ರಾಜ್ಯ

ನವವಿವಾಹಿತೆಯ ಶವ ರೈಲ್ವೆ ಟ್ರಾಕ್‌ನಲ್ಲಿ ಪತ್ತೆ | ಪತಿಯ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ, ಕೊಲೆ ಆರೋಪ ಮಾಡಿದ ಮೃತಳ ಕುಟುಂಬ ವರ್ಗ | ಪತಿ ಮನೆ ಮುಂದೆ ಶವವಿಟ್ಟು ಪ್ರತಿಭಟನೆ

ದಾವಣಗೆರೆ: ಏಳು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯ ಶವ ರೈಲ್ವೆ ಟ್ರಾಕ್ ಮೇಲೆ ಪತ್ತೆಯಾಗಿದ್ದು, ವರದಕ್ಷಿಣೆ ಕಿರುಕುಳವೇ ಈ ಘಟನೆಗೆ ಕಾರಣ ಎಂದು ಆರೋಪಗಳು ಕೇಳಿ ಬಂದಿವೆ. ಚನ್ನಗಿರಿ ತಾಲೂಕಿನ ವಿದ್ಯಾ ಎಂಬವರೇ ಮೃತ ದುರ್ದೈವಿ. ವಿದ್ಯಾ ಅವರನ್ನು ಸೋಮಲಾಪುರದ ಶಿವು ಎಂಬ ಯುವಕನಿಗೆ‌ಮದುವೆ ಮಾಡಿ ಕೊಡಲಾಗಿತ್ತು. ಶಿವು ಪೊಲೀಸ್ ಆಗಿದ್ದು, ದಂಪತಿ ಬೆಂಗಳೂರಿನ ಶಂಕರಪುರಂನಲ್ಲಿ ವಾಸ ಮಾಡುತ್ತಿದ್ದರು. ಜೂ. 30 ರಂದು ನಾಪತ್ತೆಯಾಗಿದ್ದ ‌ವಿದ್ಯಾ, ಸಂಜೆ ಅರಸೀಕೆರೆ ರೈಲ್ವೆ ಟ್ರಾಕ್‌ನಲ್ಲಿ ಪತ್ತೆಯಾಗಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ […]

ನವವಿವಾಹಿತೆಯ ಶವ ರೈಲ್ವೆ ಟ್ರಾಕ್‌ನಲ್ಲಿ ಪತ್ತೆ | ಪತಿಯ ವಿರುದ್ಧ ವರದಕ್ಷಿಣೆಗಾಗಿ ಕಿರುಕುಳ, ಕೊಲೆ ಆರೋಪ ಮಾಡಿದ ಮೃತಳ ಕುಟುಂಬ ವರ್ಗ | ಪತಿ ಮನೆ ಮುಂದೆ ಶವವಿಟ್ಟು ಪ್ರತಿಭಟನೆ Read More »

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ

ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಸೆರೆಯಾದ ಸಂದರ್ಭದಲ್ಲಿ ಬಯಲಾದ ಇನ್ನೊಂದು ರಹಸ್ಯ ಮಂಗಳೂರು : ಅಪಘಾತವೆಸಗಿದ ಖಾಸಗಿ ಬಸ್​ಗೆ ಕಲ್ಲು ತೂರಿ ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇತ್ತೀಚೆಗೆ ಸೆರೆಯಾಗಿದ್ದ ಹಿಂದೂ ಮುಖಂಡ ಸಮಿತ್‌ರಾಜ್ ಧರೆಗುಡ್ಡೆಯ ಮೊಬೈಲ್‌ನಲ್ಲಿ ಕೆಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿಯ ಓರ್ವ ರಾಜಕಾರಣಿಯ ಔಿಡಿಯೋ ಇದೆ ಎಂಬ ವಿಚಾರ ಸಂಚಲನವುಂಟುಮಾಡಿದೆ. ಮೊಬೈಲ್​ನಲ್ಲಿ ಕರಾವಳಿಯ ರಾಜಕಾರಣಿಯೊಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮೂಡುಬಿದಿರೆ ಪೊಲೀಸರ ತನಿಖೆ ವೇಳೆ

