ಉಡುಪಿ

ಶಿವಮೊಗ್ಗ ಭಾರೀ ಮಳೆಯಿಂದ ಭೂಕುಸಿತ | ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ | ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆ

ಶಿವಮೊಗ್ಗ : ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಮುಂಗಾರು ಮಳೆ ಹಿನ್ನೆಲೆ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ನಾಳೆಯಿಂದ ಬರೋಬ್ಬರಿ ಮೂರುವರೆ ತಿಂಗಳುಗಳ ಕಾಲ ಆಗುಂಬೆ ಘಾಟಿನಲ್ಲಿ ಭಾರೀ ವಾಹನ ಓಡಾಡುವುದಿಲ್ಲ. ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ […]

ಶಿವಮೊಗ್ಗ ಭಾರೀ ಮಳೆಯಿಂದ ಭೂಕುಸಿತ | ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ | ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆ Read More »

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು

ಮಂಗಳೂರು: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾ ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ ತಪ್ಪಿದ ಕಾರಣ

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು Read More »

ಪ್ರಸಿದ್ಧ ಭಕ್ತಿ ಗಾಯಕ, ತಬಲಾ ವಾದಕ ಸಂಕೀರ್ತನ್‍ ಅಪಘಾತದಲ್ಲಿ ಮೃತ್ಯು

ಉಡುಪಿ : ಕಾರು ಚಾಲಕನ ನಿರ್ಲಕ್ಷದಿಂದ ಪ್ರಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕ ಆಳ್ವಾಸ್ ಸಂಕೀರ್ತನ್ (28) ಮೃತಪಟ್ಟಿದ್ದಾರೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ಸಂಭವಿಸಿದ್ದು, ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರನ್ನು ಚಾಲಕ ಅಜಾಗರೂಕತೆ ಯಿಂದ ಚಲಾಯಿಸುತ್ತಿದ್ದುದರಿಂದ ಕಾರು  ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ  ರಸ್ತೆ ಡಿವೈಡರ್ ಏರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿ ಸಂಕೀರ್ತ

ಪ್ರಸಿದ್ಧ ಭಕ್ತಿ ಗಾಯಕ, ತಬಲಾ ವಾದಕ ಸಂಕೀರ್ತನ್‍ ಅಪಘಾತದಲ್ಲಿ ಮೃತ್ಯು Read More »

ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ : ಆರೋಪಿ ಬಂಧನ

ಉಡುಪಿ: ಲಾಡ್ಜ್ ಒಂದರಲ್ಲಿ  ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ಮಹಿಳೆಯನ್ನು ಬಲವಂತವಾಗಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಾಗಿದ್ದು, ಕೂಡಲೇ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಮಹಿಳೆಯನ್ನು ರಕ್ಷಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ : ಆರೋಪಿ ಬಂಧನ Read More »

ಮಟ್ಕಾ, ಜುಗಾರಿ : ಬುಕ್ಕಿ ಸಹಿತ ಇಬ್ಬರ ಬಂಧನ

ಉಡುಪಿ : ಮಟ್ಕಾ ಜುಗಾರಿ ಪ್ರಕರಣಕ್ಕೆ ಸಂಬಂಧಿಸಿ ಬುಕ್ಕಿ ಸಹಿತ ಇಬ್ಬರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ವಿಠಲ ದೇವಾಡಿಗ ಹಾಗೂ ಜೂಜಾಟದ ಬುಕ್ಕಿ ಉಡುಪಿ ಲಿಯೋ ಕರ್ನೇಲಿಯೋ ಬಂಧಿತರು. ಆರೋಪಿಗಳಿಬ್ಬರನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದೆ. ಶನಿವಾರ ಕುರ್ಕಾಲು ಗ್ರಾಮದ ಶಂಕರಪುರದ ಅಶ್ವಥಕಟ್ಟೆ ಬಸ್‌ ನಿಲ್ದಾಣದ ಬಳಿ ವಿಠಲ ದೇವಾಡಿಗ ಎಂಬಾತ ಮಟ್ಕಾ ಚೀಟಿ ಬರೆಯುತ್ತಿದ್ದ. ಆತನನ್ನು  ಬಂಧಿಸಿದ್ದು, ಆತನ ವಶದಲ್ಲಿ ಮಟ್ಕಾ ಸಂಖ್ಯೆ ಬರೆದಿರುವ  ಚೀಟಿ – 1,  1,200 ನಗದು ರೂ. ಮತ್ತು ಬಾಲ್ ಪೆನ್

