ರಾಜ್ಯ

ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 300 ಹಾಸಿಗೆಗಳನ್ನು ಒಳಗೊಂಡ ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಅಪಘಾತಕ್ಕೆ ಒಳಗಾದವರಿಗೆ ತುರ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಮತ್ತು ಉತ್ತಮ ಆರೈಕೆಯ ಮೂಲಕ ಜೀವ ಉಳಿಸುವುದಕ್ಕೆ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ. ಸುಮಾರು 498 ಕೋಟಿ ರೂ. ವೆಚ್ಚದಲ್ಲಿ ಕ್ಯಾಲಸನಹಳ್ಳಿಯಲ್ಲಿ ನಿಮ್ಹಾನ್ಸ್ ಸ್ನಾತಕೋತ್ತರ ಮತ್ತು 300 ಹಾಸಿಗೆಗಳುಳ್ಳ ಪಾಲಿ ಟ್ರಾಮಾ […]

ನಿಮ್ಹಾನ್ಸ್ ಪಾಲಿ ಟ್ರಾಮಾ ಘಟಕಕ್ಕೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ Read More »

ಕೋಡಿಮಠದ ಸ್ವಾಮೀಜಿಯ ಸರ, ಉಂಗುರ ಕದ್ದ ಕಳ್ಳ ಸೆರೆ

ರೈಲಿನಲ್ಲಿ ಪ್ರಯಾಣಿಸುವಾಗ ಬ್ಯಾಗಿನಿಂದ ಕಳವಾಗಿದ್ದ ಆಭರಣ ಹಾಸನ : ದೇಶ-ಕಾಲದ ಬಗ್ಗೆ ಭವಿಷ್ಯ ನುಡಿದು ಖ್ಯಾತರಾಗಿರುವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿಯ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ ಚಿನ್ನ ಮತ್ತು ನಗದು ಕಳ್ಳತನ ಮಾಡಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಏಳು ವರ್ಷಗಳ ಹಿಂದೆ ಈತ ಕಳ್ಳತನ ನಡೆದಿತ್ತು. ಉತ್ತರಾಖಂಡದ ನೈನಿತಾಲ್ ಮೂಲದ ಜಿತೇಂದ್ರ ಕುಮಾರ್ ಎಂಬಾತ ಆರೋಪಿ. 2018ರಲ್ಲಿ ಸ್ವಾಮೀಜಿ ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಲೆದರ್ ಬ್ಯಾಗ್‌ನಲ್ಲಿ 250

ಕೋಡಿಮಠದ ಸ್ವಾಮೀಜಿಯ ಸರ, ಉಂಗುರ ಕದ್ದ ಕಳ್ಳ ಸೆರೆ Read More »

ಚಾಮರಾಜನಗರದಲ್ಲಿ ಇನ್ನೊಂದು ಹುಲಿ ಸಾವು

4-5 ವರ್ಷದ ಹೆಣ್ಣು ಹುಲಿಯ ಕಳೇಬರ ಪತ್ತೆ ಬೆಂಗಳೂರು: ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಹುಲಿಗಳ ಹತ್ಯಾಕಾಂಡ ಹಸಿರಾಗಿರುವಾಗಲೇ ರಾಜ್ಯದಲ್ಲಿ ಇನ್ನೊಂದು ಹುಲಿ ಸಾವನ್ನಪ್ಪಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರದ ಗುಂಡ್ರೆ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. 4-5 ವರ್ಷದ ಹೆಣ್ಣು ಹುಲಿ ಸಹಜವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಅರಣ್ಯ ಸಿಬ್ಬಂದಿ ಗಸ್ತು ತಿರುಗುವ ವೇಳೆ ಕಳೇಬರ ಪತ್ತೆ ಆಗಿದೆ. ಇಂದು ವೈದ್ಯರು ಹುಲಿ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಐದು ಹುಲಿಗಳನ್ನು ವಿಷವಿಕ್ಕಿ ಸಾಯಿಸಿದ ಪ್ರಕರಣ

ಚಾಮರಾಜನಗರದಲ್ಲಿ ಇನ್ನೊಂದು ಹುಲಿ ಸಾವು Read More »

