ಉಡುಪಿ

ಫೆ.10 : ಡಾ.ಕೆ.ಚಿನ್ನಪ್ಪ ಗೌಡ ರಚಿತ ‘ಸಿರಿಸಂಧಿ’ ಕೃತಿ ಅನಾವರಣ

ಉಡುಪಿ: ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ (ಮಾಹೆ) ಹಾಗೂ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜುಕೇಶನ್ ಸಹಯೋಗದಲ್ಲಿ ಡಾ.ಕೆ.ಚಿನ್ನಪ್ಪ ಗೌಡ ಅವರ ಕೃತಿ ಮಾಚಾರು ಗೋಪಾಲ ನಾಯ್ಕ ಹೇಳಿದ ‘ಸಿರಿಸಂಧಿ’ ಬಿಡುಗಡೆ ಸಮಾರಂಭ ಫೆ.10 ಶನಿವಾರ ಬೆಳಿಗ್ಗೆ 10.30 ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದದ ಸಲಹಾ ಸಮಿತಿ ಅಧ್ಯಕ್ಷ ಡಾ.ಬಿ.ಎ.ವಿವೇಕ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಾಹೆ ಸಹಕುಲಾಧಿಪತಿಗಳಾದ ಡಾ.ಎಚ್‍.ಎಸ್‍.ಬಲ್ಲಾಳ್‍ ಕೃತಿ […]

ಫೆ.10 : ಡಾ.ಕೆ.ಚಿನ್ನಪ್ಪ ಗೌಡ ರಚಿತ ‘ಸಿರಿಸಂಧಿ’ ಕೃತಿ ಅನಾವರಣ Read More »

ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ

ಅಯೊಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡಿರುವ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ ನಡೆಯಿತು. ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶುಕ್ರವಾರ ಸಂಜೆ ಶ್ರೀ ರಾಮನ ಮೂರ್ತಿಯನ್ನು ಪಲ್ಲಕ್ಕಿಯಲ್ಲಿಟ್ಟು, ಉತ್ಸವ ನಡೆಸಲಾಯಿತು. ಶ್ರೀ ರಾಮಲಲ್ಲಾನ ವಿಗ್ರಹವನ್ನು ವಾದ್ಯಘೋಷ, ವಿಷ್ಣುಸಹಸ್ರನಾಮ, ಭಜನೆಗಳೊಂದಿಗೆ ಪಲ್ಲಕ್ಕಿಯಲ್ಲಿಟ್ಟು ಮಂಗಳಾರತಿ ಬೆಳಗಿದ ಬಳಿಕ ಮಂದಿರದ ಹೊರ ಆವರಣದ ಸುತ್ತ ಒಂದು ಸುತ್ತು ತಂದು, ಯಾಗ ಶಾಲೆಯಲ್ಲಿಟ್ಟು ಅಷ್ಟಾವಧಾನ ಸೇವೆ ನಡೆಸಲಾಯಿತು.

ಅಯೋಧ್ಯೆಯಲ್ಲಿ ರಾಮಲಲ್ಲಾನಿಗೆ ಪಲ್ಲಕ್ಕಿ ಉತ್ಸವ, ಅಷ್ಟಾವಧಾನ Read More »

ಸ್ಕೂಟಿ ಸಹಿತ ಸಮುದ್ರಕ್ಕೆ ಬಿದ್ದ ಮೀನುಗಾರ! | ಮೃತದೇಹ, ಸ್ಕೂಟಿ ಮೇಲೆತ್ತಿದ ಆಪದ್ಭಾಂಧವ ಈಶ್ವರ್ ಮಲ್ಪೆ