ಮಟ್ಕಾ, ಜುಗಾರಿ : ಬುಕ್ಕಿ ಸಹಿತ ಇಬ್ಬರ ಬಂಧನ Read More »

ಕಾರ್ಕಳ : ಹಟ್ಟಿಗೆ ಬೆಂಕಿ ತಗಲಿ ಕಂಬಳದ ಕೋಣಗಳು ಸಾವು

ಜೀವಂತ ಸುಟ್ಟು ಕರಕಲಾದ ಚಾಂಪಿಯನ್‌ ಕೋಣಗಳು ಕಾರ್ಕಳ : ಹಟ್ಟಿಗೆ ಬೆಂಕಿ ತಗುಲಿದ ಪರಿಣಾಮ ಕಂಬಳದ ಕೋಣಗಳು ಜೀವಂತ ದಹಿಸಿದ ದಾರುಣ ಘಟನೆ ಶುಕ್ರವಾರ ತಡರಾತ್ರಿ ಕಾರ್ಕಳದ ಕಾಂತಾವರ ಸಮೀಪದ ಬೇಲಾಡಿ ಎಂಬಲ್ಲಿ ಸಂಭವಿಸಿದೆ. ಬೇಲಾಡಿ ಬಾವ ಅಶೋಕ್‌ ಶೆಟ್ಟಿಯವರ 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್‌ ಪಡೆದ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.

ಕಾರ್ಕಳ : ಹಟ್ಟಿಗೆ ಬೆಂಕಿ ತಗಲಿ ಕಂಬಳದ ಕೋಣಗಳು ಸಾವು Read More »

ಭಾರಿ ಮಳೆ : ದ.ಕ., ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ

ಶಾಲಾರಂಭದ ಮೊದಲ ದಿನವೇ ರಜೆ ಮಂಗಳೂರು: ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿನ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ಇಂದು ರಜೆ ಸಾರಲಾಗಿದೆ. ಎಲ್ಲ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ (ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆ) ಇಂದು ರಜೆ ಘೋಷಿಸಿ ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದರಿಂದ ಬೇಸಿಗೆ ರಜೆ ಮುಗಿದು ಇಂದಿನಿಂದ ಪುನರಾರಂಭಗೊಳ್ಳಬೇಕಿದ್ದ ಶಾಲೆಗಳು ನಾಳೆ ತೆರೆಯಲಿವೆ. ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆ ಎಂದಿನಂತೆ ನಡೆಯಲಿದೆ.

ಭಾರಿ ಮಳೆ : ದ.ಕ., ಉಡುಪಿ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ Read More »

