ಉಡುಪಿ

ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯ ಕಾರಣ : ಶಾಸಕ ಆರೋಪ

ಅಳಿವೆ ಬಾಗಿಲಲ್ಲಿ ದೋಣಿ ಪಲ್ಟಿಯಾಗಿ ಇಬ್ಬರು ಮೃತಪಟ್ಟ ದುರಂತ ಉಡುಪಿ: ಜಿಲ್ಲೆಯ ಕೋಡಿ ಬೆಂಗ್ರೆ ಡೆಲ್ಟಾ ಬೀಚ್ ಬಳಿ ಸೋಮವಾರ ಪ್ರವಾಸಿ ದೋಣಿ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಹಂಗರಕಟ್ಟೆ ಹಡಗು ನಿರ್ಮಾಣ ಪ್ರದೇಶದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ 15 ರಿಂದ 20 ಪ್ರಯಾಣಿಕರ ಸಾಮರ್ಥ್ಯದ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕೋಡಿ ಬೆಂಗ್ರೆಯಲ್ಲಿ ನಡೆದ ದುರಂತ ಪ್ರವಾಸಿ ದೋಣಿ […]

ಕೋಡಿಬೆಂಗ್ರೆ ದೋಣಿ ದುರಂತಕ್ಕೆ ಪ್ರವಾಸೋದ್ಯಮ ಇಲಾಖೆ ನಿರ್ಲಕ್ಷ್ಯ ಕಾರಣ : ಶಾಸಕ ಆರೋಪ Read More »

ಬೆಟ್ಟಿಂಗ್‌ನಲ್ಲಿ ಗೆದ್ದ ಹಣ ನೀಡದೆ ವಂಚನೆ, ಬೆದರಿಕೆ : ಐವರ ಬಂಧನ

ಅಪ್ಲಿಕೇಶನ್ ಮೂಲಕ ಬೆಟ್ಟಿಂಗ್‌ಗೆ ಪ್ರಚೋದನೆ ನೀಡುತ್ತಿದ್ದ ಆರೋಪಿಗಳು ಉಡುಪಿ: ಆನ್‌ಲೈನ್ ಬೆಟ್ಟಿಂಗ್‌ಗೆ ಪ್ರಚೋದಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಉಡುಪಿ ನಿಲ್ಲೆಯ ಕೋಟ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ ನಿವಾಸಿಗಳಾದ ರೂಪೇಶ್ (23), ಮನೋಜ್ (25), ಕೊಳ್ಕೆಬೈಲು ನಿವಾಸಿ ಸೃಜನ್ ಶೆಟ್ಟಿ (28), ಪಡುಮುಂಡು ನಿವಾಸಿ ರಾಘವೇಂದ್ರ (37), ಶಿರಿಯಾರ ಪೋಸ್ಟ್ ಆಫೀಸ್ ಹತ್ತಿರದ ನಿವಾಸಿ ಕುಶಲ (38) ಬಂಧಿತ ಆರೋಪಿಗಳು. ದೂರುದಾರ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸುಮಾರು

ಬೆಟ್ಟಿಂಗ್‌ನಲ್ಲಿ ಗೆದ್ದ ಹಣ ನೀಡದೆ ವಂಚನೆ, ಬೆದರಿಕೆ : ಐವರ ಬಂಧನ Read More »

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲು ಸಿಎಂ‌ಗೆ ಪತ್ರ ಬರೆದ ವಿದ್ಯಾರ್ಥಿ

ಉಡುಪಿ: ರಾಜ್ಯದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರಂತರ ವಿದ್ಯುತ್ ಪೂರೈಕೆ ಮಾಡುವಂತೆ ಹೊಯ್ಸಳ ಶೌರ್ಯ ಪ್ರಶಸ್ತಿ ಪುರಸ್ಕೃತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ಅವರು ಸಿಎಂ ‌ಸಿದ್ದರಾಮಯ್ಯ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ. ಕುಂಜಿಬೆಟ್ಟುವಿನಲ್ಲಿ ಹತ್ತನೇ ತರಗತಿಯಲ್ಲಿ ಕಲಿಯುತ್ತಿರುವ ದೀಪಕ್, ತಮ್ಮ ಪರಿಸರದಲ್ಲಿನ ವಿದ್ಯುತ್ ಸಮಸ್ಯೆ, ಅನಿಯಮಿತ , ಅಘೋಷಿತ ವಿದ್ಯುತ್ ಕಡಿತ ಸಮಸ್ಯೆಗಳ ಬಗ್ಗೆ ಪತ್ರದಲ್ಲಿ ಮುಖ್ಯಮಂತ್ರಿಗಳ ಗಮನ‌ಕ್ಕೆ ತಂದಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾತ್ರಿ

