ಉಡುಪಿ

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮಹಿಳೆಯನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಸಾಗಿಸಲೆತ್ನಿಸಿದ್ದ ಅಪರಾಧಿಗಳು ಉಡುಪಿ : ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ನಿವಾಸಿಗಳಾದ ಮಿಥುನ್ ಹಾಗೂ ನಾಗೇಶ್ ಪೂಜಾರಿ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಗಳು. ಮಂಚಿಕುಮೇರಿ ನಿವಾಸಿ ರಮಾನಾಥ ರೈ ಮಣಿಪಾಲದ ಟೈಗರ್ ಸರ್ಕಲ್ ಬಳಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದು, 2022ರ ಫೆ.18ರಂದು ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಸಂಜೆ 7 […]

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read More »

ಉಡುಪಿಯಲ್ಲಿ 32 ಅಕ್ರಮ ಹೋಂ ಸ್ಟೇ‌ಗಳು ಪತ್ತೆ

ಉಡುಪಿ: ಕೊಡಗಿನ ಹೋಂ‌ಸ್ಚೇ ಒಂದರಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆಯ ಬಳಿಕ ರಾಜ್ಯದ ಪೊಲೀಸ್ ಇಲಾಖೆ ಹೋಂ ಸ್ಟೇ‌ಗಳ ಮೇಲೆ ಹದ್ದಿನ ಕಣ್ಣಿರಿಸಲು ಆರಂಭಿಸಿದೆ. ಮಾನ್ಯ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಅವರ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 32 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಈ 32 ಅಕ್ರಮ ಹೋಂಸ್ಟೇಗಳ ವಿರುದ್ಧ ನಿಯಮಾನುಸಾರ ಕಟ್ಟುನಿಟ್ಟಿನ

ಉಡುಪಿಯಲ್ಲಿ 32 ಅಕ್ರಮ ಹೋಂ ಸ್ಟೇ‌ಗಳು ಪತ್ತೆ Read More »

ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ

ಸಿಟಿ ಬಸ್‌ಸ್ಟ್ಯಾಂಡ್‌ ಪಕ್ಕದಲ್ಲೇ ಹೊತ್ತಿ ಉರಿದ ಕಟ್ಟಡ ಉಡುಪಿ : ನಗರದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ವಾಣಿಜ್ಯ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ಉದ್ಯಮಿ ಭೀಮಾ ಎಂಬುವರಿಗೆ ಸೇರಿದ ಪ್ಲಾಸ್ಟಿಕ್ ವಸ್ತುಗಳ ಗೋದಾಮಿನಲ್ಲಿ ಭಾನುವಾರ ಸಂಜೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಬೆಂಕಿ ಅವಘಡದಲ್ಲಿ ಅವರಿಗೆ ಸೇರಿದ ಪ್ಲಾಸ್ಟಿಕ್ ಮಳಿಗೆ

ಉಡುಪಿ ವಾಣಿಜ್ಯ ಮಳಿಗೆ ಬೆಂಕಿ ಅವಘಡದಲ್ಲಿ 2.5 ಕೋ. ರೂ. ಸೊತ್ತು ನಾಶ Read More »

ಪ್ರವಾಸಕ್ಕೆ ಗೆಳೆಯರ ಜೊತೆಗೆ ಮಲ್ಪೆಗೆ ಬಂದ ವ್ಯಕ್ತಿ ಸಾವು

ಉಡುಪಿ: ಪ್ರವಾಸಕ್ಕೆಂದು ಮಲ್ಪೆಗೆ ಬಂದಿದ್ದ ವ್ಯಕ್ತಿಯೊಬ್ಬರು ಹೊಟೇಲ್ ರೂಮಿನಲ್ಲೇ ‌ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಅನೇಕಲ್ ‌ನಿವಾಸಿ ಧನಂಜಯ್ ಕೆ. ಎನ್. (37) ಎನ್ನುವವರೇ ಮೃತ ದುರ್ದೈವಿ. ಇವರು ಸುಮಾರು 4 ವರ್ಷಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು ಎ. 19 ರಂದು ತಮ್ಮ ಗೆಳೆಯರ ಜೊತೆಗೆ ಮಲ್ಪೆಗೆ ‌ಪ್ರವಾಸಕ್ಕೆ ಬಂದಿದ್ದಾರೆ. ಎ. 20 ರಂದು ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಕೊಠಡಿಯಲ್ಲೇ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರವಾಸಕ್ಕೆ ಗೆಳೆಯರ ಜೊತೆಗೆ ಮಲ್ಪೆಗೆ ಬಂದ ವ್ಯಕ್ತಿ ಸಾವು Read More »

