ಉಡುಪಿ

ಉಡುಪಿ ಘನತ್ಯಾಜ್ಯ ಘಟಕದಲ್ಲಿ ಭಾರಿ ಬೆಂಕಿ ಅವಘಡ

ಉಡುಪಿ : ಉಡುಪಿ ನಗರಸಭೆಗೆ ಸಂಬಂಧಿಸಿದ ಅಲೆವೂರು ಗ್ರಾಪಂ ವ್ಯಾಪ್ತಿಯ ಕರ್ವಾಲುವಿನಲ್ಲಿರುವ ಘನತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಬೆಂಕಿ ಭಾರಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಶನಿವಾರ ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಘಟಕವನ್ನು ಆವರಿಸಿತು. ಇದರಿಂದ ಕಟ್ಟಡ, ಶೆಡ್‌ನಲ್ಲಿರುವ ಹಲವು ಯಂತ್ರೋಪಕಣಗಳು, ತ್ಯಾಜ್ಯಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವುದಾಗಿ ತಿಳಿದುಬಂದಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕದಳದ ಅಧಿಕಾರಿಗಳು ಹಾಗೂ ಸಿಬ್ಬಂದಿ […]

ಉಡುಪಿ ಘನತ್ಯಾಜ್ಯ ಘಟಕದಲ್ಲಿ ಭಾರಿ ಬೆಂಕಿ ಅವಘಡ Read More »

ಸೋಷಿಯಲ್‌ ಮೀಡಿಯಾದಲ್ಲಿ ಸಿಎಂ ಟೀಕೆ : ಬಿಜೆಪಿ ಐಟಿ ಸೆಲ್‌ ಯುವಕನ ವಿರುದ್ಧ ಕೇಸ್‌

ಕಟೀಲು ದೇವಳ ಪೂಜಾ ದರ ಏರಿಕೆ ಹಿನ್ನೆಲೆಯಲ್ಲಿ ಮಾಡಿದ್ದ ಟೀಕೆಗೆ ಕೇಸ್‌ ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆಯ ದರಗಳನ್ನು ಏರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್‌ಗೆ ಸೇರಿದ ಯುವಕನ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳದ ಈದು ನಿವಾಸಿ ಪ್ರಖ್ಯಾತ್ ಬಿ.ಜೆ ಎಂದು ಗುರುತಿಸಲಾದ ಯುವಕ ಸೋಷಿಯಲ್‌ ಮೀಡಿಯಾಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸುಳ್ಳು

ಸೋಷಿಯಲ್‌ ಮೀಡಿಯಾದಲ್ಲಿ ಸಿಎಂ ಟೀಕೆ : ಬಿಜೆಪಿ ಐಟಿ ಸೆಲ್‌ ಯುವಕನ ವಿರುದ್ಧ ಕೇಸ್‌ Read More »

ಕಮಲಶಿಲೆಯ ಉದ್ಯಮಿ ಆತ್ಮಹತ್ಯೆ

ಉಡುಪಿ: ಕುಂದಾಪುರ ಸಮೀಪದ ಕಮಲಶಿಲೆ ಗ್ರಾಮದ ಬರೇಗುಂಡಿ ಎಂಬಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸಿದ್ದಾಪುರದಲ್ಲಿರುವ ಛಾತ್ರ ಎಂಟರ್‌ಪ್ರೈಸಸ್‌ನ ಮಾಲೀಕ ಉದಯ ಛಾತ್ರ (43) ಸೆಪ್ಟೆಂಬರ್ 17ರಂದು ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದಯ ಛಾತ್ರ ಬೆಳಗ್ಗೆ ಕಮಲಶಿಲೆಯಲ್ಲಿ ನಡೆದ ಮಣಂಜೆ ಕೃಷಿ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಗೆ ಪೋಷಕರು ಮತ್ತು ಪತ್ನಿಯೊಂದಿಗೆ ಹಾಜರಾಗಿದ್ದರು. ಅವರನ್ನು ಸಭೆಯಲ್ಲಿ ಬಿಟ್ಟ ನಂತರ ಸಿದ್ದಾಪುರದಲ್ಲಿರುವ ತಮ್ಮ ವ್ಯಾಪಾರ ಸಂಸ್ಥೆ ಛಾತ್ರ ಎಂಟರ್‌ಪ್ರೈಸಸ್‌ಗೆ

