ಉಡುಪಿ

ಬಡಗು ತಿಟ್ಟಿನ  ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಉಡುಪಿ: ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ  ಅಲ್ಪಕಾಲದ  ಅಸೌಖ್ಯದಿಂದಾಗಿ ಇಂದು ಮುಂಜಾನೆ ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ. ಕಾಳಿಂಗ ನಾವಡರ  ಬಳಿಕ  ಯಕ್ಷಗಾನ ಭಾಗವತಿಕೆಗೆ ಸ್ಟಾರ್ ವ್ಯಾಲ್ಯೂ ತಂದುಕೊಟ್ಟಿದ್ದ ಧಾರೇಶ್ವರ ತನ್ನ ಮಧುರ ಕಂಠದಿಂದ ವರ್ಷಗಳ ಕಾಲ ಯಕ್ಷಗಾನ ಪ್ರೇಮಿಗಳನ್ನು ರಂಜಿಸಿದ್ದರು. ಅವರಿಗೆ 67 ವರ್ಷ ಪ್ರಾಯವಾಗಿತ್ತು. ಯಕ್ಷಗಾನ ರಂಗ ಕಂಡ ಅತ್ಯಂತ ಪ್ರಯೋಗಶೀಲ ಭಾಗವತರಾಗಿದ್ದ ಅವರು ಪತ್ನಿ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದರು. ಪೆರ್ಡೂರು ಮೇಳವೊಂದರಲ್ಲೇ  28 […]

ಬಡಗು ತಿಟ್ಟಿನ  ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ Read More »

ಏ : 24 ಯೋಗಿ ಆದಿತ್ಯನಾಥ್ ಉಡುಪಿ ಭೇಟಿ

ಉಡುಪಿ: ರಾಜ್ಯ ಮತ್ತು ರಾಷ್ಟ್ರ ನಾಯಕರ ದಂಡು ಉಡುಪಿ- ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಪ್ರಚಾರಕ್ಕೆ ಉಡುಪಿಗೆ ಆಗಮಿಸಲಿದ್ದಾರೆ.  ಏ. 19ರಂದು ಉಳ್ಳೂರಿಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖೀ ಹಾಗೂ ಸಂಸದೆ ಸುಮಲತಾ, ಏ. 20ರಂದು ಉಡುಪಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಏ. 21ರಂದು ಕಾಪುವಿಗೆ ಸಂಸದ ಪ್ರತಾಪ್ ಸಿಂಹ, ಏ. 22ರಂದು ಹಿರಿಯಡಕಕ್ಕೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹಾಗೂ ಏ. 24ರಂದು

ಏ : 24 ಯೋಗಿ ಆದಿತ್ಯನಾಥ್ ಉಡುಪಿ ಭೇಟಿ Read More »

ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಮೃತಪಟ್ಟ ಮಹಿಳೆ

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರ ಎಂಬಲ್ಲಿ ಎ.16ರಂದು ನಡೆದಿದೆ. ಚಡಗರ ಅಗ್ರಹಾರ ನಿವಾಸಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧ(83) ಮೃತ ಮಹಿಳೆ. ಚುನಾವಣಾ ಆಯೋಗ ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದು, ಅದರಂತೆ ಪಿ.ಯಶೋಧ ಮನೆಯಲ್ಲೆ ಮತದಾನ ಮಾಡಿದ್ದರು. ಮತದಾನದ ದಿನ ಪಿ.ಯಶೋಧ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರೂ

ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಮೃತಪಟ್ಟ ಮಹಿಳೆ Read More »

ಮೀನು ಹಿಡಿಯಲು ಹೊಳೆಗೆ ಇಳಿದ ಮಹಿಳೆ ಮೃತ್ಯು

ಉಡುಪಿ : ಸಿಗಡಿ ಮೀನು ಹಿಡಿಯಲು ಹೊಳೆಗೆ ಇಳಿದ ಮಹಿಳೆ ಮುಳುಗಿ ಮೃತಪಟ್ಟ ಘಟನೆ ಕುಂದಾಪುರದ ಕೋಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಕುಂದಾಪುರ ಕೋಣಿ ಗ್ರಾಮದ ವನಜ ಮೃತ ದುರ್ದೈವಿ. ವನಜ ಎಂದಿನಂತೆ ಸಿಗಡಿ ಮೀನು ಹಿಡಿಯಲು ಕೋಣಿಯ ಮಲ್ಲನಬೆಟ್ಟು ಹೊಳೆಗೆ ಹೋಗಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಬಳಿಕ ವನಜಾ ಅವರ ಪತಿ ವಾಸು ಹಾಗೂ ಸ್ಥಳೀಯರು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅದಾಗಲೇ ವೈದ್ಯರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಮೀನು ಹಿಡಿಯಲು ಹೊಳೆಗೆ ಇಳಿದ ಮಹಿಳೆ ಮೃತ್ಯು Read More »

ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್‌ ಸೊಸೈಟಿಗೆ ರೂ. 4.57 ಕೋಟಿ ಲಾಭ

ಕಾರ್ಕಳ : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾರ್ಯವ್ಯಾಪ್ತಿ ಹೊಂದಿರುವ ಸಹಕಾರಿ ಸಂಸ್ಥೆ ಕಾರ್ಕಳದ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್‌ ಸೊಸೈಟಿಯು 2023-24ನೇ ಸಾಲಿನಲ್ಲಿ ರೂ. 885.55 ಕೋಟಿ ವ್ಯವಹಾರ ನಡೆಸಿ ರೂ. 4.57 ಕೋಟಿ ಲಾಭ ಗಳಿಸಿದೆ ಎಂದು ಸೊಸೈಟಿಯ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ಹೇಳಿದರು. ಅವರು ಏ. 11 ರಂದು ಸೊಸೈಟಿಯ ಪ್ರಧಾನ ಕಛೇರಿ ಜೋಡುರಸ್ತೆಯ ಸಾರಸ್ವತ ಸೌಧದಲ್ಲಿ ನಡೆದ 2023-24ನೇ ಸಾಲಿನ ಆಯವ್ಯಯ ಪರಿಶೀಲನೆ ಹಾಗೂ 2024-25ನೇ ಸಾಲಿನ

ರಾಜಾಪುರ ಸಾರಸ್ವತ ಕ್ರೆಡಿಟ್ ಕೋ ಅಪರೇಟಿವ್‌ ಸೊಸೈಟಿಗೆ ರೂ. 4.57 ಕೋಟಿ ಲಾಭ Read More »

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆದ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಟಿ. ರವಿ, ಶಾಸಕರಾದ ಸುರೇಶ್ ಶೆಟ್ಟಿ, ಯಶ್ ಪಾಲ್‍ ಸುವರ್ಣ, ಜೆಡಿಎಸ್ ಮಖಂಡ, ವಿಧಾನಪರಿಷತ್ ಸದಸ್ಯ ಭೋಜೆಗೌಡ ಮತ್ತಿತರರು ಉಪಸ್ಥಿತರಿದ್ದರು.

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ Read More »

ಅಕ್ರಮ ವೇಶ್ಯಾವಾಟಿಕೆ ದಂಧೆ : ಮೂವರು ಪೊಲೀಸ್ ವಶಕ್ಕೆ

ಮಣಿಪಾಲ: ಅಕ್ರಮವಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪವನ್, ಚೇತನ್ ಸಿ.ಬಿ. ಹಾಗೂ ಪಂಜು ಬಂಧಿತ ಆರೋಪಿಗಳು ಮಹಿಳೆಯರನ್ನು ಪುಸಲಾಯಿಸಿ ಕರೆ ತಂದು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಕುರಿತು ಬಂದ ಮಾಹಿತಿಯಂತೆ ಸ್ಥಳಕ್ಕೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಮೊದಲಿಗೆ ಆರೋಪಿ ಪವನ್‌ ಎಂಬವನನ್ನು ವಶಕ್ಕೆ ಪಡೆದಿದ್ದಾರೆ. ಪವನ್ ಹೇಳಿಕೆಯಂತೆ ಉಡುಪಿ ತಾಲೂಕು ಬೊಮ್ಮರಬೆಟ್ಟು ಮನೆಗೆ ದಾಳಿ ನಡೆಸಿ ಆರೋಪಿ ಚೇತನ್‌ ಸಿ.ಬಿ. ಹಾಗೂ ಆರೋಪಿ ಪಂಜು ಎಂಬವರನ್ನು ವಶಕ್ಕೆ

ಅಕ್ರಮ ವೇಶ್ಯಾವಾಟಿಕೆ ದಂಧೆ : ಮೂವರು ಪೊಲೀಸ್ ವಶಕ್ಕೆ Read More »

