ರಾಜ್ಯ

ಕಾಲ್ತುಳಿತ ಘಟನೆ : ಕೆಎಸ್‌ಸಿಎ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. ಕೆಎಸ್‌ಸಿಎ ಕಾರ್ಯದರ್ಶಿ ಎ. ಶಂಕರ್‌, ಖಜಾಂಚಿ ಜೈರಾಮ್‌ ಶುಕ್ರವಾರ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಎ. ಶಂಕರ್‌ ಅವರೇ ಪ್ರಕಟಣೆ ಹೊರಡಿಸಿದ್ದಾರೆ. ಕಾಲ್ತುಳಿತ ಪ್ರಕರಣ ಸಂಬಂಧ ಗುರುವಾರ ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ತನಿಖೆಯನ್ನು ಸಿಐಡಿಗೆ ವಹಿಸಿ ಕಾಲ್ತುಳಿತಕ್ಕೆ ಕಾರಣರಾದ ಆರ್‌ಸಿಬಿ ಆಡಳಿತ ಮಂಡಳಿ, ಡಿಎನ್‌ಎ […]

ಕಾಲ್ತುಳಿತ ಘಟನೆ : ಕೆಎಸ್‌ಸಿಎ ಇಬ್ಬರು ಪದಾಧಿಕಾರಿಗಳು ರಾಜೀನಾಮೆ Read More »

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು

ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ಗೆ ಹೋಗುವ ಎಚ್ಚರಿಕೆ ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತರಾದ ಘಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ನಿಜವಾದ ಸಂಕಷ್ಟ ಈಗ ಶುರುವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ವಿರುದ್ಧವೂ ಪೊಲೀಸ್‌ ದೂರು ನೀಡಲಾಗಿದೆ. ಬಿಜೆಪಿ ನಾಯಕರು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್‌ ವಿರುದ್ಧ ಕಬ್ಬನ್​ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯ ಸರ್ಕಾರ

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು Read More »

ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು

ಶೈಕ್ಷಣಿಕ ವರ್ಷದ 244 ದಿನ ವಿತರಿಸಲು ಇಲಾಖೆ ಆದೇಶ ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 51.61 ಲಕ್ಷ ಮಕ್ಕಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 244 ದಿನ ಮೊಟ್ಟೆ/ಬಾಳೆಹಣ್ಣು ವಿತರಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಾರದಲ್ಲಿ 2 ದಿನ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅನುದಾನದಲ್ಲಿ ಮತ್ತು ಉಳಿದ ನಾಲ್ಕು ದಿನ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಪೌಷ್ಟಿಕ ಆಹಾರ ವಿತರಿಸಲಾಗುತ್ತದೆ. ಪೂರ್ವ ಪ್ರಾಥಮಿಕ ತರಗತಿಯಿಂದ 10ನೇ ತರಗತಿವರೆಗಿನ ಮಕ್ಕಳು

ಈ ವರ್ಷವೂ ಶಾಲಾ ಮಕ್ಕಳಿಗೆ ಸಿಗಲಿದೆ ಮೊಟ್ಟೆ, ಬಾಳೆಹಣ್ಣು Read More »