ಹಿಂದೂ ಮುಖಂಡನ ಮೊಬೈಲ್‌ನಲ್ಲಿ ರಾಜಕಾರಣಿಯ ವಿಡಿಯೋ ಪತ್ತೆ : ಕರಾವಳಿಯಲ್ಲಿ ಸಂಚಲನ Read More »

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ

ದ.ಕ. ಜಿಲ್ಲೆಯ 115 ಸೇರಿ ರಾಜ್ಯದ 4,134 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಬೋಧನೆಗೆ ಅನುಮತಿ ಮಂಗಳೂರು: ಪುತ್ತೂರಿನ 18 ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025–26ನೇ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್‌ ಮಾಧ್ಯಮ ಶುರುವಾಗಲಿದೆ. ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ Read More »

ಮಳೆ ದಾಖಲೆಯಲ್ಲಿ ಚಿರಾಪುಂಜಿಯನ್ನು ಹಿಂದಿಕ್ಕಿದ ಉಡುಪಿ

ಒಂದು ತಿಂಗಳಲ್ಲಿ 1,140 ಮಿ.ಮೀ ಮಳೆ ಸುರಿದು ಹೊಸ ದಾಖಲೆ ಉಡುಪಿ: ಮೇಘಾಲಯದ ಚಿರಾಪುಂಜಿ ದೇಶದಲ್ಲಿ ಅತ್ಯಧಿಕ ಮಳೆಯಾಗುವ ಪ್ರದೇಶ ಎಂಬ ದಾಖಲೆ ಅನೇಕ ವರ್ಷಗಳಿಂದ ಇದೆ. ಆದರೆ ಈ ಸಲ ಉಡುಪಿ ಜಿಲ್ಲೆ ಮಳೆ ದಾಖಲೆಯಲ್ಲಿ ಚಿರಾಪುಂಜಿಯನ್ನು ಹಿಂದಿಕ್ಕಿದೆ. ಜೂನ್‌ ತಿಂಗಳಲ್ಲಿ ಉಡುಪಿಯಾದ್ಯಂತ ದಾಖಲೆಯ ಮಳೆ ಸುರಿದಿದ್ದು, ಕರ್ನಾಟಕದಲ್ಲಿ ಅತ್ಯಧಿಕ ಮಳೆಯಾಗುವ ಆಗುಂಬೆಯನ್ನೂ ಹಿಂದಿಕ್ಕಿದೆ. ಜೂನ್ ತಿಂಗಳ ಮಳೆ ಲೆಕ್ಕಾಚಾರದಲ್ಲಿ ಉಡುಪಿ ಜಿಲ್ಲೆ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ಒಂದು ತಿಂಗಳಲ್ಲಿ 1,140 ಮಿ.ಮೀ ಮಳೆಯಾಗಿದೆ. ಜಿಲ್ಲೆಯಲ್ಲಿ

ಮಳೆ ದಾಖಲೆಯಲ್ಲಿ ಚಿರಾಪುಂಜಿಯನ್ನು ಹಿಂದಿಕ್ಕಿದ ಉಡುಪಿ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಆರೋಪಿ ರನ್ಯಾಳ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಎಂಗಳೂರಿನ ಮನೆ, ನಿವೇಶನ ಇನ್ನಿತರ ಆಸ್ತಿ ಜಪ್ತಿ ಬೆಂಗಳೂರು : ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಬೆಂಗಳೂರಿನ ಅರ್ಕಾವತಿ ಬಡವಾಣೆಯಲ್ಲಿನ ನಿವೇಶನ, ವಿಕ್ಟೋರಿಯಾ ಲೇಔಟ್​ನಲ್ಲಿನ ಮನೆ, ಅನೇಕಲ್​ನಲ್ಲಿನ ಕೃಷಿ ಜಮೀನು ಮತ್ತು ತುಮಕೂರಿನಲ್ಲಿನ ಜಮೀನನ್ನು ಇಡಿ ಜಪ್ತಿ ಮಾಡಿದೆ. ಸಿಬಿಐ ಮತ್ತು ರೆವಿನ್ಯೂ ಗುಪ್ತಚರ ನಿರ್ದೇಶನಾಲಯ (ಡಿಆರ್​ಐ) ಒಪ್ಪಿಗೆ ಮೇರೆಗೆ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡಿದೆ.