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲು ಸಿಎಂ‌ಗೆ ಪತ್ರ ಬರೆದ ವಿದ್ಯಾರ್ಥಿ Read More »

ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ

ಜೀನ್ಸ್‌, ಟಿ-ಶರ್ಟ್‌, ತೋಳಿಲ್ಲದ ಉಡುಪುಗಳು ನಿಷಿದ್ಧ ಉಡುಪಿ : ಶೀರೂರು ಮಠದ ಶ್ರೀ ವೇದವರ್ಧನ ಶ್ರೀಗಳು ಪರ್ಯಾಯ ಪೀಠಾರೋಹಣ ಮಾಡಿದ ಬೆನ್ನಿಗೆ ಉಡುಪಿ ಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ಎಲ್ಲ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದ್ದು, ದೇವಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಪುರುಷ ಭಕ್ತರು ಶರ್ಟ್‌, ಬನಿಯನ್‌ ತೆಗೆಯಬೇಕು. ಪರ್ಯಾಯ ಶೀರೂರು ಮಠ ಹೊರಡಿಸಿದ ಈ ನಿರ್ದೇಶನ ಜನವರಿ 19ರಿಂದಲೇ ಜಾರಿಗೆ ತಂದಿದೆ. ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ, ದೇವಾಲಯ ಪ್ರವೇಶಿಸುವ ಭಕ್ತರಿಗೆ ವಸ್ತ್ರ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ Read More »

ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ

ರಾತ್ರಿಯಿಡೀ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಭವ್ಯ ಪರ್ಯಾಯ ಮೆರವಣಿಗೆ ಉಡುಪಿ: ಉಡುಪಿ ಕೃಷ್ಣಮಠದಲ್ಲಿ ಶೀರೂರು ಪರ್ಯಾಯ ಮಹೋತ್ಸವ ಸಡಗರದಿಂದ ನೆರವೇರಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಿದ್ದು, ಅತ್ಯಂತ ಎಳೆಯ ಪ್ರಾಯದಲ್ಲೇ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣನ ಪೂಜಾಧಿಕಾರವನ್ನು ಅವರು ನಿರ್ವಹಿಸಲಿದ್ದಾರೆ. ಇದು ಕೃಷ್ಣ ಮಠದ 253ನೇ ಪರ್ಯಾಯ ಮಹೋತ್ಸವವಾಗಿದ್ದು, ಭಕ್ತರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಉಡುಪಿಯಲ್ಲಿ ಶೀರೂರು ಪರ್ಯಾಯ ಮಹೋತ್ಸವ ಸಂಭ್ರಮ ಮುಗಿಲು ಮುಟ್ಟಿದೆ.

ಉಡುಪಿ: ಶೀರೂರು ಮಠದ ಶ್ರೀ ವೇದವರ್ಧನ ತೀರ್ಥರು ಸರ್ವಜ್ಞ ಪೀಠಾರೋಹಣ Read More »

ಪರ್ಯಾಯ ಸಂಭ್ರಮದಲ್ಲಿ ಉಡುಪಿ : ಇಂದು ರಾತ್ರಿಯಿಂದ ಧಾರ್ಮಿಕ ವಿಧಿಗಳು ಆರಂಭ

ಮೊದಲ ಸಲ ಪರ್ಯಾಯ ಪೀಠವೇರಲಿರುವ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉಡುಪಿ: ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಸರ್ವ ಸಿದ್ಧತೆಗಳು ಪೂರ್ಣಗೊಂಡಿದ್ದು, ಉಡುಪಿ ಜನತೆಯ ಸಹಕಾರದೊಂದಿಗೆ ಶ್ರದ್ಧಾ–ಭಕ್ತಿಯಿಂದ, ಅತ್ಯಂತ ವ್ಯವಸ್ಥಿತ ಹಾಗೂ ವೈಭವಯುತವಾಗಿ ಪರ್ಯಾಯ ಮಹೋತ್ಸವವನ್ನು ನಡೆಸಲು ಪೊಡವಿಗೊಡೆಯ ಶ್ರೀಕೃಷ್ಣನ ನಗರಿ ಉಡುಪಿ ಸಜ್ಜಾಗಿದೆ. ಪರ್ಯಾಯ ಮಹೋತ್ಸವದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು, ಜನವರಿ 17ರ ರಾತ್ರಿ ಸಹ ಸಾರ್ವಜನಿಕ ಅನ್ನ

