ಉಡುಪಿ

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ

ಉಡುಪಿ: ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ರಸ್ತೆ ಬದಿ ನಿಲ್ಲಿಸಿದ್ದ ಮಾರುತಿ ರಿಡ್ಜ್ ಕಾರು ಬೆಂಕಿಗಾಹುತಿಯಾದ ಘಟನೆ ತಡರಾತ್ರಿ ನಡೆದಿದೆ. ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ ಅದರೊಳಗೆ ಮಲಗಿದ್ದರು. ಈ ವೇಳೆ ಕಾರು ಚಾಲಕನಿಗೆ ಕಾರಿನ ಬಾನೆಟ್ ಬಳಿ ಹೊಗೆ ಕಾಣಿಸಿಕೊಂಡಿದ್ದು, ಕಾರಿನಿಂದ ಹೊರಬಂದಿದ್ದಾರೆ. ಬೆಂಕಿಯ ಕೆನ್ನಾಲೆಗೆ ಕಾರು ಸಂಪೂರ್ಣ ಸುಟ್ಟುಹೋಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರು ಮಾಲೀಕನ ಮಾಹಿತಿ ಮೇರೆಗೆ ಅಗ್ನಿ ಶಾಮಕ ದಳದವರು […]

ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಬೆಂಕಿ Read More »

ಸಮುದ್ರ ಪಾಲಾದ ಯುವಕ : ಮೂರು ದಿನ ಕಳೆದರೂ ಪತ್ತೆಯಾಗದ ಸುಳಿವು

ಉಡುಪಿ : ಕುಂದಾಪುರ ತಾಲೂಕಿನ ಬೀಜಾಡಿ ಬಳಿ ಸಮುದ್ರದಲೆಯ ಅಬ್ಬರಕ್ಕೆ ಕೊಚ್ಚಿಹೋಗಿ ನಾಪತ್ತೆಯಾದ ಯುವಕನಿಗಾಗಿ ಮೂರು ದಿನಗಳಿಂದ  ಶೋಧ ಕಾರ್ಯ ಮುಂದುವರಿದಿದ್ದು, ಈವರೆಗೂ ಯಾವುದೇ ಸುಳಿವು ಪತ್ತೆಯಾಗಿಲ್ಲ. ತುಮಕೂರು ಜಿಲ್ಲೆಯ ತಿಪಟೂರು ಮೂಲದ ಯೋಗೀಶ್ (22) ಎಂಬಾತ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ನೀರು ಪಾಲಾಗಿದ್ದನು. ಮಳೆಗಾಲದ ಸಮುದ್ರದ ಅಬ್ಬರದ ಕುರಿತು ಮಾಹಿತಿ ಇಲ್ಲದೆ ನೀರಿಗೆ ಇಳಿದಿದ್ದ ಆತ, ಸಮುದ್ರದಲ್ಲಿ ಗಾಳಿಯ ಒತ್ತಡ ಮತ್ತು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದನು. ಗಂಗೊಳ್ಳಿಯ ಮುಳುಗು ತಜ್ಞ ದಿನೇಶ್ ಖಾರ್ವಿ ನೇತೃತ್ವದಲ್ಲಿ ಸ್ಥಳೀಯರ ತಂಡ

ಸಮುದ್ರ ಪಾಲಾದ ಯುವಕ : ಮೂರು ದಿನ ಕಳೆದರೂ ಪತ್ತೆಯಾಗದ ಸುಳಿವು Read More »

ಗ್ಯಾರಂಟಿ ಹಣ ಹೊಂದಿಸಲು ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಸೆಸ್‍ ಜಾಸ್ತಿ ಮಾಡಿ ರಾಜ್ಯವನ್ನು ಲೂಟಿ ಮಾಡಲು ಹೊರಟಿದೆ : ಶಾಸಕ ಸುನಿಲ್ ಕುಮಾರ್

ಕಾರ್ಕಳ : ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್‍ ನ್ನು ಹೆಚ್ಚಳ ಮಾಡುವ ಆದೇಶಕ್ಕೆ ಸಹಿತ ಹಾಕುವ ಮೂಲಕ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ ಎಂದು ಶಾಸಕ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಲಭ್ಯ ಇರುವ ಎಲ್ಲ ಆದಾಯ ಮೂಲಗಳಿಂದ ಸರಕಾರ ಜನರನ್ನು ಎಷ್ಟು ಸುಲಿಗೆ ಮಾಡಿದರೂ ರಾಜಸ್ವ ಸಂಗ್ರಹ ದಿನೇ ದಿನೇ ಕುಸಿದು ಬೀಳುತ್ತಿದೆ. ಈ ವರ್ಷದ ತೆರಿಗೆ ಸಂಗ್ರಹಣೆಯಲ್ಲಿ 13 ಸಾವಿರ