ದಿನೇಶ್‌ ಅಮೀನ್‌ ಮಟ್ಟು ಸಹಿತ ನಾಲ್ವರು ಮೇಲ್ಮನೆಗೆ

ವಿಧಾನಪರಿಷತ್‌ನ ನಾಲ್ಕು ನಾಮನಿರ್ದೇಶಿತ ಸ್ಥಾನಗಳಿಗೆ ಆಯ್ಕೆ ಮಾಡಿ ಶಿಫಾರಸ್ಸು ಬೆಂಗಳೂರು : ವಿಧಾನಪರಿಷತ್‌ನ ಖಾಲಿ ಇರುವ ನಾಲ್ಕು ನಾಮನಿರ್ದೇಶಿತ ಸ್ಥಾನಗಳನ್ನು ಭರ್ತಿ ಮಾಡುವ ಪಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಗೆ ನೀಡಿದ್ದು, ದಿನೇಶ್‌ ಅಮಿನ್‌ ಮಟ್ಟು, ಆರತಿ ಕೃಷ್ಣ, ರಮೇಶ್‌ ಬಾಬು ಹಾಗೂ ಡಿ.ಜಿ.ಸಾಗರ್‌ ಅವರ ಹೆಸರು ಅಂತಿಮಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನಿಸಿದೆ. ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಸದಸ್ಯರ ಪೈಕಿ ಯು.ಬಿ.ವೆಂಕಟೇಶ್‌, ಪ್ರಕಾಶ್‌ ರಾಥೋಡ್‌, ಸಿ.ಪಿ. ಯೋಗೇಶ್ವರ್‌ (ರಾಜೀನಾಮೆ) ಹಾಗೂ ತಿಪ್ಪೇಸ್ವಾಮಿ ಅವರ

ದಿನೇಶ್‌ ಅಮೀನ್‌ ಮಟ್ಟು ಸಹಿತ ನಾಲ್ವರು ಮೇಲ್ಮನೆಗೆ Read More »

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌

ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತು ಹಾಕಿದ ಸಿದ್ದರಾಮಯ್ಯ ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯ ಬಂಧನ ಆಗುತ್ತಿದ್ದಂತೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್‌ ಅವರನ್ನು ಬಿಟ್ಟು ಕಳಿಸುವಂತೆ ಪೊಲೀಸರಿಗೆ ಒತ್ತಡ ಹಾಕಿದ್ದರು ಎಂಬ ವಿಚಾರ ತಿಳಿದು ಬಂದಿದೆ. ಇದೇ ಕಾರಣಕ್ಕೆ ಗೋವಿಂದರಾಜ್‌ ಅವರನ್ನು ತಮ್ಮ‌ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಸಿದ್ದರಾಮಯ್ಯ ತೆಗೆದು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಬೆಳಗ್ಗಿನ ಜಾವ ಆರ್‌ಸಿಬಿಯ ನಿಖಿಲ್‌ ಸೋಸಲೆ ಬಂಧನ

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌ Read More »

ಆರ್‍ ಸಿಬಿ ಸಂಭ್ರಮಾಚರಣೆ ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ | ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು: ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕರ ಕೊಠಡಿ ಸಂಖ್ಯೆ 160ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಅವರು ಮಾತನಾಡಿ, ಎಫ್‍ಐಆರ್‍ ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು

ಆರ್‍ ಸಿಬಿ ಸಂಭ್ರಮಾಚರಣೆ ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ | ರಾಜ್ಯದ ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ Read More »

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ

ಜನರ ಆಕ್ರೋಶದ ಹಿನ್ನೆಲೆಯಲ್ಲಿ ತನ್ನ ಮೇಲೆ ಆರೋಪ ಎಂದು ದೂರು ಬೆಂಗಳೂರು : ಆರ್​ಸಿಬಿ ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‌ಸಿಎ) ಆರೋಪಿಸಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್​ಐಆರ್ ದಾಖಲಿಸಲಾಗಿದೆ ಎಂದು

ಸಂಭ್ರಮಾಚರಣೆಗೆ ಕರೆ ಕೊಟ್ಟದ್ದೇ ಸರ್ಕಾರ : ಕೋರ್ಟ್‌ಗೆ ಕೆಎಸ್‌ಸಿಎ ಮಾಹಿತಿ Read More »

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ?

