ಉಡುಪಿ

ಬ್ರಹ್ಮಾವರ ಎಸ್‍.ಎಲ್‍.ಆರ್.ಎಮ್‍. ಘಟಕಕ್ಕೆ ಬೆಂಕಿ | ಸಂಪೂರ್ಣ ಭಸ್ಮ

ಬ್ರಹ್ಮಾವರ: ಬ್ರಹ್ಮಾವರ ಮಾರ್ಕೆಟ್ ಬಳಿಯಲ್ಲಿರುವ ಎಸ್.ಎಲ್.ಆರ್.ಎಮ್ ಘಟಕಕ್ಕೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ  ಸುಮಾರು 1 ಗಂಟೆ ಹೊತ್ತಿಗೆ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಅಗ್ನಿ ಶಾಮಕ ದಳದ ಪ್ರಯತ್ನದ ನಡುವೆಯೂ ಘಟಕ ಸಂಪೂರ್ಣ ಹೊತ್ತಿಕೊಂಡಿದೆ. ಘಟಕದ ಒಳಗೆ ನಿಲ್ಲಿಸಿದ ಮೂರು ಎಎಸ್ ಗಾಡಿಗಳು, ಒಂದು ಪಿಕಪ್, ಲಕ್ಷಾಂತರ ಮೌಲ್ಯದ ಕಸ, ಎರಡು ಬೇಲಿಂಗ್ ಮೆಶಿನ್, ಒಂದು ಬರ್ನಿಂಗ್ ಮೆಶಿನ್ , 6 […]

ಬ್ರಹ್ಮಾವರ ಎಸ್‍.ಎಲ್‍.ಆರ್.ಎಮ್‍. ಘಟಕಕ್ಕೆ ಬೆಂಕಿ | ಸಂಪೂರ್ಣ ಭಸ್ಮ Read More »

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ

ಶಬ್ದ ಕಡಿಮೆ, ಅಪಘಾತವಾದರೂ ಪ್ರಯಾಣಿಕರಿಗೆ ಹಾನಿಯಿಲ್ಲ ಮಾ.1ರಿಂದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿಗೂ ಅತ್ಯಾಧುನಿಕ ಕೋಚ್‌ ಅಳವಡಿಕೆ ಉಡುಪಿ : ಕರಾವಳಿ ಕರ್ನಾಟಕ ಮತ್ತು ಮುಂಬಯಿ ನಡುವಿನ ಸಂಪರ್ಕ ಕೊಂಡಿಯಾಗಿರುವ ಮತ್ಸ್ಯಗಂಧ ರೈಲಿಗೆ ಫೆ.17ರಿಂದ ಹೊಸ ರೂಪ ಪಡೆದು ಓಡಲಿದೆ. ಜನರ ಬೇಡಿಕೆಯನ್ನು ಪರಿಗಣಿಸಿ ರೈಲ್ವೆ ಇಲಾಖೆ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್ ಅಳವಡಿಸಲಿದೆ. ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ ಸಂಭವಿಸದೆ ಸುರಕ್ಷಿತರಾಗಿರುತ್ತಾರೆ. ಎಷ್ಟೇ ತೀವ್ರ

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ Read More »

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ

ಬಂಡೆಗೆ ಬಡಿದು ಮುಳುಗಿ 50 ಲ.ರೂ. ನಷ್ಟ ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ಹೋಗಿದ್ದ ದೋಣಿಯೊಂದು ಕಾರವಾರ ಸಮೀಪ ಅವಘಡಕ್ಕೀಡಾಗಿ ಮುಳುಗಿದೆ. ದೋಣಿಯಲ್ಲಿದ್ದ ಆರು ಮೀನುಗಾರರನ್ನು ಬೇರೆ ಬೋಟಿನವರು ರಕ್ಷಿಸಿ ದಡಕ್ಕೆ ಸುರಕ್ಷಿತವಾಗಿ ಕರೆತಂದಿದ್ದಾರೆ. ಭಟ್ಕಳದ ಬಂದರು ಬಳಿ ಬೋಟ್ ಕಲ್ಲಿಗೆ ತಾಗಿ ಮುಳುಗಡೆಯಾಗಿದೆ ಎನ್ನಲಾಗಿದೆ. ಉಡುಪಿ ಸಮೀಪದ ಬ್ರಹ್ಮಾವರದ ಸುರೇಶ್ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು, ಕುಮಟಾ ಭಾಗದಲ್ಲಿ ಮೀನುಗಾರಿಕೆ ನಡೆಸಿ ಭಟ್ಕಳ ಬಂದರಿಗೆ ಬರುವಾಗ ಅವಘಡ ಸಂಭವಿಸಿದೆ. ಮೀನು ಇಳಿಸಲು ಬರುತ್ತಿದ್ದಾಗ ಭಟ್ಕಳ ಬಂದರು ಭಾಗದ

