ಉಡುಪಿ

ಕಾರ್ಕಳ: ಪರಶುರಾಮ ಥೀಮ್‌ ಪಾರ್ಕ್‌ನ ತಾಮ್ರದ ಶೀಟ್‌ ಕಳವು ಮಾಡಿದವರು ಸೆರೆ

ರಾಜಕೀಯ ಕಾರಣಗಳಿಗಾಗಿ ಭಾರಿ ವಿವಾದಕ್ಕೊಳಗಾಗಿದ್ದ ಪ್ರಕರಣ ಕಾರ್ಕಳ : ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ ತಾಮ್ರದ ಶೀಟ್‌ಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕಳವಾರು ಚರ್ಚ್ ಗುಡ್ಡೆಯ ಆರೀಫ್ ಯಾನೆ ಮುನ್ನ(37) ಹಾಗೂ ಮಂಗಳೂರು ಕಾವೂರಿನ ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜ.3ರಂದು ಥೀಮ್‌ ಪಾರ್ಕ್‌ ಕಟ್ಟಡದ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ […]

ಕಾರ್ಕಳ: ಪರಶುರಾಮ ಥೀಮ್‌ ಪಾರ್ಕ್‌ನ ತಾಮ್ರದ ಶೀಟ್‌ ಕಳವು ಮಾಡಿದವರು ಸೆರೆ Read More »

ಉಡುಪಿ ಪರ್ಯಾಯದ ಹೊರೆಕಾಣಿಕೆ ಬಗ್ಗೆ ಕಮೆಂಟ್‌ ಹಾಕಿದ ಯುವಕ ಸೆರೆ

ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಬಂಧಿಸಿದ ಪೊಲೀಸರು ಕಾರ್ಕಳ: ಈ ಬಾರಿಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹಗಳನ್ನು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ಅಂಬಡೆಕಲ್ಲು

ಉಡುಪಿ ಪರ್ಯಾಯದ ಹೊರೆಕಾಣಿಕೆ ಬಗ್ಗೆ ಕಮೆಂಟ್‌ ಹಾಕಿದ ಯುವಕ ಸೆರೆ Read More »

ಬೈಕ್‌ ಸೇತುವೆಗೆ ಡಿಕ್ಕಿ ಹೊಡೆದು ಸವಾರ ಮೃತ್ಯು

ಉಡುಪಿ : ಕಾಪು ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ. ಮೃತ ಯುವಕನನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದಾಗಿ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೈಕ್‌ ಸೇತುವೆಗೆ ಡಿಕ್ಕಿ ಹೊಡೆದು ಸವಾರ ಮೃತ್ಯು Read More »

ಕಾರ್ಕಳ : ರೋಗಿಯ ಸಾವಿಗೆ ಕಾರಣರಾದ ಮೂವರು ವೈದ್ಯರ ವಿರುದ್ಧ ಪೊಲೀಸ್‌ ಕೇಸ್‌

ಆಪರೇಷನ್‌ ಮಾಡುವಾಗ ಮುನ್ನೆಚ್ಚರಿಕೆ ವಹಿಸದ ಕಾರಣ ಮೃತಪಟ್ಟಿರುವ ರೋಗಿ ಕಾರ್ಕಳ : ಕಾರ್ಕಳದ ಖಾಸಗಿ ಆಸ್ಪತ್ರೆಯೊಂದರ ಮೂವರು ವೈದ್ಯರ ವಿರುದ್ಧ ರೋಗಿಯ ಸಾವಿಗೆ ಕಾರಣರಾದ ಪ್ರಕರಣ ದಾಖಲಾಗಿದೆ. ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣಕ್ಕೆ ಝುಬೈದ(52) ಎಂಬವರು ಕಳೆದ ಮೇ 10ರಂದು ಕಾರ್ಕಳ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದರು.