ಸ್ಕೂಟಿಗೆ ಬಸ್‌ ಡಿಕ್ಕಿ : 8 ವರ್ಷದ ಬಾಲಕಿ ಸಾವು

ಸರ್ವಿಸ್‌ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುವಾಗ ಸ್ಕೂಟಿಯ ಹಿಂಬದಿಗೆ ಗುದ್ದಿದ ಬಸ್‌ ಉಡುಪಿ: ಎಕ್ಸ್‌ಪ್ರೆಸ್‌ ಬಸ್‌ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಪು ಹೆದ್ದಾರಿಯಲ್ಲಿ ಸಂಭವಿಸಿದೆ. ಕಾಪು ಸಾಯಿ ಸರ್ವಿಸ್‌ ಸ್ಟೇಶನ್‌ ಬಳಿ ಈ ಅಪಘಾತ ಸಂಬವಿಸಿದ್ದು, ಬಸ್‌ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಕೊನೆಯುಸಿರೆಳೆದಿದ್ದಾರೆ. ಕಾಪು ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದಂತೆ ಬಸ್‌ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ದುಬಾಯಿಯಲ್ಲಿ

ಸ್ಕೂಟಿಗೆ ಬಸ್‌ ಡಿಕ್ಕಿ : 8 ವರ್ಷದ ಬಾಲಕಿ ಸಾವು Read More »

ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು, ಸಹಸವಾರನಿಗೆ ಗಾಯ

ಉಡುಪಿ: ಲಾರಿ ಮತ್ತು ಬೈಕ್ ಮಧ್ಯೆ ಅಪಘಾತ ನಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕಟಪಾಡಿಯ ಕಲ್ಲಾಪು ಸಮೀಪ ನಡೆದಿದೆ. ಮೃತನನ್ನು ಕಟಪಾಡಿ ಸರ್ಕಾರಿ ಗುಡ್ಡೆ ನಿವಾಸಿ ಭೀಮಪ್ಪ ಹುನ್ನಳ್ಳಿ ಎಂದು ಗುರುತಿಸಲಾಗಿದೆ. ಇವರು ಮೂಲತಃ ಬಾಗಲಕೋಟೆಯ ಹನಗುಂದದವರಾಗಿದ್ದಾರೆ. ಸಹ ಸವಾರ ಕಟಪಾಡಿ ನಾಯ್ಕರ್‌ತೋಟದ ಸಾಗರ್ ಶೆಣೈ ಗಾಯಗೊಂಡಿದ್ದು, ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತಕ್ಕೆ ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯೇ ‌ಕಾರಣ ಎಂದು ತಿಳಿದು ಬಂದಿದೆ. ಕಾಪು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಲಾರಿ – ಬೈಕ್ ನಡುವೆ ಅಪಘಾತ: ಸವಾರ ಸಾವು, ಸಹಸವಾರನಿಗೆ ಗಾಯ Read More »

ಯುವ ಉದ್ಯಮಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ

ಮದುವೆಯಾದ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುದೀಪ್‌ ರೈ ಬೆಳ್ತಂಗಡಿ : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಯುವ ಉದ್ಯಮಿ ಬಿ.ಸುದೀಪ್ ರೈ (31) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ಪೊಲೀಸರು ಶನಿವಾರ ಉಡುಪಿಯಲ್ಲಿ ಬಂಧಿಸಿದ್ದಾರೆ. ಸುದೀಪ್‌ ರೈ ಮಾ.17ರಂದು ಕಾರ್ಕಳ ತಾಲೂಕಿನ ಕಜೆ ಎಂಬಲ್ಲಿರುವ ಹೆಂಡತಿಯ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಪತ್ನಿ ಸೌಮ್ಯ ಶೆಟ್ಟಿಯನ್ನು

ಯುವ ಉದ್ಯಮಿ ಸುದೀಪ್‌ ರೈ ಆತ್ಮಹತ್ಯೆ ಪ್ರಕರಣ : ಪತ್ನಿ ಬಂಧನ Read More »

ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ

ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ಒಂಟಿ ವೃದ್ಧ ಉಡುಪಿ : ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ವೃದ್ಧರೊಬ್ಬರು ಪವಾಡಸದೃಶವಾಗಿ ಬದುಕುಳಿದ ಘಟನೆ ಆದಿ ಉಡುಪಿಯ ಕಂಬಳಕಟ್ಟೆ ಎಂಬಲ್ಲಿ ನಡೆದಿದೆ. ಕಂಬಳಕಟ್ಟೆ ನಿವಾಸಿ ಶ್ರೀನಿವಾಸ ಆಚಾರ್ಯ (62 ವರ್ಷ) ಸುಮಾರು 20 ಅಡಿ ಆಳದ ನೀರಿನ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದಿದ್ದಾರೆ. ಒಂಟಿಯಾಗಿ ವಾಸಿಸುವ ಶ್ರೀನಿವಾಸ ಆಚಾರ್ಯ ಎರಡು ತಿಂಗಳ ಹಿಂದೆ ಆರೋಗ್ಯ

ಬಾವಿಯೊಳಗೆ 3 ದಿನ ಜೀವನ್ಮರಣ ಹೋರಾಟ ನಡೆಸಿ ಬದುಕುಳಿದ ವೃದ್ಧ Read More »

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ

ಹನಿಟ್ರ್ಯಾಪ್ ಆರೋಪ ಸುಳ್ಳು ಎಂದ ಸೌಮ್ಯಾ ಶೆಟ್ಟಿ ಉಡುಪಿ: ನೆಲ್ಯಾಡಿ ಮೂಲದ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುದೀಪ್ ರೈ ಅವರ ಪತ್ನಿ ಸೌಮ್ಯ ಶೆಟ್ಟಿ ಮಾಧ್ಯಮಗಳ ಮುಂದೆ ಬಂದು ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಸೌಮ್ಯ ಶೆಟ್ಟಿ, ನನ್ನ ವಿರುದ್ಧ ಕೇಳಿಬರುತ್ತಿರುವ ಹನಿಟ್ರ್ಯಾಪ್ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ನಿರಾಧಾರ. ನನ್ನ ವ್ಯಕ್ತಿತ್ವ ತೇಜೋವಧೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗುತ್ತಿದೆ. ಸುದೀಪ್ ತಮ್ಮ ತಂದೆಯ ಮನೆಗೆ ತೆರಳಿದ್ದ

ಸುದೀಪ್‌ ರೈ ಸಾವಿಗೆ ಮನೆಯವರ ಕಿರುಕುಳ ಕಾರಣ : ಪತ್ನಿ ಆರೋಪ Read More »

ಪತ್ನಿಯ ಟಾರ್ಚರ್‌ ಸುದೀಪ್‌ ರೈ ಸಾವಿಗೆ ಕಾರಣ : ಹೆತ್ತವರ ಆರೋಪ

ಕೊಲೆ ಶಂಕೆ; ಉನ್ನತ ತನಿಖೆಗೆ ಆಗ್ರಹ ಮಂಗಳೂರು : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ, ಯುವ ಉದ್ಯಮಿ ಸುದೀಪ್ ರೈ ಮದುವೆಯಾದ ಒಂದೇ ತಿಂಗಳಿಗೆ ಕಾರ್ಕಳದಲ್ಲಿರುವ ಪತ್ನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವು ಪಡದುಕೊಂಡಿದೆ. ಪತ್ನಿ ಸೌಮ್ಯಾ ಶೆಟ್ಟಿಯೇ ಸುದೀಪ್ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಮದುವೆಯಾಗಿ ಕೆಲವೇ ದಿನಗಳಲ್ಲಿ ಪತ್ನಿ ಈ ಮೊದಲು ಕೆಲವು ಮದುವೆಯಾಗಿರುವುದು ಬಯಲಾಗಿದೆ. ಹೀಗಾಗಿ ಮದುವೆಯಾದ ಒಂದು ತಿಂಗಳ ಬಳಿಕ ತನ್ನ ತಂದೆ-ತಾಯಿ ಮನೆಗೆ ಬಂದಿದ್ದ ಸುದೀಪ್​​ ಪತ್ನಿ

ಪತ್ನಿಯ ಟಾರ್ಚರ್‌ ಸುದೀಪ್‌ ರೈ ಸಾವಿಗೆ ಕಾರಣ : ಹೆತ್ತವರ ಆರೋಪ Read More »

error: Content is protected !!
Scroll to Top