ಉಡುಪಿ

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ

ಲಿಂಕ್‌ ಕಳುಹಿಸಿ ಹಣ ಎಗರಿಸಿದ ಖದೀಮ ಉಡುಪಿ : ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂ ಬಗ್ಗೆ ಮಾಹಿತಿ ಹುಡುಕಲು ಹೋದ ಮಹಿಳೆಯೊಬ್ಬರು ಸುಮಾರು 2 ಲ.ರೂ. ಕಳೆದುಕೊಂಡಿರುವ ಬಗ್ಗೆ ಉಡುಪಿ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಉಡುಪಿಯ ಜ್ಯೋತಿ (32) ಹಣ ಕಳೆದುಕೊಂಡವರು. ಫೇಸ್‌ಕ್ರೀಂ ಬಗ್ಗೆ ಆನ್‌ಲೈನ್‌ನಲ್ಲಿ ಮಾಹಿತಿ ಕಲೆ ಹಾಕುತ್ತಿದ್ದ ವೇಳೆ ದೊರೆತ ನಂಬರ್‌ಗೆ ಕರೆ ಮಾಡಿದ್ದು, ಆಗ ವ್ಯಕ್ತಿಯೊಬ್ಬ ನೋಂದಣಿ ಮಾಡುವಂತೆ ಸೂಚಿಸಿದ್ದಾನೆ. ಮಾ.22 ರಂದು ಮತ್ತೆ ಕರೆ ಮಾಡಿದ ವ್ಯಕ್ತಿ ಈ ಹಿಂದೆ ಮಾಡಿದ ಮಾಹಿತಿ […]

ಆನ್‌ಲೈನ್‌ನಲ್ಲಿ ಫೇಸ್‌ಕ್ರೀಂಗಾಗಿ 2 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ

ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ – ರಸ್ತೆ ಬದಿ ಗಮನಸೆಳೆಯುತ್ತಿರುವ ಆಮಂತ್ರಣ ಕಾರ್ಕಳ : ತುಳುನಾಡಿನ ಕಾರಣಿಕ ಕ್ಷೇತ್ರ ಐತಿಹಾಸಿಕ ಪ್ರಸಿದ್ಧ ಆದಿ ಆಲಡೆ, ಸಿರಿಕ್ಷೇತ್ರ, ಸಿರಿಗಳ ಮೂಲ ಕ್ಷೇತ್ರ, ನಾಲ್ಕು ಸ್ಥಾನ ನಂದಳಿಕೆ ಹೀಗೆ ನಾನಾ ಹೆಸರುಗಳಿಂದ ಪ್ರಖ್ಯಾತವಾಗಿರುವ ನಂದಳಿಕೆ ಮಹಾಲಿಂಗೇಶ್ವರ ದೇಗುಲದ ಸಿರಿಜಾತ್ರೆಯು ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾಗಿದೆ. ಈ ಬಾರಿ ಎಪ್ರಿಲ್‌ 6ರಂದು ನಂದಳಿಕೆ ಜಾತ್ರೆ ನಡೆಯಲಿದ್ದು, ಬಿರು ಬಿಸಿಲಿನಲ್ಲಿ ಬಾಯಾರಿದ ಹಕ್ಕಿಗಳಿಗೆ ಆಸರೆ ಎಂಬ ಪರಿಸರ ಜಾಗೃತಿಯುಳ್ಳ ಸಂದೇಶದೊಂದಿಗೆ ಜಾತ್ರೆಯ

ವಿನೂತನ ಶೈಲಿಯ ಪ್ರಚಾರಕ್ಕೆ ಮಾದರಿಯಾದ ನಂದಳಿಕೆ ಸಿರಿಜಾತ್ರೆ Read More »

ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ

ಸ್ವಾಮೀಜಿ ಮೂಲತಃ ಹೆಬ್ರಿ ಸಮೀಪದ ವರಂಗದವರು ಹಾಸನ: ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ ಆಗಿದ್ದಾರೆ. 1970, ಏಪ್ರಿಲ್‌ 19ರಂದು ಪಟ್ಟಾಭೀಷಿಕ್ತರಾದ ಸ್ವಾಮೀಜಿ ಸುಮಾರು 50 ವರ್ಷಗಳಿಂದ ಮಠವನ್ನು ಮುನ್ನಡೆಸಿದ್ದಾರೆ. ನಾಲ್ಕು ಮಹಾ ಮಸ್ತಕಾಭಿಷೇಕ ಪೂರೈಸಿದ ಕೀರ್ತಿ ಸ್ವಾಮೀಜಿಗಿದೆ. ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಸ್ವಾಮೀಜಿ ಕೊಡುಗೆ ಅಗಣಿತ. ಸಮಾಜಮುಖಿ ಕಾರ್ಯಗಳಿಂದ ಶ್ರವಣಬೆಳಗೊಳ ಸುತ್ತಮುತ್ತಲಿನ ಎಲ್ಲ ಧರ್ಮದವರ ಬದುಕು ಸುಧಾರಿಸಲು ಬಹಳಷ್ಟು ಕೆಲಸ ಮಾಡಿದ್ದ ಸ್ವಾಮೀಜಿ ಉನ್ನತ ಗೌರವಕ್ಕೆ ಪಾತ್ರರಾಗಿದ್ದರು.

ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ Read More »

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ

ಉಚಿತವಾಗಿ ಟ್ರಕ್‌ ಮತ್ತು ಚಾಲಕರನ್ನು ಒದಗಿಸಿದ ಬಿಜೆಪಿಯ ಹಿರಿಯ ನಾಯಕ ನಾಗರಾಜ ಶೆಟ್ಟಿ ಕಾರ್ಕಳ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ಪ್ರತಿಷ್ಥಾಪನೆಯಾಗಲಿರುವ ಭವ್ಯ ಶ್ರೀರಾಮನ ಮೂರ್ತಿಯನ್ನು ಕೆತ್ತಲು ಕಾರ್ಕಳದಿಂದ ಕೃಷ್ಣ ಶಿಲೆಯನ್ನು ಸಾಗಿಸಿದ್ದು ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ನಾಗರಾಜ ಶೆಟ್ಟಿಯವರ ಟ್ರಾನ್ಸ್‌ಪೋರ್ಟ್‌ ಕಂಪನಿ. ಮೂರು ದಿನಗಳಲ್ಲಿ ಬೃಹತ್‌ ಶಿಲೆ ಅಯೋಧ್ಯೆ ತಲುಪಿದೆ. ಒಂಭತ್ತು ಟನ್ ತೂಕದ ಶಿಲೆಯನ್ನು ಅಯೋಧ್ಯೆಯಲ್ಲಿ ನಾಗರಾಜ ಶೆಟ್ಟಿ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನ ಸ್ವಾಗತಿಸಲಾಯಿತು. ಉದ್ಯಮಿ ನಾಗರಾಜ ಶೆಟ್ಟಿ ಮಾಲಕತ್ವದ

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ Read More »

ಕೃಷ್ಣ ಮಠಕ್ಕೆ ಜಾಗ ಕೊಟ್ಟಿರುವುದು ಹಿಂದು ಅರಸ : ಪೇಜಾವರ ಶ್ರೀ

ಉಡುಪಿ : ಉಡುಪಿಯ ಶ್ರೀಕೃಷ್ಣ ಮಠಕ್ಕೆ ಮತ್ತು ಶ್ರೀ ಅನಂತೇಶ್ವರ ದೇಗುಲಕ್ಕೆ ಅರಸ ರಾಮಭೋಜ ಎನ್ನುವವರು ಜಾಗ ನೀಡಿದ್ದಾರೆಯೇ ಹೊರತು ಬೇರೆ ಯಾರೂ ಅಲ್ಲ. ಇದಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಶಾಸನಗಳು ಇವೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಹೇಳಿದ್ದಾರೆ. ಆಧಾರ ರಹಿತವಾದ ಹೇಳಿಕೆ ನೀಡುವವರ ಮಾತಿನ ಬಗ್ಗೆ ಚರ್ಚಿಸುವುದರಲ್ಲಿ ಅರ್ಥವಿಲ್ಲ. ಉಡುಪಿಯ ಕೃಷ್ಣ ಮಠ, ಅನಂತೇಶ್ವರ ಸನ್ನಿಧಿಗೆ ರಾಮಭೋಜ ಎಂಬ ಅರಸ ಹಾಗೂ ಕುಂಜಿತ್ತಾಯ ಮನೆತನದವರು ಜಮೀನು ನೀಡಿದ್ದಾರೆ ಎನ್ನುವುದಕ್ಕೆ ದಾಖಲೆಗಳು

ಕೃಷ್ಣ ಮಠಕ್ಕೆ ಜಾಗ ಕೊಟ್ಟಿರುವುದು ಹಿಂದು ಅರಸ : ಪೇಜಾವರ ಶ್ರೀ Read More »

error: Content is protected !!
Scroll to Top