ಉಡುಪಿ

ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ | ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಈ ಕುರಿತು ಹೇಳಿದ್ದೇನು | ಇಲ್ಲಿದೆ ಡಿಟೈಲ್ಸ್

ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹೇಳಿದ್ದಾರೆ. ಪ್ರಕರಣದ ಕುರಿತು ಎಸ್ ಪಿ ಹಾಗೂ ಡಿಸಿ ಜೊತೆ ಚರ್ಚಿಸಿದ ಬಳಿಕ ಅವರು ಮಾತನಾಡಿ, ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ.ಯಾವುದೇ ಒಂದು ನಿರ್ದಿಷ್ಟ ಕೋಮುವಿನ ಮಹಿಳೆಯ ರಕ್ಷಣೆ ನಾವು ಬಂದಿಲ್ಲ. ಈ ಪ್ರಕರಣಕ್ಕೆ ಯಾವುದೇ ಕೋಮು […]

ಕಾಲೇಜು ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ | ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಈ ಕುರಿತು ಹೇಳಿದ್ದೇನು | ಇಲ್ಲಿದೆ ಡಿಟೈಲ್ಸ್ Read More »

ಭಾರೀ ಮಳೆ : ಆಲದ ಮರ ಬೈಕ್ ಮೇಲೆ ಬಿದ್ದು ಸವಾರ ಮೃತ್ಯು

ಉಡುಪಿ: ಧಾರಾಕಾರ ಮಳೆಗೆ ಮತ್ತೊಂದು ಬಲಿಯಾಗಿರುವ ದುರ್ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಪರಿಸರದಲ್ಲಿ ನಡೆದಿದೆ. ಬೃಹತ್ ಆಲದ ಮರ ಬಿದ್ದು ಬೈಕ್ ಸವಾರ ಮೃತಪಟ್ಟಿದ್ದಾನೆ. ಗಾಳಿ ಮಳೆ‌ ಹಿನ್ನಲೆ ಬೃಹತ್ ಆಲದ ಮರ ಧರೆಗುರುಳಿದೆ. ಈ ವೇಳೆ ಅದೇ ಪರಿಸರದಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನ ಮೇಲೆ‌ ಆಲದ ಮರ ಬಿದ್ದಿದೆ. ಪರಿಣಾಮ ಬೈಕ್ ಸವಾರ ಪ್ರವೀಣ್ ಆಚಾರ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ಪ್ರವೀಣ್ ಮೇಲೆ‌ ಏಕಾಏಕಿ ಮರ ಬಿದ್ದಿದೆ. ಮರ ಬಿದ್ದ ದೃಶ್ಯ

ಭಾರೀ ಮಳೆ : ಆಲದ ಮರ ಬೈಕ್ ಮೇಲೆ ಬಿದ್ದು ಸವಾರ ಮೃತ್ಯು Read More »

ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ | ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶ

ಮಂಗಳೂರು: ದ.ಕ., ಉಡುಪಿ ಹಾಗೂ ಉತ್ತರಕನ್ನಡ ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದಾಗಿ ನಷ್ಟ ಸಂಭವಿಸಿದ್ದು, ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಉಸ್ತುವಾರಿ ಸಚಿವರು್ಗಳಾದ ದಿನೇಶ್ ಗುಂಡೂರಾವ್, ಮಂಕಾಳ ವೈದ್ಯ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‍ ಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದು ಪರಿಹಾರ ಕಾರ್ಯಗಳಿಗೆ ಅಧಿಕಾರಿಗಳನ್ನು ಸಜ್ಜಗೊಳಿಸುವಂತೆ ಸೂಚನೆ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ | ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶ Read More »

ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಗಿಡಗಳಿಂದ ತುಲಾಭಾರ ಸೇವೆ | ವಿನೂತನ ಪರಂಪರೆಗೆ ನಾಂದಿ ಹಾಡಿದ ತುಲಾಭಾರ ಸೇವೆ

ಮಂಗಳೂರು: ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಗಿಡಗಳಿಂದ ವಿಶಿಷ್ಟವಾದ ತುಲಾಭಾರ ಸೇವೆ ಸಲ್ಲಿಸುವ ಮೂಲಕ ವಿನೂತನ ಪರಂಪರೆಗೆ ನಾಂದಿ ಹಾಡಲಾಯಿತು. ಹಿರಿಯ ವಿದ್ವಾಂಸ ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ತನ್ನ ನಿವಾಸದಲ್ಲಿ ಸ್ವಾಮೀಜಿಯವರಿಗೆ ವೃಕ್ಷ, ಬೀಜ, ಸಸಿಗಳಿಂದ ಕೂಡಿದ ಹಲಸು, ಮಾವು, ಹರಿವೆ, ಅಲಸಂಡೆ, ಹಾಗಲ, ತುಂಬೆ ಮುಂತಾದ ಸಸಿಗಳಿಂದ ತುಲಾಭಾರ ನೆರವೇರಿತು. ಪ್ರದೀಪ್ ಕುಮಾರ್ ಕಲ್ಕೂರ ಸಹಿತ ಭಕ್ತರೂ ತುಲಾಭಾರ ಸಸಿಗಳನ್ನು ತಂದಿದ್ದರು. ತುಲಾಭಾರದ ಬಳಿಕ ಈ ಗಿಡಗಳನ್ನು ಭಕ್ತರಿಗೆ

ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಗಿಡಗಳಿಂದ ತುಲಾಭಾರ ಸೇವೆ | ವಿನೂತನ ಪರಂಪರೆಗೆ ನಾಂದಿ ಹಾಡಿದ ತುಲಾಭಾರ ಸೇವೆ Read More »

ದಂಪತಿ ಮಧ್ಯೆ ಜಗಳ : ಸಾವಿನಲ್ಲಿ ಅಂತ್ಯ | ಅನಾಥರಾದ ಬಾಲಕ, ಬಾಲಕಿ

ಕಾರ್ಕಳ: ಯಾವುದೋ ಕಾರಣಕ್ಕೆ ದಂಪತಿ ನಡುವೆ ಜಗಳವಾಗಿ ಕೊನೆಗೆ ಘಟನೆ ಸಾವಿನೊಂದಿಗೆ ಅಂತ್ಯ ಕಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರಿನಲ್ಲಿ ನಡೆದಿದೆ. ಯಲ್ಲಾಪುರದ ಇಮ್ಯಾನುಲ್ ಸಿದ್ದಿ (40), ಯಶೋಧಾ (32) ಸಾವಿಗೀಡಾದ ದಂಪತಿ. ಭಾನುವಾರ ಬೆಳಿಗ್ಗೆ ಯಾವುದೋ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದೆ. ತಕ್ಷಣ ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದ್ದಾರೆ. ಅವರನ್ನು ರಕ್ಷಿಸಲು ಪತಿ ಇಮ್ಯಾನುಲ್ ನೀರಿಗೆ ಹಾರಿದ್ದಾರೆ. ಇಬ್ಬರೂ ಮೃತಪಟ್ಟಿದ್ದು, ದಂಪತಿ ಸಾವಿನಿಂದ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಅನಾಥರಾಗಿದ್ದಾರೆ. ಡಿವೈಎಸ್ಪಿ

ದಂಪತಿ ಮಧ್ಯೆ ಜಗಳ : ಸಾವಿನಲ್ಲಿ ಅಂತ್ಯ | ಅನಾಥರಾದ ಬಾಲಕ, ಬಾಲಕಿ Read More »

ಬೆಕ್ಕಿನ ಮರಿಗೆ ಆಪದ್ಭಾಂಧವರಾದ ಪೇಜಾವರ ಶ್ರೀಗಳು | 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿ ರಕ್ಷಣೆ

ಉಡುಪಿ: 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿಯೊಂದನ್ನು ರಕ್ಷಿಸಿಕೊಳ್ಳುವಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಆಪದ್ಭಾಂಧವರಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರು ಉಡುಪಿ ಡುಪಿ ಮುಚ್ಚಲಕೋಡು ದೇವಸ್ಥಾನದಲ್ಲಿ ಈ ಸನ್ನಿವೇಶ ನಡೆದಿದ್ದು, ಚೆನ್ನೈ ಮೊಕ್ಕಾಂನಲ್ಲಿದ್ದ ಶ್ರೀಗಳು ದೇವಸ್ಥಾನಕ್ಕೆ ಬಂದಾಗ ಬೆಕ್ಕಿನ ಮರಿ ಬಾವಿಗೆ ಬಿದ್ದ ವಿಷಯ ತಿಳಿಯಿತು. ತಕ್ಷಣ ಹಗ್ಗಕ್ಕೆ ಬಕೇಟ್ ಕಟ್ಟಿ ಬೆಕ್ಕಿನ ಮರಿ ರಕ್ಷಿಸಲು ಪ್ರಯತ್ನಿಸಲಾದರೂ ಪ್ರಯೋಜವಾಗದೇ ಇದ್ದುದರಿಂದ ಸ್ವತಃ ಪೇಜಾವರ ಶ್ರೀಗಳೇ ಹಗ್ಗದ ಸಹಾಯದಿಂದ

ಬೆಕ್ಕಿನ ಮರಿಗೆ ಆಪದ್ಭಾಂಧವರಾದ ಪೇಜಾವರ ಶ್ರೀಗಳು | 40 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿ ರಕ್ಷಣೆ Read More »

