ರಾಜ್ಯ

ಈಗ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಗ್ಯಾರಂಟಿ : ಬಿ.ವೈ. ವಿಜಯೇಂದ್ರ | ನನ್ನನ್ನೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸುವ ವಿಶ್ವಾಸವಿದೆ | ನನ್ನ ಕೆಲಸದ ಮೇಲೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿ ಇದೆ.

ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಧಾನಸಭಾ ಚುನಾವಣೆ ನಡೆದರೂ ಅದರಲ್ಲಿ ಬಿಜೆಪಿಗೆ 130 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ವರೆಗೆ ತಾನು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. ಕೇಂದ್ರ ಸರ್ಕಾರದ ಜೊತೆಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸುವುದಾಗಿ ಹೇಳಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಪಕ್ಷ ಸಂಘಟನೆಯ ದೃಷ್ಟಿಯಿಂದ ಕೆಲಸ ಮಾಡಿರುವುದಾಗಿಯೂ ಅವರು ನುಡಿದಿದ್ದಾರೆ. ಬಿಜೆಪಿಯ ಕಾರ್ಯಕರ್ತರು ಮತ್ತು ಹೈಕಮಾಂಡ್‌ಗೆ ನನ್ನ ಕಾರ್ಯ ವೈಖರಿಯ ಬಗ್ಗೆ ತೃಪ್ತಿ […]

ಈಗ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಗ್ಯಾರಂಟಿ : ಬಿ.ವೈ. ವಿಜಯೇಂದ್ರ | ನನ್ನನ್ನೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸುವ ವಿಶ್ವಾಸವಿದೆ | ನನ್ನ ಕೆಲಸದ ಮೇಲೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿ ಇದೆ. Read More »

ಎತ್ತಿನಹೊಳೆ ಯೋಜನೆಗೆ ಬಯಲುಸೀಮೆಯಲ್ಲೂ ವಿರೋಧ

ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆಗಿಳಿದ ದೊಡ್ಡಬಳ್ಳಾಪುರದ ಜನರು ಬೆಂಗಳೂರು: ನೇತ್ರಾವತಿಯ ಉಪನದಿಯಾದ ಎತ್ತಿನಹೊಳೆಯ ಹರಿವನ್ನು ತಿರುಗಿಸಿ ಬಯಲುಸೀಮೆಯ ಜಿಲ್ಲೆಗಳಿಗೆ ನೀರು ಹರಿಸುವ ಎತ್ತಿನಹೊಳೆ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭದಿಂದಲೂ ವಿರೋಧ ಇದೆ. ಆದರೂ ಸರ್ಕಾರ ಈ ಯೋಜನೆಯನ್ನು ಕಾರ್ಯಗತಗೊಳಿಸುತ್ತಿದ್ದು, ಈಗ ಇದಕ್ಕೆ ಬಯಲುಸೀಮೆಯಲ್ಲೂ ವಿರೋಧ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೆನಹಳ್ಳಿ ಬಳಿ ಎತ್ತಿನಹೊಳೆಯ ನೀರು ಸಂಗ್ರಹಿಸುವ ಸಲುವಾಗಿ ಬೃಹತ್‌ ಅಣೆಕಟ್ಟು ನಿರ್ಮಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ಲಕ್ಕೆನಹಳ್ಳಿ ಬಳಿ‌ ಎತ್ತಿನಹೊಳೆ‌

ಎತ್ತಿನಹೊಳೆ ಯೋಜನೆಗೆ ಬಯಲುಸೀಮೆಯಲ್ಲೂ ವಿರೋಧ Read More »

ಗ್ಯಾರಂಟಿ ಯೋಜನೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಂದ ಮಹತ್ವದ ಮಾಹಿತಿ

ರದ್ದಾಗಲಿವೆಯೇ ಗ್ಯಾರಂಟಿ ಯೋಜನೆಗಳು? ಬೆಂಗಳೂರು: ಕರ್ನಾಟಕದಲ್ಲಿನ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಾಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ರಸ್ತೆ ಬೇಕು ಎಂದಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂಬ ಅವರ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವುದೇ ಕಾರಣಕ್ಕೂ ಉಚಿತ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ. ಈ ಹಿಂದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಲಾದ ಮಾಹಿತಿಗಳನ್ನು ತಪ್ಪಾಗಿ ಅರ್ಥೈಸಲಾಗಿರುವುದಾಗಿ ಅವರು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ

ಗ್ಯಾರಂಟಿ ಯೋಜನೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಂದ ಮಹತ್ವದ ಮಾಹಿತಿ Read More »

ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್‌.ಅಶೋಕ್‌ ವ್ಯಂಗ್ಯ

ವಿಪಕ್ಷಕ್ಕೆ ಅಸ್ತ್ರವಾಗಿ ಸಿಕ್ಕಿದ ರಸ್ತೆ ಬೇಕಾ? ಗ್ಯಾರಂಟಿ ಬೇಕಾ ಹೇಳಿಕೆ ಬೆಂಗಳೂರು : ನಿಮಗೆ ರಸ್ತೆ ಬೇಕಾ ಗ್ಯಾರಂಟಿ ಬೇಕಾ? ರಸ್ತೆ ಬೇಕಾದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ಸರ್ಕಾರದ ಮೇಲೆ ದಾಳಿ ಮಾಡಲು ಪ್ರತಿಪಕ್ಷಕ್ಕೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮತ್ತಿತರರು ಈ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ದುಸ್ಥಿತಿ

ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್‌.ಅಶೋಕ್‌ ವ್ಯಂಗ್ಯ Read More »

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ನಿಷೇಧಿಸಲು ಸಿದ್ಧತೆ

3 ವರ್ಷ ಜೈಲು, 5 ಲ.ರೂ. ದಂಡ ವಿಧಿಸುವ ಕಾನೂನು ರಚನೆಗೆ ಮುಂದಾದ ಸರ್ಕಾರ ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್‌ ನಿಷೇಧಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ತಿದ್ದುಪಡಿ ಮಸೂದೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಸ್ತಾಪಿತ ಕಾನೂನು ಪ್ರಕಾರ ಗೇಮ್ ಆಫ್ ಚಾನ್ಸ್ ಅಂದರೆ ಯಾವುದೇ ಆಟ, ಸ್ಪರ್ಧೆಯ ಫಲಿತಾಂಶಗಳು ಅದೃಷ್ಟದಿಂದ ಅವಲಂಬಿತವಾಗಿರುವ, ಅನಿಶ್ಚಿತತೆಗಳಿಂದ ಕೂಡಿರುವ ಆನ್‌ಲೈನ್ ಗ್ಯಾಂಬ್ಲಿಂಗ್‌,

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ನಿಷೇಧಿಸಲು ಸಿದ್ಧತೆ Read More »

ಸಿದ್ದರಾಮಯ್ಯನವರಿಗೆ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಹುದ್ದೆ

ಮುಖ್ಯಮಂತ್ರಿ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ ಧುಮುಕುವ ಊಹಾಪೋಹ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಹೈಕಮಾಂಡ್‌ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿದೆ. ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ–ಪ್ರತಿ ಹೇಳಿಕೆಗಳ ಜಟಾಪಟಿ ಜೋರಾಗಿ ನಡೆಯುತ್ತಿರುವ ಹೊತ್ತಿಗೆ ಸಿದ್ದರಾಮಯ್ಯನವರಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿರುವುದು ನಾನಾ ಊಹಾಪೋಹಗಳಿಗೆ ಕಾರಣವಾಗಿದೆ. 5 ವರ್ಷ ನಾನೇ ಸಿಎಂ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ

ಸಿದ್ದರಾಮಯ್ಯನವರಿಗೆ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಹುದ್ದೆ Read More »

ಪೊಲೀಸ್‌ ಇನ್‌ಸ್ಪೆಕ್ಟರ್‌ ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ : ನಾಲ್ಕು ದಿನಗಳ ಬಳಿಕ ಮೃತದೇಹ ಪತ್ತೆ

ಕೌಟುಂಬಿಕ ಕಲಹದಿಂದ ಬೇಸತ್ತು ಡೆತ್‌ನೋಟ್‌ ಬರೆದು ಸಾವಿಗೆ ಶರಣಾದ ಪಿಎಸ್‌ಐ ಬೆಂಗಳೂರು: ನಿವೃತ್ತಿಯ ಅಂಚಿನಲ್ಲಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್‌ ಒಬ್ಬರ ಮೃತದೇಹ ತುಮಕೂರಿನ ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಕಂಡುಬಂದಿದೆ. ದಾವಣಗೆರೆ ಪೊಲೀಸ್ ಠಾಣೆಯ ಸಬ್‌ಇನ್ಸ್​ ಪೆಕ್ಟರ್ ನಾಗರಾಜಪ್ಪ (58) ಮೃತಪಟ್ಟವರು. ತುಮಕೂರಿನ ದ್ವಾರಕಾ ಹೋಟೆಲ್ ಲಾಡ್ಜ್‌ನಲ್ಲಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. 4 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದು, ಮೃತದೇಹ ಕೊಳೆತು ಹುಳಗಳಾಗಿದ್ದವು ಎಂದು ತಿಳಿದು ಬಂದಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ

ಪೊಲೀಸ್‌ ಇನ್‌ಸ್ಪೆಕ್ಟರ್‌ ಹೋಟೆಲ್‌ ಕೊಠಡಿಯಲ್ಲಿ ಆತ್ಮಹತ್ಯೆ : ನಾಲ್ಕು ದಿನಗಳ ಬಳಿಕ ಮೃತದೇಹ ಪತ್ತೆ Read More »

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ರಾಜ್ಯ ಸರ್ಕಾರ ರಚಿಸಿದ ಸಮಿತಿ ವರದಿ

ಸರಣಿ ಹೃದಯಾಘಾತಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಚಿಸಿದ ತಜ್ಞ ವೈದ್ಯರ ಸಮಿತಿಯಿಂದ ಅಧ್ಯಯನ ಬೆಂಗಳೂರು: ಐಸಿಎಂಆರ್‌ ಬಳಿಕ ರಾಜ್ಯ ಸರ್ಕಾರವೇ ರಚಿಸಿದ ಸಮಿತಿ ಕೂಡ ಹೃದಯಾಘಾತಗಳಿಗೆ ಕೋವಿಡ್‌ ಲಸಿಕೆ ಕಾರಣವಲ್ಲ ಎಂದು ವರದಿ ನೀಡಿದೆ. ಡಾ. ರವೀಂದ್ರನಾಥ್ ನೇತೃತ್ವದ ಸಮಿತಿ ಜುಲೈ 2ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಹಠಾತ್ ಹೃದಯಾಘಾತಕ್ಕೆ ಕೋವಿಡ್-19 ಲಸಿಕೆ ಅಥವಾ ಹಿಂದಿನ ಸೋಂಕು ಕಾರಣವಲ್ಲ. ಕೋವಿಡ್ ಲಸಿಕೆಗೂ ಈ ಹೃದಯಾಘಾತದ ಘಟನೆಗಳಿಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ರಾಜ್ಯ ಸರ್ಕಾರ ರಚಿಸಿದ ಸಮಿತಿ ವರದಿ Read More »

ಗಣಪತಿ, ನಾಗರ ವಿಗ್ರಹಕ್ಕೆ ಅನ್ಯಕೋಮಿನವರಿಂದ ಅಪಚಾರ : ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ದುಷ್ಕರ್ಮಿಗಳು ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರು ಶನಿವಾರ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಚಾರ ಮಾಡಿರುವ ಘಟನೆಯಿಂದ ಶಿವಮೊಗ್ಗದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ ಕಲ್ಲನ್ನು ಚರಂಡಿಗೆ ಎಸೆದಿರುವ ಆರೋಪ ಕೇಳಿಬಂದಿದೆ. ಅನ್ಯಕೋಮಿನ ಯುವಕರಿಂದ ದುಷ್ಕೃತ್ಯ ನಡೆದಿದೆ ಎನ್ನಲಾಗಿದ್ದು, ಹಿಂದೂ ಮುಖಂಡರು ಕೆರಳಿದ್ದಾರೆ. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಗಣಪತಿ, ನಾಗರ ವಿಗ್ರಹಕ್ಕೆ ಅನ್ಯಕೋಮಿನವರಿಂದ ಅಪಚಾರ : ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ Read More »

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?: ನಿಖಿಲ್ ಕುಮಾರಸ್ವಾಮಿ | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೇಜನೆಗಳಿಂದ ಕರ್ನಾಟಕ ದಿವಾಳಿಯಾಗಿದೆ

ಯಾದಗಿರಿ: ಕಾಂಗ್ರೆಸಿಗರು ‌ಮಾತೆತ್ತಿದರೆ ಜೆಡಿಎಸ್ ಕಥೆ ಮುಗಿದಿದೆ ಎಂದು ಹೇಳುತ್ತಾರೆ. ಆದರೆ ಅವರ ಪಕ್ಷ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದು ಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಮಾತ್ರವೇ ಅಧಿಕಾರದಲ್ಲಿದೆ. ಕರ್ನಾಟಕ ರಾಜ್ಯದಲ್ಲಂತೂ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?: ನಿಖಿಲ್ ಕುಮಾರಸ್ವಾಮಿ | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೇಜನೆಗಳಿಂದ ಕರ್ನಾಟಕ ದಿವಾಳಿಯಾಗಿದೆ Read More »

error: Content is protected !!
Scroll to Top