ಪರ್ಯಾಯ ಸಂಭ್ರಮದಲ್ಲಿ ಉಡುಪಿ : ಇಂದು ರಾತ್ರಿಯಿಂದ ಧಾರ್ಮಿಕ ವಿಧಿಗಳು ಆರಂಭ Read More »

ಕಾರ್ಕಳ: ಗ್ಯಾಸ್‌ ಸಿಲಿಂಡರ್‌ ಸ್ಫೋಟಿಸಿ ಅಪಾರ ಹಾನಿ

ಸ್ಫೋಟದ ಬಿರುಸಿಗೆ ಮನೆಯ ಗೋಡೆಯಲ್ಲಿ ಬಿರುಕು ಕಾರ್ಕಳ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1.30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಮುದ್ದಣ್ಣ ನಗರದ ವಾರಿಜಾ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ

ಕಾರ್ಕಳ: ಗ್ಯಾಸ್‌ ಸಿಲಿಂಡರ್‌ ಸ್ಫೋಟಿಸಿ ಅಪಾರ ಹಾನಿ Read More »

ಕಾರ್ಕಳ: ಪರಶುರಾಮ ಥೀಮ್‌ ಪಾರ್ಕ್‌ನ ತಾಮ್ರದ ಶೀಟ್‌ ಕಳವು ಮಾಡಿದವರು ಸೆರೆ

ರಾಜಕೀಯ ಕಾರಣಗಳಿಗಾಗಿ ಭಾರಿ ವಿವಾದಕ್ಕೊಳಗಾಗಿದ್ದ ಪ್ರಕರಣ ಕಾರ್ಕಳ : ಬೈಲೂರು ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ ತಾಮ್ರದ ಶೀಟ್‌ಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಕಳವಾರು ಚರ್ಚ್ ಗುಡ್ಡೆಯ ಆರೀಫ್ ಯಾನೆ ಮುನ್ನ(37) ಹಾಗೂ ಮಂಗಳೂರು ಕಾವೂರಿನ ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜ.3ರಂದು ಥೀಮ್‌ ಪಾರ್ಕ್‌ ಕಟ್ಟಡದ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ್ದ

ಕಾರ್ಕಳ: ಪರಶುರಾಮ ಥೀಮ್‌ ಪಾರ್ಕ್‌ನ ತಾಮ್ರದ ಶೀಟ್‌ ಕಳವು ಮಾಡಿದವರು ಸೆರೆ Read More »

ಉಡುಪಿ ಪರ್ಯಾಯದ ಹೊರೆಕಾಣಿಕೆ ಬಗ್ಗೆ ಕಮೆಂಟ್‌ ಹಾಕಿದ ಯುವಕ ಸೆರೆ

ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಕ್ಕೆ ಬಂಧಿಸಿದ ಪೊಲೀಸರು ಕಾರ್ಕಳ: ಈ ಬಾರಿಯ ಶೀರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬಂಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹಗಳನ್ನು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ಅಂಬಡೆಕಲ್ಲು

ಉಡುಪಿ ಪರ್ಯಾಯದ ಹೊರೆಕಾಣಿಕೆ ಬಗ್ಗೆ ಕಮೆಂಟ್‌ ಹಾಕಿದ ಯುವಕ ಸೆರೆ Read More »

ಬೈಕ್‌ ಸೇತುವೆಗೆ ಡಿಕ್ಕಿ ಹೊಡೆದು ಸವಾರ ಮೃತ್ಯು

ಉಡುಪಿ : ಕಾಪು ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ. ಮೃತ ಯುವಕನನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದಾಗಿ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೈಕ್‌ ಸೇತುವೆಗೆ ಡಿಕ್ಕಿ ಹೊಡೆದು ಸವಾರ ಮೃತ್ಯು Read More »

error: Content is protected !!
Scroll to Top