ರಾಜ್ಯ

ಕರಾವಳಿಯಲ್ಲಿ ಉಷ್ಣ ಮಾರುತ ಬೀಸುವ ಎಚ್ಚರಿಕೆ

ಎರಡು ದಿನ ಉಷ್ಣಾಂಶ ಗರಿಷ್ಠ ಮಟ್ಟಕ್ಕೇರುವ ಸಾಧ್ಯತೆ ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ಎರಡು ದಿನ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12ರವರೆಗೆ ಉಷ್ಣ ಮಾರುತ ಬೀಸುವ ಸಾಧ್ಯತೆಯಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಅರಬ್ಬಿ […]

ಕರಾವಳಿಯಲ್ಲಿ ಉಷ್ಣ ಮಾರುತ ಬೀಸುವ ಎಚ್ಚರಿಕೆ Read More »

ಫಲಿತಾಂಶ ದಿನವೇ ಪಿಯುಸಿ ವಿದ್ಯಾರ್ಥಿನಿ ನಿಗೂಢ ಸಾವು

ತಾಯಿಯ ಮೇಲೆ ಅನುಮಾನ ವ್ಯಕ್ತಪಡಿಸಿದ ಸಂಬಂಧಿಕರು ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ದಿನವೇ ಬೆಂಗಳೂರಿನ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ತನುಶ್ರೀ (18) ಮೃತಪಟ್ಟ ವಿದ್ಯಾರ್ಥಿನಿ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದೆ. ಆದರೆ ಸಂಬಂಧಿಕರು ವಿದ್ಯಾರ್ಥಿನಿಯ ತಾಯಿಯ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಳಾದ ಕಾರಣ

ಫಲಿತಾಂಶ ದಿನವೇ ಪಿಯುಸಿ ವಿದ್ಯಾರ್ಥಿನಿ ನಿಗೂಢ ಸಾವು Read More »

ಹುಲಿಕಲ್‌ ಘಾಟಿಯಲ್ಲಿ ಭೂಕುಸಿತವಾಗಿ ಮೂವರು ಕಾರ್ಮಿಕರು ಸಾವು

ರಸ್ತೆ ಅಗಲೀಕರಣ ಕಾಮಗಾರಿ ನಡೆಯುವಾಗ ಸಂಭವಿಸಿದ ದುರಂತ ಶಿವಮೊಗ್ಗ: ಹುಲಿಕಲ್‌ ಘಾಟ್‌ನಲ್ಲಿ (ಬಾಳೇಬರೆ) ರಸ್ತೆ ಅಗಲೀಕರಣ ವೇಳೆ ಗುಡ್ಡ ಕುಸಿತ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳದಲ್ಲಿಯೇ ಇದ್ದ ಕಾಮಗಾರಿ ಮೇಲ್ವಿಚಾರಕ ಸೇರಿ ಮೂವರು ಮೃತಪಟ್ಟಿದ್ದಾರೆ. ಕಾಮಗಾರಿ ಮೇಲ್ವಿಚಾರಕ ಚಕ್ಕಾರು ಗ್ರಾಮದ ರಾಘು (37), ಹಾವೇರಿ ಜಿಲ್ಲೆಯ ನೆಲಗಲು ಗ್ರಾಮದ ರಾಜು (30) ಹಾಗೂ ಶಬ್ಬೀರ್(40) ಮೃತ ಕಾರ್ಮಿಕರು. ಮಲೆನಾಡು ಮತ್ತು ಕರಾವಳಿ ಸಂಪರ್ಕಕ್ಕೆ ಹುಲಿಕಲ್‌ ಘಾಟ್‌ ಮುಖ್ಯ ಸಂಪರ್ಕ ಸೇತುವೆಯಾಗಿದೆ.

