ಉಡುಪಿ

ಜು.18-19 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೊಷಣೆ

ಮಂಗಳೂರು: ಜು.18 ಹಾಗೂ 19 ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಿದೆ. ಬುಧವಾರವೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆ ಮುಂದುವರೆದಿದೆ. ಮುಂದಿನ ಎರಡು ದಿನಗಳು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜು.18-19 : ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೊಷಣೆ Read More »

ಅಂಬಲಪಾಡಿ ಅಗ್ನಿ ಅವಘಡ | ಮೃತಪಟ್ಟ ರಮಾನಂದ ಶೆಟ್ಟಿ ಅವರ ಪತ್ನಿಯೂ ಮೃತ್ಯು

ಉಡುಪಿ : ಅಂಬಲಪಾಡಿಯ ಶೆಟ್ಟಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಅವರ ಮನೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ  ಮೃತಪಟ್ಟಿದ್ದು, ಇದೀಗ ಗಂಭೀರ ಗಾಯಗೊಂಡಿದ್ದ ಅವರ ಪತ್ನಿಯೂ ಸಾವನ್ನಪ್ಪಿದ್ದಾರೆ. ಅಶ್ವಿನಿ (50) ಮೃತ ಪಟ್ಟವರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಅಶ್ವಿನಿ ಮೃತಪಟ್ಟಿದ್ದಾರೆ. ಬೆಂಕಿ ಕೆನ್ನಾಲಿಗೆಗೆ ಗಂಭಿರವಾಗಿ ಗಾಯಗೊಂಡಿದ್ದ ಅಶ್ವಿನಿ ಉಸಿರಾಟ ಹಾಗೂ ಶಾಸ್ವಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇನ್ನು ಅವರಿಬ್ಬರ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತಂದೆ-ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ.

ಅಂಬಲಪಾಡಿ ಅಗ್ನಿ ಅವಘಡ | ಮೃತಪಟ್ಟ ರಮಾನಂದ ಶೆಟ್ಟಿ ಅವರ ಪತ್ನಿಯೂ ಮೃತ್ಯು Read More »

ಉಡುಪಿ ಮನೆಯೊಂದರಲ್ಲಿ ಬೆಂಕಿ ಅವಘಡ : ಓರ್ವ ಮೃತ್ಯು, ಮಹಿಳೆ ಗಂಭೀರ

ಉಡುಪಿ : ಮನೆಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಘಟನೆ ಉಡುಪಿ ತಾಲೂಕಿನ ಅಂಬಲಪಾಡಿಯ ಗಾಂಧಿನಗರದಲ್ಲಿ ನಡೆದಿದೆ. ಬೆಂಕಿ ಅವಘಡದಿಂದ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಅವರ ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ಗಂಡ

ಉಡುಪಿ ಮನೆಯೊಂದರಲ್ಲಿ ಬೆಂಕಿ ಅವಘಡ : ಓರ್ವ ಮೃತ್ಯು, ಮಹಿಳೆ ಗಂಭೀರ Read More »

ಗರುಡ ಗ್ಯಾಂಗ್‍ ಸದಸ್ಯರಿಗೆ ಆರ್ಥಿಕ ನೆರವು | ಉಪ್ಪಿನಂಗಡಿ ಮೂಲದ ಯುವತಿ ಬಂಧನ

ಉಡುಪಿ : ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಮೂಲದ ಶಫೀರಾ (21) ಬಂಧಿತ ಯುವತಿ. ಬಂಧಿತೆಯು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಬಂಧಿತೆ ಶಫೀರಾ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಈ ಗರುಡ ಗ್ಯಾಂಗ್‌ನ

ಗರುಡ ಗ್ಯಾಂಗ್‍ ಸದಸ್ಯರಿಗೆ ಆರ್ಥಿಕ ನೆರವು | ಉಪ್ಪಿನಂಗಡಿ ಮೂಲದ ಯುವತಿ ಬಂಧನ Read More »

ಗಾಯಕ, ವೈದ್ಯ ಡಾ.ಸತೀಶ್ ಪೂಜಾರಿ ನಿಧನ

ಉಡುಪಿ : ಕೋಟದ ಶ್ರೀ ಮಾತಾ ಆಸ್ಪತ್ರೆಯ ಮಾಲಕ ಡಾ.ಸತೀಶ್ ಪೂಜಾರಿ (54) ಹೃದಯಾಘಾತದಿಂದ ಕೋಟತಟ್ಟು ಮಣೂರಿನ ಸ್ವಗೃಹದಲ್ಲಿ ಗುರುವಾರ ಬೆಳಗ್ಗೆ ನಿಧನರಾದರು. ಕುಂದಾಪುರದ ಶ್ರೀ ಮಾತಾ ಆಸ್ಪತ್ರೆ ಮಾಲೀಕರಾಗಿದ್ದ ಇವರು ಕಲಾವಿದರೂ ಆಗಿದ್ದರು ಹಾಗೂ ಮನಸ್ಮಿತಾ ಫೌಂಡೇಷನ್ ಹಾಗೂ ಇನ್ನಿತರ ಸಂಸ್ಥೆಗಳಲ್ಲೂ ಇದ್ದರು. ಇಎನ್‌ಟಿ ತಜ್ಞರಾಗಿದ್ದ ಡಾ. ಸತೀಶ್ ಅತ್ಯುತ್ತಮ ಗಾಯಕರಾಗಿದ್ದು, ಅನೇಕ ಸಂಗೀತ ವೀಡಿಯೊಗಳನ್ನು, ಆಲ್ಬಂಗಳನ್ನು ಹೊರತಂದಿದ್ದರು. ಸಂಗೀತ ರಸಮಂಜರಿಗಳಲ್ಲಿ ಹಾಡುತ್ತಿದ್ದರು. ಗಾಯಕಿ ಎಸ್‌. ಜಾನಕಿಯವರ ಅಭಿಮಾನಿಯಾಗಿದ್ದ ಡಾ.ಸತೀಶ್ ಪೂಜಾರಿ ವರ್ಷಂಪ್ರತಿ ಕೋಟೇಶ್ವರದಲ್ಲಿ ಡಾ.ಎಸ್‌.ಜಾನಕಿ