ಕೆನರಾ ಬ್ಯಾಂಕ್‌ ಶಾಖೆಯಿಂದ 59 ಕೆಜಿ ಚಿನ್ನ ಕದ್ದ ಆರೋಪಿಗಳು ಅರೆಸ್ಟ್‌

ಬ್ಯಾಂಕ್‌ ಮ್ಯಾನೇಜರ್‌ ಕಳ್ಳರ ಗ್ಯಾಂಗಿನ ಲೀಡರ್‌ ; ಸಿನಿಮೀಯ ರೀತಿಯಲ್ಲಿ ಪ್ಲ್ಯಾನ್‌ ಬೆಂಗಳೂರು : ವಿಜಯಪುರ ಜಿಲ್ಲೆಯ ಬಸನವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮೇ 25ರಂದು ನಸುಕಿನ ಹೊತ್ತು ನಡೆದ 59 ಕೆಜಿ ಬಂಗಾರ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಕೊನೆಗೂ ಸಫಲರಾಗಿದ್ದಾರೆ. ಆಘಾತಕಾರಿ ವಿಚಾರವೆಂದರೆ ಕೆನರಾ ಬ್ಯಾಂಕ್‌ ಮ್ಯಾನೇಜರ್‌ ಈ ಕಳ್ಳತನದ ರೂವಾರಿ. ಬ್ಯಾಂಕಿನಿಂದ ಮೇ 25ರಂದು ನಸುಕಿನ ಹೊತ್ತು 58.975.94 ಕೆಜಿ ಚಿನ್ನಾಭರಣಗಳು ಮತ್ತು 5.20 ಲಕ್ಷ ನಗದು ಕಳ್ಳತನವಾಗಿತ್ತು.

ಕೆನರಾ ಬ್ಯಾಂಕ್‌ ಶಾಖೆಯಿಂದ 59 ಕೆಜಿ ಚಿನ್ನ ಕದ್ದ ಆರೋಪಿಗಳು ಅರೆಸ್ಟ್‌ Read More »

ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದಕ್ಕೆ ಕಾರಣ ಕೆಂಪೇಗೌಡರು : ಸಿ.ಎಂ. ಸಿದ್ದರಾಮಯ್ಯ

ಬೆಂಗಳೂರು: ಆಧುನಿಕ ಬೆಂಗಳೂರಿನ ನಿರ್ಮಾತೃಗಳಾದ ಕೆಂಪೇಗೌಡರು ದಕ್ಷ, ದೂರದೃಷ್ಚಿಯಿದ್ದ ಒಬ್ಬ ಆಡಳಿತಗಾರ ಎಂದು ಸಿ.ಎಂ. ಸಿದ್ದರಾಮಯ್ಯ ಹೇಳಿದ್ದಾರೆ. ನಾಡಪ್ರಭು ಕೆಂಪೇಗೌಡರ ಜಯಂತಿಯ ಹಿನ್ನೆಲೆ ವಿಧಾನಸೌಧದ ಪೂರ್ವದಿಕ್ಕಿನಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದ್ದಾರೆ. ಕೆಂಪೇಗೌಡ ಜಯಂತಿಯನ್ನು ಸರ್ಕಾರವು ಕೆಂಪೇಗೌಡ ಪ್ರಾಧಿಕಾರ ಮತ್ತು ಬಿಬಿಎಂಪಿ ಸಹಯೋಗದಲ್ಲಿ ಆಚರಣೆ ಮಾಡುತ್ತಿದೆ. ಇಂದು ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದೆ ಎಂದರೆ ಅದಕ್ಕೆ ಅಡಿಪಾಯ ಹಾಕಿಕೊಟ್ಟವರು ಕೆಂಪೇಗೌಡರು ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದಕ್ಕೆ ಕಾರಣ ಕೆಂಪೇಗೌಡರು : ಸಿ.ಎಂ. ಸಿದ್ದರಾಮಯ್ಯ Read More »

ಕೆಆರ್‌ಎಸ್ ‌ಸಮೀಪ ಮನರಂಜನಾ ಪಾರ್ಕ್, ಕಾವೇರಿ ಪ್ರತಿಮೆ : ಸರ್ಕಾರಕ್ಕೆ ನೊಟೀಸ್ ನೀಡಿದ ಹೈಕೋರ್ಟ್