ಉಡುಪಿ: ಮಲ್ಪೆ ಸಮುದ್ರಕ್ಕೆ ಬಿದ್ದು ಮೃತಪಟ್ಟ ತಮಿಳುನಾಡು ಮೂಲದ ಮೀನುಗಾರನ ಮೃತದೇಹವನ್ನು ಹಾಗೂ ಸ್ಕೂಟಿಯನ್ನು ಮುಳುಗು ತಜ್ಞ ಈಶ್ವರ್ ‍ಮಲ್ಪೆ ಪತ್ತೆ ಮಾಡಿ, ಮೇಲೆತ್ತಿದ್ದಾರೆ. ತಮಿಳುನಾಡು ಮೂಲದ ಮೀನುಗಾರ ಮಲ್ಪೆ ಮೀನುಗಾರಿಕಾ ಬಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಅವರ ಹೆಸರು ತಿಳಿದುಬಂದಿಲ್ಲ. ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ಸಂದರ್ಭ ಅಚಾನಕ್ ಆಗಿ ಸಮುದ್ರಕ್ಕೆ ಬಿದ್ದಿದ್ದರು. ಸ್ಥಳಕ್ಕಾಗಮಿಸಿದ ಆಪದ್ಭಾಂಧವ ಈಶ್ವರ್ ಮಲ್ಪೆ ಅವರು, ಸಮುದ್ರಕ್ಕೆ ಧುಮುಕ್ಕಿದ್ದಾರೆ. ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿತ್ತು. ಕ್ರೇನ್ ಬಳಸಿ ಸ್ಕೂಟಿ ಹಾಗೂ ಮೃತದೇಹವನ್ನು ಸ್ಕೂಟಿ ಹಾಗೂ ಮೃತದೇಹವನ್ನು

ಸ್ಕೂಟಿ ಸಹಿತ ಸಮುದ್ರಕ್ಕೆ ಬಿದ್ದ ಮೀನುಗಾರ! | ಮೃತದೇಹ, ಸ್ಕೂಟಿ ಮೇಲೆತ್ತಿದ ಆಪದ್ಭಾಂಧವ ಈಶ್ವರ್ ಮಲ್ಪೆ Read More »

ಕಾರು ಅಪಘಾತ | ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಮೃತ್ಯು

ಉಡುಪಿ: ಭೀಕರ ಕಾರು ಅಪಘಾತದಲ್ಲಿ ಉದ್ಯಾವರ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಉದ್ಯಾವರ ಸಂಪಿಗೆನಗರ ನಿವಾಸಿ ರೋಬರ್ಟ್‍ ಕ್ಯಾಸ್ಟಲಿನೋ ಅವರ ಪುತ್ರ ಜೋಯಿಸ್ಸನ್ ಕ್ಯಾಸ್ಟಲಿನೋ (22) ಮೃತಪಟ್ಟವರು. ಲೆಸ್ಟನ್ ಪಿಂಟೋ (22), ಜಸ್ಟಿನ್ ಕರ್ಡೊಜ (22), ವಿಲ್ಸನ್ ಮಾರ್ಟಿಸ್ (23) ಹಾಗೂ ಗ್ಲಾಡ್‍ಸನ್‍ ಡಿಸಿಲ್ವ (23) ಗಾಯಗೊಂಡವರು. ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಉಡುಪಿ ಕಡೆಗೆ ಬರುತ್ತಿದ್ದಾಗ ಕೋಟೇಶ್ವರ ಬಳಿ ಕೆಟ್ಟು ನಿಂತಿದ್ದ ಟ್ರಕ್‍ ಗೆ

ಕಾರು ಅಪಘಾತ | ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಮೃತ್ಯು Read More »

ಕುಂಜಿಬೆಟ್ಟು ಯುವತಿ ನಾಪತ್ತೆ !

