ರಾಜ್ಯ

ರೇಣುಕಾಸ್ವಾಮಿ ಕೊಲೆ ಆರೋಪಿಗಳ ಜೈಲು ಶಿಫ್ಟ್ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆರೋಪಿ ದರ್ಶನ್ ತೂಗುದೀಪ್ ಸೇರಿ ಐವರು ಆರೋಪಿಗಳ ಜೈಲು ಸ್ಥಳಾಂತರ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಆರೋಪಿಗಳನ್ನು ಬಳ್ಳಾರಿ, ಶಿವಮೊಗ್ಗ, ಕಲ್ಬುರ್ಗಿ, ಬೆಳಗಾವಿ ಜೈಲುಗಳಿಗೆ ‌ಸ್ಥಳಾಂತರ ಮಾಡುವ ಬಗ್ಗೆ ಮನವಿಯನ್ನು ಕುರಿತಾಗಿ ನ್ಯಾಯಾಲಯದಲ್ಲಿ ಚರ್ಚೆ ನಡೆಯಿತು. ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್ ಮತ್ತು ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ, ನಾಗರಾಜ್ ಕಲಬುರಗಿ ಜೈಲಿಗೆ ಹಾಗೂ ಪ್ರದೂಷ್ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡಲು ಪ್ರಸ್ತಾಪ ಮಾಡಲಾಗಿದೆ. ಆದರೆ ದರ್ಶನ್, ಲಕ್ಷಣ್, ನಾಗರಾಜ್ […]

ರೇಣುಕಾಸ್ವಾಮಿ ಕೊಲೆ ಆರೋಪಿಗಳ ಜೈಲು ಶಿಫ್ಟ್ ಅರ್ಜಿ ವಿಚಾರಣೆ ಮುಂದೂಡಿಕೆ Read More »

ಆಸ್ತಿ ನೋಂದಣಿ ಶುಲ್ಕ ಏರಿಕೆ ಮಾಡಿ ಆದೇಶ ಹೊರಡಿಸಿದ ಕಂದಾಯ ಇಲಾಖೆ

ಜನರಿಗೆ ಸರ್ಕಾರದಿಂದ ಮತ್ತೊಂದು ಏರಿಕೆ ಬರೆ ಬೆಂಗಳೂರು: ಆಸ್ತಿ ನೋಂದಣಿ ಶುಲ್ಕವನ್ನು ಹೆಚ್ಚಳ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಆ ಮೂಲಕ ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಸರ್ಕಾರ ಮತ್ತೊಂದು ಬರೆ ಎಳೆದಿದೆ. ಆಸ್ತಿ ನೋಂದಣಿ ಶುಲ್ಕ ಶೇ.1ರಿಂದ ಶೇ.2ರಷ್ಟು ಏರಿಕೆ ಮಾಡಲಾಗಿದ್ದು, ಆ.31ರಿಂದ ಅನ್ವಯವಾಗಲಿದೆ. ರಾಜ್ಯದಲ್ಲಿ ಈವರೆಗೆ ನಿವೇಶನ, ಭೂಮಿ, ಫ್ಲ್ಯಾಟ್,​ ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ.1ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ.6.6ರಷ್ಟು ಶುಲ್ಕ

ಆಸ್ತಿ ನೋಂದಣಿ ಶುಲ್ಕ ಏರಿಕೆ ಮಾಡಿ ಆದೇಶ ಹೊರಡಿಸಿದ ಕಂದಾಯ ಇಲಾಖೆ Read More »

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ : ಮತ್ತೆ ಕೆಲವರ ಬಂಧನ

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ಕಮೆಂಟ್‌ ಹಾಕಿ ತೇಜೋವಧೆ ಮಾಡಿದ ಪ್ರಕರಣ ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ‌. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ 9 ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನು ಬಂಧಿಸಿದ್ದಾರೆ. ಬಂಧಿತರಿಬ್ಬರು ಸಣ್ಣಪುಟ್ಟ

ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ : ಮತ್ತೆ ಕೆಲವರ ಬಂಧನ Read More »

ಬೆಂಗಳೂರು : ಸಿಖ್‌ ಗುರುದ್ವಾರಕ್ಕೆ ಬಾಂಬ್‌ ಬೆದರಿಕೆ

ಆರ್‌ಡಿಎಕ್ಸ್‌ ಇಟ್ಟು ಗುರುದ್ವಾರವನ್ನು ಸ್ಫೋಟಿಸುವುದಾಗಿ ಬೆದರಿಕೆ ಬೆಂಗಳೂರು : ಬೆಂಗಳೂರಿನ ಹಲಸೂರು ಕೆರೆ ಸಮೀಪ ಇರುವ ಗುರುಸಿಂಗ್ ಸಭಾ ಸಿಖ್ ಗುರುದ್ವಾರಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ನಾಲ್ಕು ದಿನಗಳ ಹಿಂದೆ ಗುರುದ್ವಾರಕ್ಕೆ ಬೆದರಿಕೆ ಇ-ಮೇಲ್ ಬಂದಿದ್ದು, ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಆರ್​​ಡಿಎಕ್ಸ್ ಸ್ಫೋಟಿಸುವುದಾಗಿ ರಾಜಗಿರಿ ಎಂಬಾತನ ಹೆಸರಿನಲ್ಲಿ ಕಳುಹಿಸಲಾದ ಬೆದರಿಕೆ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಸಿಖ್ ಗುರುದ್ವಾರದ ಶೌಚಾಲಯದಲ್ಲಿ ಬಾಂಬ್ ಇಟ್ಟಿದ್ದಾಗಿ ಸಂದೇಶದಲ್ಲಿ ತಿಳಿಸಲಾಗಿತ್ತು. ಋಷಿಪಾಲ್ ಸಿಂಗ್ ಎಂಬವರು ನೀಡಿದ ದೂರು

