ಉಡುಪಿ

ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು

ಕುಂದಾಪುರ : ರಿಷಬ್‌ ಶೆಟ್ಟಿಯವರ ಕಾಂತಾರಾ-1 ಸೆಟ್‌ನಲ್ಲಿ ಇನ್ನೊಂದು ದುರಂತ ಸಂಭವಿಸಿದೆ. ಚಿತ್ರತಂಡದಲ್ಲಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಎಂಬವರು ಕೊಲ್ಲೂರಿನಲ್ಲಿ ಮಂಗಳವಾರ ಸೌಪರ್ಣಿಕಾ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಭಾಗದಲ್ಲಿ ಕಾಂತಾರ-1 ಶೂಟಿಂಗ್ ನಡೆಯುತ್ತಿತ್ತು. ಶೂಟಿಂಗ್ ಮುಗಿಸಿ ಕಪಿಲ್‌ ಮತ್ತು ತಂಡ ಸೌಪರ್ಣಿಕಾ ನದಿಗೆ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಕಪಿಲ್‌ ಮೃತದೇಹವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಕಪಿಲ್ ಅವರ ಮನೆಯವರು ಬಂದ ನಂತರ ಮರಣೋತ್ತರ ಪರೀಕ್ಷೆ […]

ಕಾಂತಾರ ಕಲಾವಿದ ನದಿಯಲ್ಲಿ ಮುಳುಗಿ ಸಾವು Read More »

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ

ಕಾರ್ಕಳ : ಮಂಗಳೂರಿನಲ್ಲಿ ವಾಸವಿದ್ದ ಮೂಲತಃ ಕಾರ್ಕಳದವರಾದ ಉದ್ಯಮಿ ದಿಲೀಪ್‌ ಎನ್‌.ಆರ್‌. ಎಂಬವರು ಮಂಗಳವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷರಾಗಿದ್ದರು.ವಾರ ನಸುಕಿನ ಹೊತ್ತು ಕಾರ್ಕಳದ ನಿಟ್ಟೆ ಸಮೀಪ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಮಂಗಳೂರಿನಲ್ಲಿ ವಾಸವಿದ್ದ ದಿಲೀಪ್‌ ಎನ್‌.ಆರ್‌. ಅವರು ನಿನ್ನೆ ರಾತ್ರಿ ಅಲ್ಲಿಂದ ತನ್ನ ಕ್ವಿಡ್‌ ಕಾರಿನಲ್ಲಿ ಹೊರಟವರು ನಿಟ್ಟೆ ದೂಪಕಟ್ಟೆಯ

ಕಾರಿನಲ್ಲೇ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ Read More »

ನದಿಗೆ ಬಿದ್ದು ಯುವಕ ಸಾವು

ಉಡುಪಿ: ಹೆಬ್ರಿ ಸಮೀಪ ಸೀತಾನದಿ ನದಿಗೆ ಆಕಸ್ಮಿಕವಾಗಿ ಜಾರಿ ಬಿದ್ದು ಯುವಕ ಸಾವನ್ನಪ್ಪಿದ ದುರಂತ ಘಟನೆ ಸಂಭವಿಸಿದೆ. ಮೃತನನ್ನು ಹೆಬ್ರಿಯ ಕಿನ್ನಿಗುಡ್ಡೆ ನಿವಾಸಿ ಸುಧಾಕರ ಶೆಟ್ಟಿ ಅವರ ಪುತ್ರ ಸಂಕೇತ್ ಶೆಟ್ಟಿ (24) ಎಂದು ಗುರುತಿಸಲಾಗಿದೆ. ಸಂಕೇತ್ ತನ್ನ ಸ್ನೇಹಿತರೊಂದಿಗೆ ನದಿಗೆ ಹೋಗಿದ್ದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೆಬ್ರಿ ಗ್ರಾಮ ಪಂಚಾಯತ್ ಅಡಿಯಲ್ಲಿ ಅಂಗವಿಕಲ ವ್ಯಕ್ತಿಗಳ ಪುನರ್ವಸತಿ ವಿಭಾಗದಲ್ಲಿ ಅವರು ಉದ್ಯೋಗದಲ್ಲಿದ್ದರು ಮತ್ತು ಹೆಬ್ರಿ ಜೆಸಿಐ ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ನದಿಗೆ ಬಿದ್ದು ಯುವಕ ಸಾವು Read More »