ಮಲ್ಪೆಯ ಮೀನುಗಾರಿಕೆ ದೋಣಿ ಭಟ್ಕಳದಲ್ಲಿ ಮುಳುಗಡೆ Read More »

ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ

ಡಿಜಿಟಲ್‌ ಅರೆಸ್ಟ್‌ ಮಾಡಿರುವುದಾಗಿ ಹೇಳಿ ಹಣ ಲಪಟಾಯಿಸಿದ್ದ ಖದೀಮ ಉಡುಪಿ : ಉಡುಪಿಯ ಉದ್ಯಮಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89‌ ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ 7 ಲಕ್ಷ ರೂ. ನಗದು ಮತ್ತು ಮೊಬೈಲ್‌ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲೀಕರೊಬ್ಬರಿಗೆ ಸೆ.11ರಂದು ಕರೆ ಮಾಡಿ ಅಕ್ರಮ ಜಾಹೀರಾತು, ಸಂದೇಶ ಕಳುಹಿಸಿರುವುದಕ್ಕೆ

ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ Read More »

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ

ಒಂದೂವರೆ ದಶಕದಿಂದ ಆಂಧ್ರದಲ್ಲಿರುವ ನಕ್ಸಲ್‌ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗತಿಗೆ ಸಿದ್ಧತೆ ಉಡುಪಿ : ಕಳೆದ ಸುಮಾರು ಎರಡು ದಶಕದಿಂದ ನಕ್ಸಲ್‌ ಚಟುವಟಿಕೆಯಿಂದ ದೂರವಾಗಿ ನಾಗರಿಕ ಜೀವನ ನಡೆಸುತ್ತಿದ್ದ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿಯಲ್ಲಿ ಪೊಲೀಸರಿಗೆ ಶರಣಾಗಲಿದ್ದಾಳೆ. ಮೋಸ್ಟ್ ವಾಂಟೆಡ್ ಆರು ನಕ್ಸಲರು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಗೆ ಮುಂದಾಗಿದ್ದಾರೆ. ಇಂದು ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ನಕ್ಸಲ್​ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗುತ್ತಿದ್ದಾಳೆ ಎಂದು ಮೂಲಗಳು

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ Read More »

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ

ಸೇಲ್ಸ್‌ಮ್ಯಾನ್‌ ಸೋಗಿನಲ್ಲಿ ಬಂದು ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿ ಉಡುಪಿ : ಬ್ರಹ್ಮಾವರ ತಾಲೂಕಿನ ಗುಂಡ್ಮಿ ಗ್ರಾಮದಲ್ಲಿ ಸೇಲ್ಸ್​​ಮ್ಯಾನ್ ಸೋಗಿನಲ್ಲಿ ಬಂದ ದುಷ್ಕರ್ಮಿಯೊಬ್ಬ ಅಂಗಳದಲ್ಲಿದ್ದ ಕರುವಿನ ಬಾಲ ಕತ್ತರಿಸಿ ಕ್ರೌರ್ಯ ಮೆರೆದ ಘಟನೆ ಬುಧವಾರ ಸಂಭವಿಸಿದೆ. ರಾಜ್ಯದಲ್ಲಿ ಇತ್ತೀಚೆಗಿನ ದಿನಗಳಲ್ಲಿ ಗೋವುಗಳ ಮೇಲೆ ಕ್ರೌರ್ಯ ಮೆರೆದ ಕೆಲವು ಘಟನೆಗಳು ನಡೆದಿದ್ದು, ಇದು ಇದೇ ಮಾದರಿಯ ಇನ್ನೊಂದು ಘಟನೆ ಎಂದು ಹಿಂದು ಸಂಘಟನೆಗಳು ಆಕ್ರೋಶ ವ್ದಯಕ್ತಪಡಿಸಿವೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು

ಕರುವಿನ ಬಾಲ ಕತ್ತರಿಸಿದ ಕೃತ್ಯದ ವಿರುದ್ಧ ಹಿಂದು ಸಂಘಟನೆಗಳ ಆಕ್ರೋಶ Read More »

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು

ಉಡುಪಿ: ಅಲೆವೂರು ಗುಡ್ಡೆಯಂಗಡಿಯಲ್ಲಿರುವ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿಯ ಸೊತ್ತುಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ ವಿವಿಧ ವಸ್ತುಗಳು ಮತ್ತು ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ ಎಂದು ಮೂಲಗಳು ತಿಳಿಸಿವೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳೀಯರ ನೆರವಿನೊಂದಿಗೆ ಬೆಂಕಿಯನ್ನು ಹತೋಟಿಗೆ ತಂದಿದ್ದು, ಸಂಭವನೀಯ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು

ಉಡುಪಿ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : 40 ಲ.ರೂ. ಬೆಲೆಬಾಳುವ ವಸ್ತುಗಳು ಕರಕಲು Read More »

ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ

ಆರೋಪಿಯನ್ನು ಶೀಘ್ರ ಬಂಧಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸೂಚನೆ ಉಡುಪಿ: ಉಡುಪಿ ನಗರದಲ್ಲಿ ಹಾಡಹಗಲೇ ಯುವಕನೊಬ್ಬ ಐದು ವರ್ಷ ಪ್ರಾಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಸಂಭವಿಸಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಈ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಆರೋಪಿಯನ್ನು ಶೀಘ್ರ ಬಂಧಿಸಲು ಪೊಲೀಸರಿಗೆ ಸೂಚಿಸಿದ್ದಾರೆ. ನಗರದ ಪೂರ್ಣಪ್ರಜ್ಞ ಕಾಲೇಜು ಸಮೀಪದ ಓಣಿಯಲ್ಲಿ ಸುಮಾರು 30 ವರ್ಷದ ಯುವಕ ಗುರುವಾರ ಮಧ್ಯಾಹ್ನ ಈ ಕೃತ್ಯ ಎಸಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಲಕಿಯ

ಉಡುಪಿ : ಹಾಡಹಗಲೇ ಬಾಲಕಿಗೆ ಕಿರುಕುಳ Read More »

ಉಡುಪಿ: ಗಾಂಧೀಜಿಯನ್ನು ಟೀಕಿಸಿದ ಹಿಂದೂ ಕಾರ್ಯಕರ್ತೆಯ ವಿರುದ್ಧ ಕೇಸ್‌

ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಗಾಂಧೀಜಿ ಬಗ್ಗೆ ಕಮೆಂಟ್‌ ಮಾಡಿದ್ದ ಮೀನಾಕ್ಷಿ ಸೆಹ್ರಾವತ್‌ ಉಡುಪಿ: ಕೆಲವು ದಿನಗಳ ಹಿಂದೆ ಉಡುಪಿಯಲ್ಲಿ ಗಾಂಧೀಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಡೆಹ್ರಾಡೂನ್‌ನ ವಾಗ್ಮಿ ಮೀನಾಕ್ಷಿ ಸೆಹ್ರಾವತ್‌ ಎಂಬವರ ವಿರುದ್ಧ ಕೇಸ್‌ ದಾಖಲಾಗಿದೆ. ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಡೆಹ್ರಾಡೂನ್‌ನ ಚಿಂತಕಿ ಮೀನಾಕ್ಷಿ ಬಾಂಗ್ಲಾ ಪಾಠ ಎಂಬ ವಿಷಯದ ಬಗ್ಗೆ ಹಿಂದಿಯಲ್ಲಿ ಮಾತನಾಡಿ, ಜಿನ್ನಾ ಜೊತೆ ಸೇರಿಕೊಂಡು ಮಹಾತ್ಮ ಗಾಂಧಿ ಪಾಕಿಸ್ಥಾನಕ್ಕೆ ಜನ್ಮ ನೀಡಿದ್ದಾರೆ. ಗಾಂಧೀಜಿ ಹಿಂದೂಗಳನ್ನು ದುರ್ಬಲಗೊಳಿಸಲು ಅಹಿಂಸೆಯನ್ನು ಪ್ರತಿಪಾದಿಸಿದ್ದಾರೆ.

ಉಡುಪಿ: ಗಾಂಧೀಜಿಯನ್ನು ಟೀಕಿಸಿದ ಹಿಂದೂ ಕಾರ್ಯಕರ್ತೆಯ ವಿರುದ್ಧ ಕೇಸ್‌ Read More »

ಟ್ರಕ್ – ಬೈಕ್‍ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ; ಟ್ರಕ್ ಬೆಂಕಿಗಾಹುತಿ

ಉಡುಪಿ : ಬೈಕ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ  ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿ ಬೈಕ್‍ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯರಿಗೆ ಬರುತ್ತಿದ್ದ ಬೈಕ್ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಮೃತ ಯುವಕ ಎನ್ನಲಾಗಿದೆ. ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಅವಿನಾಶ್ ಆಚಾರ್ಯ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ಹಿಂತಿರುಗುತ್ತಿದ್ದ

ಟ್ರಕ್ – ಬೈಕ್‍ ಡಿಕ್ಕಿ | ಬೈಕ್ ಸವಾರ ಸ್ಥಳದಲ್ಲೇ ಮೃತ್ಯು ; ಟ್ರಕ್ ಬೆಂಕಿಗಾಹುತಿ Read More »

error: Content is protected !!
Scroll to Top