ಬೆಂಗಳೂರು : ಸಿಖ್‌ ಗುರುದ್ವಾರಕ್ಕೆ ಬಾಂಬ್‌ ಬೆದರಿಕೆ Read More »

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ

ಕರಾವಳಿಯ ಬೇಡಿಕೆಗಳಿಗೆ ಸ್ಪಂದಿಸಲು ಸದವಕಾಶ ಮಂಗಳೂರು: ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಸಚಿವ ಸಂಪುಟ ಸಭೆಗೆ ಮುಂಚಿತವಾಗಿ ಜಿಲ್ಲೆಯ ಅವಶ್ಯಕತೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸುವಂತೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಲಬುರಗಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಸಭೆಗಳು ನಡೆದಿವೆ. ಬಿಜಾಪುರದ ನಂತರ ಮಂಗಳೂರು ಸಚಿವ

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ Read More »

ಚಾಮುಂಡಿ ಬೆಟ್ಟ ವಕ್ಫ್‌ ಆಸ್ತಿಯೇ? : ಡಿ.ಕೆ.ಶಿವಕುಮಾರ್‌ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ

ಕಾಂಗ್ರೆಸ್‌ ಹೈಕಮಾಂಡ್‌ ಮೆಚ್ಚಿಸಲು ಹಿಂದೂ ವಿರೋಧಿ ಹೇಳಿಕೆ ನೀಡುತ್ತಿರುವ ಡಿಕೆಶಿ ಎಂದು ಆರೋಪ ಬೆಂಗಳೂರು: ಚಾಮುಂಡೇಶ್ವರಿ ಹಿಂದೂಗಳ ಆಸ್ತಿ ಅಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿಕೆ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಆರ್‌ಎಸ್‌ಎಸ್‌ ಗೀತೆ ಹಾಡಿ ಕಾಂಗ್ರೆಸ್‌ ಹೈಕಾಂಡ್‌ ಕೆಂಗಣ್ಣಿಗೆ ಗುರಿಯಾಗಿರುವ ಡಿಕೆಶಿ ಈಗ ಹೈಕಮಾಂಡನ್ನು ಮೆಚ್ಚಿಸಲು ಹಿಂದೂಗಳನ್ನು ಅಣಕಿಸುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ 3500ಕ್ಕೂ ಹೆಚ್ಚು ದೇವಸ್ಥಾನಗಳು ಹಿಂದೂಗಳ ಆಸ್ತಿ. ಸರ್ಕಾರದ ಆಸ್ತಿ ಎಂದರೆ ಮುಜುರಾಯಿ ಆಸ್ತಿ, ಮುಜುರಾಯಿ ಆಸ್ತಿಯಾದರೆ ಅದು ಹಿಂದೂಗಳ

ಚಾಮುಂಡಿ ಬೆಟ್ಟ ವಕ್ಫ್‌ ಆಸ್ತಿಯೇ? : ಡಿ.ಕೆ.ಶಿವಕುಮಾರ್‌ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ Read More »

ಆರ್‌ಎಸ್‌ಎಸ್‌ ಗೀತೆ ವಿವಾದ : ಕ್ಷಮೆ ಕೇಳಿದ ಡಿಕೆಶಿ

ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಇಂಡಿ ಒಕ್ಕೂಟದ ನಾಯಕರಿಂದ ಬಹಿರಂಗ ಕ್ಷಮೆಯಾಚನೆ ಬೆಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿ ವಿವಾದಕ್ಕೊಳಗಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ಕ್ಷಮೆ ಯಾಚಿಸುವ ಮೂಲಕ ಈ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ಸಿದ್ಧಾಂತದ ಅರಿವಿದೆ ಎಂಬುದನ್ನು ನಿರೂಪಿಸಿವುದಕ್ಕಾಗಿ ಹಾಗೆ ಹೇಳಿದೆ ಅಷ್ಟೆ. ಆದರೂ ಒಂದು ವೇಳೆ ತಪ್ಪು ಮಾಡಿದ್ದೇನೆ ಎಂದು ನೀವು ಭಾವಿಸುವುದೇ ಆದರೆ, ಎಲ್ಲ ಕಾಂಗ್ರೆಸ್ ನಾಯಕರ-ಕಾರ್ಯಕರ್ತರ, ಇಂಡಿ ಒಕ್ಕೂಟದ