ಕಮಲಶಿಲೆಯ ಉದ್ಯಮಿ ಆತ್ಮಹತ್ಯೆ Read More »

ಉಡುಪಿಯಲ್ಲಿ ಇಂದು-ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ಇಂದು ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಪ್ರದಾನ, ನಾಳೆ ಲೀಲೋತ್ಸವ ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಭಾನುವಾರ ಮತ್ತು ಸೋಮವಾರ (ಸೆ.14-15)ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದೆ. ಇದಕ್ಕಾಗಿ ವ್ಯಾಪಕ ತಯಾರಿ ಮಾಡಲಾಗಿದೆ. ದೇಶದ ಉಳಿದ ಭಾಗಗಳಲ್ಲಿ ಕೃಷ್ಣಾಷ್ಟಮಿ ಚಂದ್ರಮಾನ ಕ್ಯಾಲೆಂಡರ್ ಪ್ರಕಾರ ಆಚರಣೆಯಾಗುವುದಾದರೆ ಉಡುಪಿಯಲ್ಲಿ ಜನ್ಮಾಷ್ಟಮಿಯನ್ನು ಸೌರಮಾನ ಕ್ಯಾಲೆಂಡರ್ (ಸೌರಮಾನ) ಪ್ರಕಾರ ಆಚರಿಸಲಾಗುತ್ತದೆ. ಸೌರಮಾನ ಪದ್ಧತಿಯ ಪ್ರಕಾರ ಸೆಪ್ಟೆಂಬರ್ 14ರಂದು ಅರ್ಘ್ಯ ಪ್ರದಾನ (ಶ್ರೀಕೃಷ್ಣನಿಗೆ ಮಧ್ಯರಾತ್ರಿಯ ಹೊತ್ತಿಗೆ ಅರ್ಪಣೆ) ನಡೆಯಲಿದೆ, ನಂತರ ಸೆಪ್ಟೆಂಬರ್15 ರಂದು ಲೀಲೋತ್ಸವ (ವಿಟ್ಲಪಿಂಡಿ)

ಉಡುಪಿಯಲ್ಲಿ ಇಂದು-ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ Read More »

ಉಡುಪಿ : ಟ್ರಕ್‌ನಲ್ಲಿ ಸಾಗಿಸುತ್ತಿದ್ದ 65 ಕೆ.ಜಿ.ಗಾಂಜಾ ವಶ, ಇಬ್ಬರ ಬಂಧನ

ಟ್ರಕ್‌ ಸಹಿತ 72 ಲ.ರೂ. ಮೌಲ್ಯದ ಸೊತ್ತು ವಶ ಉಡುಪಿ: ಟ್ರಕ್ ಒಂದರಲ್ಲಿ ಸಾಗಿಸುತ್ತಿದ್ದ ಸುಮಾರು 65 ಕೆಜಿ ಗಾಂಜಾವನ್ನು ಉಡುಪಿ ಸಮೀಪ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಲ್ಪೆ ವೃತ್ತ ನಿರೀಕ್ಷಕ, ಸೆನ್ ವಿಭಾಗದ ಇನ್‌ಸ್ಪೆಕ್ಟರ್ ನಿತ್ಯಾನಂದ ನಾಯಕ್ ಟ್ರಕ್ ಅಡ್ಡ ಹಾಕಿ ತಪಾಸಣೆ ನಡೆಸಿದಾಗ ಅಪಾರ ಪ್ರಮಾಣದ ಮಾದಕ ವಸ್ತು ಪತ್ತೆಯಾಗಿದೆ. ಉಡುಪಿಯ ಕಿನ್ನಿಮೂಲ್ಕಿ ಜಂಕ್ಷನ್‌ನಲ್ಲಿ ಲಾರಿಯನ್ನು ಅಡ್ಡ ಹಾಕಿದ ಪೊಲೀಸರು ತಪಾಸಣೆ ನಡೆಸಿದ್ದಾರೆ. ಗೋಣಿಯಲ್ಲಿ

