ಉಡುಪಿ

ನೇಮೋತ್ಸವದಲ್ಲಿ ಮಹಿಳೆಯ ಸರಕದ್ದ ಮಹಿಳೆಯರ ಬಂಧನ

ಗಂಟೆ ಹೊಡೆಯುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ್ದ ಮಹಿಳೆಯರು ಉಡುಪಿ: ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ಧೆಯ ಚಿನ್ನದ ಸರವನ್ನು ಕಳ್ಳತನ ಮಾಡಿದ ಮೂವರು ಮಹಿಳೆಯರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ಕೃಷ್ಣಗಿರಿ ನಿವಾಸಿಗಳಾದ ಶೀತಲ್, ಕಾಳಿಯಮ್ಮ ಮತ್ತು ಮಾರಿ ಎಂದು ಗುರುತಿಸಲಾಗಿದೆ. ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ನಡೆಯುತ್ತಿದ್ದ ವೇಳೆ ಮೂವರು ಮಹಿಳೆಯರು ಹೆಜಮಾಡಿ ನಿವಾಸಿ ಕಮಲ ಎಂಬ ವೃದ್ಧ ಕುತ್ತಿಗೆಯಲ್ಲಿದ್ದ […]

ನೇಮೋತ್ಸವದಲ್ಲಿ ಮಹಿಳೆಯ ಸರಕದ್ದ ಮಹಿಳೆಯರ ಬಂಧನ Read More »

ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು

ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ನಡೆದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವದ ವೇಳೆ ವೃದ್ಧೆಯೊಬ್ಬರ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿರುವ ಘಟನೆ ನಡೆದಿದೆ. ಮೂವರು ಕಳ್ಳಿಯರು ನಡೆಸಿದ ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ. ಹೆಜಮಾಡಿ ನಿವಾಸಿ ಕಮಲ ಎಂಬವರು ಪೂಜೆಯಲ್ಲಿ ತೊಡಗಿಸಿಕೊಂಡಿದ್ದ ಸಂದರ್ಭ, ಮೂವರು ಕಳ್ಳಿಯರು ಅವರನ್ನು ಮೂರು ಕಡೆಯಿಂದ ಸುತ್ತುವರಿದು, ಗಂಟೆ ಹೊಡೆಯುವ ನೆಪದಲ್ಲಿ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಕಳ್ಳತನವಾದ ಚಿನ್ನದ ಸರದ ಮೌಲ್ಯ ಸುಮಾರು

ನೇಮೋತ್ಸವದಲ್ಲಿ ನೂರಾರು ಜನರ ಎದುರೇ ವೃದ್ಧೆಯ ಸರ ಎಗರಿಸಿದ ಕಳ್ಳಿಯರು Read More »

ಮಲ್ಪೆ ಸಮುದ್ರದಲ್ಲಿ ಸಿಕ್ಕಿದ ದೇವರ ವಿಗ್ರಹ : ವಿಡಿಯೋ ವೈರಲ್‌

ಇಸ್ಕಾನ್‌ ಅನುಯಾಯಿಗಳಿಗೆ ಸಿಕ್ಕಿದ ವಿಗ್ರಹ ಕುರಿತು ನಾನಾ ವದಂತಿ ಉಡುಪಿ: ಇಲ್ಲಿನ ಮಲ್ಪೆ ಕಡಲ ತೀರದಲ್ಲಿ ಭಾನುವಾರ ದೇವರ ವಿಗ್ರಹವೊಂದು ಸಮುದ್ರದಲ್ಲಿ ಸಿಕ್ಕಿ ಭಾರಿ ಕುತೂಹಲ ಕೆರಳಿಸಿದೆ. ಕೃಷ್ಣನೂರಿಗೆ ಸಾಕ್ಷಾತ್‌ ಕೃಷ್ಣನ ವಿಗ್ರಹವೇ ತೇಲಿ ಬಂದಿದೆ ಎಂದು ಭಾವಿಸಿ ಜನ ಸಂಭ್ರಮಿಸಿದ್ದಾರೆ. ಇದು ದೇವರ ಮಹಿಮೆ ಸಾವಿರಾರು ಜನ ವಿಗ್ರಹ ನೋಡಲು ಧಾವಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ. ಮಲ್ಪೆಯಲ್ಲಿ ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರ ಉಡುಪಿ ಕೃಷ್ಣಮಠದಲ್ಲಿ ಇಸ್ಕಾನ್

ಮಲ್ಪೆ ಸಮುದ್ರದಲ್ಲಿ ಸಿಕ್ಕಿದ ದೇವರ ವಿಗ್ರಹ : ವಿಡಿಯೋ ವೈರಲ್‌ Read More »

