ರಾಜ್ಯ

ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದ ʼನಮಸ್ತೇ ಸದಾ ವತ್ಸಲೇ…ʼ

ಡಿಕೆಶಿ ಹಾಡಿದ ಆರ್‌ಎಸ್‌ಎಸ್‌ ಗೀತೆಯಿಂದ ಕೈ ಪಡೆಯಲ್ಲಿ ಕಿಡಿ ಬೆಂಗಳೂರು : ವಿಧಾನಸಭೆ ಕಲಾಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಡಿದ ಆರ್‌ಎಸ್‌ಎಸ್‌ನ ಧ್ಯೇಯಗೀತೆ ನಮಸ್ತೆ ಸದಾ ವತ್ಸಲೇ… ಕಾಂಗ್ರೆಸ್‌ನೊಳಗೆ ವಿವಾದದ ಕಿಡಿ ಹೊತ್ತಿಸಿದೆ. ಬಿಜೆಪಿಯವರು ಡಿಕೆಶಿ ನಡೆಯನ್ನು ವ್ಯಂಗ್ಯವಾಗಿಯಾದರೂ ಸ್ವಾಗತಿಸಿದ್ದರೆ, ಸದಾ ಆರ್‌ಎಸ್‌ಎಸ್‌ನ್ನು ದ್ವೇಷಿಸುತ್ತಿರುವ ಕಾಂಗ್ರೆಸ್‌ನ ಕೆಲವು ನಾಯಕರಿಗೆ ಮಾತ್ರ ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆರ್​​ಸಿಬಿ ವಿಜಯೋತ್ಸವ ಕಾಲ್ತುಳಿತ ಘಟನೆ ಚರ್ಚೆ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ನಮಸ್ತೇ ಸದಾ ವತ್ಸಲೇ… ಎಂದು ಆರ್​​ಎಸ್​ಎಸ್ ಗೀತೆ ಹಾಡಿದ್ದಾರೆ. ಅದು ಸಾಂದರ್ಭಿಕವಾಗಿ […]

ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದ ʼನಮಸ್ತೇ ಸದಾ ವತ್ಸಲೇ…ʼ Read More »

ಕೊಲೆ ಆರೋಪಿಯನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿದ ಮಟ್ಟಣ್ಣವರ್‌

ವಿಡಿಯೋ ಭಾರಿ ವೈರಲ್‌ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧ ನಡೆಸುತ್ತಿರುವ ಹೋರಾಟದ ಮುಂಚೂಣಿಯಲ್ಲಿರುವ ಗಿರೀಶ್‌ ಮಟ್ಟಣ್ಣನವರ್‌ ಕೊಲೆ ಆರೋಪಿಯನ್ನು ತನ್ನ ಜೊತೆ ಇಟ್ಟುಕೊಂಡು ಆತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯಿಸಿದ ವಿಡಿಯೋ ಒಂದು ನಿನ್ನೆಯಿಂದ ವೈರಲ್‌ ಆಗಿದ್ದು, ಅವರು ನಡೆಸುತ್ತಿರುವ ಹೋರಾಟದ ಸಾಚಾತನವನ್ನು ಬಯಲುಗೊಳಿಸಿದೆ. ಮಾಧ್ಯಮಗಳ ಜೊತೆಗೆ ಮಾತನಾಡುವಾಗ ರೌಡಿಶೀಟರ್‌ ಒಬ್ಬನನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಗಿರೀಶ್ ಮಟ್ಟಣ್ಣನವರ್ ಪರಿಚಯಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡುವ ವೇಳೆ ತಮ್ಮ ಪಕ್ಕದಲ್ಲಿ ನಿಂತಿದ್ದ ಮದನ ಬುಗಡಿ

ಕೊಲೆ ಆರೋಪಿಯನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿದ ಮಟ್ಟಣ್ಣವರ್‌ Read More »