ಉಡುಪಿ : ಟ್ರಕ್‌ನಲ್ಲಿ ಸಾಗಿಸುತ್ತಿದ್ದ 65 ಕೆ.ಜಿ.ಗಾಂಜಾ ವಶ, ಇಬ್ಬರ ಬಂಧನ Read More »

ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ

ದೇವಿಯ ಪರಮ ಭಕ್ತರಾಗಿರುವ ಇಳಯರಾಜ ಉಡುಪಿ: ಕೊಲ್ಲೂರು ಮೂಕಾಂಬಿಕೆ ದೇವಿಗೆ ದಕ್ಷಿಣ ಭಾರತ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ಕೊಲ್ಲೂರು ಮೂಕಾಂಬಿಕೆಯ ಪರಮ ಭಕ್ತರಾಗಿರುವ ಇಳಯರಾಜ ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಗೆ 4 ಕೋ.ರೂ. ಮೌಲ್ಯದ ವಜ್ರ ಕಿರೀಟ ಸಮರ್ಪಿಸಿದ ಇಳಯರಾಜ Read More »

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ

ಟೆಲಿಗ್ರಾಮ್‌, ವಾಟ್ಸಪ್‌ನಲ್ಲಿ ಪರಿಚಯ ಮಾಡಿಕೊಂಡು ಮೋಸ ಮಾಡುತ್ತಿದ್ದ ಆರೋಪಿಗಳು ಉಡುಪಿ : ಆನ್‌ಲೈನ್‌ ಟ್ರೆಡಿಂಗ್‌ ನಡೆಸಿ ಮೋಸ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ಹೂಡಿಕೆದಾರರನ್ನು ವಂಚಿಸಲು ಬಳಸಲಾಗುತ್ತಿದ್ದ ಮೊಬೈಲ್ ಫೋನ್‌ಗಳು ಮತ್ತು 6 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಸುರತ್ಕಲ್‌ನ ಕೋಡಿಕೆರೆ ಗ್ರಾಮದ ಪ್ರೇಮ್ ನಗರದ ಮೊಹಮ್ಮದ್ ಕೈಸ್ (20), ಪಡುಬಿದ್ರಿ ಹೆಜಮಾಡಿಯ ಮಂಜತೋಟದ ಅಹ್ಮದ್ ಅನ್ವೀಜ್ (20), ಬಂಟ್ವಾಳ ತಾಲೂಕಿನ ಸಫ್ವಾನ್ (30) ಮತ್ತು ತಸೀರ್ (31), ಮೈಸೂರು ಜಿಲ್ಲೆಯ

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 1 ಕೋ.ರೂ.ಗೂ ಅಧಿಕ ವಂಚನೆ : ಆರು ಆರೋಪಿಗಳ ಬಂಧನ Read More »

ಹನಿಟ್ರ್ಯಾಪ್‌ ಜಾಲಕ್ಕೆ ಕೆಡವಿ ಹಣ ಕಿತ್ತುಕೊಂಡ ಮಹಿಳೆ ಸಹಿತ ಆರು ಮಂದಿ ಸೆರೆ

ಆರೋಪಿಗಳ 18 ಲ.ರೂ. ಮೌಲ್ಯದ ಎರಡು ಕಾರುಗಳು ವಶ ಉಡುಪಿ: ಕುಂದಾಪುರ ಸಮೀಪ ಕಾರ್ಯಾಚರಿಸುತ್ತಿದ್ದ ಹನಿಟ್ರ್ಯಾಪ್ ಜಾಲವೊಂದನ್ನು ಬೇಧಿಸಿರುವ ಪೊಲೀಸರು ಮಹಿಳೆ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿ ಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್(36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್(23), ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಾಗೋಡಿಯ ಅಬ್ದುಲ್ ಅಝೀಝ್(26) ಮತ್ತು ಕುಂದಾಪುರ ಎಂ.ಕೋಡಿಯ ಆಸ್ಮಾ(43) ಬಂಧಿತ ಆರೋಪಿಗಳು.