ಸಾಕುನಾಯಿಯನ್ನು ಬೈಕ್‌ಗೆ ಕಟ್ಟಿಕೊಂಡು ಎಳೆದೊಯ್ದ ಮಾಲೀಕ : ಕೇಸ್‌ ದಾಖಲು

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋ ಉಡುಪಿ: ಸಾಕುನಾಯಿಯನ್ನು ಬೈಕಿಗೆ ಸರಪಳಿಯಿಂದ ಕಟ್ಟಿ ಎಳೆದೊಯ್ಯುತ್ತಿದ್ದ ವೀಡಿಯೊವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬಳಿಕ ಆರೋಪಿಯ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಯಡ್ತರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬೈಂದೂರು–ಕುಂದಾಪುರ ಏಕಮುಖ ರಸ್ತೆಯ ಸರ್ವೀಸ್‌ ರಸ್ತೆಯಲ್ಲಿ ರಾವುತನಕಟ್ಟೆಯಿಂದ ನಾಕಟ್ಟೆ ಸೇತುವೆಯವರೆಗೆ ಪಡುವರಿ ಗ್ರಾಮದ ನಿವಾಸಿಯೊಬ್ಬ ತನ್ನ ಮನೆಯ ಸಾಕುನಾಯಿಯನ್ನು ಆತನ ಬೈಕಿಗೆ ಸರಪಳಿಯಿಂದ ಕಟ್ಟಿ ಚಲಾಯಿಸಿಕೊಂಡು ಹೋಗುತ್ತಿರುವ ಮಾನವೀಯ ಕೃತ್ಯದ ವಿಡಿಯೋ ಮೇ

ಸಾಕುನಾಯಿಯನ್ನು ಬೈಕ್‌ಗೆ ಕಟ್ಟಿಕೊಂಡು ಎಳೆದೊಯ್ದ ಮಾಲೀಕ : ಕೇಸ್‌ ದಾಖಲು Read More »

ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ

ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಮೋಸಗಾರರು ಎಂದು ತಂದೆಯ ಗಂಭೀರ ಆರೋಪ ಕುಂದಾಪುರ : ಇತ್ತೀಚೆಗೆ ವಿವಾಹಿತರಾಗಿರುವ ಬಿಗ್‌ಬಾಸ್‌ ಸ್ಪರ್ಧಿ ಚೈತ್ರಾ ಕುಂದಾಪುರ ಮೇಲೆ ಅವರ ತಂದೆಯೇ ಗಂಭೀರ ಅರೋಪಗಳನ್ನು ಮಾಡಿದ್ದು, ತನ್ನನ್ನು ಮದುವೆಗೆ ಕರೆದೇ ಇಲ್ಲ ಎಂದು ತಂದೆ ಬಾಲಕೃಷ್ಣ ನಾಯ್ಕ್ ಹೇಳಿದ್ದಾರೆ. ಚೈತ್ರಾ ಕುಂದಾಪುರ ಕೆಲದಿನಗಳ ಹಿಂದೆ ದೇವಸ್ಥಾನದಲ್ಲಿ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಎಂಬ ಯುವಕನನ್ನು ವರಿಸಿದ್ದಾರೆ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ

ತಂದೆಯನ್ನೇ ಮದುವೆಗೆ ಆಹ್ವಾನಿಸಿಲ್ಲವಂತೆ ಚೈತ್ರಾ ಕುಂದಾಪುರ Read More »

ಸಾಲಬಾಧೆಯಿಂದ ತತ್ತರಿಸಿ ಬಾವಿಗೆ ಹಾರಿದ ತಂದೆ, ರಕ್ಷಿಸಲು ಜಿಗಿದ ಮಗ ಇಬ್ಬರೂ ಸಾವು

ತಾಯಿಯನ್ನು ರಕ್ಷಿಸಿದ ಸ್ಥಳೀಯರು-ಕುಂದಾಪುರದ ತೆಕ್ಕಟ್ಟೆಯಲ್ಲಿ ಸಂಭವಿಸಿದ ದಾರುಣ ಘಟನೆ ಕುಂದಾಪುರ: ಸಾಲಬಾಧೆಯಿಂದ ತತ್ತರಿಸುತ್ತಿದ್ದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗ ಕೂಡ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಈ ಮಧ್ಯೆ ತಂದೆ-ಮಗ ಬಾವಿಗೆ ಹಾರಿದ್ದನ್ನು ಗಮನಿಸಿ ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಮಾಧವ ದೇವಾಡಿಗ (55) ಮತ್ತು ಅವರ ಪುತ್ರ

ಸಾಲಬಾಧೆಯಿಂದ ತತ್ತರಿಸಿ ಬಾವಿಗೆ ಹಾರಿದ ತಂದೆ, ರಕ್ಷಿಸಲು ಜಿಗಿದ ಮಗ ಇಬ್ಬರೂ ಸಾವು Read More »

error: Content is protected !!
Scroll to Top