ಗ್ಯಾರಂಟಿ ಹಣ ಹೊಂದಿಸಲು ರಾಜ್ಯ ಸರಕಾರ ಪೆಟ್ರೋಲ್, ಡಿಸೇಲ್ ಸೆಸ್‍ ಜಾಸ್ತಿ ಮಾಡಿ ರಾಜ್ಯವನ್ನು ಲೂಟಿ ಮಾಡಲು ಹೊರಟಿದೆ : ಶಾಸಕ ಸುನಿಲ್ ಕುಮಾರ್ Read More »

ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ : ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಸಂತೆಕಟ್ಟೆ ನಿರ್ಮಾಣ ಹಂತದ ಕೆಳಸೇತುವೆ ಪ್ರದೇಶವನ್ನು ಹಾದುಹೋದ ನಂತರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಜೂನ್ 08 ರಂದು ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಟ್ಯಾಂಕರ್ ಚಾಲಕ ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಮುಚ್ಚಿದ ಸರ್ವಿಸ್ ರಸ್ತೆಯನ್ನು ಮೀರಿದ್ದು, ಕೆಸರು ರಸ್ತೆಯಿಂದಾಗಿ ವಾಹನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ. ಟ್ಯಾಂಕರ್ ಪಲ್ಟಿಯಾಗಿ ನಿರ್ಮಾಣ ಹಂತದಲ್ಲಿರುವ ಅಂಡರ್‌ಪಾಸ್ ನಿರ್ಮಾಣ ಪ್ರದೇಶಕ್ಕೆ ಬಿದ್ದಿದೆ.ಘಟನೆಯಲ್ಲಿ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾನೆ ಎನ್ನಲಾಗಿದೆ.

ಖಾದ್ಯ ತೈಲ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ Read More »

ಗಾಂಜಾ ಮಾರಾಟದಲ್ಲಿ ತೊಡಗಿದ್ದ ವಿದ್ಯಾರ್ಥಿ ಪೊಲೀಸ್ ಬಲೆಗೆ

ಉಡುಪಿ: ಗಾಂಜಾ ಮಾರಾಟ ಮಾಡುತ್ತಿದ್ದ ಕೇರಳದ ವಿದ್ಯಾರ್ಥಿಯೋರ್ವನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿ ಸಿದ್ದಾರ್ಥ್ (22) ಬಂಧಿತ ಆರೋಪಿ ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್‌ನ ಮೇಲೆ ಮಾದಕ ವಸ್ತು ಚಟುವಟಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ದೇವರಾಜ್ ಟಿ ವಿ ಮತ್ತು ಸಬ್ ಇನ್ಸ್ ಪೆಕ್ಟರ್ ರಾಘವೇಂದ್ರ ಸಿ., ಎಎಸ್‌ಐಗಳಾದ ವಿವೇಕಾನಂದ ಮತ್ತು ಶೈಲೇಶ್ ಕುಮಾ‌ರ್ ನೇತೃತ್ವದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ ಸುಮಾರು 20 ಸಾವಿರ ಮೌಲ್ಯದ 388 ಗ್ರಾಂ ತೂಕದ

ಗಾಂಜಾ ಮಾರಾಟದಲ್ಲಿ ತೊಡಗಿದ್ದ ವಿದ್ಯಾರ್ಥಿ ಪೊಲೀಸ್ ಬಲೆಗೆ Read More »

ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ ಪ್ರಕರಣ ಪತ್ತೆ | ಪ್ರಕರಣ ದಾಖಲಾಗುತ್ತಲೇ ಆರೋಪಿ ಉದ್ಯಮಿ ಪರಾರಿ

ಉಡುಪಿ : ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು ಉಡುಪಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಷ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ. ಉದ್ಯಮಿ ಶ್ರೇಯಸ್ ನಾಯ್ಕ (25) ಅರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ

ಪ್ರಜ್ವಲ್ ರೇವಣ್ಣ ಮಾದರಿ ಲೈಂಗಿಕ ದೌರ್ಜನ್ಯ ಪ್ರಕರಣ ಪತ್ತೆ | ಪ್ರಕರಣ ದಾಖಲಾಗುತ್ತಲೇ ಆರೋಪಿ ಉದ್ಯಮಿ ಪರಾರಿ Read More »

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು

ಉಡುಪಿ: ಸಹೋದ್ಯೋಗಿ ವೈದ್ಯ ಮಹಿಳೆಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಿದ ಹಿನ್ನಲೆಯಲ್ಲಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಆರು ತಿಂಗಳಿಂದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಕುಂದಾಪುರದ ಸರ್ಕಾರಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿಂದಲೇ ಹಲವು ಆರೋಪಗಳಿದ್ದವು.

ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು Read More »

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‍ ಜಿ.ವಿ. ಜವಾಬ್ದಾರಿ ಬದಲಾವಣೆ

ಉಡುಪಿ : ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಅವರ ಜವಾಬ್ದಾರಿಯನ್ನು ಬದಲಾವಣೆ ಮಾಡಿ ಆರ್‍ ಎಸ್‍ ಎಸ್ ಘೋಷಣೆ ಮಾಡಿದೆ. ಮೂಲತಃ  ದಕ್ಷಿಣ ಕನ್ನಡ ಜಿಲ್ಲೆಯ ಕುಂತೂರಿನವರಾದ ರಾಜೇಶ್ ಬಾಲ್ಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜವಾಬ್ದಾರಿ ವಹಿಸಿಕೊಂಡು, ತಮ್ಮನ್ನು ತೊಡಗಿಸಿಕೊಂಡವರು ಅನೇಕ ಜಿಲ್ಲೆ, ವಿಭಾಗಗಳಲ್ಲಿ ಹಾಗೂ ಪ್ರಾಂತದ ಪ್ರಚಾರಕರಾಗಿ ಜವಾಬ್ದಾರಿ ನಿರ್ವಹಣೆ ಮಾಡಿದ್ದಾರೆ. ಹೆಬ್ರಿಯಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ವರ್ಗದಲ್ಲಿ ಅನೇಕರ ಜವಾಬ್ದಾರಿಗಳು ಬದಲಾವಣೆಯಾಗಿದ್ದು, ಅದರಂತೆ ರಾಜೇಶ್ ಅವರನ್ನು ಬದಲಾವಣೆ ಮಾಡಿದೆ. ಕಳದ ಕೆಲವು ವರ್ಷಗಳಿಂದ

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‍ ಜಿ.ವಿ. ಜವಾಬ್ದಾರಿ ಬದಲಾವಣೆ Read More »

ವರ್ಗಾವಣೆ ಪತ್ರ ನೀಡದ ಮುಖ್ಯ ಶಿಕ್ಷಕರು | ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು

ಉಡುಪಿ : ವರ್ಗಾವಣೆ ಪ್ರಮಾಣ ಪತ್ರ ನೀಡಿಲ್ಲ ಎಂದು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ ಆತ್ಮಹತ್ಯೆ ಮಾಡಿಕೊಂಡವ. ವರ್ಗಾವಣೆ ಪ್ರಮಾಣ ಪತ್ರ ಟಿಸಿ ಕೊಡದೆ ಮುಖ್ಯ ಶಿಕ್ಷಕರು ಬೈದಿದ್ದಾರೆ ಎಂದು ಡೆತ್‍ ನೋಟ್ ಬರೆದಿಟ್ಟು ನಿತಿನ್ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿತಿನ್ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದರೆ ಮುಖ್ಯ ಶಿಕ್ಷಕ

ವರ್ಗಾವಣೆ ಪತ್ರ ನೀಡದ ಮುಖ್ಯ ಶಿಕ್ಷಕರು | ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು Read More »

ಮಲ್ಪೆ: ಮೇ.16 ರಿಂದ ಸೆ.15 ರ ವರೆಗೆ ಪ್ರವಾಸಿ ಬೋಟ್ ಸ್ಥಗಿತ

ಉಡುಪಿ : ನಾಳೆಯಿಂದ ಸೆ.15ರ ವರೆಗೆ ಮಲ್ಪೆ ಬೀಚ್‌, ಸೀವಾಕ್ ಪ್ರದೇಶದಲ್ಲಿ ನಡೆಸುವ ಪ್ರವಾಸಿ ಬೋಟ್ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಬೀಚ್, ಸೀವಾಕ್ ಪ್ರದೇಶದಲ್ಲಿ ನಡೆಸುವ ಪ್ರವಾಸಿ ಬೋಟ್ ಚಟುವಟಿಕೆಯೊಂದಿಗೆ ಸೈಂಟ್ ಮೆರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಯನ್ನು ಕೂಡ ಸ್ಥಗಿತಗೊಳಿಸಲಾಗಿದೆ. ಹಾರ್ಬರ್ ಕ್ರಾಫ್ಟ್ ನಿಯಮಗಳ ಅನುಸಾರವಾಗಿ 16ರಿಂದ ಸೆ. 15ರ ವರೆಗೆ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ನಿಲ್ಲಿಸಲಾಗಿದೆ ಎಂದು ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ಹೊರಡಿಸಿದೆ.

ಮಲ್ಪೆ: ಮೇ.16 ರಿಂದ ಸೆ.15 ರ ವರೆಗೆ ಪ್ರವಾಸಿ ಬೋಟ್ ಸ್ಥಗಿತ Read More »

error: Content is protected !!
Scroll to Top