ಕಾರ್ಕಳ : ರೋಗಿಯ ಸಾವಿಗೆ ಕಾರಣರಾದ ಮೂವರು ವೈದ್ಯರ ವಿರುದ್ಧ ಪೊಲೀಸ್‌ ಕೇಸ್‌ Read More »

ಪಟಾಕಿ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ : ಅಪಾರ ನಷ್ಟ

ಆರಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು ಉಡುಪಿ : ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡವೊಂದರಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ದುರಂತ ಸಂಭವಿಸಿದ್ದು ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಬಳಿಕ ಅದು ಪುಸ್ತಕದಂಗಡಿ ಸೇರಿದಂತೆ ಐರಾರು ಅಂಗಡಿಗಳಿಗೆ ವೇಗವಾಗಿ ಹಬ್ಬಿದೆ ಎನ್ನಲಾಗಿದೆ. ಸೋಮವಾರ ಮುಂಜಾನೆ ಮೂರು ಗಂಟೆಗೆ ಘಟನೆ ನಡೆದಿದ್ದು, ಕುಂದಾಪುರ ಪೇಟೆಯ ವೆಂಕಟರಮಣ ದೇವಸ್ಥಾನದ ಎದುರು ರಥಬೀದಿಯಲ್ಲಿರುವ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಅಂಗಡಿಯೊಂದಿಗೆ ಇಡೀ ಕಟ್ಟಡವೇ ಹೊತ್ತಿ

ಪಟಾಕಿ ಅಂಗಡಿಯಲ್ಲಿ ಭೀಕರ ಬೆಂಕಿ ಅವಘಡ : ಅಪಾರ ನಷ್ಟ Read More »

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 46 ಲ.ರೂ. ಚಿನ್ನಾಭರಣ ಕಳವು

ತಲೆಯ ಬಳಿ ಇಟ್ಟಿದ್ದ ಬ್ಯಾಗಿನಲ್ಲಿದ್ದ ಆಭರಣಗಳನ್ನು ಎಗರಿಸಿರುವ ಕಳ್ಳರು ಉಡುಪಿ: ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಆದ ಘಟನೆ ಮತ್ಸ್ಯಗಂಧ ರೈಲಿನಲ್ಲಿ ಸಂಭವಿಸಿದೆ. ಮುಂಬೈ ಚೆಂಬೂರಿನ ಹೆಲ್ಮೀನಾ ಸಾಲಿನ್ಸ್ ಎಂಬವರು ಮಗಳು, ಪತಿ ಮತ್ತು ಮೊಮ್ಮಗಳೊಂದಿಗೆ ಡಿ.26ರಂದು ಮಧ್ಯಾಹ್ನ ಮತ್ಸ್ಯಗಂಧ ರೈಲಿನಲ್ಲಿ ಒಡವೆಗಳಿದ್ದ ಒಂದು ವ್ಯಾನಿಟಿ ಬ್ಯಾಗ್, ಬಟ್ಟೆಗಳಿದ್ದ ಹ್ಯಾಂಡ್ ಬ್ಯಾಗ್ ಮತ್ತು ಸೂಟ್‌ಕೇಸ್‌ಗಳೊಂದಿಗೆ ಉಡುಪಿಗೆ ಪ್ರಯಾಣಿಸುತಿದ್ದರು. ಹೆಲ್ಮೀನಾ ಸಾಲಿನ್ಸ್ ಒಡವೆಗಳಿದ್ದ ವ್ಯಾನಿಟಿ ಬ್ಯಾಗನ್ನು ತನ್ನ ತಲೆಯ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 46 ಲ.ರೂ. ಚಿನ್ನಾಭರಣ ಕಳವು Read More »

ನೇಮೋತ್ಸವದಲ್ಲಿ ಮಹಿಳೆಯ ಸರಕದ್ದ ಮಹಿಳೆಯರ ಬಂಧನ

ಗಂಟೆ ಹೊಡೆಯುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ್ದ ಮಹಿಳೆಯರು ಉಡುಪಿ: ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ಧೆಯ ಚಿನ್ನದ ಸರವನ್ನು ಕಳ್ಳತನ ಮಾಡಿದ ಮೂವರು ಮಹಿಳೆಯರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ಕೃಷ್ಣಗಿರಿ ನಿವಾಸಿಗಳಾದ ಶೀತಲ್, ಕಾಳಿಯಮ್ಮ ಮತ್ತು ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ನಡೆಯುತ್ತಿದ್ದ ವೇಳೆ ಮೂವರು ಮಹಿಳೆಯರು ಹೆಜಮಾಡಿ ನಿವಾಸಿ ಕಮಲ ಎಂಬ ವೃದ್ಧ ಕುತ್ತಿಗೆಯಲ್ಲಿದ್ದ

