ಉಡುಪಿ

ಕಾಪು ಬಡಗಬೆಟ್ಟು ಪಂಚಾಯಿತಿ ಸಾಮಾನ್ಯ ಸಭೆ

ಕಾಪು: ವಿಧಾನಸಭಾ ಕ್ಷೇತ್ರದ ಬಡಗಬೆಟ್ಟು ಪಂಚಾಯತಿನ ಸಾಮಾನ್ಯ ಸಭೆ ಇಂದು ನಡೆಯಿತು. ಗ್ರಾಮ ಪಂಚಾಯತಿನ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. 8 ಬಾರಿ ಆದರ್ಶ ಪಂಚಾಯತ್ ಪ್ರಶಸ್ತಿ ಪಡೆದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ ಸಲ್ಲಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಪು ಬಡಗಬೆಟ್ಟು ಪಂಚಾಯಿತಿ ಸಾಮಾನ್ಯ ಸಭೆ Read More »

ಕಾಂತಾರ-1 ಚಿತ್ರತಂಡದ ಬಸ್‌ ಪಲ್ಟಿ : 6 ಮಂದಿಗೆ ಗಾಯ

ಉಡುಪಿ: ರಿಷಬ್‌ ಶೆಟ್ಟಿಯವರ ಕಾಂತಾರ-1 ಚಿತ್ರತಂಡ ಪ್ರಯಾಣಿಸುತ್ತಿದ್ದ ಮಿನಿಬಸ್‌ ಕೊಲ್ಲೂರು ಸಮೀಪ ನಿನ್ನೆ ರಾತ್ರಿ ಪಲ್ಟಿಯಾಗಿ ಆರು ಮಂದಿ ಜೂನಿಯರ್‌ ಕಲಾವಿದರು ಗಾಯಗೊಂಡಿದ್ದಾರೆ.ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಹಾಲ್ಕಲ್‌ನ ಆನೆಝರಿ ಎಂಬಲ್ಲಿ ಬಸ್‌ ಅಪಘಾತಕ್ಕೀಡಾಗಿದೆ. ಸ್ಕೂಟಿ ಅಡ್ಡಬಂದಾಗ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ಬಸ್‌ ಮಗುಚಿ ಬಿದ್ದಿದೆ. ಬಸ್‌ನಲ್ಲಿ ಸುಮಾರು 20 ಜ್ಯೂನಿಯರ್ ಕಲಾವಿದರು ಇದ್ದರು. ಈ ಪೈಕಿ 6 ಮಂದಿಗೆ ಗಾಯವಾಗಿದ್ದು, ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. 2025ರ ಅಕ್ಟೋಬರ್​ 2ರಂದು ಈ

ಕಾಂತಾರ-1 ಚಿತ್ರತಂಡದ ಬಸ್‌ ಪಲ್ಟಿ : 6 ಮಂದಿಗೆ ಗಾಯ Read More »

ಇನೋವಾಕ್ಕೆ ಡಿಕ್ಕಿ ಹೊಡೆದ ಇನ್ಸುಲೇಟರ್ | ಇನೋವಾ ಪ್ರಯಾಣಿಕರಿಗೆ ಗಾಯ

ಉಡುಪಿ: ಇನೋವಾಕ್ಕೆ ಇನ್ಸುಲೇಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಇನೋವಾ ಪ್ರಯಾಣಿಕರು ಗಂಭೀರ  ಗಾಯಗೊಂಡ ಘಟನೆ ಕುಂಭಾಸಿಯಲ್ಲಿ ಇಂದು ನಡೆದಿದೆ. ಇನೋವಾದಲ್ಲಿದ್ದ ಪ್ರಯಾಣಿಕರು ಗಾಯಗೊಂಡು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಲ್ಲೂರಿನಿಂದ  ಉಡುಪಿಗೆ ಹೋಗುವ ಸಂದರ್ಭ ಘಟನೆ ನಡೆದಿದ್ದು,  ಇನ್ಸುಲೇಟರ್ ಪಲ್ಟಿಯಾಗಿದ್ದು, ಇನೋವಾ ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಇನೋವಾಕ್ಕೆ ಡಿಕ್ಕಿ ಹೊಡೆದ ಇನ್ಸುಲೇಟರ್ | ಇನೋವಾ ಪ್ರಯಾಣಿಕರಿಗೆ ಗಾಯ Read More »