ಹುಲಿಕಲ್‌ ಘಾಟಿಯಲ್ಲಿ ಭೂಕುಸಿತವಾಗಿ ಮೂವರು ಕಾರ್ಮಿಕರು ಸಾವು Read More »

ಚಂದ್ರದ್ರೋಣ ಬೆಟ್ಟದಲ್ಲಿ ಬಾಲಕಿ ನಾಪತ್ತೆ ಪ್ರಕರಣ : ನಾಲ್ಕು ದಿನವಾದರೂ ಸಿಗದ ಸುಳಿವು

ಕಿಡ್ನಾಪ್‌ ಆಗಿರುವ ಕುರಿತು ಆತಂಕ ವ್ಯಕ್ತಪಡಿಸಿದ ತಾಯಿ ಚಿಕ್ಕಮಗಳೂರು: ರಾಜ್ಯದ ಅತ್ಯಂತ ಎತ್ತರದ ಪ್ರದೇಶವಾಗಿರುವ ದತ್ತಪೀಠದ ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರಾ ಬೆಟ್ಟದ ಬಳಿ ಕೇರಳದ ಬಾಲಕಿ ಶ್ರೀನಂದಾ (15) ನಾಪತ್ತೆಯಾದ ಪ್ರಕರಣ ಇನನೂ ನಿಗೂಢವಾಗಿಯೇ ಉಳಿದಿದ್ದು, ಬಾಲಕಿಯ ತಾಯಿ ರೋಹಿಣಿ ಮಗಳು ಆಕಸ್ಮಿಕವಾಗಿ ಬಿದ್ದಿರಲು ಸಾಧ್ಯವಿಲ್ಲ. ಯಾರೋ ಮಾದಕ ದ್ರವ್ಯ ಕೊಟ್ಟು ಅಪಹರಿಸಿದ್ದಾರೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ನಾಪತ್ತೆಯಾದ ಬಾಲಕಿಯ ಹುಡುಕಾಟಕ್ಕಾಗಿ ನೂರಾರು ಪೊಲೀಸ್, ಅಗ್ನಿಶಾಮಕ ಹಾಗೂ ಅರಣ್ಯ ಸಿಬ್ಬಂದಿ ಸೊಂಟಕ್ಕೆ ಹಗ್ಗ ಕಟ್ಕೊಂಡು 300 ಅಡಿ

ಚಂದ್ರದ್ರೋಣ ಬೆಟ್ಟದಲ್ಲಿ ಬಾಲಕಿ ನಾಪತ್ತೆ ಪ್ರಕರಣ : ನಾಲ್ಕು ದಿನವಾದರೂ ಸಿಗದ ಸುಳಿವು Read More »

ಪತಿಯ ಶವದ ಜೊತೆಗೆ ಹತ್ತು ದಿನ ಕಾಲ ಕಳೆದ ಮಾನಸಿಕ ಅಸ್ವಸ್ಥ ಪತ್ನಿ

ಚಿಕ್ಕಮಗಳೂರು: ಮೃತ ಪತಿಯ ಶವದ ಜೊತೆಗೆ ಮಾನಸಿಕ ಅಸ್ವಸ್ಥ ಪತ್ನಿಯೊಬ್ಬರು ಹತ್ತು ದಿನಗಳನ್ನು ಕಳೆದ ಮನ ಕಲಕುವ ಘಟನೆ ಬಣಕಲ್‌ನಲ್ಲಿ ನಡೆದಿದೆ. ಸುಭಾಶ್ ನಗರದ ಸಿರಿಲ್ ಮೋನಿಸ್(77) ಅವರು ಮೃತರು. ಅವರ ಪತ್ನಿ ಸಿಸಿಲ್ ಮಾನಸಿಕ ಅಸ್ವಸ್ಥರಾಗಿದ್ದು ಪತಿಯ ಶವದ ಜೊತೆಗೆ ಹತ್ತು ದಿನಗಳ ಕಾಲ ಕಳೆದಿದ್ದಾರೆ. ಅವರ ಪುತ್ರ ಮೆಲ್ವಿನ್ ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪುತ್ರಿ ದುಬೈ‌ನಲ್ಲಿ ‌ಶಿಕ್ಷಕಿಯಾಗಿದ್ದಾರೆ. ಸಿರಿಲ್ ಅವರಿಗೆ ಆರೋಗ್ಯ ಸಮಸ್ಯೆ ಇದ್ದು, ಅವರಿಗೆ ಚಿಕಿತ್ಸೆ ಕೊಡಿಸಿ ಕೆಲ ದಿನಗಳ ಹಿಂದಷ್ಟೇ

