ರಾಜ್ಯ

ಸ್ಟೇಟ್‌ ಬ್ಯಾಂಕ್‌ನಿಂದ 50 ಕೆಜಿ ಚಿನ್ನ, 8 ಕೋ. ರೂ. ನಗದು ದರೋಡೆ

ಮ್ಯಾನೇಜರ್‌, ಕ್ಯಾಶಿಯರ್‌ ಕೈಕಾಲು ಕಟ್ಟಿ ಹಾಕಿ ದರೋಡೆ ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಮನಗೂಳಿ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಚಡಚಣ ಪಟ್ಟಣದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬ್ಯಾಂಕ್‌ನಲ್ಲಿ ದರೋಡೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್, ಮಾರಕಾಸ್ತ್ರಗಳನ್ನು ತೋರಿಸಿ ಬ್ಯಾಂಕ್​ನ ಮ್ಯಾನೇಜರ್‌, ಕ್ಯಾಶಿಯರ್‌, ಸಿಬ್ಬಂದಿಯ ಕೈಕಾಲುಗಳನ್ನು ಕಟ್ಟಿಹಾಕಿ, ಅವರನ್ನು ರೂಂನಲ್ಲಿ ಕೂಡಿ ಹಾಕಿ ದರೋಡೆ […]

ಸ್ಟೇಟ್‌ ಬ್ಯಾಂಕ್‌ನಿಂದ 50 ಕೆಜಿ ಚಿನ್ನ, 8 ಕೋ. ರೂ. ನಗದು ದರೋಡೆ Read More »

ಅ. 17: ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ

ಮಡಿಕೇರಿ: ಕಾವೇರಿ ನದಿ ಹುಟ್ಟಿದ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಧ್ಯಾಹ್ನ 1.44 ಕ್ಕೆ ತೀರ್ಥೋದ್ಭವ ನಡೆಯಲಿದೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮಾಹಿತಿ ನೀಡಿದೆ. ಅ. 17 ರಂದು ಮಧ್ಯಾಹ್ನದ ಮಕರ ಲಗ್ನ ಶುಭ ಮುಹೂರ್ತದಲ್ಲಿ ತೀರ್ಥ ರೂಪದಲ್ಲಿ ಕಾವೇರಿ ಮಾತೆ ಆಶೀರ್ವಾದ ನೀಡಲಿದ್ದಾಳೆ. ಕಾವೇರಿ ಜಾತ್ರೆಗೆ ಸಂಬಂಧಿಸಿದಂತೆ ಸೆ. 26ರ ಬೆಳಗ್ಗೆ 9:31ಕ್ಕೆ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವುದು, ಅಕ್ಟೋಬರ್ 4ರ ಬೆಳಗ್ಗೆ 8:33ರ ತುಲಾ ಲಗ್ನದಲ್ಲಿ ಆಜ್ಞಾ ಮುಹೂರ್ತ,

ಅ. 17: ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ Read More »

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬಂಗ್ಲೆಗುಡ್ಡದಲ್ಲಿ ‌ವಾಮಾಚಾರ?

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ದೊರೆಯುತ್ತಿದ್ದು, ಬಂಗ್ಲೆಗುಡ್ಡದ ರಹಸ್ಯಗಳು SIT ಅಧಿಕಾರಿಗಳಿಗೆ ಕಗ್ಗಂಟಾಗಿ ಪರಿಣಮಿಸಿದೆ ಎನ್ನಬಹುದು. ತಲೆಬುರುಡೆಗಳ ಮೂಲವನ್ನು ತಿಳಿಯಲು ಹೋದ ಅಧಿಕಾರಿಗಳಿಗೆ ಸ್ಥಳದಲ್ಲಿ ಮಾನವನ ದೇಹದ ಅವಶೇಷಗಳು, ಮಗುವಿನದ್ದು ಎನ್ನಲಾಗುವ ಮೂಳೆಗಳು, ವಾಮಾಚಾರ ನಡೆದಿದೆ ಎನ್ನುವಂತೆ ಅಲ್ಲಿ ದೊರೆತ ಕೆಲವು ಪರಿಕರಗಳು ಶಾಕ್ ನೀಡಿವೆ. ಸದ್ಯ ಅದೇ ಆಯಾಮದಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿರುವುದು ಕಂಡು ಬಂದಿದೆ. ಸುತ್ತಮುತ್ತಲ ಪರಿಸರದಲ್ಲಿ ವಾಮಾಚಾರ ಮಾಡುವವರು ಇದ್ದಾರೆಯೇ ಎನ್ನುವ ಬಗೆಗೂ ಅಧಿಕಾರಿಗಳು ತನಿಖೆ ಆರಂಭ ಮಾಡಿದ್ದಾರೆ. ಕೆಲವು ದಿನಗಳ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಬಂಗ್ಲೆಗುಡ್ಡದಲ್ಲಿ ‌ವಾಮಾಚಾರ? Read More »

