ಉಡುಪಿ

ಉಡುಪಿ : ಟ್ರಕ್‌ನಲ್ಲಿ ಸಾಗಿಸುತ್ತಿದ್ದ 65 ಕೆ.ಜಿ.ಗಾಂಜಾ ವಶ, ಇಬ್ಬರ ಬಂಧನ

ಟ್ರಕ್‌ ಸಹಿತ 72 ಲ.ರೂ. ಮೌಲ್ಯದ ಸೊತ್ತು ವಶ ಉಡುಪಿ: ಟ್ರಕ್ ಒಂದರಲ್ಲಿ ಸಾಗಿಸುತ್ತಿದ್ದ ಸುಮಾರು 65 ಕೆಜಿ ಗಾಂಜಾವನ್ನು ಉಡುಪಿ ಸಮೀಪ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಲ್ಪೆ ವೃತ್ತ ನಿರೀಕ್ಷಕ, ಸೆನ್ ವಿಭಾಗದ ಇನ್‌ಸ್ಪೆಕ್ಟರ್ ನಿತ್ಯಾನಂದ ನಾಯಕ್ ಟ್ರಕ್ ಅಡ್ಡ ಹಾಕಿ ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿದೆ. ಉಡುಪಿಯ ಕಿನ್ನಿಮೂಲ್ಕಿ ಜಂಕ್ಷನ್‌ನಲ್ಲಿ ಲಾರಿಯನ್ನು ಅಡ್ಡ ಹಾಕಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಗೋಣಿಯಲ್ಲಿ […]

ಉಡುಪಿ : ಟ್ರಕ್‌ನಲ್ಲಿ ಸಾಗಿಸುತ್ತಿದ್ದ 65 ಕೆ.ಜಿ.ಗಾಂಜಾ ವಶ, ಇಬ್ಬರ ಬಂಧನ Read More »

ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ

ದೇವಿಯ ಪರಮ ಭಕ್ತರಾಗಿರುವ ಇಳಯರಾಜ ಉಡುಪಿ: ಕೊಲ್ಲೂರು ಮೂಕಾಂಬಿಕೆ ದೇವಿಗೆ ದಕ್ಷಿಣ ಭಾರತ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ Read More »

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ

ಟೆಲಿಗ್ರಾಮ್‌, ವಾಟ್ಸಪ್‌ನಲ್ಲಿ ಪರಿಚಯ ಮಾಡಿಕೊಂಡು ಮೋಸ ಮಾಡುತ್ತಿದ್ದ ಆರೋಪಿಗಳು ಉಡುಪಿ : ಆನ್‌ಲೈನ್‌ ಟ್ರೆಡಿಂಗ್‌ ನಡೆಸಿ ಮೋಸ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೂಡಿಕೆದಾರರನ್ನು ವಂಚಿಸಲು ಬಳಸಲಾಗುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು 6 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಸುರತ್ಕಲ್‌ನ ಕೋಡಿಕೆರೆ ಗ್ರಾಮದ ಪ್ರೇಮ್ ನಗರದ ಮೊಹಮ್ಮದ್ ಕೈಸ್ (20), ಪಡುಬಿದ್ರಿ ಹೆಜಮಾಡಿಯ ಮಂಜತೋಟದ ಅಹ್ಮದ್ ಅನ್ವೀಜ್ (20), ಬಂಟ್ವಾಳ ತಾಲೂಕಿನ ಸಫ್ವಾನ್ (30) ಮತ್ತು ತಸೀರ್ (31), ಮೈಸೂರು ಜಿಲ್ಲೆಯ

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ Read More »

ಹನಿಟ್ರ್ಯಾಪ್‌ ಜಾಲಕ್ಕೆ ಕೆಡವಿ ಹಣ ಕಿತ್ತುಕೊಂಡ ಮಹಿಳೆ ಸಹಿತ ಆರು ಮಂದಿ ಸೆರೆ

ಆರೋಪಿಗಳ 18 ಲ.ರೂ. ಮೌಲ್ಯದ ಎರಡು ಕಾರುಗಳು ವಶ ಉಡುಪಿ: ಕುಂದಾಪುರ ಸಮೀಪ ಕಾರ್ಯಾಚರಿಸುತ್ತಿದ್ದ ಹನಿಟ್ರ್ಯಾಪ್ ಜಾಲವೊಂದನ್ನು ಬೇಧಿಸಿರುವ ಪೊಲೀಸರು ಮಹಿಳೆ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿ ಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26) ಮತ್ತು ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು.

ಹನಿಟ್ರ್ಯಾಪ್‌ ಜಾಲಕ್ಕೆ ಕೆಡವಿ ಹಣ ಕಿತ್ತುಕೊಂಡ ಮಹಿಳೆ ಸಹಿತ ಆರು ಮಂದಿ ಸೆರೆ Read More »

ಒಂದೂವರೆ ವರ್ಷದ ಮಗುವನ್ನು ನೇಣಿಗೆ ಹಾಕಿ ಪಕ್ಕದಲ್ಲೇ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಗಂಡನನ್ನು ಪೊಲೀಸರು ಬಂಧಿಸುತ್ತಾರೆ ಎಂಬ ಭೀತಿಯಲ್ಲಿ ಎಸಗಿದ ಕೃತ್ಯ ಉಡುಪಿ: ಮಹಿಳೆಯೊಬ್ಬರು ಒಂದೂವರೆ ವರ್ಷ ಪ್ರಾಯದ ಮಗುವನ್ನು ನೇಣಿಗೆ ಹಾಕಿ ಸಾಯಿಸಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆಯೊಂದು ಸೋಮವಾರ ಉಡುಪಿ ಸಮೀಪ ಬ್ರಹ್ಮಾವರದಲ್ಲಿ ಸಂಭವಿಸಿದೆ. ಗಲಾಟೆ ಪ್ರಕರಣವೊಂದರಲ್ಲಿ ಪತಿಯ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದ ಹಿನ್ನೆಲೆಯಲ್ಲಿ ಮಹಿಳೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರದ ಹೇರಂಜೆ ಸಮೀಪ ಆರೂರಿನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯನ್ನು ಸುಶ್ಮಿತಾ (23) ಎಂದು ಗುರುತಿಸಲಾಗಿದೆ. ಮನೆಯ ಚಾವಡಿಯಲ್ಲೇ