ಮನೆಯಿಂದ ಹೊರಹೋದ ಯುವತಿ ನಾಪತ್ತೆ

ಉಡುಪಿ: ಮನೆಯಿಂದ ಹೊರಗೆ ಹೋದ ಯುವತಿಯೊಬ್ಬರು ಮನೆಗೆ ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಗರದ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್. (24) ನಾಪತ್ತೆಯಾದ ಯುವತಿ ನ.14ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಅವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸ ಬಹುದು ಎಂದು ಪೊಲೀಸ್ ಠಾಣಾ

ಮನೆಯಿಂದ ಹೊರಹೋದ ಯುವತಿ ನಾಪತ್ತೆ Read More »

ಡಿವೈಡರ್ ಗೆ ಕಾರು ಡಿಕ್ಕಿ : ಪ್ರಯಾಣಿಕರು ಪಾರು

ಉಡುಪಿ: ಕಾರೊಂದು ರಸ್ತೆ ವಿಭಾಜಕದ ಗಾರ್ಡ್ ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಉದ್ಯಾವರದಲ್ಲಿ  ಶನಿವಾರ ರಾತ್ರಿ ನಡೆದಿದೆ. ಉಡುಪಿಯಿಂದ ಪಡುಬಿದ್ರೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಪಾಸ್ ನ  ರಸ್ತೆ ವಿಭಾಜದ ಬಳಿ ಡಿವೈಡರ್ ಮೇಲೇರಿದ್ದು ಡಿವೈಡರ್ ಮೇಲಿನ ಗಾರ್ಡ್ ಗೆ ಡಿಕ್ಕಿಯಾಗಿ ನಿಂತಿದೆ. ಕಾರಿನಲ್ಲಿ ಮಹಿಳೆ ಸಹಿತ ಐದು ಮಂದಿ ಪ್ರಯಾಣಿರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅಪಘಾತ ನಡೆದ ವೇಳೆ ಆ ದಾರಿಯಾಗಿ ಹೋಗುತ್ತಿದ್ದ

ಡಿವೈಡರ್ ಗೆ ಕಾರು ಡಿಕ್ಕಿ : ಪ್ರಯಾಣಿಕರು ಪಾರು Read More »

ಕಲುಷಿತ ನೀರು ಕುಡಿದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಕಾಲರಾ ಭೀತಿ

ಪಂಚಾಯತ್‌ ಪೂರೈಸಿರುವ ನೀರಿನಿಂದ ರೋಗ ಹರಡಿದ ಅನುಮಾನ ಉಡುಪಿ: ಬೈಂದೂರು ಸಮೀಪ ಉಪ್ಪುಂದ ಬಳಿ ಕಲುಷಿತ ನೀರು ಸೇವಿಸಿ 200ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಕೆಲವರಿಗೆ ಕಾಲರಾ ಬಾಧಿಸಿದ ಅನುಮಾನವಿದೆ. ಉಪ್ಪುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡಿನ ಮಡಿಕಲ್‌ ಮತ್ತು ಕರ್ಕಿಕಳಿ ಎಂಬ ಊರುಗಳಿಗೆ ಪಂಚಾಯಿತಿ ಪೂರೈಸಿದ ನೀರು ಕುಡಿದು ಜನರು ಅಸ್ವಸ್ಥರಾಗಿದ್ದಾರೆ. ಕೆಲವರು ಕಾಲರಾದಿಂದ ಬಳಲುತ್ತಿದ್ದು, ಹಲವು ಮಂದಿ ಆಸ್ಪತ್ರಗೆ ದಾಖಲಾಗಿದ್ದಾರೆ.ಪಂಚಾಯಿತಿ ಪೂರೈಸಿದ ನೀರನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಇಲ್ಲಿಂದ

ಕಲುಷಿತ ನೀರು ಕುಡಿದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಕಾಲರಾ ಭೀತಿ Read More »

ಹೊಸ್ಮಾರಿನಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರ ದುರ್ಮರಣ

ಕಾರ್ಕಳ: ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನನಪ್ಪಿದ ಘಟನೆ  ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ ಸಾವನಪ್ಪಿದ್ದಾರೆ. ಮೃತರನ್ನು ಸುರೇಶ್ ಆಚಾರ್ಯ (36) ಮೀನಾಕ್ಷಿ (32) ಸುಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಹೊಸ್ಮಾರಿನಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರ ದುರ್ಮರಣ Read More »