ಗಾಯಕ, ವೈದ್ಯ ಡಾ.ಸತೀಶ್ ಪೂಜಾರಿ ನಿಧನ Read More »

ಇಂಡಿಯಾ ಟೀಮ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ | ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಟಿ20 ವಿಶ್ವಕಪ್ ಗೆದ್ದ ಬಳಿಕ ಉಡುಪಿಯ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪತ್ನಿ ದೇವಿಶಾ ಶೆಟ್ಟಿ ಜೊತೆಗೆ ಮಾರಿಗುಡಿ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಸ್ಪಾರ್ ಕ್ರಿಕೆಟರ್ ಗೆ ಸ್ವಾಗತ ಕೋರಲಾಯಿತು. ನೂತನವಾಗಿ ನಿರ್ಮಾಣವಾಗುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದಂಪತಿ ಪೂಜೆ ಸಲ್ಲಿಸಿ, ದೇವಸ್ಥಾನದ ನಿರ್ಮಾಣ, ಕೆತ್ತನೆ ಶಿಲ್ಪಕಲೆಯ ಬಗ್ಗೆ ಮಾಹಿತಿ ಪಡೆದುಕೊಂಡರು.

ಇಂಡಿಯಾ ಟೀಮ್ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ | ವಿಶೇಷ ಪೂಜೆ ಸಲ್ಲಿಕೆ Read More »

ಭಾರೀ ಮಳೆ : ನಾಳೆ ಉಡುಪಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ: ಭಾರೀ ಮಳೆಯ ಹಿನ್ನಲೆಯಲ್ಲಿ ನಾಳೆ (ಜು.9) ಉಡುಪಿ ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದು, ಉಡುಪಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಸೇರಿದಂತೆ ಮೀನುಗಾರರು ನದಿ ತೀರಕ್ಕೆ ತೆರಳುವುದು, ಮೀನುಗಾರಿಕೆ ಮಾಡುವುದು ನಿಷೇಧಿಸಲಾಗಿದೆ.

ಭಾರೀ ಮಳೆ : ನಾಳೆ ಉಡುಪಿ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ Read More »

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಬೆಳ್ತಂಗಡಿ ತಾಲೂಕಿನ ಗಡಾಯಿಕಲ್ಲು, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಬೆಳ್ತಂಗಡಿ ಆರ್‌ಎಫ್‌ಒಗೆ ಕುದುರೆಮುಖ

ಭಾರೀ ಮಳೆ ಹಿನ್ನಲೆ : ದಕ್ಷಿಣ ಕನ್ನಡದಲ್ಲಿ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ Read More »

ಸಾಮಾಜಿಕ ಜಾಲತಾಣದಿಂದ ಲಕ್ಷಾಂತರ ಹಣ  ಕಳೆದುಕೊಂಡ ಮಣಿಪಾಲದ ಯುವತಿ

ಮಣಿಪಾಲ : ವಾಟ್ಸ್ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿ ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ನಿಟ್ಟಿನಲ್ಲಿ ಯುವತಿಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ಹಣ ಕಳೆದುಕೊಂಡ ವಿದ್ಯಾರ್ಥಿನಿ ಮಣಿಪಾಲದಲ್ಲಿ ಪಿಎಚ್‌.ಡಿ ವ್ಯಾಸಂಗ ಮಾಡಿಕೊಂಡಿರುವ ಗಿಟಿಕಾ ಬಸಿನ್. ಈಕೆ ಜೂ. 23ರಂದು ತನ್ನ ಕೊಠಡಿಯಲ್ಲಿರುವಾಗ Review job & Pre Paid Tasks ಎಂಬ ಸಂದೇಶವನ್ನು ವಾಟ್ಸ್ಆ್ಯಪ್ ನಲ್ಲಿ ಸ್ವೀಕರಿಸಿರುತ್ತಾಳೆ. ಸಂದೇಶದ ಪ್ರಕಾರ ಆಕೆ ಅದರಲ್ಲಿರುವ ಟಾಸ್ಕ್ ಗಳನ್ನು ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ.ಜಮೆಯಾಯಿತು.

ಸಾಮಾಜಿಕ ಜಾಲತಾಣದಿಂದ ಲಕ್ಷಾಂತರ ಹಣ  ಕಳೆದುಕೊಂಡ ಮಣಿಪಾಲದ ಯುವತಿ Read More »

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃವಿಯೋಗ

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ,ಮಾಜಿ, ಸಚಿವ  ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಕೋಟತಟ್ಟು ಬಾರಿಕೆರೆ ನಿವಾಸಿ ಲಚ್ಚಿ ಪೂಜಾರಿ (97) ಭಾನುವಾರ ನಿಧನ ಹೊಂದಿದರು. ಇವರು ಉತ್ತಮ ಕೃಷಿಕರಾಗಿದ್ದರು .ಪೂಜಾರಿ ಅವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ ಪ್ರತಿ ಸಂದರ್ಭ ತಾಯಿ ವಾಸವಿರುವ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಚುನಾವಣೆಯಲ್ಲೂ ತಾಯಿಯೊಂದಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಸಹಿತ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕುಂದಾಪುರ ಶಾಸಕ

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃವಿಯೋಗ Read More »

error: Content is protected !!
Scroll to Top