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಆರೋಪಿ ರನ್ಯಾಳ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು Read More »

ಪಿಲಿಕುಳ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ನಿಗೂಢ ಸಾವು

ಒಂಬತ್ತು ಅಪರೂಪದ ಪ್ರಾಣಿಗಳು ಮೃತಪಟ್ಟಿರುವುದು ಬಹಿರಂಗ ಮಂಗಳೂರು: ಮಂಗಳೂರಿನ ವಾಮಂಜೂರು ಸಮೀಪ ಇರುವ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕೆಲವು ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ 2 ಕೃಷ್ಣಮೃಗ, 5 ಪುನುಗು ಬೆಕ್ಕು, 1 ಬಿಳಿಗೂಬೆ ಹಾಗೂ 1 ಬರಿಂಕ ಸೇರಿದಂತೆ ಒಟ್ಟು 9 ಪ್ರಾಣಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಿಲಿಕುಳ ಜೈವಿಕ ಉದ್ಯಾನವನದೊಳಗೆ ನೀರು ನುಗ್ಗಿ, ಕಂಪೌಂಡ್ ಕುಸಿದು ಪ್ರಾಣಿಗಳಿಗೆ ತೊಂದರೆಯಾಗಿತ್ತು. ಈ ಬಗ್ಗೆ ವನ್ಯಜೀವಿ ಸಂರಕ್ಷಕ ಭುವನ್ ದೇವಾಡಿಗ ಅವರು ಸೆಂಟ್ರಲ್

ಪಿಲಿಕುಳ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ನಿಗೂಢ ಸಾವು Read More »

RSS ರಾಷ್ಟ್ರಪ್ರೇಮಕ್ಕೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಕಾಂಗ್ರೆಸ್ ನಾಯಕರಿಗೆ ಇಲ್ಲ: ಸಿ.ಟಿ. ರವಿ

ತಲೆ ಸ್ವಲ್ಪ ವ್ಯತ್ಯಾಸವಾಗಿ ಇಂತಹ ಹೇಳಿಕೆ ನೀಡಿದ್ದಾರೆ ಎಂದಿದ್ದು ಯಾರಿಗೆ? ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ RSS ನ ದೇಶಭಕ್ತಿಗೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ RSS ಬ್ಯಾನ್ ಮಾಡುವುದಾಗಿ ನೀಡಿದ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದು, ಶಬ್ಧ ಪ್ರಯೋಗಿಸಬೇಕೋ, ಬೇಡವೋ.. ಆದರೆ ಕೆಲವರಿಗೆ ತಲೆ ಸ್ವಲ್ಪ ವ್ಯತ್ಯಾಸವಾಗಿ ಏನೇನೋ ಮಾತನಾಡುತ್ತಾರೆ.

RSS ರಾಷ್ಟ್ರಪ್ರೇಮಕ್ಕೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಕಾಂಗ್ರೆಸ್ ನಾಯಕರಿಗೆ ಇಲ್ಲ: ಸಿ.ಟಿ. ರವಿ Read More »

ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡ ಎಂಎಲ್‌ಸಿ ರವಿಕುಮಾರ್‌

ಶಾಲಿನಿ ರಜನೀಶ್‌ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಎಫ್‌ಐಆರ್‌ ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಜೂನ್ 30ರಂದು ನಡೆದ ಬಿಜೆಪಿ ಪ್ರತಿಭಟನೆ ವೇಳೆ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ರವಿಕುಮಾರ್ ಅವಹೇಳನಕಾರಿಯಾಗಿ ಮಾತಾಡಿದ್ದಾರೆನ್ನಲಾದ ವಿಡಿಯೋ ವೈರಲ್ ಆಗಿದೆ. ರವಿಕುಮಾರ್ ಅವರದ್ದೆನ್ನಲಾದ ಈ ಹೇಳಿಕೆ ಬಿಜೆಪಿಗೆ ಭಾರಿ ಮುಜುಗರ ತಂದಿದೆ. ನಿನ್ನೆ ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಈಗ ಶಾಲಿನಿ ರಜನೀಶ್‌ ವಿರುದ್ಧ ಆಡಿದ್ದಾರೆನ್ನಲಾದ

ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡ ಎಂಎಲ್‌ಸಿ ರವಿಕುಮಾರ್‌ Read More »

ಭ್ರಷ್ಟಾಚಾರ: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ, ಮಗ, ಸೊಸೆ ವಿರುದ್ಧ ಕೇಸ್‌

ಅಧಿಕಾರದಲ್ಲಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣ ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು

ಭ್ರಷ್ಟಾಚಾರ: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ, ಮಗ, ಸೊಸೆ ವಿರುದ್ಧ ಕೇಸ್‌ Read More »

ಸಿದ್ದರಾಮಯ್ಯನವರಿಂದ ಅವಮಾನಕ್ಕೊಳಗಾಗಿದ್ದ ಪೊಲೀಸ್‌ ಅಧಿಕಾರಿಯ ವಿಆರ್‌ಎಸ್‌ ಅರ್ಜಿ ಸ್ವೀಕಾರಕ್ಕೆ ಸೂಚನೆ

ಡೆಡ್‌ಲೈನ್‌ ಒಳಗೆ ಅರ್ಜಿ ಹಿಂಪಡೆಯದಿದ್ದರೆ ರಾಜೀನಾಮೆ ಅಂಗೀಕಾರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಾರ್ವಜನಿಕ ವೇದಿಕೆಯಲ್ಲಿ ಅವಮಾನಕ್ಕೊಳಗಾಗಿದ್ದ ಹಿನ್ನೆಲೆಯಲ್ಲಿ ಧಾರವಾಡ ಎಎಸ್‌ಪಿ ನಾರಾಯಣ ಬರಮಣ್ಣಿ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಲು ಸರ್ಕಾರ ಸೂಚನೆ ನೀಡಿದೆ. ಉನ್ನತ ಪೊಲೀಸ್‌ ಅಧಿಕಾರಿಯನ್ನು ಕಾಂಗ್ರೆಸ್‌ ಸಭೆಯ ವೇದಿಕೆಯಲ್ಲಿ ಸಾರ್ವಜನಿಕರ ಎದುರೇ ಹೀನಾಯವಾಗಿ ನಡೆಸಿಕೊಂಡ ಕುರಿತು ಭಾರಿ ಟೀಕೆ ವ್ಯಕ್ತವಾಗಿದ್ದರೂ ಸರ್ಕಾರ ರಾಜೀನಾಮೆ ಅಂಗೀಕರಿಸಲು ಸೂಚನೆ ನೀಡಿರುವುದು ಆಶ್ಚರ್ಯ ಮೂಡಿಸಿದೆ. ಗೃಹ ಇಲಾಖೆ ನಾರಾಯಣ ಬರಮಣ್ಣಿ ಅವರ ಸ್ವಯಂ ನಿವೃತ್ತಿ ಮನವಿಯನ್ನು

ಸಿದ್ದರಾಮಯ್ಯನವರಿಂದ ಅವಮಾನಕ್ಕೊಳಗಾಗಿದ್ದ ಪೊಲೀಸ್‌ ಅಧಿಕಾರಿಯ ವಿಆರ್‌ಎಸ್‌ ಅರ್ಜಿ ಸ್ವೀಕಾರಕ್ಕೆ ಸೂಚನೆ Read More »

error: Content is protected !!
Scroll to Top