ಬೆಂಗಳೂರು: ಕೆಆರ್‌ಎಸ್ ಸಮೀಪದಲ್ಲಿ ಮನರಂಜನಾ ಪಾರ್ಕ್ ಮತ್ತು ಕಾವೇರಿ ಆರತಿ ನಿರ್ಮಾಣ ಕಾಮಗಾರಿಗೆ. ಸಂಬಂಧಿಸಿದಂತೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ನೊಟೀಸ್ ‌ಜಾರಿ ಮಾಡಿ ವಿವರಣೆ ಕೇಳಿದೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರ್ ರಾವ್, ಸಿ.ಎಂ. ಜೋಶಿ ಅವರಿದ್ದ ಪೀಠ ವಿಚಾರಣೆ ನಡೆಸಿದ್ದು, ವಿವರಣೆ ಕೋರಿ ಕರ್ನಾಟಕ ಸರ್ಕಾರ ಮತ್ತು ಕಾವೇರಿ ನೀರಾವರಿ ನಿಗಮಕ್ಕೆ ನೊಟೀಸ್ ನೀಡಿರುವುದಾಗಿದೆ. ಈ ಅರ್ಜಿಯಲ್ಲಿ ಅಣೆಕಟ್ಟಿನ ಸಮೀಪ 120 ಅಡಿಯ ಕಾವೇರಿ ಮೂರ್ತಿ

ಕೆಆರ್‌ಎಸ್ ‌ಸಮೀಪ ಮನರಂಜನಾ ಪಾರ್ಕ್, ಕಾವೇರಿ ಪ್ರತಿಮೆ : ಸರ್ಕಾರಕ್ಕೆ ನೊಟೀಸ್ ನೀಡಿದ ಹೈಕೋರ್ಟ್ Read More »

ಐದು ಹುಲಿಗಳ ಸಾವು : ಐವರು ಶಂಕಿತರ ವಶ

ಗ್ರಾಮಸ್ಥರ ವಿಚಾರಣೆ; ಗೋವಿನ ಮಾಲೀಕನ ಹುಡುಕಾಟ ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಐವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹುಲಿಗಳ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಈಗಾಗಲೇ ಆಶ್ವಾಸನೆ ನೀಡಿದೆ. ಹುಲಿಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದ್ದು, ವರದಿ ಕೈಸೇರಿದ ಬಳಿಕ ಸಾವಿಗೆ

ಐದು ಹುಲಿಗಳ ಸಾವು : ಐವರು ಶಂಕಿತರ ವಶ Read More »

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿ ಫೈಟ್‌ ಮತ್ತೆ ಮುನ್ನೆಲೆಗೆ

ಒಳಗಿಂದೊಳಗೆ ನಡೆಯುತ್ತಿದೆ ಹಲವು ಮಸಲತ್ತು ಬೆಂಗಳೂರು: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿ ಫೈಟ್‌ ಮತ್ತೆ ಮುನ್ನೆಲೆಗೆ ಬಂದಿದೆ. ಶಾಸಕರು ಒಬ್ಬೊಬ್ಬರಾಗಿ ಅಸಮಾಧಾನ ವ್ಯಕ್ತಪಡಿಸಲು ಶುರುಮಾಡಿದ್ದು, ಕೈಯೊಳಗಿನ ತಳಮಳ ಬೀದಿಗೆ ಬರುತ್ತಿದೆ. ಬಿ.ಆರ್‌.ಪಾಟೀಲ್‌, ರಾಜು ಕಾಗೆ ಸಹಿತ ಹಲವು ಕಾಂಗ್ರೆಸ್‌ ಶಾಸಕರು ಸರ್ಕಾರದ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಿಗೆ ಇನ್ನೂ ಕೆಲವು ಶಾಸಕರು ಅತೃಪ್ತಿ ತೋಡಿಕೊಳ್ಳತೊಡಗಿದ್ದಾರೆ. ಹೈಕಮಾಂಡ್‌ ಎಷ್ಟೇ ಖಡಕ್‌ ವಾರ್ನಿಂಗ್‌ ನೀಡಿದರೂ ಕಾಂಗ್ರೆಸ್‌ನೊಳಗಿನ ಬೇಗುದಿ ಪೂರ್ಣವಾಗಿ ಶಮನವಾಗುತ್ತಿಲ್ಲ. ಇದಕ್ಕೆಲ್ಲ ಮುಖ್ಯಮಂತ್ರಿ ಬದಲಾವಣೆಯ ವಿಚಾರವೇ ಮೂಲ ಎನ್ನಲಾಗುತ್ತಿದೆ.