ಸಿದ್ದರಾಮಯ್ಯ ದೇಶದ ಮೂರನೇ ಅತಿ ಶ್ರೀಮಂತ ಮುಖ್ಯಮಂತ್ರಿ

ಎಡಿಆರ್‌ ಪ್ರಕಟಿಸಿದ ಪಟ್ಟಿಯಲ್ಲಿದೆ ಮುಖ್ಯಮಂತ್ರಿಗಳ ಸಂಪತ್ತಿನ ಕುತೂಹಲಕಾರಿ ಮಾಹಿತಿ ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ದೇಶದ ಮೂರನೇ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಈ ಮಾಹಿತಿಯಿದೆ. ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದ್ದು, ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ಹಾಲಿ ಮುಖ್ಯಮಂತ್ರಿಗಳ ಆಸ್ತಿ ಮಾಹಿತಿ ಇದರಲ್ಲಿದೆ. ಮುಖ್ಯಮಂತ್ರಿಗಳು ಚುನಾವಣೆ ಸಮಯದಲ್ಲಿ ಸಲ್ಲಿಸಿರುವ ಪ್ರಮಾಣಪತ್ರಗಳ ಆಧಾರದಲ್ಲೇ ಅಸೋಸಿಯೇಷನ್ ಫಾರ್

ಸಿದ್ದರಾಮಯ್ಯ ದೇಶದ ಮೂರನೇ ಅತಿ ಶ್ರೀಮಂತ ಮುಖ್ಯಮಂತ್ರಿ Read More »

ಮಾಸ್ಕ್ ಮ್ಯಾನ್ ಚೆನ್ನಯ್ಯ ಬಂಧನ, ನಿಜ ರೂಪ ದರ್ಶನ: 10 ದಿನ SIT ಕಸ್ಟಡಿಗೆ

ಧರ್ಮಸ್ಥಳ: ನೂರಾರು ಶವಗಳನ್ನು ‌ಹೂತಿದ್ದಾಗಿ ಹೇಳಿದ ಅನಾಮಿಕ ದೂರುದಾರ ಮಾಸ್ಕ್‌ಮ್ಯಾನ್ ಯಾರು ಎನ್ನುವ ಸತ್ಯ ಬಯಲಾಗಿದ್ದು, ಇದು ಧರ್ಮಸ್ಥಳದ ಅಭಿಮಾನಿಗಳಿಗೆ ಸಂತಸ ನೀಡಿದೆ. ಮುಸುಕುಧಾರಿಯ ಹೆಸರು ಚೆನ್ನಯ್ಯ ಯಾನೆ ಚೆನ್ನನನ್ನು ‌ಸುಳ್ಳು ದೂರು ನೀಡಿದ ಆರೋಪ ಮತ್ತು ಮೊದಲ ಬುರುಡೆಯನ್ನು ‌ಎಲ್ಲಿಂದ ತಂದ ಎನ್ನುವ ಮಾಹಿತಿ ನೀಡದ ಆರೋಪದಡಿ SIT ಅಧಿಕಾರಿಗಳು ಬಂಧಿಸಿರುವುದಾಗಿದೆ. ಈತ ಕಟ್ಟಿದ ಬುರುಡೆ ಕಥೆ, ನೂರಾರು ಹೆಣಗಳನ್ನು ಹೂಳಲಾಗಿದೆ ಎನ್ನುವ ಪ್ರಕರಣ ಇಡೀ ದೇಶವನ್ನೇ ಧರ್ಮಸ್ಥಳದತ್ತ ‌ತಿರುಗುವಂತೆ ಮಾಡಿತ್ತು. ಅಲ್ಲದೆ ಈ ವರೆಗೆ

ಮಾಸ್ಕ್ ಮ್ಯಾನ್ ಚೆನ್ನಯ್ಯ ಬಂಧನ, ನಿಜ ರೂಪ ದರ್ಶನ: 10 ದಿನ SIT ಕಸ್ಟಡಿಗೆ Read More »