ಒಂದೂವರೆ ವರ್ಷದ ಮಗುವನ್ನು ನೇಣಿಗೆ ಹಾಕಿ ಪಕ್ಕದಲ್ಲೇ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ Read More »

ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ

ಕಾರು ದಡದಲ್ಲಿ ನಿಲ್ಲಿಸಿ ನದಿಯಲ್ಲಿ ಈಜಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಉಡುಪಿ : ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯಲ್ಲಿ ಈಜಲು ಇಳಿದು ನಾಪತ್ತೆಯಾಗಿದ್ದು, ಈ ಪ್ರಕರಣ ಅನೇಕ ಊಹಾಪೋಹಗಳಿಎಗ ಕಾರಣವಾಗಿದೆ. ನಾಪತ್ತೆಯಾದ ಮಹಿಳೆಯನ್ನು ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ ಸಿ.ಆರ್. ಗೋವಿಂದರಾಜು ಎಂಬವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ

ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ Read More »

ಕಾರ್ಕಳ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಇರಿದು ಕೊಲೆ

ಕಾರ್ಕಳದಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಕಾರ್ಕಳ : ಕಾರ್ಕಳ ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ನವೀನ್‌ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್‌ ಪೂಜಾರಿ ಕಾರ್ಕಳದಲ್ಲಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಸ್ಥಳೀಯವಾಗಿ ಅವರು ಬಡ್ಡಿ ನವೀನ ಎಂದು ಪರಿಚಿತರಾಗಿದ್ದರು. ಬಹಳ ಸಮಯದಿಂದ ಕಾರ್ಕಳದಲ್ಲೇ ವಾಸವಾಗಿದ್ದರು. ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ

ಕಾರ್ಕಳ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಇರಿದು ಕೊಲೆ Read More »

ಕಾಪು : ಕಾರು ಅಪಘಾತದಲ್ಲಿ ಯುವ ಡಿಜೆ ಮರ್ವಿನ್‌ ಸಾವು

ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಯತ್ನಿಸಿದಾಗ ಪಲ್ಟಿಯಾದ ಕಾರು ಕಾಪು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಕಾಪು ಸಮೀಪ ಮೂಳೂರಿನಲ್ಲಿ ಪಲ್ಟಿಯಾಗಿ ಯುವ ಡಿಜೆ ಮತ್ತು ಸಿನೆಮಾಗಳ ಛಾಯಾಗ್ರಾಹಕ ಮೃತಪಟ್ಟಿದ್ದು, ಅವರ ಇಬ್ಬರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ 28 ವರ್ಷದ ಮೃತ ಯುವಕನನ್ನು ಛಾಯಾಗ್ರಾಹಕ ಹಾಗೂ ಡಿಜೆ ಬೆಳ್ಮಣ್‌ನ ಮರ್ವಿನ್ ಮೆಂಡೊನ್ಸ (28) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುವರ್ಣ ಮತ್ತು ಪ್ರಸಾದ್ ಎಂಬಿಬ್ಬರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಯಿಂದ ಕಾರು ಪೂರ್ತಿಯಾಗಿ

ಕಾಪು : ಕಾರು ಅಪಘಾತದಲ್ಲಿ ಯುವ ಡಿಜೆ ಮರ್ವಿನ್‌ ಸಾವು Read More »

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು

ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್‌ ನಿಂದನೆ ಪ್ರಕರಣದಲ್ಲಿ ಸೆರೆಯಾಗಿರುವ ತಿಮರೋಡಿ ಉಡುಪಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನಿ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆದು ಬಳಿಕ ಅರೆಸ್ಟ್ ಮಾಡಿದ್ದರು. ನಂತರ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ತಿಮರೋಡಿ ಹಿರಿಯಡ್ಕ ಸಬ್ ಜೈಲಿನಲ್ಲಿದ್ದಾರೆ. ಬಂಧಿಸುವ ವೇಳೆ ಉಜಿರೆಯಲ್ಲಿರುವ ತಿಮರೋಡಿ ಮನೆಯಲ್ಲಿ ಹೈಡ್ರಾಮಾ ನಡೆದಿತ್ತು. ಪೊಲೀಸರ

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು Read More »

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್‌ : ಇ.ಡಿ. ತನಿಖೆಗೆ ಸಂಸದ ಕೋಟ ಆಗ್ರಹ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದ ಶ್ರೀನಿವಾಸ ಪೂಜಾರಿ ಉಡುಪಿ: ಧರ್ಮಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ ತರುವ ಸಲುವಾಗಿ ಅಪಪ್ರಚಾರ ಮಾಡಲು ವಿದೇಶಗಳಿಂದ ಹಣ ಬಂದಿರುವ ಅನುಮಾನ ವ್ಯಕ್ತಪಡಿಸಿರುವ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಧರ್ಮಸ್ಥಳದ ಕುರಿತಾಗಿ ವ್ಯಾಪಕವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಈ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್‌ : ಇ.ಡಿ. ತನಿಖೆಗೆ ಸಂಸದ ಕೋಟ ಆಗ್ರಹ Read More »

error: Content is protected !!
Scroll to Top