ಹಲಸಿನ ಮರವೇರಿದ ಪೇಜಾವರ ಶ್ರೀಗಳು | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದು, ಶ್ರೀಗಳು ಹಲಸಿನ ಮರವೇರಿದ ಫೊಟಗಳು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗುತ್ತಿದೆ. ಲೋಕ ಸಂಚರಿಸುತ್ತಾ ಧರ್ಮ ಜಾಗೃತಿ ಮೂಡಿಸುತ್ತಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಕೃಷಿ ಹಾಗೂ ಹೈನುಗಾರಿಕೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ಮಠದ ಗೋಶಾಲೆಗೆ ಭೇಟಿ ನೀಡಿದ ಸಂದರ್ಭ ಅಲ್ಲೇ ಇದ್ದ ಮರದಲ್ಲಿ ಹಲಸಿನ ಹಣ್ಣುಗಳನ್ನು ಕಂಡ ಅವರು, ಶಲ್ಯ ತಲೆಗೆ ಸುತ್ತಿ ಕೈಯಲ್ಲೊಂದು ಕತ್ತಿ ಹಿಡಿದು

ಹಲಸಿನ ಮರವೇರಿದ ಪೇಜಾವರ ಶ್ರೀಗಳು | ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ Read More »

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ | ಕರಾವಳಿಯಲ್ಲಿ ನಾಲ್ಕು ದಿನ ಭಾರೀ ಮಳೆಯಾಗುವ ಸಂಭವ | ಹವಾಮಾನ ಇಲಾಖೆ ವರದಿ

ಪುತ್ತೂರು: ವಾಯುಭಾರ ಕುಸಿತದಿಂದಾಗಿ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಗಾಳಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ  ಇಲಾಖೆ ತಿಳಿಸಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು, ಸ್ಥಳೀಯರು, ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಜಿಲ್ಲಾಧಿಕಾರಿಯವರು ಪ್ರಕಟಣೆ ನೀಡಿದ್ದಾರೆ. ಮಕ್ಕಳು, ಸಾರ್ವಜನಿಕರು ಸಮುದ್ರ ತೀರ, ಅಪಾಯಕಾರಿ  ವಿದ್ಯುತ್ ಕಂಬ, ಕಟ್ಟಡದ ಕೆಳಗೆ, ಬಳಿ ನಿಲ್ಲಬಾರದು. ಅಲ್ಲದೆ ನೆರೆ ಪೀಡಿತ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ಸೇರಬೇಕು

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ | ಕರಾವಳಿಯಲ್ಲಿ ನಾಲ್ಕು ದಿನ ಭಾರೀ ಮಳೆಯಾಗುವ ಸಂಭವ | ಹವಾಮಾನ ಇಲಾಖೆ ವರದಿ Read More »

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ

ಏ. 29 ರಂದು ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಮೂಲ್ಕಿಯಲ್ಲಿ ಪ್ರಧಾನಿಯ ಬೃಹತ್‌ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೆಣವ ಹೇಳಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸೇರಿಸಿ ಒಂದೇ ಸಾರ್ವಜನಿಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯದಲ್ಲಿರುವ ಮೂಲ್ಕಿಯನ್ನು ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದೆ

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ Read More »

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಲಿಂಕ್‌ ಕಳುಹಿಸಿ ಹಣ ಎಗರಿಸಿದ ಖದೀಮ ಉಡುಪಿ : ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂ ಬಗ್ಗೆ ಮಾಹಿತಿ ಹುಡುಕಲು ಹೋದ ಮಹಿಳೆಯೊಬ್ಬರು ಸುಮಾರು 2 ಲ.ರೂ. ಕಳೆದುಕೊಂಡಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಡುಪಿಯ ಜ್ಯೋತಿ (32) ಹಣ ಕಳೆದುಕೊಂಡವರು. ಫೇಸ್‌ಕ್ರೀಂ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಕಲೆ ಹಾಕುತ್ತಿದ್ದ ವೇಳೆ ದೊರೆತ ನಂಬರ್‌ಗೆ ಕರೆ ಮಾಡಿದ್ದು, ಆಗ ವ್ಯಕ್ತಿಯೊಬ್ಬ ನೋಂದಣಿ ಮಾಡುವಂತೆ ಸೂಚಿಸಿದ್ದಾನೆ. ಮಾ.22 ರಂದು ಮತ್ತೆ ಕರೆ ಮಾಡಿದ ವ್ಯಕ್ತಿ ಈ ಹಿಂದೆ ಮಾಡಿದ ಮಾಹಿತಿ

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

error: Content is protected !!
Scroll to Top