ಸುಜಾತ ಭಟ್ ಮನೆಗೆ ಬಿಗು ಪೊಲೀಸ್‌ ಭದ್ರತೆ

ಆರೋಗ್ಯ ಸರಿಯಿಲ್ಲ, ರಕ್ಷಣೆ ಕೊಡಿ ಎಂದು ಮೊರೆಯಿಟ್ಟಿದ್ದ ಸುಜಾತ ಭಟ್‌ ಬೆಂಗಳೂರು: ನಿನ್ನೆಯಿಂದೀಚೆಗೆ ಗಳಿಗೆಗೊಂದು ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವ ಸುಜಾತ ಭಟ್‌ಗೆ ಪೊಲೀಸ್‌ ರಕ್ಷಣೆ ನೀಡಲಾಗಿದೆ. ನನಗೆ ಆರೋಗ್ಯ ಸರಿಯಿಲ್ಲ, ಬೆದರಿಕೆ ಇದೆ. ನನಗೆ ರಕ್ಷಣೆ ಕೊಡಿ ಎಂದು ಸ್ಥಳೀಯ ಪೊಲೀಸರಿಗೆ ಸುಜಾತ ಭಟ್ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಸುಜಾತ ಭಟ್‌ ಇರುವ ಮನೆಗೆ ಭದ್ರತೆ ಒದಗಿಸಿದ್ದಾರೆ. ಬ್ಯಾರಿಕೇಡ್ ಹಾಕಿ ಹದಿನೈದಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಸುಜಾತ ಭಟ್ ಮನವಿ ಹಿನ್ನೆಲೆಯಲ್ಲಿ ಬೆಂಗಳೂರಿನ

ಸುಜಾತ ಭಟ್ ಮನೆಗೆ ಬಿಗು ಪೊಲೀಸ್‌ ಭದ್ರತೆ Read More »

ಮಗಳು ನಾಪತ್ತೆ ಪ್ರಕರಣ ವಾಪಸ್‌ ಪಡೆಯಲು ಮುಂದಾದರಾ ಸುಜಾತ ಭಟ್‌?

ಆಡಿಯೋ ಹರಿಬಿಟ್ಟು ಪ್ರಕರಣ ಬಗ್ಗೆ ಮಾತನಾಡಿದ ವೃದ್ಧೆ ಧರ್ಮಸ್ಥಳ: ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದು, ಹುಡುಕಿಕೊಡಿ ಎಂದು ಹೇಳಿಕೊಂಡಿದ್ದ ಸುಜಾತ ಭಟ್‌ ಈಗ ದಿಢೀರ್‌ ಎಂದು ಕೇಸನ್ನು ವಾಪಸು ಪಡೆದುಕೊಳ್ಳುವುದಾಗಿ ಹೇಳಿದ್ದು, ಅವರ ಬಗ್ಗೆ ಇರುವ ಅನುಮಾನ ಇನ್ನಷ್ಟು ಹೆಚ್ಚವಾಗುವಂತೆ ಮಾಡಿದೆ. ಇತ್ತೀಚೆಗೆ ಸುಜಾತಾ ಭಟ್ ತಮ್ಮ ಮಗಳೆಂದು ಫೋಟೋವೊಂದನ್ನು​ ತೋರಿಸಿದ್ದರು. ಆದರೆ ಅದು ಅನನ್ಯಾ ಭಟ್ ಅಲ್ಲ, ಬದಲಿಗೆ ವಾಸಂತಿ ಎಂಬ ಸತ್ಯ ಹೊರಬಂದಿತ್ತು. ಹೀಗಿರುವಾಗ ಕೇಸ್ ವಾಪಸ್ ಪಡೆಯುವುದಾಗಿ ಸುಜಾತಾ ಭಟ್

ಮಗಳು ನಾಪತ್ತೆ ಪ್ರಕರಣ ವಾಪಸ್‌ ಪಡೆಯಲು ಮುಂದಾದರಾ ಸುಜಾತ ಭಟ್‌? Read More »

ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ.ದಾಳಿ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರ ನಗರದಲ್ಲಿರುವ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವೀರೇಂದ್ರ ಪಪ್ಪಿಯ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಗಳ ಮೇಲೂ ದಾಳಿಯಾಗಿದೆ. ದಾಳಿ ನಡೆಸಿ ಶಾಕ್‌ ಕೊಟ್ಟಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ.ದಾಳಿ Read More »

ಸಮೀರ್‌ ವಿರುದ್ಧ ಇನ್ನೊಂದು ಕೇಸ್‌ ದಾಖಲು

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅವಹೇಳನ ಮಾಡಿದ ಆರೋಪ ಧರ್ಮಸ್ಥಳ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಡಿಯೋ ಮಾಡಿ ಸದ್ಯ ಜಾಮೀನು ಪಡೆದು ಬಂಧನದಿಂದ ಪಾರಾಗಿರುವ ಯೂಟ್ಯೂಬರ್ ಮೊಹಮ್ಮದ್‌ ಸಮೀರ್ ವಿರುದ್ಧ ವಿಶ್ವ ಹಿಂದೂ ಪರಿಷತ್ ಸದಸ್ಯ ಮಂಜು ಜೈನ್ ಎಂಬವರು ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ

ಸಮೀರ್‌ ವಿರುದ್ಧ ಇನ್ನೊಂದು ಕೇಸ್‌ ದಾಖಲು Read More »

ಬಂಧನದ ಭೀತಿಯಲ್ಲಿದ್ದ ಸಮೀರನಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಬಗ್ಗೆ AI ವಿಡಿಯೋ ಮಾಡಿ ಸಮಾಜದ ದಾರಿ ತಪ್ಪಿಸಿದ ಆರೋಪದಲ್ಲಿ ಪೊಲೀಸರ ಬಂಧನದ ಭೀತಿಯಲ್ಲಿದ್ದ ದೂತ ಸಮೀರನಿಗೆ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳದ ವಿರುದ್ಧ ಸಮೀರ್ ಮಾಡಿದ್ದ AI ವಿಡಿಯೋ ಸಮಾಜದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಈ ಹಿನ್ನೆಲೆ ಆತನ ವಿರುದ್ಧ ಸುಮೋಟೋ ಪ್ರಕರಣವನ್ನು ಪೊಲೀಸರು ದಾಖಲು ಮಾಡಿದ್ದರು. ಆತನನ್ನು ಬಂಧಿಸುವುದಕ್ಕಾಗಿ ಪೊಲೀಸರು ಬನ್ನೇರುಘಟ್ಟದ ಆತನ ಬಾಡಿಗೆ ಮನೆಯ ಬಳಿಗೂ ತೆರಳಿದ್ದರು. ಬಂಧನದ ಭೀತಿ

ಬಂಧನದ ಭೀತಿಯಲ್ಲಿದ್ದ ಸಮೀರನಿಗೆ ನಿರೀಕ್ಷಣಾ ಜಾಮೀನು Read More »

ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ತಾಲೂಕು ಸಂಚಾರಿ ಪೀಠ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ತಿಮರೋಡಿಗೆ ಎರಡು ಬಾರಿ ನೊಟೀಸ್ ‌ನೀಡಲಾಗಿತ್ತು. ಆದರೆ ಅದಕ್ಕೆ ಯಾವುದೇ ಉತ್ತರ ನೀಡದ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದರು. ತಿಮರೋಡಿ ಬಂಧನದ ಸಮಯದಲ್ಲಿ ಅವರ ನಿವಾಸದ ಸಮೀಪ ಹೈಡ್ರಾಮಾ ನಡೆದಿದ್ದು, ಕೊನೆಗೆ ಅವರ ಖಾಸಗಿ ವಾಹನದಲ್ಲಿ

ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ Read More »

error: Content is protected !!
Scroll to Top