ಮೂವರು ಗೋಕಳ್ಳರ ಬಂಧನ

ಮಡಿಕೇರಿ: ಈದ್ ಹಬ್ಬದ ಸಂದರ್ಭದಲ್ಲಿ ಗೋವನ್ನು ಕಳ್ಳತನ ಮಾಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೊಂಡೃಗೇರಿ ಗ್ರಾಮದ ಆಶಿಕ್, ಶಾಹಿದ್ ಮತ್ತು ಹಾರಿಸ್ ಎಂದು ಗುರುತಿಸಲಾಗಿದೆ. ಮೈತಾಡಿ ಗ್ರಾಮದ ಬೊಳ್ಳಪ್ಪಂಡ ಎಂ. ಭೀಮಯ್ಯ ಎಂಬವರಿಗೆ ‌ಸೇರಿದ ಹಸುವನ್ನು ಆರೋಪಿಗಳು ಕಳ್ಳತನ ಮಾಡಿದ್ದಾರೆ. ಈ ಸಂಬಂಧ ನೀಡಲಾದ ದೂರಿನನ್ವಯ ಪೊಲೀಸರು ಆರೋಪಿಗಳನ್ನು ಬಂಧಿಸಿರುವುದಾಗಿದೆ. ಹಾಗೆಯೇ ಆರೋಪಿಗಳಿಂದ 2600 ರೂ. ಗಳನ್ನು ವಶಕ್ಕೆ ಪಡೆದಿದ್ದಾರೆ.

ಮೂವರು ಗೋಕಳ್ಳರ ಬಂಧನ Read More »

ಆಶಾ ಕಾರ್ಯಕರ್ತೆಯರಿಂದ ಜಾತಿ ಸಮೀಕ್ಷೆ ಬಹಿಷ್ಕಾರ

ಗ್ಯಾರಂಟಿ ಸಮೀಕ್ಷೆ ಗೌರವ ಧನ ಕೊಡದಿರುವ ಹಿನ್ನೆಲೆಯಲ್ಲಿ ನಿರ್ಧಾರ ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ-2025ರಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ಗ್ಯಾರಂಟಿ ಯೋಜನೆ ಸೇರಿದಂತೆ ಈ ಹಿಂದೆ ನಡೆಸಿದ ಸಮೀಕ್ಷೆಗಳ ಹಣವನ್ನು ರಾಜ್ಯ ಸರ್ಕಾರ ಇನ್ನೂ ಪಾವತಿ ಮಾಡಿಲ್ಲ. ಹೀಗಾಗಿ ಸಮೀಕ್ಷೆ ಕಾರ್ಯದಲ್ಲಿ ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. ಸಮೀಕ್ಷೆ ವೇಳೆ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಸಮೀಕ್ಷೆಯ ನಮೂನೆಯನ್ನು ವಿತರಿಸುವುದು ಸೇರಿ

ಆಶಾ ಕಾರ್ಯಕರ್ತೆಯರಿಂದ ಜಾತಿ ಸಮೀಕ್ಷೆ ಬಹಿಷ್ಕಾರ Read More »

14 ಸೈಟ್‌ ನುಂಗಿದವರು ನನಗೆ ಬುದ್ಧಿ ಹೇಳಬೇಡಿ : ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ತಿರುಗೇಟು

ದಸರಾ ಉದ್ಘಾಟನೆ ವಿವಾದ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತಿನ ಮಾತಿನ ಫೈಟ್‌ ಬೆಂಗಳೂರು: ದಸರಾ ಹಬ್ಬವನ್ನು ಉದ್ಘಾಟಿಸಲು ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಯನ್ನು ಪ್ರಶ್ನಿಸಿದ್ದ ಪಿಐಎಲ್‌ ಅನ್ನು ಹೈಕೋರ್ಟ್‌ ವಜಾಗೊಳಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಂಸದ ಪ್ರತಾಪ್‌ ಸಿಂಹ ನಡುವೆ ಮತ್ತೊಂದು ಸುತ್ತಿನ ವಾಗ್ಯುದ್ಧ ಪ್ರಾರಂಭವಾಗಿದೆ. ಪ್ರತಾಪ್‌ ಸಿಂಹ ಅವರನ್ನು ಸಿದ್ದರಾಮಯ್ಯ ನಿನ್ನೆ ಮೂರ್ಖ ಎಂದು ಕರೆದಿದ್ದು, ಇದಕ್ಕೆ ತಿರುಗೇಟು ನೀಡಿರುವ ಪ್ರತಾಪ್‌ ಸಿಂಹ 14 ಸೈಟ್ ನುಂಗಿದ ನೀವು ನನಗೆ

14 ಸೈಟ್‌ ನುಂಗಿದವರು ನನಗೆ ಬುದ್ಧಿ ಹೇಳಬೇಡಿ : ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ತಿರುಗೇಟು Read More »

ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು

ಮೂಡುಬಿದ್ರೆ: ಸಿಎಂ ‌ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪದಲ್ಲಿ ಮೂಡುಬಿದ್ರೆ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ರಾಷ್ಟ್ರ ಭಕ್ತ ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ. ಮಹೇಶ್ ವಿಕ್ರಂ ಹೆಗ್ಡೆ ಅವರ ಪರ ವಾದಿಸಿದ್ದ ‌ವಕೀಲ ಶರತ್ ಶೆಟ್ಟಿ ವಾದಿಸಿದ್ದು, ಜಾಮೀನು ಅರ್ಜಿಯ ವಿಚಾರಣೆ ಸಹ ನಡೆಸಿತ್ತು. ಸದ್ಯ ಅವರಿಗೆ ಜಾಮೀನು ನೀಡಿ ನ್ಯಾಯಾಲಯ ಆದೇಶ ನೀಡಿದೆ.

ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ಜಾಮೀನು ಮಂಜೂರು Read More »

ಪ್ರಚೋದನಾತ್ಮಕ ಭಾಷಣದ ಆರೋಪದಲ್ಲಿ ಯತ್ನಾಳ್ ವಿರುದ್ಧ ಕೇಸು ದಾಖಲು

ಬೆಂಗಳೂರು: ಗಣೇಶೋತ್ಸವ ಶೋಭಾಯಾತ್ರೆಯಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ತುಮಕೂರಿನಲ್ಲಿ ನಡೆದ ಗಣೇಶೋತ್ಸವದಲ್ಲಿ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಮದ್ದೂರಿನಲ್ಲಿಯೂ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡಿದ್ದರು ಎಂಬ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಅವರು ತುಮಕೂರಿನಲ್ಲಿ ಶನಿವಾರ ನಡೆದ ಗಣೇಶ ವಿಸರ್ಜನಾ ಯಾತ್ರೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಅನ್ಯ ಕೋಮಿನ ಜನರ ಭಾವನೆಗಳಿಗೆ ಧಕ್ಕೆಯಾಗುವಂತೆ ಮಾತನಾಡಿದ್ದಾಗಿ ಪೊಲೀಸ್ ಸಿಬ್ಬಂದಿ ರಘುನಾಥ್ ದೂರು ನೀಡಿರುವುದಾಗಿದೆ. ಈ

ಪ್ರಚೋದನಾತ್ಮಕ ಭಾಷಣದ ಆರೋಪದಲ್ಲಿ ಯತ್ನಾಳ್ ವಿರುದ್ಧ ಕೇಸು ದಾಖಲು Read More »

ಹಿಂದೂ ಜಾತಿಗಳೊಂದಿಗೆ ಕ್ರಿಶ್ಚಿಯನ್‌ ಸೇರ್ಪಡೆ : ಮತಾಂತರಕ್ಕೆ ಸರ್ಕಾರದಿಂದಲೇ ಕುಮ್ಮಕ್ಕು ಎಂದ ವಿಜಯೇಂದ್ರ

ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಮಾಹಿತಿ ಸಂಗ್ರಹ ನೆಪದಲ್ಲಿ ಸಿದ್ದರಾಮಯ್ಯ ಹೊಸ ಕುತಂತ್ರ ಬೆಂಗಳೂರು: ಹಿಂದೂ ಧರ್ಮದ ಜಾತಿಯ ಹೆಸರುಗಳೊಂದಿಗೆ ‘ಕ್ರಿಶ್ಚಿಯನ್’ ಸೇರಿಸಿರುವ ಸರ್ಕಾರದ ಕ್ರಮ ಹೊಸ ವಿವಾದವನ್ನು ಸೃಷ್ಟಿ ಮಾಡಿದೆ. ಕ್ರಿಶ್ಚಿಯನ್‌ ಸೇರ್ಪಡೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ಅಪಪ್ರಚಾರ ನಡೆಸುವಂತೆ ಕುಮ್ಮಕ್ಕು ನೀಡುತ್ತಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಹೆಜ್ಜೆ ಮುಂದೆ

ಹಿಂದೂ ಜಾತಿಗಳೊಂದಿಗೆ ಕ್ರಿಶ್ಚಿಯನ್‌ ಸೇರ್ಪಡೆ : ಮತಾಂತರಕ್ಕೆ ಸರ್ಕಾರದಿಂದಲೇ ಕುಮ್ಮಕ್ಕು ಎಂದ ವಿಜಯೇಂದ್ರ Read More »

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ

ವಿಟ್ಲ ವಲಯದ ವಿಟ್ಲ ಮೂಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡುತ್ತಾರು ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಯೋಜನಾಧಿಕಾರಿ ಸುರೇಶ್ ಗೌಡ ಮಾತನಾಡಿ ಯೋಜನೆ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅತಿಥಿಯಾಗಿ ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಮಾತನಾಡಿ ಯೋಜನೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಷ್ಣುಮೂರ್ತಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ Read More »

error: Content is protected !!
Scroll to Top