ಉಡುಪಿ: ತಾಲೂಕಿನ ಶಿವಳ್ಳಿ ಕುಂಜಿಬೆಟ್ಟುವಿನ ಯುವತಿಯೊಬ್ಬರು ಕಾಣೆಯಾಗಿರುವ ಕುರಿತು ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಕಾಣೆಯಾದ ಯುವತಿ. ಡಿ.18 ರಂದು ಮನೆಯಿಂದ ಹೊರ ಹೋದವರು ವಾಪಾಸ್ಸು ಬಂದಿಲ್ಲ ಎಂದು ಮನೆಯವರು ಠಾಣೆಗೆ ದೂರು ನೀಡಿದ್ದಾರೆ. ನೇತ್ರಾವತಿ 4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದಾರೆ. ಮಾಹಿತಿ ದೊರೆತಲ್ಲಿ ಉಡುಪಿ ನಗರ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕುಂಜಿಬೆಟ್ಟು ಯುವತಿ ನಾಪತ್ತೆ ! Read More »

ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಸಾಕುಮಗಳ ಅಪಹರಣ | ನಾಲ್ವರು ಆರೋಪಿಗಳ ಬಂಧನ

ಉಡುಪಿ: ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ಸಾಕು ಮಗಳು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಬಂಧಿಸಿದ್ದಾರೆ. ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್  ಬಂಧಿತ ಆರೋಪಿಗಳು ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಮನೆ ಬಿಟ್ಟು

ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಸಾಕುಮಗಳ ಅಪಹರಣ | ನಾಲ್ವರು ಆರೋಪಿಗಳ ಬಂಧನ Read More »

ಓಪನ್ ಮಾಡಿದ ಕಾರಿನ ಬಾಗಿಲು | ಸ್ಕೂಟರ್ ಸವಾರ ಮೃತ್ಯು !

ಕಾರ್ಕಳ: ಕಾರಿನ ಬಾಗಿಲು ತೆರೆದ ಪರಿಣಾಮ ಸ್ಕೂಟರಿನಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದ ಸವಾರ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಕಾರ್ಕಳ ಕಸಬಾ ಗ್ರಾಮದಲ್ಲಿ ನಡೆದಿದೆ. ಯಶವಂತ ಮೃತಪಟ್ಟ ಸ್ಕೂಟರ್ ಸವಾರ ಎಂದು ಗುರುತಿಸಲಾಗಿದೆ. ರಸ್ತೆ ಬದಿ ಕಾ‌ರ್ ಅನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿದ್ದ. ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಗಮನಿಸದೇ ನಿರ್ಲಕ್ಷ್ಯತನದಿಂದ ತನ್ನ ಕಾರಿನ ಬಲಬದಿಯ ಬಾಗಿಲನ್ನು ತೆರೆದ ಪರಿಣಾಮ ಸಾಲ್ಮರ ಕಡೆಯಿಂದ ತಾಲೂಕು ಕಚೇರಿ ಬಳಿ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್ ಸವಾರನಿಗೆ ಕಾರಿನ ಬಾಗಿಲು

ಓಪನ್ ಮಾಡಿದ ಕಾರಿನ ಬಾಗಿಲು | ಸ್ಕೂಟರ್ ಸವಾರ ಮೃತ್ಯು ! Read More »

ಆಪತ್ಬಾಂಧವ ಈಶ್ವರ್ ಮಲ್ಪೆ ತಂಡ ಹಾಗೂ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಮನವಿಗೆ ಸ್ಪಂದಿಸಿದ ಕರ್ನಾಟಕದ ಜನತೆ

ಕುಮಟಾ ತಾಲ್ಲೂಕಿನ ಧಾರೇಶ್ವರದ *ವಿಶಾಲ ಹರಿಕಾಂತ ಎಂಬ ಯುವತಿಯ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಗಾಗಿ ಸುಮಾರು 15 ಲಕ್ಷ ರೂಪಾಯಿ ಅವಶ್ಯಕತೆಯನ್ನು ಮನಗಂಡು ಬಡ ಕುಟುಂಬದ ಈ ಯುವತಿಯ ಚಿಕಿತ್ಸೆಗೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮುಖಾಂತರ ಈಶ್ವರ್ ಮಲ್ಪೆಯವರು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ದೃಶ್ಯಮಾಧ್ಯಮಗಳಲ್ಲಿ ಮನವಿ ಮಾಡಿದ್ದು ಸುಮಾರು **14,61,179ರೂಪಾಯಿ ಸಂಗ್ರಹವಾಗಿದೆ. ಸಂಗ್ರಹವಾದ ಹಣವನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಕುಮಟಾ ಠಾಣಾಧಿಕಾರಿ ಸಂಪತ್ ಕುಮಾರ್, ಆಪತ್ಬಾಂಧವ ಈಶ್ವರ್ ಮಲ್ಪೆ. ಸಹಾಯಹಸ್ತ ಟ್ರಸ್ಟಿನ ಮನೋಹರ್ ಪಲಯಮಜಲು,

