೇತ್ರದಲ್ಲಿ ಮತ ಅಕ್ರಮ: ಡಿ ಕೆ ಶಿವಕುಮಾರ್ ಏನಂದ್ರು ಗೊತ್ತಾ?

ಬೆಂಗಳೂರು: ಚುನಾವಣಾ ಆಯೋಗ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಅಸಹಕಾರ ತೋರಿರುವುದನ್ನು ‌ನೋಡಿದರೆ, ಇದರಲ್ಲಿ ಅವರೂ ಭಾಗವಹಿಸಿರುವ ಬಗ್ಗೆ ಸಂದೇಹ ಮೂಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ಎಲ್ಲಾ ರೀತಿಯ ಮಾಹಿತಿಗಳನ್ನು ನಮ್ಮಿಂದ ಪಡೆದು ಮಾಧ್ಯಮ ಹೇಳಿಕೆ ನೀಡಿದ್ದಾರೆ. ಆಳಂದ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಮತ ಅಕ್ರಮ ನಡೆದಿರುವುದಾಗಿ ಅವರು ಆರೋಪಿಸಿದ್ದಾರೆ. ಆಳಂದ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ

ಆಳಂದ ಕ್ಷೇತ್ರದಲ್ಲಿ ಮತ ಅಕ್ರಮ: ಡಿ ಕೆ ಶಿವಕುಮಾರ್ ಏನಂದ್ರು ಗೊತ್ತಾ? Read More »

ಕಂಬಳಕ್ಕೆ ಸಿಗಲಿದೆ ರಾಜ್ಯದ ಕ್ರೀಡೆ ಎಂಬ ಅಧಿಕೃತ ಮಾನ್ಯತೆ

ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಗೆ ಹಿರಿದಾದ ಸ್ಥಾನಮಾನ ಮಂಗಳೂರು: ಕರಾವಳಿಯ ಜನಪ್ರಿಯ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ರಾಜ್ಯ ಕ್ರೀಡೆಯಾಗಿ ಮಾನ್ಯತೆ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಪ್ರಕಟಣೆ ಹೊರಬೀಳಲಿದೆ. ಈ ಮೂಲಕ ಒಂದು ಕಾಲದಲ್ಲಿ ನಿಷೇಧದ ತೂಗುಕತ್ತಿಯಲ್ಲಿ ನೇತಾಡುತ್ತಿದ್ದ ಕಂಬಳ ಈಗ ರಾಜ್ಯದ ಅಧಿಕೃತ ಕ್ರೀಡೆ ಎಂಬ ಹಿರಿದಾದ ಮಾನ್ಯತೆ ಪಡೆದುಕೊಂಡು ಮೆರೆಯಲಿದೆ. ಏನು ಲಾಭ? ಕಂಬಳವನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ರಾಜ್ಯ ಕ್ರೀಡೆಯಾಗಿ ಘೋಷಿಸಿದರೆ ರಾಜ್ಯದ ಕ್ರೀಡಾ ಪ್ರಾಧಿಕಾರದಿಂದ ಉಳಿದ ಕ್ರೀಡೆಗಳಿಗೆ

ಕಂಬಳಕ್ಕೆ ಸಿಗಲಿದೆ ರಾಜ್ಯದ ಕ್ರೀಡೆ ಎಂಬ ಅಧಿಕೃತ ಮಾನ್ಯತೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ l ಪಾಣಾಜೆ ಹಾಲುತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ,ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಮಾತೆಯರಿಂದ ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟನೆಗೊಂಡಿತು. ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಶ್ರೀನಿವಾಸ ಕಲ್ಯಾಣೋತ್ಸವದ ಎರಡು ದಿವಸಗಳ ಕಾರ್ಯಕ್ರಮದ ಸಂಪೂರ್ಣ ವಿವರಣೆ ನೀಡಿ,ಆರ್ಲಪದವು ಜನತೆಯ ಸಂಪೂರ್ಣ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ l ಪಾಣಾಜೆ ಹಾಲುತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಜಾತಿ ಗಣತಿಗೆ ಸಚಿವರಿಂದಲೇ ವಿರೋಧ : ಸಭೆಯಲ್ಲಿ ತೀವ್ರ ಆಕ್ರೋಶ

ಹೊಸದಾಗಿ 331 ಜಾತಿಗಳ ಸೇರ್ಪಡೆಗೆ ಆಕ್ಷೇಪ ಬೆಂಗಳೂರು: ಜಾತಿ ಜನಗಣತಿ ಜೇನುಗೂಡಿಗೆ ಮತ್ತೆ ಕೈ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಂದಿನ ಸೋಮವಾರದಿಂದ ಆರಂಭವಾಗಬೇಕಿದ್ದ ಜಾತಿ ಜನಗಣತಿಗೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಕಾಂಗ್ರೆಸ್‌ ಸಚಿವರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸೋಮವಾರದಿಂದ ಜಾತಿ ಗಣತಿ ಪ್ರಾರಂಭವಾಗುವುದು ಅನುಮಾನ ಎನ್ನಲಾಗಿದೆ. ಸಂಪುಟ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವುದರಿಂದ ಸಚಿವರ ವಿಶೇಷ ಸಭೆ ನಡೆಸಲಾಯಿತು. ಅಲ್ಲೂ ಆಕ್ರೋಶ ಶಮನವಾಗಿಲ್ಲ. ಲಿಂಗಾಯತ ಸಮುದಾಯದ ಸಚಿವರು ಜಾತಿ ಗಣತಿ ಬಗ್ಗೆ

ಜಾತಿ ಗಣತಿಗೆ ಸಚಿವರಿಂದಲೇ ವಿರೋಧ : ಸಭೆಯಲ್ಲಿ ತೀವ್ರ ಆಕ್ರೋಶ Read More »

error: Content is protected !!
Scroll to Top