ಪತಿಯ ಶವದ ಜೊತೆಗೆ ಹತ್ತು ದಿನ ಕಾಲ ಕಳೆದ ಮಾನಸಿಕ ಅಸ್ವಸ್ಥ ಪತ್ನಿ Read More »

ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ವೆಬ್‌ಸೈಟ್, ಮೊಬೈಲ್ ಆ್ಯಪ್‌ನಲ್ಲಿ ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು https://karresults.nic.in 3, “ಕರ್ನಾ ಟಕ ಒನ್’ ಮೊಬೈಲ್ ಆ್ಯಪ್ ಮೂಲಕವೂ ಪಡೆಯಬಹುದು. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶ ರವಾನೆಯಾಗುವ ವ್ಯವಸ್ಥೆ ಕಲ್ಪಿಸಲಾಗಿದೆ. ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಣೆ ವೇಳೆಯೇ ಅಂಕಪಟ್ಟಿಗಳನ್ನೂ ಡಿಜಿಲಾಕರ್ ನಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ. https://www.digilocker.gov.in ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು

ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ Read More »

ಭೀಕರ ರಸ್ತೆ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ

ಬೀದರ್: ಔರಾದ್ ತಾಲೂಕಿನ ಧರಿ ಹನುಮಾನ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ವ್ಯಕ್ತಿಯೊಬ್ಬ ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಔರಾದ್ ತಾಲೂಕಿನ ಚಟ್ನಾಳ ಗ್ರಾಮದ ಸಂಗಮೇಶ ಕೂಡ್ಲೆ (40) ಮೃತಪಟ್ಟ ದುರ್ದೈವಿ. ಜಾತ್ರೆಗೆ ತೆರಳಿ ಊರಿಗೆ ಹಿಂದಿರುಗುವಾಗ ಟಾಟಾ ಮ್ಯಾಜಿಕ್ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ವಾಹನದಲ್ಲಿದ್ದ ಸಂಗಮೇಶ ತೀವ್ರ ಗಾಯಗೊಂಡಿದ್ದು, ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಚಂದ್ರಕಾಂತ ಮುಚಳಂಬೆ, ಸಂಜುಕುಮಾರ ತೊಗರಗೆ, ಗುಂಡಮ್ಮ ದುಬಲಗುಂಡೆ ಅವರಿಗೆ ಗಾಯಗಳಾಗಿದ್ದು, ಬೀದರ್

ಭೀಕರ ರಸ್ತೆ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ Read More »

ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ತಂಡಕ್ಕೆ ಜಯ

ಮಂಗಳೂರು: ಮಂಗಳೂರಿನ ‘ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ’ದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ನೇತೃತ್ವದ ‘ಸಮಗ್ರ ಅಭಿವೃದ್ಧಿ ಸಂಘಟನಾ ಬಳಗ’ ಸ್ಪಷ್ಟ ಬಹುಮತದೊಂದಿಗೆ ಜಯ ಗಳಿಸಿದೆ. ಸುಮಾರು 2083 ಮತದಾರರನ್ನು ಹೊಂದಿದ್ದ ಈ ಚುನಾವಣೆಯಲ್ಲಿ ಲೋಕಯ್ಯ ಗೌಡ ಬಳಗ ಮತ್ತು ಕಿರಣ್ ಬುಡ್ಲೆಗುತ್ತು ಬಳಗದ ನಡುವೆ ತೀವ್ರ ಪೈಪೋಟಿ ಇತ್ತು. ಒಟ್ಟು 21 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ನೇತೃತ್ವದ ತಂಡ 16 ಸ್ಥಾನಗಳನ್ನು ಮುಡಿಗೇರಿಸಿಕೊಂಡು ಅಭೂತಪೂರ್ವ ಜಯ ಸಾಧಿಸಿದರೆ,

ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಚುನಾವಣೆಯಲ್ಲಿ ಕಿರಣ್ ಬುಡ್ಲೆಗುತ್ತು ತಂಡಕ್ಕೆ ಜಯ Read More »