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ

ಭಕ್ತಿರಿಗೆ ಲಕ್ಷಗಟ್ಟಲೆ ರೂ. ವಂಚಿಸಿದ್ದ ರಾಜಸ್ಥಾನದ ನಾಸೀರ್‌ ಹುಸೇನ್‌ ಉಡುಪಿ : ಕೊಲ್ಲೂರು ದೇಗುಲದ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರನ್ನು ವಂಚಿಸುತ್ತಿದ್ದ ರಾಜಸ್ಥಾನದ ನಾಸೀರ್ ಹುಸೇನ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾಸಿರ್‌ ಹುಸೇನ್‌ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ರೂಮ್ ಬುಕ್ಕಿಂಗ್ ಹೆಸರಲ್ಲಿ ಭಕ್ತರಿಗೆ ಟೋಪಿ ಹಾಕುತ್ತಿದ್ದ. ​ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ನಂತೆಯೇ ಕಾಣುವ ನಕಲಿ ಸೈಟ್ ಸೃಷ್ಟಿ ಮಾಡಿ ಭಕ್ತರಿಂದ ಆನ್‌ಲೈನ್‌ ಮೂಲಕ ಮುಂಗಡ ಹಣ ಪಡೆದು ನಕಲಿ

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ Read More »

ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು

ನೀರು ಸೇದುವಾಗ ಕೈಯಿಂದ ಜಾರಿದ ಒಂದೂವರೆ ವರ್ಷದ ಮಗು ಉಡುಪಿ: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ಮಂಗಳವಾರ ನಡೆದಿದೆ. ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಜಾರಿ ಮಗು ಬಾವಿಯೊಳಗೆ ಬಿದ್ದಿದೆ. ಆಯತಪ್ಪಿ ಬಿದ್ದ ಮಗುವಿನ ರಕ್ಷಣೆಗೆ ತಕ್ಷಣವೇ ತಾಯಿ ಬಾವಿಗಿಳಿದಿದ್ದಾರೆ. ತಾಯಿ ನಯನ ಹಗ್ಗದ ಸಹಾಯದಿಂದ ಬಾವಿಗಿಳಿದಿದ್ದಾರೆ. ಆದರೆ ಅಷ್ಟು ಹೊತ್ತಿಗಾಗಲೇ ಮಗು ಕೊನೆಯುಸಿರೆಳೆದಿತ್ತು. ಘಟನಾ

ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು Read More »

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ

ಶಬರಿಮಲೆ ಯಾತ್ರೆ ಮುಗಿಸಿ ಬಂದ ಖುಷಿಯಲ್ಲಿ ಎಣೆಣೆ ಪಾರ್ಟಿ ಮಾಡುತ್ತಿದ್ದ ಗೆಳೆಯರು ಉಡುಪಿ : ಸ್ನೇಹಿತರ ನಡುವೆ ಗುಂಡಿನ ಪಾರ್ಟಿಯಲ್ಲಿ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಉಡುಪಿಯ ಬ್ರಹ್ಮಾವರ ಸಮೀಪ ನಡೆದಿದೆ. ನಾಲ್ವರು ಗೆಳೆಯರು ಸೇರಿ ತಮ್ಮ ಓರ್ರವ ಗೆಳೆಯನನ್ನು ಕೊಲೆ ಮಾಡಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಬರಿಮಲೆ ಯಾತ್ರೆ ಮುಗಿಸಿಬಂದ ಖುಷಿಯಲ್ಲಿ ಮರುದಿನವೇ ಸ್ನೇಹಿತರು ಗುಂಡು ಹಾಕಲು ಕುಳಿತಿದ್ದರು ಎನ್ನಲಾಗಿದೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆಯಲ್ಲಿ ಘಟನೆ ನಡೆದಿದ್ದು, ಬ್ಯಾಂಕ್‌

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ Read More »

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಹತ್ತು ಮಂದಿಗೆ ಜೈಲು ಶಿಕ್ಷೆ

ನಕಲಿ ಆಧಾರ್‌ ಕಾರ್ಡ್‌ ಬಳಸಿ ಅಕ್ರಮವಾಗಿ ವಾಸ ಉಡುಪಿ : ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶದ ಪ್ರಜೆಗಳಿಗೆ ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯ ತಲಾ 10,000 ರೂ. ದಂಡದೊಂದಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಕ್ಟೋಬರ್ 11, 2024ರಂದು ಮಲ್ಪೆಯ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಗಸ್ತು ತಿರುಗುತ್ತಿದ್ದ ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಆರ್ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಏಳು ಜನರನ್ನು ಗಮನಿಸಿದಾಗ ಅವರು ಬಾಂಗ್ಲಾದೇಶದಿಂದ ಅಕ್ರಮವಾಗಿ

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಹತ್ತು ಮಂದಿಗೆ ಜೈಲು ಶಿಕ್ಷೆ Read More »