ಐಪಿಎಲ್‌ ಪಂದ್ಯಗಳ ಮೇಲೆ ಬೆಟ್ಟಿಂಗ್‌ ನಡೆಸುತ್ತಿದ್ದ ಮೂವರು ಯುವಕರು ಸೆರೆ

ಮೊಬೈಲ್‌ ಬೆಟ್ಟಿಂಗ್ ಅಪ್ಲಿಕೇಶನ್ ಮೂಲಕ ಅಕ್ರಮ ದಂಧೆ ಉಡುಪಿ : ಐಪಿಎಲ್ ಪಂದ್ಯಗಳ ಮೇಲೆ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ವ್ಯಕ್ತಿಗಳನ್ನು ಉಡುಪಿ ಸಿಇಎನ್ (ಸೆನ್‌) ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಸಿಇಎನ್ ಪೊಲೀಸ್ ಠಾಣೆಯ ಅಪರಾಧ ನಿರೀಕ್ಷಕ ರಾಮಚಂದ್ರ ನಾಯಕ್ ಉಡುಪಿ ಅಜ್ಜರಕಾಡಿನ ಭುಜಂಗ್ ಪಾರ್ಕ್ ಬಳಿ ದಾಳಿ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್) ಮತ್ತು ಮುಂಬೈ ಇಂಡಿಯನ್ಸ್ (ಎಂಐ) ನಡುವಿನ ಐಪಿಎಲ್ ಪಂದ್ಯದ ಮೇಲೆ ಬೆಟ್ಟಿಂಗ್ ಕಟ್ಟಲು

ಐಪಿಎಲ್‌ ಪಂದ್ಯಗಳ ಮೇಲೆ ಬೆಟ್ಟಿಂಗ್‌ ನಡೆಸುತ್ತಿದ್ದ ಮೂವರು ಯುವಕರು ಸೆರೆ Read More »

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ

ಧಾರ್ಮಿಕ ವಾತಾವರಣಕ್ಕೆ ಅಪಚಾರವಾಗುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ಪುತ್ತಿಗೆ ಮಠ ನಿರ್ಧಾರ ಉಡುಪಿ : ಈಗ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ಬಹಳ ಜನಪ್ರಿಯವಾಗಿದೆ. ಮದುವೆಗೆ ಮುಂಚಿತವಾಗಿ ಬೇರೆ ಬೇರೆ ತಾಣಗಳಿಗೆ ಹೋಗಿ ಭಾವಿ ಪತಿ-ಪತ್ನಿಯರು ನಾನಾ ಭಂಗಿಗಳಲ್ಲಿ ಫೊಟೊ ತೆಗೆಸಿಕೊಂಡು, ವೀಡಿಯೊ ಮಾಡಿಕೊಂಡು ಸಂಭ್ರಮಿಸುವುದು ಸಾಮಾನ್ಯವಾಗುತ್ತಿದೆ. ಇದಕ್ಕಾಗಿ ಲಕ್ಷಗಟ್ಟಲೆ ಖರ್ಚು ಮಾಡುವವರು ಇದ್ದಾರೆ. ಹಾಗೆಯೇ ಫೋಟೊಶೂಟ್‌ ಮಾಡಿಸಿಕೊಳ್ಳಲು ಬೇರೆ ಬೇರೆ ತಾಣಗಳನ್ನು ಹುಡುಕಾಡಿಕೊಂಡು ಹೋಗುತ್ತಾರೆ. ಈಗ ಪವಿತ್ರ ಧಾರ್ಮಿಕ ಸ್ಥಳವಾಗಿರುವ ಉಡುಪಿಯ ಕೃಷ್ಣ ಮಠದ ಪರಿಸರವೂ ಇಂಥ ತಾಣವಾಗುತ್ತಿರುವುದು ಇಲ್ಲಿನ

ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಪ್ರಿವೆಡ್ಡಿಂಗ್‌ ಫೋಟೊಶೂಟ್‌ ನಿಷೇಧ Read More »

ಬೈಕ್‍ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ  ಮಹಿಳೆ

ಉಡುಪಿ : ರಸ್ತೆಯಲ್ಲಿ ನಡೆದುಕೊಂಡು ಹೋದ ಮಹಿಳೆಯೋರ್ವಳಿಗೆ ಬೈಕ್‍ ಸವಾರ ಡಿಕ್ಕಿಹೊಡೆದು, ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ. ಮೃತ ಮಹಿಳೆ ಮೇರಿವಾಜ್ ಮಿಯಾರು ನಿವಾಸಿಯಾಗಿದ್ದು ರಸ್ತೆ ಬದಿ ನಡೆದುಕೊಂಡು ಬರುತ್ತಿರುವಾಗಲೇ ಹಿ೦ಬದಿಯಿ೦ದ ವೇಗವಾಗಿ ಬಂದ ಬೈಕ್ ಸವಾರ ಸಂತೋಷ್ ಎಂಬವರು ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ಮಹಿಳೆ ಕೆಲ ದೂರ ಹೋಗಿ ಬಿದ್ದಿದ್ದು ಅಪಘಾತದ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಬೈಕ್ ಸವಾರ ಸಂತೋಷ್ ಕೂಡ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ

ಬೈಕ್‍ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ  ಮಹಿಳೆ Read More »

ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಕಾರು ಡಿಕ್ಕಿ |  ಬಾಲಕ ಮೃತ್ಯು

ಬ್ರಹ್ಮಾವರ:  ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಡಿಕ್ಕಿ ಹೊಡೆದ  ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ್ದು, ಮೃತ ವಿದ್ಯಾರ್ಥಿಯನ್ನು ವಂಶಿ ಜಿ ಶೆಟ್ಟಿ ಎಂದು ಪತ್ತೆಹಚ್ಚಲಾಗಿದೆ. ಬಾಲಕ ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು,  ತಕ್ಷಣ ಆತನನ್ನು ಮಹೇಶ್ ಎಂಬವರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ರಸ್ತೆ ದಾಟುತ್ತಿದ್ದಾಗ ಬಾಲಕನಿಗೆ ಕಾರು ಡಿಕ್ಕಿ |  ಬಾಲಕ ಮೃತ್ಯು Read More »

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ

ಉಡುಪಿ: ಏಪ್ರಿಲ್‍ ತಿಂಗಳ ಮೊದಲ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ  ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ, ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಏಪ್ರಿಲ್ ತಿಂಗಳ ಆರಂಭದ ಮೂರು ದಿನಗಳಲ್ಲಿ ಗಂಟೆಗೆ 10 ರಿಂದ 3 ಕಿಲೋಮೀಟ‌ರ್ ವೇಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಏಪ್ರಿಲ್‍ ಮೊದಲ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆಯಿಂದ ಸೂಚನೆ Read More »

ಮಹಿಳೆ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ

ಉಡುಪಿ: ಅಪರಿಚಿತ ವ್ಯಕ್ತಿಯೊಬ್ಬ ಪಾದಾಚಾರಿ ಮಹಿಳೆಯೊಬ್ಬರ 3.5 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಮಣಿಪಾಲದ ಡಬ್ಲ್ಯೂಜಿಎಸ್‍ ಎಚ್‍ ಎ ಕಾಲೇಜು ಬಳಿ ನಡೆದಿದಿದೆ. ಪರ್ಕಳದ ಹೇರ್ಗಾ ನಿವಾಸಿ ವಸಂತಿ (51)  ಸುಮಾರು 45 ಗ್ರಾಂ ತೂಕದ, ಅಂದಾಜು 3,50,000 ರೂ. ಮೌಲ್ಯದ ಚಿನ್ನದ ಸರ ಕಳೆದುಕೊಂಡಿದ್ದಾರೆ. ಮಣಿಪಾಲದ ಖಾಸಗಿ ಆಸ್ಪತ್ರೆಯ ಬಿಲ್ಲಿಂಗ್ ವಿಭಾಗದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ವಸಂತಿ ಅವರು ಸಂಜೆ 5:30 ರ ಸುಮಾರಿಗೆ ತಮ್ಮ ಕರ್ತವ್ಯ ಮುಗಿಸಿ

ಮಹಿಳೆ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ Read More »

ಬ್ರಹ್ಮಾವರ ಎಸ್‍.ಎಲ್‍.ಆರ್.ಎಮ್‍. ಘಟಕಕ್ಕೆ ಬೆಂಕಿ | ಸಂಪೂರ್ಣ ಭಸ್ಮ

ಬ್ರಹ್ಮಾವರ: ಬ್ರಹ್ಮಾವರ ಮಾರ್ಕೆಟ್ ಬಳಿಯಲ್ಲಿರುವ ಎಸ್.ಎಲ್.ಆರ್.ಎಮ್ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ  ಸುಮಾರು 1 ಗಂಟೆ ಹೊತ್ತಿಗೆ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಅಗ್ನಿ ಶಾಮಕ ದಳದ ಪ್ರಯತ್ನದ ನಡುವೆಯೂ ಘಟಕ ಸಂಪೂರ್ಣ ಹೊತ್ತಿಕೊಂಡಿದೆ. ಘಟಕದ ಒಳಗೆ ನಿಲ್ಲಿಸಿದ ಮೂರು ಎಎಸ್ ಗಾಡಿಗಳು, ಒಂದು ಪಿಕಪ್, ಲಕ್ಷಾಂತರ ಮೌಲ್ಯದ ಕಸ, ಎರಡು ಬೇಲಿಂಗ್ ಮೆಶಿನ್, ಒಂದು ಬರ್ನಿಂಗ್ ಮೆಶಿನ್ , 6

ಬ್ರಹ್ಮಾವರ ಎಸ್‍.ಎಲ್‍.ಆರ್.ಎಮ್‍. ಘಟಕಕ್ಕೆ ಬೆಂಕಿ | ಸಂಪೂರ್ಣ ಭಸ್ಮ Read More »

error: Content is protected !!
Scroll to Top