ಬೆಂಗಳೂರಿನಲ್ಲಿ ‘ಝೋಂಬಿ ಡ್ರಗ್ಸ್’ ಮಾರಾಟದ ಸಂದೇಹ: ನಿಂತಲ್ಲೇ ‌ತೂರಾಡಿದ ಯುವಕನ ವಿಡಿಯೋ ವೈರಲ್

ಬೆಂಗಳೂರು: ಝೋಂಬಿ ‌ಡ್ರಗ್ಸ್ ಹೆಸರಿನ ಮಾದಕ ದ್ರವ್ಯ ನಗರದಲ್ಲಿ ಮಾರಾಟವಾಗುತ್ತಿರುವ ಸಂದೇಹ ವ್ಯಕ್ತವಾಗಿದ್ದು, ಕೆಲ ಯುವಕರು ಆ ಡ್ರಗ್ಸ್ ಸೇವಿಸಿ‌ ಅಮಲಿನಲ್ಲಿ ನಿಂತಲ್ಲೇ ‌ತೂರಾಟ‌ ನಡೆಸುತ್ತಿದ್ದಾರಾ? ಎಂಬ ಶಂಕೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಯುವಕನೊಬ್ಬ ಇತ್ತೀಚೆಗೆ ನಿಂತಲ್ಲೇ ಗಂಟೆಗಟ್ಟಲೆ ತೂರಾಡಿದ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸಹ ವೈರಲ್ ಆಗಿದೆ. ಪೊಲೀಸರು ಸಹ ಈ ವಿಷಯಕ್ಕೆ ಸಂಬಂಧಿಸಿದ ಹಾಗೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾಗಿ ತಿಳಿದು ಬಂದಿದೆ. ಈ‌ ಸ್ಥಿತಿಯಲ್ಲಿ ಕಂಡುಬಂದ ಯುವಕನ ಬಗ್ಗೆ ಮಾಹಿತಿ ಕಲೆ ಹಾಕುವ

ಬೆಂಗಳೂರಿನಲ್ಲಿ ‘ಝೋಂಬಿ ಡ್ರಗ್ಸ್’ ಮಾರಾಟದ ಸಂದೇಹ: ನಿಂತಲ್ಲೇ ‌ತೂರಾಡಿದ ಯುವಕನ ವಿಡಿಯೋ ವೈರಲ್ Read More »

ಆರಿಫ್ ಕೊಲೆ ಪ್ರಕರಣದ ಮಹತ್ವದ ಸುಳಿವುಗಳು ಪೊಲೀಸರಿಗೆ ಲಭ್ಯ: 7 ಮಂದಿ ಸೆರೆ

ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದ ಆರಿಫ್ ಕೊಲೆ ಪ್ರಕರಣವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದು, ಕೃತ್ಯಕ್ಕೆ ‌ಸಂಬಂಧಿಸಿದ ಹಾಗೆ ಪ್ರಮುಖ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಾ. 27 ರಂದು ಆರಿಫ್ ಕೊಲೆ ನಡೆದಿದ್ದು ಆರೋಪಿಗಳಾದ ರಿಫತ್, ಜುಟ್ಟು ಅಶ್ಪಾಕ್, ಖಲೀಲ್, ಶಾಖಿರ್, ಇರ್ಫಾನ್, ರಿಜ್ವಾನ್‌ನನ್ನು ಬಂಧಿಸಲಾಗಿದೆ. ಇವರುಗಳು ಆರಿಫ್ ಬೈಕ್ ಅನ್ನು ಇನ್ನೋವಾ ಕಾರಿನಲ್ಲಿ ಹಿಂಬಾಲಿಸಿ ಬಳಿಕ ಢಿಕ್ಕಿ ಹೊಡೆದು ಕೆಳಕ್ಕೆ ಉರುಳಿಸಿದ್ದಾರೆ. ಆ ಬಳಿಕ ಆತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಯಾವುದೇ

ಆರಿಫ್ ಕೊಲೆ ಪ್ರಕರಣದ ಮಹತ್ವದ ಸುಳಿವುಗಳು ಪೊಲೀಸರಿಗೆ ಲಭ್ಯ: 7 ಮಂದಿ ಸೆರೆ Read More »

error: Content is protected !!
Scroll to Top