ಸಿಎಂ ನೀಡಿದ ಸುಳಿವಿನಿಂದಲೇ ಆರೋಪಿಗಳು ರಾತ್ರೋರಾತ್ರಿ ತಪ್ಪಿಸಿಕೊಂಡಿದ್ದಾರೆ ಎಂಬ ಆರೋಪ ಬೆಂಗಳೂರು: ಆರ್‌ಸಿಬಿ ಐಪಿಎಲ್‌ ಗೆದ್ದಾಗ ಸನ್ಮಾನ ಏರ್ಪಡಿಸಿ ಪ್ರಚಾರ ಪಡೆಯಲು ಯತ್ನಿಸಿದ ರಾಜ್ಯ ಸರ್ಕಾರ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಿದೆ. ಕಾಲ್ತುಳಿತ ಘಟನೆಯ ಪ್ರಮುಖ ಆರೋಪಿಗಳೆಲ್ಲ ಪರಾರಿಯಾಗಿದ್ದು, ಇವರು ತಪ್ಪಿಸಿಕೊಳ್ಳಲು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂಬ ಆರೋಪ ಈಗ ಕೇಳಿಬಂದಿದೆ. ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ ಸುಳಿವಿನಿಂದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದ ಪ್ರಮುಖ ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗುತ್ತಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ

ಕಾಲ್ತುಳಿತ : ಪ್ರಮುಖ ಆರೋಪಿಗಳು ಪರಾರಿಯಾಗಲು ಸರ್ಕಾರವೇ ಕಾರಣ? Read More »

ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪ್ರತಿನಿಧಿ ಸೇರಿ ನಾಲ್ವರ ಬಂಧನ

ಕೆಎಸ್‌ಸಿಎ ಪ್ರಮುಖರೆಲ್ಲಾ ರಾತ್ರೋರಾತ್ರಿ ಎಸ್ಕೇಪ್‌? ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಆದರೆ ಕೆಲವು ಪ್ರಮುಖ ಆರೋಪಿಗಳು ಪಲಾಯನ ಮಾಡಿದ್ದಾರೆ ಎನ್ನಲಾಗಿದೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್‌ಮೆಂಟ್‌ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ನ ಒಬ್ಬರು ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಎನ್‌ಎ ಇವೆಂಟ್‌ ಮ್ಯಾನೇಜ್ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಕೆಎಸ್‌ಸಿಎ ಪ್ರತಿನಿಧಿ ಹೆಸರು ಬಹಿರಂಗಪಡಿಸಿಲ್ಲ. ಕೆಎಸ್‌ಸಿಎ

ಕಾಲ್ತುಳಿತ ಪ್ರಕರಣ : ಕೆಎಸ್‌ಸಿಎ ಪ್ರತಿನಿಧಿ ಸೇರಿ ನಾಲ್ವರ ಬಂಧನ Read More »

ಬೆಂಗಳೂರು ಪೊಲೀಸ್‌ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ

ಅಮಾನತಿಗೆ ಕಾರಣ ಕೊಟ್ಟ ಸರ್ಕಾರ ಬೆಂಗಳೂರು: ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಬಲಿಯಾಗಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆಗೆ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸಹಿತ ಕೆಲವು ಪೊಲೀಸ್‌ ಅಧಿಕಾರಿಗಳನ್ನು ಹೊಣೆ ಮಾಡಿರುವ ಸರ್ಕಾರ ನಿನ್ನೆ ಅವರನ್ನು ಅಮಾನತಿನಲ್ಲಿಟ್ಟಿದೆ. ಆದರೆ ದಕ್ಷ ಅಧಿಕಾರಿ ಎಂದು ಗುರುತಿಸಿಕೊಂಡಿರುವ ಬಿ.ದಯಾನಂದ್‌ ಅವರ ತಲೆದಂಡಕ್ಕೆ ಸಾರ್ವಜನಿಕ ವಲಯದಿಂದ ಭಾರಿ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರ ತಾನು ಮಾಡಿದ ತಪ್ಪನ್ನು ಮುಚ್ಚಿಕೊಳ್ಳಲು ಪೊಲೀಸರ ತಲೆದಂಡ ಮಾಡಿದೆ. ಅದರಲ್ಲೂ ಕೆರಿಯರ್‌ನಲ್ಲಿ

ಬೆಂಗಳೂರು ಪೊಲೀಸ್‌ ಆಯುಕ್ತರ ತಲೆದಂಡಕ್ಕೆ ಸಾರ್ವಜನಿಕರಿಂದ ಆಕ್ಷೇಪ Read More »

error: Content is protected !!
Scroll to Top