ಫೆ.10 : ಡಾ.ಕೆ.ಚಿನ್ನಪ್ಪ ಗೌಡ ರಚಿತ ‘ಸಿರಿಸಂಧಿ’ ಕೃತಿ ಅನಾವರಣ

ಉಡುಪಿ: ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ (ಮಾಹೆ) ಹಾಗೂ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜುಕೇಶನ್ ಸಹಯೋಗದಲ್ಲಿ ಡಾ.ಕೆ.ಚಿನ್ನಪ್ಪ ಗೌಡ ಅವರ ಕೃತಿ ಮಾಚಾರು ಗೋಪಾಲ ನಾಯ್ಕ ಹೇಳಿದ ‘ಸಿರಿಸಂಧಿ’ ಬಿಡುಗಡೆ ಸಮಾರಂಭ ಫೆ.10 ಶನಿವಾರ ಬೆಳಿಗ್ಗೆ 10.30 ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದದ ಸಲಹಾ ಸಮಿತಿ ಅಧ್ಯಕ್ಷ ಡಾ.ಬಿ.ಎ.ವಿವೇಕ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಾಹೆ ಸಹಕುಲಾಧಿಪತಿಗಳಾದ ಡಾ.ಎಚ್‍.ಎಸ್‍.ಬಲ್ಲಾಳ್‍ ಕೃತಿ

ಫೆ.10 : ಡಾ.ಕೆ.ಚಿನ್ನಪ್ಪ ಗೌಡ ರಚಿತ ‘ಸಿರಿಸಂಧಿ’ ಕೃತಿ ಅನಾವರಣ Read More »

ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ

ಅಯೊಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ ನಡೆಯಿತು. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶುಕ್ರವಾರ ಸಂಜೆ ಶ್ರೀ ರಾಮನ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು, ಉತ್ಸವ ನಡೆಸಲಾಯಿತು. ಶ್ರೀ ರಾಮಲಲ್ಲಾನ ವಿಗ್ರಹವನ್ನು ವಾದ್ಯಘೋಷ, ವಿಷ್ಣುಸಹಸ್ರನಾಮ, ಭಜನೆಗಳೊಂದಿಗೆ ಪಲ್ಲಕ್ಕಿಯಲ್ಲಿಟ್ಟು ಮಂಗಳಾರತಿ ಬೆಳಗಿದ ಬಳಿಕ ಮಂದಿರದ ಹೊರ ಆವರಣದ ಸುತ್ತ ಒಂದು ಸುತ್ತು ತಂದು, ಯಾಗ ಶಾಲೆಯಲ್ಲಿಟ್ಟು ಅಷ್ಟಾವಧಾನ ಸೇವೆ ನಡೆಸಲಾಯಿತು.

ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ Read More »

ಸ್ಕೂಟಿ ಸಹಿತ ಸಮುದ್ರಕ್ಕೆ ಬಿದ್ದ ಮೀನುಗಾರ! | ಮೃತದೇಹ, ಸ್ಕೂಟಿ ಮೇಲೆತ್ತಿದ ಆಪದ್ಭಾಂಧವ ಈಶ್ವರ್ ಮಲ್ಪೆ

ಉಡುಪಿ: ಮಲ್ಪೆ ಸಮುದ್ರಕ್ಕೆ ಬಿದ್ದು ಮೃತಪಟ್ಟ ತಮಿಳುನಾಡು ಮೂಲದ ಮೀನುಗಾರನ ಮೃತದೇಹವನ್ನು ಹಾಗೂ ಸ್ಕೂಟಿಯನ್ನು ಮುಳುಗು ತಜ್ಞ ಈಶ್ವರ್ ‍ಮಲ್ಪೆ ಪತ್ತೆ ಮಾಡಿ, ಮೇಲೆತ್ತಿದ್ದಾರೆ. ತಮಿಳುನಾಡು ಮೂಲದ ಮೀನುಗಾರ ಮಲ್ಪೆ ಮೀನುಗಾರಿಕಾ ಬಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಅವರ ಹೆಸರು ತಿಳಿದುಬಂದಿಲ್ಲ. ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಸಂದರ್ಭ ಅಚಾನಕ್ ಆಗಿ ಸಮುದ್ರಕ್ಕೆ ಬಿದ್ದಿದ್ದರು. ಸ್ಥಳಕ್ಕಾಗಮಿಸಿದ ಆಪದ್ಭಾಂಧವ ಈಶ್ವರ್ ಮಲ್ಪೆ ಅವರು, ಸಮುದ್ರಕ್ಕೆ ಧುಮುಕ್ಕಿದ್ದಾರೆ. ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿತ್ತು. ಕ್ರೇನ್ ಬಳಸಿ ಸ್ಕೂಟಿ ಹಾಗೂ ಮೃತದೇಹವನ್ನು ಸ್ಕೂಟಿ ಹಾಗೂ ಮೃತದೇಹವನ್ನು

ಸ್ಕೂಟಿ ಸಹಿತ ಸಮುದ್ರಕ್ಕೆ ಬಿದ್ದ ಮೀನುಗಾರ! | ಮೃತದೇಹ, ಸ್ಕೂಟಿ ಮೇಲೆತ್ತಿದ ಆಪದ್ಭಾಂಧವ ಈಶ್ವರ್ ಮಲ್ಪೆ Read More »

error: Content is protected !!
Scroll to Top