ನೇಮೋತ್ಸವದಲ್ಲಿ ಮಹಿಳೆಯ ಸರಕದ್ದ ಮಹಿಳೆಯರ ಬಂಧನ Read More »

ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ನಡೆದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದ ವೇಳೆ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿರುವ ಘಟನೆ ನಡೆದಿದೆ. ಮೂವರು ಕಳ್ಳಿಯರು ನಡೆಸಿದ ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಹೆಜಮಾಡಿ ನಿವಾಸಿ ಕಮಲ ಎಂಬವರು ಪೂಜೆಯಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ, ಮೂವರು ಕಳ್ಳಿಯರು ಅವರನ್ನು ಮೂರು ಕಡೆಯಿಂದ ಸುತ್ತುವರಿದು, ಗಂಟೆ ಹೊಡೆಯುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಕಳ್ಳತನವಾದ ಚಿನ್ನದ ಸರದ ಮೌಲ್ಯ ಸುಮಾರು

ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು Read More »

ಮಲ್ಪೆ ಸಮುದ್ರದಲ್ಲಿ ಸಿಕ್ಕಿದ ದೇವರ ವಿಗ್ರಹ : ವಿಡಿಯೋ ವೈರಲ್‌

ಇಸ್ಕಾನ್‌ ಅನುಯಾಯಿಗಳಿಗೆ ಸಿಕ್ಕಿದ ವಿಗ್ರಹ ಕುರಿತು ನಾನಾ ವದಂತಿ ಉಡುಪಿ: ಇಲ್ಲಿನ ಮಲ್ಪೆ ಕಡಲ ತೀರದಲ್ಲಿ ಭಾನುವಾರ ದೇವರ ವಿಗ್ರಹವೊಂದು ಸಮುದ್ರದಲ್ಲಿ ಸಿಕ್ಕಿ ಭಾರಿ ಕುತೂಹಲ ಕೆರಳಿಸಿದೆ. ಕೃಷ್ಣನೂರಿಗೆ ಸಾಕ್ಷಾತ್‌ ಕೃಷ್ಣನ ವಿಗ್ರಹವೇ ತೇಲಿ ಬಂದಿದೆ ಎಂದು ಭಾವಿಸಿ ಜನ ಸಂಭ್ರಮಿಸಿದ್ದಾರೆ. ಇದು ದೇವರ ಮಹಿಮೆ ಸಾವಿರಾರು ಜನ ವಿಗ್ರಹ ನೋಡಲು ಧಾವಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ. ಮಲ್ಪೆಯಲ್ಲಿ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರ ಉಡುಪಿ ಕೃಷ್ಣಮಠದಲ್ಲಿ ಇಸ್ಕಾನ್

ಮಲ್ಪೆ ಸಮುದ್ರದಲ್ಲಿ ಸಿಕ್ಕಿದ ದೇವರ ವಿಗ್ರಹ : ವಿಡಿಯೋ ವೈರಲ್‌ Read More »

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ

ಭಕ್ತಿರಿಗೆ ಲಕ್ಷಗಟ್ಟಲೆ ರೂ. ವಂಚಿಸಿದ್ದ ರಾಜಸ್ಥಾನದ ನಾಸೀರ್‌ ಹುಸೇನ್‌ ಉಡುಪಿ : ಕೊಲ್ಲೂರು ದೇಗುಲದ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರನ್ನು ವಂಚಿಸುತ್ತಿದ್ದ ರಾಜಸ್ಥಾನದ ನಾಸೀರ್ ಹುಸೇನ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾಸಿರ್‌ ಹುಸೇನ್‌ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ರೂಮ್ ಬುಕ್ಕಿಂಗ್ ಹೆಸರಲ್ಲಿ ಭಕ್ತರಿಗೆ ಟೋಪಿ ಹಾಕುತ್ತಿದ್ದ. ​ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ನಂತೆಯೇ ಕಾಣುವ ನಕಲಿ ಸೈಟ್ ಸೃಷ್ಟಿ ಮಾಡಿ ಭಕ್ತರಿಂದ ಆನ್‌ಲೈನ್‌ ಮೂಲಕ ಮುಂಗಡ ಹಣ ಪಡೆದು ನಕಲಿ

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ Read More »

error: Content is protected !!
Scroll to Top