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿ ಫೈಟ್‌ ಮತ್ತೆ ಮುನ್ನೆಲೆಗೆ Read More »

ಮಲೆಮಹದೇಶ್ವರ ವನ್ಯಧಾಮದಲ್ಲಿ ವಿಷ ಪ್ರಾಶನದಿಂದ ಐದು ಹುಲಿಗಳ ಸಾವು

ದೇಶಾದ್ಯಂತ ದಿಗ್ಭ್ರಮೆ ಮೂಡಿಸಿದ ಅಮಾನವೀಯ ಘಟನೆ ಬೆಂಗಳೂರು: ಚಾಮರಾಜನಗರದಲ್ಲಿ ಐದು ಹುಲಿಗಳ ಸಾವಿಗೆ ವಿಷಪ್ರಾಶನ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಹುಲಿಗಳ ಸಂರಕ್ಷಣೆಯಲ್ಲಿ ದೇಶದಲ್ಲೇ ಎರಡಡನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಒಂದೇ ಸಲ ಐದು ಹುಲಿಗಳು ಸಾವಿಗೀಡಾಗಿರುವುದು ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿರುವ ದಿನಗಳಲ್ಲಿ ಐದು ಹುಲಿಗಳನ್ನು ವಿಷವಿಕ್ಕಿ ಕೊಂದಿರುವುದು ಆಘಾತವುಂಟುಮಾಡಿದೆ. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಹಾಗೂ ನಾಲ್ಕು ಹುಲಿಗಳು ನಿನ್ನೆ ಅಸಹಜ ರೀತಿಯಲ್ಲಿ ಸಾವಿಗೀಡಾಗಿರುವುದು ಕಂಡುಬಂದಿತ್ತುಯ. ಹೂಗ್ಯಂ ಅರಣ್ಯ ವಲಯದ ಮೀಣ್ಯಂ

ಮಲೆಮಹದೇಶ್ವರ ವನ್ಯಧಾಮದಲ್ಲಿ ವಿಷ ಪ್ರಾಶನದಿಂದ ಐದು ಹುಲಿಗಳ ಸಾವು Read More »

ಪೈಪ್‍ ಲೈನ್‍ ಕೊರೆದು ಕೋಟ್ಯಾಂತರ ಮೌಲ್ಯದ ಪೆಟ್ರೋಲ್‍ ಕಳ್ಳತನ | ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ರಾಜ್ಯದಲ್ಲೇ ಅತೀ ದೊಡ್ಡ ಪೆಟ್ರೋಲ್‍  ಕಳ್ಳತನ ಮಾಡಿದ್ದ ತಂಡವೊಂದು ಮತ್ತೆ ಕಳ್ಳತನ ಸಾಹಸಕ್ಕೆ ಕೈಹಾಕಿದ್ದು ಇದೀಗ ಸಿಕ್ಕಿಬಿದ್ದಿದ್ದು ಪೊಲೀಸರ ಅತಿಥಿಯಾಗಿದೆ. 2011 ರಲ್ಲಿ ಪೆಟ್ರೋನೆಟ್ ಕಂಪನಿಯ ಪೈಪ್ ಕೊರೆದು ರಾಜ್ಯದಲ್ಲೇ ಅತಿದೊಡ್ಡ  ಪೆಟ್ರೋಲ್ ಕಳ್ಳತನ ಮಾಡಿದೆ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಜಿಲ್ಲೆಯ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಶಿಗರ ಗ್ರಾಮದಲ್ಲಿ ಕೋಟ್ಯಂತರ ರೂ. ಮೌಲ್ಯದ ಪೆಟ್ರೋಲ್ ಕಳ್ಳತನ ಘಟನೆ ನಡೆದಿದೆ. ಇದರಲ್ಲಿ ಪೆಟ್ರೋನೆಟ್ ಸಿಬ್ಬಂದಿಗಳು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಪೈಪ್‍ ಲೈನ್‍ ಕೊರೆದು ಕೋಟ್ಯಾಂತರ ಮೌಲ್ಯದ ಪೆಟ್ರೋಲ್‍ ಕಳ್ಳತನ | ಇಬ್ಬರು ಆರೋಪಿಗಳ ಬಂಧನ Read More »

error: Content is protected !!
Scroll to Top