ಆರ್‌ಎಸ್‌ಎಸ್‌ ಗೀತೆ ವಿವಾದ : ಕ್ಷಮೆ ಕೇಳಿದ ಡಿಕೆಶಿ Read More »

ದಿನೇಶ್‌ ಅಮೀನ್‌ ಮಟ್ಟು ಅವರಿಗಿಲ್ಲ ವಿಧಾನ ಪರಿಷತ್‌ ಸ್ಥಾನ

ಭಾರಿ ಹಗ್ಗ ಜಗ್ಗಾಟದ ಬಳಿಕ ನಾಲ್ವರ ನಾಮನಿರ್ದೇಶನಕ್ಕೆ ಹೈಕಮಾಂಡ್‌ ಒಪ್ಪಿಗೆ ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಹಲವು ತಿಂಗಳಿಂದ ಖಾಲಿ ಇದ್ದ ನಾಲ್ಕು ಸದಸ್ಯ ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮಾಂಡ್‌ ಒಪ್ಪಿಗೆ ನೀಡಿದೆ. ಈ ಹಿಂದೆ ಫೈನಲ್ ಆಗಿದ್ದ ನಾಲ್ವರ ನಾಮನಿರ್ದೇಶನ ಪಟ್ಟಿ ಬದಲಾಗಿದ್ದು, ಇಬ್ಬರನ್ನು ಕೈಬಿಟ್ಟು ಅಚ್ಚರಿಯ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿರುವ ಕರಾವಳಿಯ ದಿನೇಶ್‌ ಅಮೀನ್‌ ಮಟ್ಟು ಅವರಿಗೆ ಮೇಲ್ಮನೆ ಅವಕಾಶ ಕೈತಪ್ಪಿದೆ. ಜಕ್ಕಪ್ಪ, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಪತ್ರಕರ್ತ

ದಿನೇಶ್‌ ಅಮೀನ್‌ ಮಟ್ಟು ಅವರಿಗಿಲ್ಲ ವಿಧಾನ ಪರಿಷತ್‌ ಸ್ಥಾನ Read More »

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದಕ್ಕೆ ವಿರೋಧ : ವೈರಲ್‌ ಆಗುತ್ತಿದೆ ಹಳೆಯ ವಿಡಿಯೋ

ಕನ್ನಡವನ್ನು ಭುವನೇಶ್ವರಿಯಾಗಿ ಮಾಡಿ ದೌರ್ಜನ್ಯ ಎಸಗಿದ್ದೀರಿ ಎಂಬ ಹೇಳಿಕೆಗೆ ಟೀಕೆ ಬೆಂಗಳೂರು: ಕರ್ನಾಟಕದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರು ಸೇರಿದಂತೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ನಂಬಿಕೆಯ ನೆಲೆಗಟ್ಟಿನಲ್ಲಿ ಬಾನು ಮುಷ್ತಾಕ್‌ ಅವರ ಆಯ್ಕೆಯನ್ನು ಹಲವರು ಪ್ರಶ್ನಿಸಿದ್ದಾರೆ. ಮಾಜಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಸೇರಿದಂತೆ

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದಕ್ಕೆ ವಿರೋಧ : ವೈರಲ್‌ ಆಗುತ್ತಿದೆ ಹಳೆಯ ವಿಡಿಯೋ Read More »

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರದಿಂದ ಆರಂಭದಲ್ಲೇ ತಪ್ಪು ನಡೆ : ಮಾಜಿ ಸಚಿವ ತೀಕ್ಷ್ಣ ಟೀಕೆ

ತಲೆಬುರುಡೆ ಕುರಿತು ಆರಂಭದಲ್ಲಿ ಯಾಕೆ ತನಿಖೆ ಮಾಡದಿರುವುದು ಲೋಪ ಎಂದ ರಾಜಣ್ಣ ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಆರಂಭದಲ್ಲೇ ತಪ್ಪು ಹೆಜ್ಜೆಯಿಟ್ಟಿತ್ತು ಎಂದು ಮಾಜಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಭಾನುವಾರ ತಮ್ಮದೇ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ. ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿದ್ದೇನೆ ಎಂದು ದೂರು ನೀಡಲು‌ ಬಂದ ವ್ಯಕ್ತಿಯು ತಂದಿದ್ದ ತಲೆಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ. ಭೂಮಿಯಲ್ಲಿ ಹೂತ ಮೃತದೇಹವನ್ನು ಹೊರತೆಗೆಯಲು ಕಾನೂನಿನಲ್ಲಿ ನಿರ್ದಿಷ್ಟ ನಿಯಮಗಳಿವೆ. ತಾಲೂಕು ಮ್ಯಾಜಿಸ್ಟ್ರೇಟ್ ಅನುಮತಿ

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರದಿಂದ ಆರಂಭದಲ್ಲೇ ತಪ್ಪು ನಡೆ : ಮಾಜಿ ಸಚಿವ ತೀಕ್ಷ್ಣ ಟೀಕೆ Read More »

error: Content is protected !!
Scroll to Top