ಹನಿಟ್ರ್ಯಾಪ್‌ ಜಾಲಕ್ಕೆ ಕೆಡವಿ ಹಣ ಕಿತ್ತುಕೊಂಡ ಮಹಿಳೆ ಸಹಿತ ಆರು ಮಂದಿ ಸೆರೆ Read More »

ಒಂದೂವರೆ ವರ್ಷದ ಮಗುವನ್ನು ನೇಣಿಗೆ ಹಾಕಿ ಪಕ್ಕದಲ್ಲೇ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಗಂಡನನ್ನು ಪೊಲೀಸರು ಬಂಧಿಸುತ್ತಾರೆ ಎಂಬ ಭೀತಿಯಲ್ಲಿ ಎಸಗಿದ ಕೃತ್ಯ ಉಡುಪಿ: ಮಹಿಳೆಯೊಬ್ಬರು ಒಂದೂವರೆ ವರ್ಷ ಪ್ರಾಯದ ಮಗುವನ್ನು ನೇಣಿಗೆ ಹಾಕಿ ಸಾಯಿಸಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆಯೊಂದು ಸೋಮವಾರ ಉಡುಪಿ ಸಮೀಪ ಬ್ರಹ್ಮಾವರದಲ್ಲಿ ಸಂಭವಿಸಿದೆ. ಗಲಾಟೆ ಪ್ರಕರಣವೊಂದರಲ್ಲಿ ಪತಿಯ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದ ಹಿನ್ನೆಲೆಯಲ್ಲಿ ಮಹಿಳೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರದ ಹೇರಂಜೆ ಸಮೀಪ ಆರೂರಿನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯನ್ನು ಸುಶ್ಮಿತಾ (23) ಎಂದು ಗುರುತಿಸಲಾಗಿದೆ. ಮನೆಯ ಚಾವಡಿಯಲ್ಲೇ

ಒಂದೂವರೆ ವರ್ಷದ ಮಗುವನ್ನು ನೇಣಿಗೆ ಹಾಕಿ ಪಕ್ಕದಲ್ಲೇ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ Read More »

ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ

ಕಾರು ದಡದಲ್ಲಿ ನಿಲ್ಲಿಸಿ ನದಿಯಲ್ಲಿ ಈಜಾಡುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಉಡುಪಿ : ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆಯೊಬ್ಬರು ಸೌಪರ್ಣಿಕಾ ನದಿಯಲ್ಲಿ ಈಜಲು ಇಳಿದು ನಾಪತ್ತೆಯಾಗಿದ್ದು, ಈ ಪ್ರಕರಣ ಅನೇಕ ಊಹಾಪೋಹಗಳಿಎಗ ಕಾರಣವಾಗಿದೆ. ನಾಪತ್ತೆಯಾದ ಮಹಿಳೆಯನ್ನು ಬೆಂಗಳೂರಿನ ತ್ಯಾಗರಾಜ ನಗರದ ನಿವಾಸಿ ಸಿ.ಆರ್. ಗೋವಿಂದರಾಜು ಎಂಬವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ. ಆಗಸ್ಟ್ 28ರಂದು ಅವರು ಕೊಲ್ಲೂರಿಗೆ ಆಗಮಿಸಿ, ಖಾಸಗಿ ಲಾಡ್ಜ್ ಬಳಿ ತಮ್ಮ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ

ಕೊಲ್ಲೂರು: ಸೌಪರ್ಣಿಕಾ ನದಿಗೆ ಈಜಲು ಇಳಿದ ಬೆಂಗಳೂರಿನ ಮಹಿಳೆ ನಾಪತ್ತೆ Read More »

error: Content is protected !!
Scroll to Top