ಆಪತ್ಬಾಂಧವ ಈಶ್ವರ್ ಮಲ್ಪೆ ತಂಡ ಹಾಗೂ ಸಹಾಯಹಸ್ತ ಲೋಕಸೇವಾ ಚಾರಿಟೇಬಲ್ ಟ್ರಸ್ಟ್ ಮನವಿಗೆ ಸ್ಪಂದಿಸಿದ ಕರ್ನಾಟಕದ ಜನತೆ Read More »

ಉದ್ಯಾವರ ಸೇತುವೆಯಿಂದ ಕೆಳಗೆ ಹಾರಿದ ವ್ಯಕ್ತಿಯ ಶವ ಪತ್ತೆ!

ಉಡುಪಿ: ಉದ್ಯಾವರ ಸೇತುವೆಯಲ್ಲಿ ಸ್ಕೂಟ‌ರ್ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ನಗರದ ಕೋರ್ಟ್ ಬಳಿಯ ನಿವಾಸಿ ರವೀಂದ್ರ ಭಟ್ (55) ಎಂದು ಗುರುತಿಸಲಾಗಿದೆ. ಬುಧವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಪಾರ್ಸೆಲ್ ತೆಗೆದುಕೊಂಡು ಬರುವುದಾಗಿ ಹೇಳಿ ಹೊರಗೆ ಹೋದವರು ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ಅಲ್ಲಿಂದ ತನ್ನ ಸ್ಕೂಟರ್‌ನಲ್ಲಿ ಉದ್ಯಾವರ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಾಪು

ಉದ್ಯಾವರ ಸೇತುವೆಯಿಂದ ಕೆಳಗೆ ಹಾರಿದ ವ್ಯಕ್ತಿಯ ಶವ ಪತ್ತೆ! Read More »

ಶಬರಿಮಲೆ ಯಾತ್ರಿಕರ ಟೆಂಪೋ ಟ್ರಾವೆಲರ್ ಪಲ್ಟಿ !

ಕೋಟ: ಶಬರಿಮಲೆ ಯಾತ್ರೀಕರ ಟೆಂಪೋ ಟ್ರಾವೆಲರ್ ಪಲ್ಟಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಸಮೀಪದ ಬಾಳೆಬೆಟ್ಟು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮುರ್ಡೇಶ್ವರದಿಂದ ಯಾತ್ರಿಕರು ಹೊರಟಿದ್ದರು ಎನ್ನಲಾಗಿದ್ದು, ಹೆದ್ದಾರಿಯಲ್ಲಿ ಅಡ್ಡ ಬಂದ ದನವೊಂದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಹೊಡೆದಿದೆ. ವಾಹನದಲ್ಲಿದ್ದ ಎಲ್ಲಾ ಅಯ್ಯಪ್ಪ ಭಕ್ತರು ಸಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಕ್ಷಣ ಕೋಟ ಪೊಲೀಸರು ಮತ್ತು ಟೋಲ್ ಸಿಬ್ಬಂದಿಗಳು, ಸಾರ್ವಜನಿಕರು ಸೇರಿ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವು

ಶಬರಿಮಲೆ ಯಾತ್ರಿಕರ ಟೆಂಪೋ ಟ್ರಾವೆಲರ್ ಪಲ್ಟಿ ! Read More »

error: Content is protected !!
Scroll to Top