ರಿಕ್ಷಾ- ಕಾರು ಡಿಕ್ಕಿ : ಇಬ್ಬರಿಗೆ ಗಾಯ

ಕಟಪಾಡಿ: ಕಾರು ಮತ್ತು ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ‌ ರಿಕ್ಷಾ ಚಾಲಕ ಮತ್ತು ಪ್ರಯಾಣಿಕ ಸಹಿತ ಇಬ್ಬರು ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಶನಿವಾರ ರಾತ್ರಿ ನಡೆದಿದೆ. ರಿಕ್ಷಾ ಚಾಲಕ ಪೂರ್ಣೇಶ್ ಮತ್ತು ಪ್ರಯಾಣಿಕ ನೂರ್ ಸಾಹೇಬ್ ಗಾಯಗೊಂಡವರು. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕೇರಳ ಮೂಲದ ಕಾರು ಕಾಪು ಪೇಟೆಯಿಂದ ಪೊಲಿಪು ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ರಿಕ್ಷಾ

ರಿಕ್ಷಾ- ಕಾರು ಡಿಕ್ಕಿ : ಇಬ್ಬರಿಗೆ ಗಾಯ Read More »

ಕುತ್ಯಾರು ಸೂರ್ಯಚೈತನ್ಯ ಪ್ರೌಢಶಾಲೆಯಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

ಉಡುಪಿ: ರೇಬಿಸ್ ರೋಗವನ್ನು ತಡೆಗಟ್ಟುವ ಜಾಗೃತಿಗಾಗಿ ಸೆ.28 ನ್ನು ವಿಶ್ವ ರೇಬಿಸ್ ದಿನವಾಗಿ ಆಚರಿಸಲಾಗುತ್ತಿದೆ. ರೇಬಿಸ್ ರೋಗವು ನಾಯಿ ಮತ್ತು ಬೆಕ್ಕು ಕಡಿತದಿಂದ ಬರುತ್ತದೆ. ಈ ಪ್ರಾಣಿಗಳಿಂದ ಕಚ್ಚಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಬೇಕು. ಎಚ್ಚರಿಕೆಯ ಕ್ರಮವಾಗಿ ಎಲ್ಲಾ ಸಾಕುಪ್ರಾಣಿಗಳಿಗೆ ರೇಬಿಸ್ ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಅಕಸ್ಮಿಕವಾಗಿ ಪ್ರಾಣಿಗಳ ಕಡಿತವಾದರೆ ಪಶು ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದರೆ ಮಾರಣಾಂತಿಕ ರೋಗದಿಂದ ದೂರವಿರಬಹುದು ಎಂದು ಕಾಪು ತಾಲೂಕು ಪಶುವೈದ್ಯಾಧಿಕಾರಿ ಡಾ. ಅರುಣ್ ಹೆಗ್ಡೆ ತಿಳಿಸಿದರು. ಉಡುಪಿ ಜಿಲ್ಲಾ ಪಂಚಾಯಿತಿ ಪಶುಪಾಲನ ಮತ್ತು ಪಶು ವೈದ್ಯ

ಕುತ್ಯಾರು ಸೂರ್ಯಚೈತನ್ಯ ಪ್ರೌಢಶಾಲೆಯಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ Read More »

ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ

ಪುತ್ತೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ  ಉಡುಪಿ ಮತ್ತು ಆನೆಗುಂದಿ ಶ್ರೀ ಸರಸ್ವತಿ ಪೀಠ ಸೂರ್ಯಚೈತನ್ಯ ಹೈಸ್ಕೂಲ್ ಕುತ್ಯಾರು ಆಶ್ರಯದಲ್ಲಿ ಕಾಪು ವೃತ್ತದ ಕ್ರೀಡಾಕೂಟವು ಸಂಸ್ಥೆಯ ಕ್ರೀಡಾಂಗಣದಲ್ಲಿ ಜರಗಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್ ಹಳೆಯಂಗಡಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಆನೆಗುಂದಿ ಸರಸ್ವತಿ ಪೀಠ ಅಸ್ಸೆಟ್ ಕಾರ್ಯದರ್ಶಿ ಗುರುರಾಜ ಕೆ.ಜೆ ಕ್ರೀಡಾಪಟುಗಳ  ಪಥಸಂಚಲನ ಗೌರವ ವಂದನೆ ಸ್ವೀಕರಿಸಿದರು. ಪಡುಕುತ್ಯಾರು ಆನೆಗುಂದಿ ಮಠದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಕಂಬಾರು ಕ್ರೀಡಾ ಧ್ವಜಾವರೋಹಣಗೈದು ಶುಭ ಹಾರೈಸಿದರು. ಕಾಪು ವಲಯದ ಯುವಜನ

ಕಾಪು ವೃತ್ತದ ಪ್ರಾಥಮಿಕ ಶಾಲಾ ಕ್ರೀಡಾಕೂಟ Read More »

error: Content is protected !!
Scroll to Top