ಆನ್‌ಲೈನ್‌ ಟಾಸ್ಕ್‌ ನಂಬಿ 31 ಲಕ್ಷ ರೂ. ಕಳೆದುಕೊಂಡ ಮಹಿಳೆ

ಪಾರ್ಟ್‌ ಟೈಮ್‌ ಜಾಬ್‌ ನೆಪದಲ್ಲಿ ವಂಚಿಸಿದ ಸೈಬರ್‌ ಚೋರರು ಉಡುಪಿ: ಆನ್‌ಲೈನ್ ಟಾಸ್ಕ್ ನಂಬಿ ಮಹಿಳೆಯೊಬ್ಬರು ಲಕ್ಷಗಟ್ಟಲೆ ಹಣ ಕಳೆದುಕೊಂಡ ಘಟನೆ ಉಡುಪಿಯ ಉದ್ಯಾವರ ಸಮೀಪ ನಡೆದಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉದ್ಯಾವರದ ವಿಜಯಲಕ್ಷ್ಮೀ (55) ಎಂಬ ಮಹಿಳೆ ನ.29ರಂದು ಫೇಸ್‌ಬುಕ್‌ನಲ್ಲಿ ವರ್ಕ್‌ಫ್ರಮ್ ಹೋಮ್ ಕುರಿತ ಜಾಹೀರಾತು ಕ್ಲಿಕ್ ಮಾಡಿದ್ದು, ಆಗ ವಿಜಯಲಕ್ಷ್ಮೀ ಅವರ ವಾಟ್ಸಾಪ್‌ಗೆ ಸಂದೇಶ ಬಂದಿತ್ತು. ತಾನು ಕಂಪನಿಯೊಂದರ ಎಚ್‌ಆರ್ ಎಂಬುದಾಗಿ ಪರಿಚಯಿಸಿಕೊಂಡು ವ್ಯಕ್ತಿ, ಪಾರ್ಟ್

ಆನ್‌ಲೈನ್‌ ಟಾಸ್ಕ್‌ ನಂಬಿ 31 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಕುಖ್ಯಾತ ಮನೆಗಳ್ಳನ ಬಂಧನ : 65.79 ಲ.ರೂ. ಮೌಲ್ಯದ ಚಿನ್ನಾಭರಣ ವಶ

ಉಡುಪಿ : ಕುಖ್ಯಾತ ಮನೆಕಳ್ಳನೊಬ್ಬನನ್ನು ಬಂಧಿಸಿ, 65,79,720 ರೂ. ಮೌಲ್ಯದ ಕದ್ದ ಚಿನ್ನಾಭರಣಗಳನ್ನು ಉಡುಪಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿ ಸಮೀಪದ ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ(37) ಬಂಧಿತ ಆರೋಪಿ. ಉಡುಪಿಯ 76 ಬಡಗುಬೆಟ್ಟು ಗ್ರಾಮದ ಒಳಕಾಡು ಶಾರದಾಂಬಾ ದೇವಸ್ಥಾನದ ಗೋಪುರದ ರೋಸ್ ವಿಲ್ಲಾದ ಶೈಲಾ ವಿಲ್ಹೆಲ್ಮ್ ಮೀನಾ (53) ಅವರು ನವೆಂಬರ್ 30ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿತ್ತು. ಅವರು ಬೆಳಗ್ಗೆ ಚರ್ಚ್‌ಗೆ ಹೋಗುವ ಸಲುವಾಗಿ ಆಭರಣಗಳನ್ನು ಧರಿಸಲು ಮಲಗುವ ಕೋಣೆಯ

ಕುಖ್ಯಾತ ಮನೆಗಳ್ಳನ ಬಂಧನ : 65.79 ಲ.ರೂ. ಮೌಲ್ಯದ ಚಿನ್ನಾಭರಣ ವಶ Read More »

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ

ಫ್ರಾಂಚೈಸಿ ಕೊಡುವ ನೆಪದಲ್ಲಿ ಉದ್ಯಮಿಗೆ ವಂಚಿದ್ದ ಚೋರರು ಉಡುಪಿ: ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000 ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರದ ಪಾಟ್ನಾ ಜಿಲ್ಲೆಯ ದೇವ್ ಹರ್ಷ(20) ಹಾಗೂ ಬಿಹಾರ ನಳಂದಾ ಜಿಲ್ಲೆಯ ಚಂದನ ಕುಮಾರ್(29) ಬಂಧಿತ ಆರೋಪಿಗಳು. ಇವರಿಂದ 97 ಸಾವಿರ ರೂ. ಮೌಲ್ಯದ 10 ಮೊಬೈಲ್ ಫೋನ್, 68,000 ರೂ. ಮೌಲ್ಯದ

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ Read More »

error: Content is protected !!
Scroll to Top